Homeಅಂತರಾಷ್ಟ್ರೀಯನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

ನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

- Advertisement -
- Advertisement -

ವೆಲ್ಲಿಂಗ್ಟನ್: ನಿರಂತರವಾಗಿ ಕಾರ್ಮಿಕರ ಕೊರತೆಗಳ ಮಧ್ಯೆ, ವಲಸೆ ಕಾರ್ಯವಿಧಾನಗಳನ್ನು ಸುಗಮಗೊಳಿಸಲು ನ್ಯೂಜಿಲೆಂಡ್ ತನ್ನ ವೀಸಾ ಮತ್ತು ಉದ್ಯೋಗದ ಅವಶ್ಯಕತೆಗೆ ಅನುಗುಣವಾಗಿ ಗಮನಾರ್ಹವಾದ ಮಾರ್ಪಡುಗಳೊಂದಿಗೆ ಹೊಸ ನಿಯಮಗಳನ್ನು ಹೊರಡಿಸಿದೆ. ಈ ನಿಯಮ ಉದ್ಯೋಗಿಗಳಿಗೆ ಮತ್ತು ಉದ್ಯೋಗದಾತರಿಗೆ ವಲಸೆ ದಾರಿಗಳನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ.

ಕಾರ್ಮಿಕರ ಕೊರತೆಯನ್ನು ನಿವಾರಿಸಲು, ನ್ಯೂಜಿಲೆಂಡ್ ಸರ್ಕಾರವು ವಲಸಿಗರಿಗೆ ಕೆಲಸದ ಅನುಭವದ ಮಾನದಂಡವನ್ನು ಮೂರರಿಂದ ಎರಡು ವರ್ಷಗಳವರೆಗೆ ಇಳಿಕೆ ಮಾಡಿದೆ. ಈ ಕ್ರಮವು ಸಮರ್ಥ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಹೆಚ್ಚು ಸುಲಭದ ಉದ್ಯೋಗವನ್ನು ಹುಡುಕಲು ಅನುವು ಮಾಡಿಕೊಡುತ್ತದೆ. ಈ ಹೊಸ ನಿಯಮಗಳು ನ್ಯೂಜಿಲೆಂಡ್‌ನಲ್ಲಿ ಉದ್ಯೋಗಾವಕಾಶಗಳನ್ನು ಬಯಸುವ ಭಾರತೀಯ ವಲಸಿಗರಿಗೆ ಸಹಾಯ ಮಾಡುವ ನಿರೀಕ್ಷೆಯಿದೆ.

ಋತುಮಾನಕ್ಕನುಗುಣವಾದ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ಉಳಿಯಲು ದೇಶವು ಎರಡು ಹೊಸ ಮಾರ್ಗಗಳನ್ನು ಪರಿಚಯಿಸಿದೆ. ಅನುಭವಿಗಳಾದ ಋತುಮಾನಕ್ಕನುಗುಣದ ಕೆಲಸಗಾರರಿಗೆ ಮೂರು ವರ್ಷಗಳ ಬಹುಪ್ರವೇಶ ವೀಸಾ ಮತ್ತು ಕಡಿಮೆ ಕುಶಲ ಕೆಲಸಗಾರರಿಗೆ ಏಳು ತಿಂಗಳ ಏಕಪ್ರವೇಶ ವೀಸಾವನ್ನು ಪರಿಚಯಿಸಲಾಗಿದೆ. ಕಾಲಕ್ಕನುಗುಣವಾದ ಕಾರ್ಮಿಕರ ಬೇಡಿಕೆಗಳನ್ನು ಸರಿಹೊಂದಿಸಲು ಈ ನಿಯಮಗಳನ್ನು ಮಾಡಲಾಗಿದೆ.

ಇದಲ್ಲದೆ, ಮಾನ್ಯತೆ ಪಡೆದ ಉದ್ಯೋಗದಾತರ ಕೆಲಸದ ವೀಸಾ (AEWV) ಮತ್ತು ನಿರ್ದಿಷ್ಟ ಉದ್ದೇಶದ ಕೆಲಸದ ವೀಸಾ (SPWV) ಗಾಗಿ ಸರಾಸರಿ ವೇತನ ಮಾನದಂಡಗಳನ್ನು ಸರ್ಕಾರವು ತೆಗೆದುಹಾಕಿದೆ. ಹೊಸ ನಿಯಮಗಳ ಅಡಿಯಲ್ಲಿ ಉದ್ಯೋಗದಾತರು ಉದ್ಯೋಗಾವಕಾಶಗಳನ್ನು ಒದಗಿಸುವಾಗ ಮಾರುಕಟ್ಟೆ ದರದ ಪ್ರಕಾರ ಸಂಬಳವನ್ನು ನೀಡಲು ನಿರ್ಬಂಧಿತರಾಗಿದ್ದರೂ, ಅವರು ಇನ್ನು ಮುಂದೆ ಪೂರ್ವನಿರ್ಧರಿತ ಸಂಬಳದ ಮಾನದಂಡವನ್ನು ಪೂರೈಸುವ ಅಗತ್ಯವಿಲ್ಲ. ಇದು ಉದ್ಯೋಗದಾತರಿಗೆ ಸಮಾನವಾದ ಕಾರ್ಮಿಕರ ಸಂಭಾವನೆಯನ್ನು ಉಳಿಸಿಕೊಳ್ಳುವ ಸ್ವಾತಂತ್ರ್ಯವನ್ನು ನೀಡುತ್ತದೆ.

