Homeಅಂತರಾಷ್ಟ್ರೀಯನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

ನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

- Advertisement -
- Advertisement -

ವೆಲ್ಲಿಂಗ್ಟನ್: ನಿರಂತರವಾಗಿ ಕಾರ್ಮಿಕರ ಕೊರತೆಗಳ ಮಧ್ಯೆ, ವಲಸೆ ಕಾರ್ಯವಿಧಾನಗಳನ್ನು ಸುಗಮಗೊಳಿಸಲು ನ್ಯೂಜಿಲೆಂಡ್ ತನ್ನ ವೀಸಾ ಮತ್ತು ಉದ್ಯೋಗದ ಅವಶ್ಯಕತೆಗೆ ಅನುಗುಣವಾಗಿ ಗಮನಾರ್ಹವಾದ ಮಾರ್ಪಡುಗಳೊಂದಿಗೆ ಹೊಸ ನಿಯಮಗಳನ್ನು ಹೊರಡಿಸಿದೆ. ಈ ನಿಯಮ ಉದ್ಯೋಗಿಗಳಿಗೆ ಮತ್ತು ಉದ್ಯೋಗದಾತರಿಗೆ ವಲಸೆ ದಾರಿಗಳನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ.

ಕಾರ್ಮಿಕರ ಕೊರತೆಯನ್ನು ನಿವಾರಿಸಲು, ನ್ಯೂಜಿಲೆಂಡ್ ಸರ್ಕಾರವು ವಲಸಿಗರಿಗೆ ಕೆಲಸದ ಅನುಭವದ ಮಾನದಂಡವನ್ನು ಮೂರರಿಂದ ಎರಡು ವರ್ಷಗಳವರೆಗೆ ಇಳಿಕೆ ಮಾಡಿದೆ. ಈ ಕ್ರಮವು ಸಮರ್ಥ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಹೆಚ್ಚು ಸುಲಭದ ಉದ್ಯೋಗವನ್ನು ಹುಡುಕಲು ಅನುವು ಮಾಡಿಕೊಡುತ್ತದೆ. ಈ ಹೊಸ ನಿಯಮಗಳು ನ್ಯೂಜಿಲೆಂಡ್‌ನಲ್ಲಿ ಉದ್ಯೋಗಾವಕಾಶಗಳನ್ನು ಬಯಸುವ ಭಾರತೀಯ ವಲಸಿಗರಿಗೆ ಸಹಾಯ ಮಾಡುವ ನಿರೀಕ್ಷೆಯಿದೆ.

ಋತುಮಾನಕ್ಕನುಗುಣವಾದ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ಉಳಿಯಲು ದೇಶವು ಎರಡು ಹೊಸ ಮಾರ್ಗಗಳನ್ನು ಪರಿಚಯಿಸಿದೆ. ಅನುಭವಿಗಳಾದ ಋತುಮಾನಕ್ಕನುಗುಣದ ಕೆಲಸಗಾರರಿಗೆ ಮೂರು ವರ್ಷಗಳ ಬಹುಪ್ರವೇಶ ವೀಸಾ ಮತ್ತು ಕಡಿಮೆ ಕುಶಲ ಕೆಲಸಗಾರರಿಗೆ ಏಳು ತಿಂಗಳ ಏಕಪ್ರವೇಶ ವೀಸಾವನ್ನು ಪರಿಚಯಿಸಲಾಗಿದೆ. ಕಾಲಕ್ಕನುಗುಣವಾದ ಕಾರ್ಮಿಕರ ಬೇಡಿಕೆಗಳನ್ನು ಸರಿಹೊಂದಿಸಲು ಈ ನಿಯಮಗಳನ್ನು ಮಾಡಲಾಗಿದೆ.

ಇದಲ್ಲದೆ, ಮಾನ್ಯತೆ ಪಡೆದ ಉದ್ಯೋಗದಾತರ ಕೆಲಸದ ವೀಸಾ (AEWV) ಮತ್ತು ನಿರ್ದಿಷ್ಟ ಉದ್ದೇಶದ ಕೆಲಸದ ವೀಸಾ (SPWV) ಗಾಗಿ ಸರಾಸರಿ ವೇತನ ಮಾನದಂಡಗಳನ್ನು ಸರ್ಕಾರವು ತೆಗೆದುಹಾಕಿದೆ. ಹೊಸ ನಿಯಮಗಳ ಅಡಿಯಲ್ಲಿ ಉದ್ಯೋಗದಾತರು ಉದ್ಯೋಗಾವಕಾಶಗಳನ್ನು ಒದಗಿಸುವಾಗ ಮಾರುಕಟ್ಟೆ ದರದ ಪ್ರಕಾರ ಸಂಬಳವನ್ನು ನೀಡಲು ನಿರ್ಬಂಧಿತರಾಗಿದ್ದರೂ, ಅವರು ಇನ್ನು ಮುಂದೆ ಪೂರ್ವನಿರ್ಧರಿತ ಸಂಬಳದ ಮಾನದಂಡವನ್ನು ಪೂರೈಸುವ ಅಗತ್ಯವಿಲ್ಲ. ಇದು ಉದ್ಯೋಗದಾತರಿಗೆ ಸಮಾನವಾದ ಕಾರ್ಮಿಕರ ಸಂಭಾವನೆಯನ್ನು ಉಳಿಸಿಕೊಳ್ಳುವ ಸ್ವಾತಂತ್ರ್ಯವನ್ನು ನೀಡುತ್ತದೆ.

