Homeಅಂತರಾಷ್ಟ್ರೀಯನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

ನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

- Advertisement -
- Advertisement -

ವೆಲ್ಲಿಂಗ್ಟನ್: ನಿರಂತರವಾಗಿ ಕಾರ್ಮಿಕರ ಕೊರತೆಗಳ ಮಧ್ಯೆ, ವಲಸೆ ಕಾರ್ಯವಿಧಾನಗಳನ್ನು ಸುಗಮಗೊಳಿಸಲು ನ್ಯೂಜಿಲೆಂಡ್ ತನ್ನ ವೀಸಾ ಮತ್ತು ಉದ್ಯೋಗದ ಅವಶ್ಯಕತೆಗೆ ಅನುಗುಣವಾಗಿ ಗಮನಾರ್ಹವಾದ ಮಾರ್ಪಡುಗಳೊಂದಿಗೆ ಹೊಸ ನಿಯಮಗಳನ್ನು ಹೊರಡಿಸಿದೆ. ಈ ನಿಯಮ ಉದ್ಯೋಗಿಗಳಿಗೆ ಮತ್ತು ಉದ್ಯೋಗದಾತರಿಗೆ ವಲಸೆ ದಾರಿಗಳನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ.

ಕಾರ್ಮಿಕರ ಕೊರತೆಯನ್ನು ನಿವಾರಿಸಲು, ನ್ಯೂಜಿಲೆಂಡ್ ಸರ್ಕಾರವು ವಲಸಿಗರಿಗೆ ಕೆಲಸದ ಅನುಭವದ ಮಾನದಂಡವನ್ನು ಮೂರರಿಂದ ಎರಡು ವರ್ಷಗಳವರೆಗೆ ಇಳಿಕೆ ಮಾಡಿದೆ. ಈ ಕ್ರಮವು ಸಮರ್ಥ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಹೆಚ್ಚು ಸುಲಭದ ಉದ್ಯೋಗವನ್ನು ಹುಡುಕಲು ಅನುವು ಮಾಡಿಕೊಡುತ್ತದೆ. ಈ ಹೊಸ ನಿಯಮಗಳು ನ್ಯೂಜಿಲೆಂಡ್‌ನಲ್ಲಿ ಉದ್ಯೋಗಾವಕಾಶಗಳನ್ನು ಬಯಸುವ ಭಾರತೀಯ ವಲಸಿಗರಿಗೆ ಸಹಾಯ ಮಾಡುವ ನಿರೀಕ್ಷೆಯಿದೆ.

ಋತುಮಾನಕ್ಕನುಗುಣವಾದ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ಉಳಿಯಲು ದೇಶವು ಎರಡು ಹೊಸ ಮಾರ್ಗಗಳನ್ನು ಪರಿಚಯಿಸಿದೆ. ಅನುಭವಿಗಳಾದ ಋತುಮಾನಕ್ಕನುಗುಣದ ಕೆಲಸಗಾರರಿಗೆ ಮೂರು ವರ್ಷಗಳ ಬಹುಪ್ರವೇಶ ವೀಸಾ ಮತ್ತು ಕಡಿಮೆ ಕುಶಲ ಕೆಲಸಗಾರರಿಗೆ ಏಳು ತಿಂಗಳ ಏಕಪ್ರವೇಶ ವೀಸಾವನ್ನು ಪರಿಚಯಿಸಲಾಗಿದೆ. ಕಾಲಕ್ಕನುಗುಣವಾದ ಕಾರ್ಮಿಕರ ಬೇಡಿಕೆಗಳನ್ನು ಸರಿಹೊಂದಿಸಲು ಈ ನಿಯಮಗಳನ್ನು ಮಾಡಲಾಗಿದೆ.

ಇದಲ್ಲದೆ, ಮಾನ್ಯತೆ ಪಡೆದ ಉದ್ಯೋಗದಾತರ ಕೆಲಸದ ವೀಸಾ (AEWV) ಮತ್ತು ನಿರ್ದಿಷ್ಟ ಉದ್ದೇಶದ ಕೆಲಸದ ವೀಸಾ (SPWV) ಗಾಗಿ ಸರಾಸರಿ ವೇತನ ಮಾನದಂಡಗಳನ್ನು ಸರ್ಕಾರವು ತೆಗೆದುಹಾಕಿದೆ. ಹೊಸ ನಿಯಮಗಳ ಅಡಿಯಲ್ಲಿ ಉದ್ಯೋಗದಾತರು ಉದ್ಯೋಗಾವಕಾಶಗಳನ್ನು ಒದಗಿಸುವಾಗ ಮಾರುಕಟ್ಟೆ ದರದ ಪ್ರಕಾರ ಸಂಬಳವನ್ನು ನೀಡಲು ನಿರ್ಬಂಧಿತರಾಗಿದ್ದರೂ, ಅವರು ಇನ್ನು ಮುಂದೆ ಪೂರ್ವನಿರ್ಧರಿತ ಸಂಬಳದ ಮಾನದಂಡವನ್ನು ಪೂರೈಸುವ ಅಗತ್ಯವಿಲ್ಲ. ಇದು ಉದ್ಯೋಗದಾತರಿಗೆ ಸಮಾನವಾದ ಕಾರ್ಮಿಕರ ಸಂಭಾವನೆಯನ್ನು ಉಳಿಸಿಕೊಳ್ಳುವ ಸ್ವಾತಂತ್ರ್ಯವನ್ನು ನೀಡುತ್ತದೆ.