ತಮ್ಮ ಮಕ್ಕಳನ್ನು ನ್ಯೂಜಿಲೆಂಡ್‌ಗೆ ಕರೆತರಲು ಬಯಸುವ ವಲಸಿಗರಿಗೆ, AEWV ಹೊಂದಿರುವವರು ಈಗ ವಾರ್ಷಿಕವಾಗಿ ಕನಿಷ್ಠ NZ$55,844 ಗಳಿಸಬೇಕು. ಈ ಕನಿಷ್ಠ ಮಿತಿಯನ್ನು 2019ರಿಂದ ಬದಲಾಯಿಸಲಾಗಿಲ್ಲ, ವಲಸೆ ಕುಟುಂಬಗಳು ದೇಶದಲ್ಲಿ ವಾಸಿಸುತ್ತಿರುವಾಗ ಆರ್ಥಿಕವಾಗಿ ತಮ್ಮನ್ನು ತಾವು ಆರ್ಥಿಕವಾಗಿ ಸಬಲರಾಗುವುದನ್ನು ಖಚಿತಪಡಿಸಿಕೊಳ್ಳುವುದೇ ಈ ಉದ್ದೇಶದ ಹಿಂದೆ ಆಡಗಿದೆ.

ಇದಲ್ಲದೆ, ಆಸ್ಟ್ರೇಲಿಯನ್ ಮತ್ತು ನ್ಯೂಜಿಲೆಂಡ್ ಸ್ಟ್ಯಾಂಡರ್ಡ್ ಕ್ಲಾಸಿಫಿಕೇಶನ್ ಆಫ್ ಆಕ್ಯುಪೇಷನ್ಸ್ (ANZSCO) ಕೌಶಲ್ಯ ಮಟ್ಟದಲ್ಲಿ 4 ಅಥವಾ 5 ರೊಳಗೆ ಬರುವ ಉದ್ಯೋಗಿಗಳಿಗೆ ನ್ಯೂಜಿಲೆಂಡ್ ಎರಡು ವರ್ಷಗಳ ವೀಸಾ ಅವಧಿಯನ್ನು ಮೂರು ವರ್ಷಗಳವರೆಗೆ ವಿಸ್ತರಿಸಿದೆ. ಎರಡು ವರ್ಷಗಳ ವೀಸಾ ಹೊಂದಿರುವ ಈ ಉದ್ಯೋಗಗಳಲ್ಲಿ ಪ್ರಸ್ತುತ ಉದ್ಯೋಗಿಗಳು ಒಂದು ವರ್ಷದ ವಿಸ್ತರಣೆಯನ್ನು ಕೋರಬಹುದಾಗಿದೆ.

ಕೌಶಲ್ಯ ಮಟ್ಟ 4 ಅಥವಾ 5 ಗಾಗಿ ಉದ್ಯೋಗಾವಕಾಶಗಳನ್ನು ಒದಗಿಸುವಾಗ ಉದ್ಯೋಗದಾತರು 21 ದಿನದ ಕಡ್ಡಾಯ ನೇಮಕಾತಿ ಅವಧಿಯನ್ನು ಅನುಸರಿಸುವ ಅಗತ್ಯವಿಲ್ಲ. ಅವರು ಸ್ಥಳೀಯವಾಗಿ ನೇಮಕ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ತೋರಿಸಲು ಅರ್ಹ ಅಭ್ಯರ್ಥಿಗಳಿಗಾಗಿ ಜಾಹೀರಾತು ಮತ್ತು ಸಂದರ್ಶನ ಮಾಡಬಹುದಾಗಿದೆ.

ಕಟ್ಟಡದಂತಹ ನಿರ್ಮಾಣ ಉದ್ಯಮದಲ್ಲಿನ ಕಾರ್ಮಿಕರ ಕೊರತೆಯನ್ನು ಪರಿಹರಿಸುವ ಸಲುವಾಗಿ ಸರ್ಕಾರವು  ದೇಶೀಯ ಉದ್ಯೋಗಿಗಳ ಮಾನದಂಡವನ್ನು %35ರಿಂದ % 15ಕ್ಕೆ ಇಳಿಕೆ ಮಾಡಿದೆ.

ಈ ವರ್ಷದಿಂದ ಮಾನ್ಯತೆ ಪಡೆದ ಉದ್ಯೋಗದಾತರು ನ್ಯೂಜಿಲೆಂಡ್ ಒದಗಿಸಿದ ಆನ್‌ಲೈನ್ ತರಬೇತಿ ಮಾನದಂಡಗಳನ್ನು ಪೂರ್ಣಗೊಳಿಸುವ ಅಗತ್ಯವಿಲ್ಲ. ಬದಲಿಗೆ ಉದ್ಯೋಗ ಹಕ್ಕುಗಳು ಮತ್ತು ಜವಾಬ್ದಾರಿಗಳ ಮೇಲೆ ಸುಲಭ ಪ್ರವೇಶದ ಕೊಡುಗೆಯನ್ನು ಅದು ನೀಡಿದೆ.

ಏಪ್ರಿಲ್ 2025ರಿಂದ ವಿದ್ಯಾರ್ಥಿ ವೀಸಾ ಅಥವಾ ಯಾವುದೇ ಇತರ ಕೆಲಸದಿಂದ AEWVಗೆ ಪರಿವರ್ತನೆ ಮಾಡಲು ಬಯಸುವ ವಲಸಿಗರಿಗೆ ಮಧ್ಯಂತರ ಕೆಲಸದ ಹಕ್ಕುಗಳನ್ನು ನೀಡಲಾಗುತ್ತದೆ.

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...