Homeಅಂತರಾಷ್ಟ್ರೀಯನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

ನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

- Advertisement -
- Advertisement -

ವೆಲ್ಲಿಂಗ್ಟನ್: ನಿರಂತರವಾಗಿ ಕಾರ್ಮಿಕರ ಕೊರತೆಗಳ ಮಧ್ಯೆ, ವಲಸೆ ಕಾರ್ಯವಿಧಾನಗಳನ್ನು ಸುಗಮಗೊಳಿಸಲು ನ್ಯೂಜಿಲೆಂಡ್ ತನ್ನ ವೀಸಾ ಮತ್ತು ಉದ್ಯೋಗದ ಅವಶ್ಯಕತೆಗೆ ಅನುಗುಣವಾಗಿ ಗಮನಾರ್ಹವಾದ ಮಾರ್ಪಡುಗಳೊಂದಿಗೆ ಹೊಸ ನಿಯಮಗಳನ್ನು ಹೊರಡಿಸಿದೆ. ಈ ನಿಯಮ ಉದ್ಯೋಗಿಗಳಿಗೆ ಮತ್ತು ಉದ್ಯೋಗದಾತರಿಗೆ ವಲಸೆ ದಾರಿಗಳನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ.

ಕಾರ್ಮಿಕರ ಕೊರತೆಯನ್ನು ನಿವಾರಿಸಲು, ನ್ಯೂಜಿಲೆಂಡ್ ಸರ್ಕಾರವು ವಲಸಿಗರಿಗೆ ಕೆಲಸದ ಅನುಭವದ ಮಾನದಂಡವನ್ನು ಮೂರರಿಂದ ಎರಡು ವರ್ಷಗಳವರೆಗೆ ಇಳಿಕೆ ಮಾಡಿದೆ. ಈ ಕ್ರಮವು ಸಮರ್ಥ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಹೆಚ್ಚು ಸುಲಭದ ಉದ್ಯೋಗವನ್ನು ಹುಡುಕಲು ಅನುವು ಮಾಡಿಕೊಡುತ್ತದೆ. ಈ ಹೊಸ ನಿಯಮಗಳು ನ್ಯೂಜಿಲೆಂಡ್‌ನಲ್ಲಿ ಉದ್ಯೋಗಾವಕಾಶಗಳನ್ನು ಬಯಸುವ ಭಾರತೀಯ ವಲಸಿಗರಿಗೆ ಸಹಾಯ ಮಾಡುವ ನಿರೀಕ್ಷೆಯಿದೆ.

ಋತುಮಾನಕ್ಕನುಗುಣವಾದ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ಉಳಿಯಲು ದೇಶವು ಎರಡು ಹೊಸ ಮಾರ್ಗಗಳನ್ನು ಪರಿಚಯಿಸಿದೆ. ಅನುಭವಿಗಳಾದ ಋತುಮಾನಕ್ಕನುಗುಣದ ಕೆಲಸಗಾರರಿಗೆ ಮೂರು ವರ್ಷಗಳ ಬಹುಪ್ರವೇಶ ವೀಸಾ ಮತ್ತು ಕಡಿಮೆ ಕುಶಲ ಕೆಲಸಗಾರರಿಗೆ ಏಳು ತಿಂಗಳ ಏಕಪ್ರವೇಶ ವೀಸಾವನ್ನು ಪರಿಚಯಿಸಲಾಗಿದೆ. ಕಾಲಕ್ಕನುಗುಣವಾದ ಕಾರ್ಮಿಕರ ಬೇಡಿಕೆಗಳನ್ನು ಸರಿಹೊಂದಿಸಲು ಈ ನಿಯಮಗಳನ್ನು ಮಾಡಲಾಗಿದೆ.

ಇದಲ್ಲದೆ, ಮಾನ್ಯತೆ ಪಡೆದ ಉದ್ಯೋಗದಾತರ ಕೆಲಸದ ವೀಸಾ (AEWV) ಮತ್ತು ನಿರ್ದಿಷ್ಟ ಉದ್ದೇಶದ ಕೆಲಸದ ವೀಸಾ (SPWV) ಗಾಗಿ ಸರಾಸರಿ ವೇತನ ಮಾನದಂಡಗಳನ್ನು ಸರ್ಕಾರವು ತೆಗೆದುಹಾಕಿದೆ. ಹೊಸ ನಿಯಮಗಳ ಅಡಿಯಲ್ಲಿ ಉದ್ಯೋಗದಾತರು ಉದ್ಯೋಗಾವಕಾಶಗಳನ್ನು ಒದಗಿಸುವಾಗ ಮಾರುಕಟ್ಟೆ ದರದ ಪ್ರಕಾರ ಸಂಬಳವನ್ನು ನೀಡಲು ನಿರ್ಬಂಧಿತರಾಗಿದ್ದರೂ, ಅವರು ಇನ್ನು ಮುಂದೆ ಪೂರ್ವನಿರ್ಧರಿತ ಸಂಬಳದ ಮಾನದಂಡವನ್ನು ಪೂರೈಸುವ ಅಗತ್ಯವಿಲ್ಲ. ಇದು ಉದ್ಯೋಗದಾತರಿಗೆ ಸಮಾನವಾದ ಕಾರ್ಮಿಕರ ಸಂಭಾವನೆಯನ್ನು ಉಳಿಸಿಕೊಳ್ಳುವ ಸ್ವಾತಂತ್ರ್ಯವನ್ನು ನೀಡುತ್ತದೆ.

