Homeಅಂತರಾಷ್ಟ್ರೀಯಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಸಮುದಾಯ ಪ್ರಸರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಈ ದೇಶವನ್ನು ಇತರೆ ದೇಶಗಳಿಗೆ ಮಾದರಿಯೆಂದು ಶ್ಲಾಘಿಸಿದೆ.

- Advertisement -
- Advertisement -

ಸಮುದಾಯದಲ್ಲಿ ಸೋಂಕು ಪ್ರಸರಣವಿಲ್ಲದೇ 100 ದಿನಗಳನ್ನು ಪೂರೈಸಿ ನ್ಯೂಜಿಲ್ಯಾಂಡ್ ಮಹತ್ವದ ಮೈಲಿಗಲ್ಲನ್ನು ಸೃಷ್ಟಿಸಿದೆ. ಆದರೆ ಈಗಲೇ ತೃಪ್ತಿಪಡುವಂತಿಲ್ಲ ಎಂದು ಆರೋಗ್ಯ ಅಧಿಕಾರಗಳು ಎಚ್ಚರಿಸಿದ್ದಾರೆ.

ಸದ್ಯಕ್ಕೆ ವಿದೇಶಿಗರು ನ್ಯೂಜಿಲ್ಯಾಂಡನ್ನು ಪ್ರವೇಶಿಸುವಾಗ ಹೊಸದಾಗಿ 23 ಪ್ರಕರಣಗಳು ಮಾತ್ರ ಪತ್ತೆಯಾಗಿದ್ದು ಅವರನ್ನು ಪ್ರತ್ಯೇಕ ಸೌಲಭ್ಯ ಕೇಂದ್ರಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

“ಸಮುದಾಯ ಪ್ರಸರಣವಿಲ್ಲದೆ 100 ದಿನಗಳನ್ನು ಪೂರೈಸುವುದು ಮಹತ್ವದ ಮೈಲಿಗಲ್ಲು. ಆದರೂ ನಾವೆಲ್ಲರೂ ತಿಳಿದಿರುವಂತೆ ಇಷ್ಟಕ್ಕೆ ನಾವು ತೃಪ್ತಿ ಹೊಂದಲು ಸಾಧ್ಯವಿಲ್ಲ” ಎಂದು ಆರೋಗ್ಯ ಮಹಾನಿರ್ದೇಶಕ ಆಶ್ಲೇ ಬ್ಲೂಮ್‌ಫೀಲ್ಡ್ ಹೇಳಿದ್ದಾರೆ.

“ಈ ಹಿಂದೆ ವೈರಸ್ ನಿಯಂತ್ರಣದಲ್ಲಿದ್ದ ಸ್ಥಳಗಳಲ್ಲಿ ವೈರಸ್ ಎಷ್ಟು ಬೇಗನೆ ಮತ್ತೆ ಹರಡಬಹುದು ಎಂಬುದನ್ನು ನಾವು ವಿದೇಶಗಳಲ್ಲಿ ನೋಡಿದ್ದೇವೆ. ಹಾಗಾಗಿ ನ್ಯೂಜಿಲೆಂಡ್‌ನಲ್ಲಿ ಭವಿಷ್ಯದ ಯಾವುದೇ ಪ್ರಕರಣಗಳನ್ನು ತ್ವರಿತವಾಗಿ ನಿವಾರಿಸಲು ನಾವು ಸಿದ್ಧರಾಗಿರಬೇಕು” ಎಂದು ಅವರು ಹೇಳಿದ್ದಾರೆ.

50 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ನ್ಯೂಜಿಲೆಂಡ್, ಮಾರ್ಚ್ 19 ರಂದು ತನ್ನ ಗಡಿಗಳನ್ನು ನಿರ್ಬಂಧಿಸಿದಾಗಿನಿಂದ ಕೊರೊನಾ ವೈರಸ್ ಅನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದ್ದಕ್ಕಾಗಿ ಜಗತ್ತಿನಾದ್ಯಂತ ವ್ಯಾಪಕ ಪ್ರಶಂಸೆ ಗಳಿಸಿದೆ.

ಸಮುದಾಯ ಪ್ರಸರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಈ ದೇಶವನ್ನು ಇತರೆ ದೇಶಗಳಿಗೆ ಮಾದರಿಯೆಂದು ಶ್ಲಾಘಿಸಿದೆ.

ಫೆಬ್ರವರಿಯಲ್ಲಿ ಮೊದಲ ಸೋಂಕಿತನನ್ನು ಪತ್ತೆಹಚ್ಚಿದಾಗಿನಿಂದ, ನ್ಯೂಜಿಲೆಂಡ್‌ನಲ್ಲಿ 1,569 ವೈರಸ್‌ ಪ್ರಕರಣಗಳು ದೃಢಪಟ್ಟಿದ್ದು, 1524 ಜನ ಚೇತರಿಸಿಕೊಂಡಿದ್ದಾರೆ. 22 ಸಾವುಗಳು ವರದಿಯಾಗಿದ್ದು, 23 ಸಕ್ರಿಯ ಪ್ರಕರಣಗಳಿವೆ. ಮೇ 1 ಸಮುದಾಯ ಪ್ರಸರಣದ ಕೊನೆಯ ಪ್ರಕರಣ ದಾಖಲಾಗಿದೆ. ಅಂದಿನಿಂದ ಇಂದಿನವರೆಗೂ ಸಮುದಾಯ ಹರಡುವಿಕೆಯನ್ನು ನ್ಯೂಜಿಲೆಂಡ್ ಪರಿಣಾಮಕಾರಿಯಾಗಿ ನಿಭಾಯಿಸಿದೆ.

ಇದರ ಫಲವಾಗಿ, ನ್ಯೂಜಿಲೆಂಡ್‌ ಜನತೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ ಮತ್ತು ಪ್ರೇಕ್ಷಕರಿಗೆ ತೊಂದರೆಯಿಲ್ಲದೇ, ಕೊರೊನಾ ಸಾಂಕ್ರಾಮಿಕದ ಪೂರ್ವ ಜೀವನ ಶೈಲಿಯನ್ನೇ ಮರಳಿ ಪಡೆದಿದ್ದಾರೆ.

ಆದರೆ ಗಡಿಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುತ್ತಿದೆ. ಹೊರಗಿನಿಂದ ಬರುವ ಎಲ್ಲರೂ 14 ದಿನಗಳ ಸಂಪರ್ಕತಡೆಯಲ್ಲಿರಬೇಕಾದ ನಿಬಂಧನೆಗಳನ್ನು ವಿಧಿಸಲಾಗಿದೆ.

ಅಲ್ಲಿನ ಸರ್ಕಾರವು ಎರಡನೇ ಅಲೆಯ ನಿರೀಕ್ಷೆಯನ್ನಿಟ್ಟುಕೊಂಡಿದೆ. ಹಾಗಾಗಿ ಎಲ್ಲಾ ಮನೆಗಳಿಗೆ ಮಾಸ್ಕ್ ಸೇರಿದಂತೆ ತುರ್ತು ಪೂರೈಕೆ ಕಿಟ್‌ಗಳನ್ನು ಇರಿಸಿಕೊಳ್ಳಲು ಒತ್ತಾಯಿಸಿದೆ.


ಇದನ್ನೂ ಓದಿ: ನ್ಯೂಜಿಲೆಂಡ್: ಕೊರೊನಾ ವಿರುದ್ದದ ಸಮರದಲ್ಲಿ ಗೆಲುವಿನತ್ತ ದಾಪುಗಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...