ತಮ್ಮ ಮಕ್ಕಳನ್ನು ನ್ಯೂಜಿಲೆಂಡ್‌ಗೆ ಕರೆತರಲು ಬಯಸುವ ವಲಸಿಗರಿಗೆ, AEWV ಹೊಂದಿರುವವರು ಈಗ ವಾರ್ಷಿಕವಾಗಿ ಕನಿಷ್ಠ NZ$55,844 ಗಳಿಸಬೇಕು. ಈ ಕನಿಷ್ಠ ಮಿತಿಯನ್ನು 2019ರಿಂದ ಬದಲಾಯಿಸಲಾಗಿಲ್ಲ, ವಲಸೆ ಕುಟುಂಬಗಳು ದೇಶದಲ್ಲಿ ವಾಸಿಸುತ್ತಿರುವಾಗ ಆರ್ಥಿಕವಾಗಿ ತಮ್ಮನ್ನು ತಾವು ಆರ್ಥಿಕವಾಗಿ ಸಬಲರಾಗುವುದನ್ನು ಖಚಿತಪಡಿಸಿಕೊಳ್ಳುವುದೇ ಈ ಉದ್ದೇಶದ ಹಿಂದೆ ಆಡಗಿದೆ.

ಇದಲ್ಲದೆ, ಆಸ್ಟ್ರೇಲಿಯನ್ ಮತ್ತು ನ್ಯೂಜಿಲೆಂಡ್ ಸ್ಟ್ಯಾಂಡರ್ಡ್ ಕ್ಲಾಸಿಫಿಕೇಶನ್ ಆಫ್ ಆಕ್ಯುಪೇಷನ್ಸ್ (ANZSCO) ಕೌಶಲ್ಯ ಮಟ್ಟದಲ್ಲಿ 4 ಅಥವಾ 5 ರೊಳಗೆ ಬರುವ ಉದ್ಯೋಗಿಗಳಿಗೆ ನ್ಯೂಜಿಲೆಂಡ್ ಎರಡು ವರ್ಷಗಳ ವೀಸಾ ಅವಧಿಯನ್ನು ಮೂರು ವರ್ಷಗಳವರೆಗೆ ವಿಸ್ತರಿಸಿದೆ. ಎರಡು ವರ್ಷಗಳ ವೀಸಾ ಹೊಂದಿರುವ ಈ ಉದ್ಯೋಗಗಳಲ್ಲಿ ಪ್ರಸ್ತುತ ಉದ್ಯೋಗಿಗಳು ಒಂದು ವರ್ಷದ ವಿಸ್ತರಣೆಯನ್ನು ಕೋರಬಹುದಾಗಿದೆ.

ಕೌಶಲ್ಯ ಮಟ್ಟ 4 ಅಥವಾ 5 ಗಾಗಿ ಉದ್ಯೋಗಾವಕಾಶಗಳನ್ನು ಒದಗಿಸುವಾಗ ಉದ್ಯೋಗದಾತರು 21 ದಿನದ ಕಡ್ಡಾಯ ನೇಮಕಾತಿ ಅವಧಿಯನ್ನು ಅನುಸರಿಸುವ ಅಗತ್ಯವಿಲ್ಲ. ಅವರು ಸ್ಥಳೀಯವಾಗಿ ನೇಮಕ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ತೋರಿಸಲು ಅರ್ಹ ಅಭ್ಯರ್ಥಿಗಳಿಗಾಗಿ ಜಾಹೀರಾತು ಮತ್ತು ಸಂದರ್ಶನ ಮಾಡಬಹುದಾಗಿದೆ.

ಕಟ್ಟಡದಂತಹ ನಿರ್ಮಾಣ ಉದ್ಯಮದಲ್ಲಿನ ಕಾರ್ಮಿಕರ ಕೊರತೆಯನ್ನು ಪರಿಹರಿಸುವ ಸಲುವಾಗಿ ಸರ್ಕಾರವು  ದೇಶೀಯ ಉದ್ಯೋಗಿಗಳ ಮಾನದಂಡವನ್ನು %35ರಿಂದ % 15ಕ್ಕೆ ಇಳಿಕೆ ಮಾಡಿದೆ.

ಈ ವರ್ಷದಿಂದ ಮಾನ್ಯತೆ ಪಡೆದ ಉದ್ಯೋಗದಾತರು ನ್ಯೂಜಿಲೆಂಡ್ ಒದಗಿಸಿದ ಆನ್‌ಲೈನ್ ತರಬೇತಿ ಮಾನದಂಡಗಳನ್ನು ಪೂರ್ಣಗೊಳಿಸುವ ಅಗತ್ಯವಿಲ್ಲ. ಬದಲಿಗೆ ಉದ್ಯೋಗ ಹಕ್ಕುಗಳು ಮತ್ತು ಜವಾಬ್ದಾರಿಗಳ ಮೇಲೆ ಸುಲಭ ಪ್ರವೇಶದ ಕೊಡುಗೆಯನ್ನು ಅದು ನೀಡಿದೆ.

ಏಪ್ರಿಲ್ 2025ರಿಂದ ವಿದ್ಯಾರ್ಥಿ ವೀಸಾ ಅಥವಾ ಯಾವುದೇ ಇತರ ಕೆಲಸದಿಂದ AEWVಗೆ ಪರಿವರ್ತನೆ ಮಾಡಲು ಬಯಸುವ ವಲಸಿಗರಿಗೆ ಮಧ್ಯಂತರ ಕೆಲಸದ ಹಕ್ಕುಗಳನ್ನು ನೀಡಲಾಗುತ್ತದೆ.

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...