ತಮ್ಮ ಮಕ್ಕಳನ್ನು ನ್ಯೂಜಿಲೆಂಡ್‌ಗೆ ಕರೆತರಲು ಬಯಸುವ ವಲಸಿಗರಿಗೆ, AEWV ಹೊಂದಿರುವವರು ಈಗ ವಾರ್ಷಿಕವಾಗಿ ಕನಿಷ್ಠ NZ$55,844 ಗಳಿಸಬೇಕು. ಈ ಕನಿಷ್ಠ ಮಿತಿಯನ್ನು 2019ರಿಂದ ಬದಲಾಯಿಸಲಾಗಿಲ್ಲ, ವಲಸೆ ಕುಟುಂಬಗಳು ದೇಶದಲ್ಲಿ ವಾಸಿಸುತ್ತಿರುವಾಗ ಆರ್ಥಿಕವಾಗಿ ತಮ್ಮನ್ನು ತಾವು ಆರ್ಥಿಕವಾಗಿ ಸಬಲರಾಗುವುದನ್ನು ಖಚಿತಪಡಿಸಿಕೊಳ್ಳುವುದೇ ಈ ಉದ್ದೇಶದ ಹಿಂದೆ ಆಡಗಿದೆ.

ಇದಲ್ಲದೆ, ಆಸ್ಟ್ರೇಲಿಯನ್ ಮತ್ತು ನ್ಯೂಜಿಲೆಂಡ್ ಸ್ಟ್ಯಾಂಡರ್ಡ್ ಕ್ಲಾಸಿಫಿಕೇಶನ್ ಆಫ್ ಆಕ್ಯುಪೇಷನ್ಸ್ (ANZSCO) ಕೌಶಲ್ಯ ಮಟ್ಟದಲ್ಲಿ 4 ಅಥವಾ 5 ರೊಳಗೆ ಬರುವ ಉದ್ಯೋಗಿಗಳಿಗೆ ನ್ಯೂಜಿಲೆಂಡ್ ಎರಡು ವರ್ಷಗಳ ವೀಸಾ ಅವಧಿಯನ್ನು ಮೂರು ವರ್ಷಗಳವರೆಗೆ ವಿಸ್ತರಿಸಿದೆ. ಎರಡು ವರ್ಷಗಳ ವೀಸಾ ಹೊಂದಿರುವ ಈ ಉದ್ಯೋಗಗಳಲ್ಲಿ ಪ್ರಸ್ತುತ ಉದ್ಯೋಗಿಗಳು ಒಂದು ವರ್ಷದ ವಿಸ್ತರಣೆಯನ್ನು ಕೋರಬಹುದಾಗಿದೆ.

ಕೌಶಲ್ಯ ಮಟ್ಟ 4 ಅಥವಾ 5 ಗಾಗಿ ಉದ್ಯೋಗಾವಕಾಶಗಳನ್ನು ಒದಗಿಸುವಾಗ ಉದ್ಯೋಗದಾತರು 21 ದಿನದ ಕಡ್ಡಾಯ ನೇಮಕಾತಿ ಅವಧಿಯನ್ನು ಅನುಸರಿಸುವ ಅಗತ್ಯವಿಲ್ಲ. ಅವರು ಸ್ಥಳೀಯವಾಗಿ ನೇಮಕ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ತೋರಿಸಲು ಅರ್ಹ ಅಭ್ಯರ್ಥಿಗಳಿಗಾಗಿ ಜಾಹೀರಾತು ಮತ್ತು ಸಂದರ್ಶನ ಮಾಡಬಹುದಾಗಿದೆ.

ಕಟ್ಟಡದಂತಹ ನಿರ್ಮಾಣ ಉದ್ಯಮದಲ್ಲಿನ ಕಾರ್ಮಿಕರ ಕೊರತೆಯನ್ನು ಪರಿಹರಿಸುವ ಸಲುವಾಗಿ ಸರ್ಕಾರವು  ದೇಶೀಯ ಉದ್ಯೋಗಿಗಳ ಮಾನದಂಡವನ್ನು %35ರಿಂದ % 15ಕ್ಕೆ ಇಳಿಕೆ ಮಾಡಿದೆ.

ಈ ವರ್ಷದಿಂದ ಮಾನ್ಯತೆ ಪಡೆದ ಉದ್ಯೋಗದಾತರು ನ್ಯೂಜಿಲೆಂಡ್ ಒದಗಿಸಿದ ಆನ್‌ಲೈನ್ ತರಬೇತಿ ಮಾನದಂಡಗಳನ್ನು ಪೂರ್ಣಗೊಳಿಸುವ ಅಗತ್ಯವಿಲ್ಲ. ಬದಲಿಗೆ ಉದ್ಯೋಗ ಹಕ್ಕುಗಳು ಮತ್ತು ಜವಾಬ್ದಾರಿಗಳ ಮೇಲೆ ಸುಲಭ ಪ್ರವೇಶದ ಕೊಡುಗೆಯನ್ನು ಅದು ನೀಡಿದೆ.

ಏಪ್ರಿಲ್ 2025ರಿಂದ ವಿದ್ಯಾರ್ಥಿ ವೀಸಾ ಅಥವಾ ಯಾವುದೇ ಇತರ ಕೆಲಸದಿಂದ AEWVಗೆ ಪರಿವರ್ತನೆ ಮಾಡಲು ಬಯಸುವ ವಲಸಿಗರಿಗೆ ಮಧ್ಯಂತರ ಕೆಲಸದ ಹಕ್ಕುಗಳನ್ನು ನೀಡಲಾಗುತ್ತದೆ.

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...