ತಮ್ಮ ಮಕ್ಕಳನ್ನು ನ್ಯೂಜಿಲೆಂಡ್‌ಗೆ ಕರೆತರಲು ಬಯಸುವ ವಲಸಿಗರಿಗೆ, AEWV ಹೊಂದಿರುವವರು ಈಗ ವಾರ್ಷಿಕವಾಗಿ ಕನಿಷ್ಠ NZ$55,844 ಗಳಿಸಬೇಕು. ಈ ಕನಿಷ್ಠ ಮಿತಿಯನ್ನು 2019ರಿಂದ ಬದಲಾಯಿಸಲಾಗಿಲ್ಲ, ವಲಸೆ ಕುಟುಂಬಗಳು ದೇಶದಲ್ಲಿ ವಾಸಿಸುತ್ತಿರುವಾಗ ಆರ್ಥಿಕವಾಗಿ ತಮ್ಮನ್ನು ತಾವು ಆರ್ಥಿಕವಾಗಿ ಸಬಲರಾಗುವುದನ್ನು ಖಚಿತಪಡಿಸಿಕೊಳ್ಳುವುದೇ ಈ ಉದ್ದೇಶದ ಹಿಂದೆ ಆಡಗಿದೆ.

ಇದಲ್ಲದೆ, ಆಸ್ಟ್ರೇಲಿಯನ್ ಮತ್ತು ನ್ಯೂಜಿಲೆಂಡ್ ಸ್ಟ್ಯಾಂಡರ್ಡ್ ಕ್ಲಾಸಿಫಿಕೇಶನ್ ಆಫ್ ಆಕ್ಯುಪೇಷನ್ಸ್ (ANZSCO) ಕೌಶಲ್ಯ ಮಟ್ಟದಲ್ಲಿ 4 ಅಥವಾ 5 ರೊಳಗೆ ಬರುವ ಉದ್ಯೋಗಿಗಳಿಗೆ ನ್ಯೂಜಿಲೆಂಡ್ ಎರಡು ವರ್ಷಗಳ ವೀಸಾ ಅವಧಿಯನ್ನು ಮೂರು ವರ್ಷಗಳವರೆಗೆ ವಿಸ್ತರಿಸಿದೆ. ಎರಡು ವರ್ಷಗಳ ವೀಸಾ ಹೊಂದಿರುವ ಈ ಉದ್ಯೋಗಗಳಲ್ಲಿ ಪ್ರಸ್ತುತ ಉದ್ಯೋಗಿಗಳು ಒಂದು ವರ್ಷದ ವಿಸ್ತರಣೆಯನ್ನು ಕೋರಬಹುದಾಗಿದೆ.

ಕೌಶಲ್ಯ ಮಟ್ಟ 4 ಅಥವಾ 5 ಗಾಗಿ ಉದ್ಯೋಗಾವಕಾಶಗಳನ್ನು ಒದಗಿಸುವಾಗ ಉದ್ಯೋಗದಾತರು 21 ದಿನದ ಕಡ್ಡಾಯ ನೇಮಕಾತಿ ಅವಧಿಯನ್ನು ಅನುಸರಿಸುವ ಅಗತ್ಯವಿಲ್ಲ. ಅವರು ಸ್ಥಳೀಯವಾಗಿ ನೇಮಕ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ತೋರಿಸಲು ಅರ್ಹ ಅಭ್ಯರ್ಥಿಗಳಿಗಾಗಿ ಜಾಹೀರಾತು ಮತ್ತು ಸಂದರ್ಶನ ಮಾಡಬಹುದಾಗಿದೆ.

ಕಟ್ಟಡದಂತಹ ನಿರ್ಮಾಣ ಉದ್ಯಮದಲ್ಲಿನ ಕಾರ್ಮಿಕರ ಕೊರತೆಯನ್ನು ಪರಿಹರಿಸುವ ಸಲುವಾಗಿ ಸರ್ಕಾರವು  ದೇಶೀಯ ಉದ್ಯೋಗಿಗಳ ಮಾನದಂಡವನ್ನು %35ರಿಂದ % 15ಕ್ಕೆ ಇಳಿಕೆ ಮಾಡಿದೆ.

ಈ ವರ್ಷದಿಂದ ಮಾನ್ಯತೆ ಪಡೆದ ಉದ್ಯೋಗದಾತರು ನ್ಯೂಜಿಲೆಂಡ್ ಒದಗಿಸಿದ ಆನ್‌ಲೈನ್ ತರಬೇತಿ ಮಾನದಂಡಗಳನ್ನು ಪೂರ್ಣಗೊಳಿಸುವ ಅಗತ್ಯವಿಲ್ಲ. ಬದಲಿಗೆ ಉದ್ಯೋಗ ಹಕ್ಕುಗಳು ಮತ್ತು ಜವಾಬ್ದಾರಿಗಳ ಮೇಲೆ ಸುಲಭ ಪ್ರವೇಶದ ಕೊಡುಗೆಯನ್ನು ಅದು ನೀಡಿದೆ.

ಏಪ್ರಿಲ್ 2025ರಿಂದ ವಿದ್ಯಾರ್ಥಿ ವೀಸಾ ಅಥವಾ ಯಾವುದೇ ಇತರ ಕೆಲಸದಿಂದ AEWVಗೆ ಪರಿವರ್ತನೆ ಮಾಡಲು ಬಯಸುವ ವಲಸಿಗರಿಗೆ ಮಧ್ಯಂತರ ಕೆಲಸದ ಹಕ್ಕುಗಳನ್ನು ನೀಡಲಾಗುತ್ತದೆ.

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...