Homeಅಂತರಾಷ್ಟ್ರೀಯನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

ನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

- Advertisement -
- Advertisement -

ವೆಲ್ಲಿಂಗ್ಟನ್: ನಿರಂತರವಾಗಿ ಕಾರ್ಮಿಕರ ಕೊರತೆಗಳ ಮಧ್ಯೆ, ವಲಸೆ ಕಾರ್ಯವಿಧಾನಗಳನ್ನು ಸುಗಮಗೊಳಿಸಲು ನ್ಯೂಜಿಲೆಂಡ್ ತನ್ನ ವೀಸಾ ಮತ್ತು ಉದ್ಯೋಗದ ಅವಶ್ಯಕತೆಗೆ ಅನುಗುಣವಾಗಿ ಗಮನಾರ್ಹವಾದ ಮಾರ್ಪಡುಗಳೊಂದಿಗೆ ಹೊಸ ನಿಯಮಗಳನ್ನು ಹೊರಡಿಸಿದೆ. ಈ ನಿಯಮ ಉದ್ಯೋಗಿಗಳಿಗೆ ಮತ್ತು ಉದ್ಯೋಗದಾತರಿಗೆ ವಲಸೆ ದಾರಿಗಳನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ.

ಕಾರ್ಮಿಕರ ಕೊರತೆಯನ್ನು ನಿವಾರಿಸಲು, ನ್ಯೂಜಿಲೆಂಡ್ ಸರ್ಕಾರವು ವಲಸಿಗರಿಗೆ ಕೆಲಸದ ಅನುಭವದ ಮಾನದಂಡವನ್ನು ಮೂರರಿಂದ ಎರಡು ವರ್ಷಗಳವರೆಗೆ ಇಳಿಕೆ ಮಾಡಿದೆ. ಈ ಕ್ರಮವು ಸಮರ್ಥ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಹೆಚ್ಚು ಸುಲಭದ ಉದ್ಯೋಗವನ್ನು ಹುಡುಕಲು ಅನುವು ಮಾಡಿಕೊಡುತ್ತದೆ. ಈ ಹೊಸ ನಿಯಮಗಳು ನ್ಯೂಜಿಲೆಂಡ್‌ನಲ್ಲಿ ಉದ್ಯೋಗಾವಕಾಶಗಳನ್ನು ಬಯಸುವ ಭಾರತೀಯ ವಲಸಿಗರಿಗೆ ಸಹಾಯ ಮಾಡುವ ನಿರೀಕ್ಷೆಯಿದೆ.

ಋತುಮಾನಕ್ಕನುಗುಣವಾದ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ಉಳಿಯಲು ದೇಶವು ಎರಡು ಹೊಸ ಮಾರ್ಗಗಳನ್ನು ಪರಿಚಯಿಸಿದೆ. ಅನುಭವಿಗಳಾದ ಋತುಮಾನಕ್ಕನುಗುಣದ ಕೆಲಸಗಾರರಿಗೆ ಮೂರು ವರ್ಷಗಳ ಬಹುಪ್ರವೇಶ ವೀಸಾ ಮತ್ತು ಕಡಿಮೆ ಕುಶಲ ಕೆಲಸಗಾರರಿಗೆ ಏಳು ತಿಂಗಳ ಏಕಪ್ರವೇಶ ವೀಸಾವನ್ನು ಪರಿಚಯಿಸಲಾಗಿದೆ. ಕಾಲಕ್ಕನುಗುಣವಾದ ಕಾರ್ಮಿಕರ ಬೇಡಿಕೆಗಳನ್ನು ಸರಿಹೊಂದಿಸಲು ಈ ನಿಯಮಗಳನ್ನು ಮಾಡಲಾಗಿದೆ.

ಇದಲ್ಲದೆ, ಮಾನ್ಯತೆ ಪಡೆದ ಉದ್ಯೋಗದಾತರ ಕೆಲಸದ ವೀಸಾ (AEWV) ಮತ್ತು ನಿರ್ದಿಷ್ಟ ಉದ್ದೇಶದ ಕೆಲಸದ ವೀಸಾ (SPWV) ಗಾಗಿ ಸರಾಸರಿ ವೇತನ ಮಾನದಂಡಗಳನ್ನು ಸರ್ಕಾರವು ತೆಗೆದುಹಾಕಿದೆ. ಹೊಸ ನಿಯಮಗಳ ಅಡಿಯಲ್ಲಿ ಉದ್ಯೋಗದಾತರು ಉದ್ಯೋಗಾವಕಾಶಗಳನ್ನು ಒದಗಿಸುವಾಗ ಮಾರುಕಟ್ಟೆ ದರದ ಪ್ರಕಾರ ಸಂಬಳವನ್ನು ನೀಡಲು ನಿರ್ಬಂಧಿತರಾಗಿದ್ದರೂ, ಅವರು ಇನ್ನು ಮುಂದೆ ಪೂರ್ವನಿರ್ಧರಿತ ಸಂಬಳದ ಮಾನದಂಡವನ್ನು ಪೂರೈಸುವ ಅಗತ್ಯವಿಲ್ಲ. ಇದು ಉದ್ಯೋಗದಾತರಿಗೆ ಸಮಾನವಾದ ಕಾರ್ಮಿಕರ ಸಂಭಾವನೆಯನ್ನು ಉಳಿಸಿಕೊಳ್ಳುವ ಸ್ವಾತಂತ್ರ್ಯವನ್ನು ನೀಡುತ್ತದೆ.

ತಮ್ಮ ಮಕ್ಕಳನ್ನು ನ್ಯೂಜಿಲೆಂಡ್‌ಗೆ ಕರೆತರಲು ಬಯಸುವ ವಲಸಿಗರಿಗೆ, AEWV ಹೊಂದಿರುವವರು ಈಗ ವಾರ್ಷಿಕವಾಗಿ ಕನಿಷ್ಠ NZ$55,844 ಗಳಿಸಬೇಕು. ಈ ಕನಿಷ್ಠ ಮಿತಿಯನ್ನು 2019ರಿಂದ ಬದಲಾಯಿಸಲಾಗಿಲ್ಲ, ವಲಸೆ ಕುಟುಂಬಗಳು ದೇಶದಲ್ಲಿ ವಾಸಿಸುತ್ತಿರುವಾಗ ಆರ್ಥಿಕವಾಗಿ ತಮ್ಮನ್ನು ತಾವು ಆರ್ಥಿಕವಾಗಿ ಸಬಲರಾಗುವುದನ್ನು ಖಚಿತಪಡಿಸಿಕೊಳ್ಳುವುದೇ ಈ ಉದ್ದೇಶದ ಹಿಂದೆ ಆಡಗಿದೆ.

ಇದಲ್ಲದೆ, ಆಸ್ಟ್ರೇಲಿಯನ್ ಮತ್ತು ನ್ಯೂಜಿಲೆಂಡ್ ಸ್ಟ್ಯಾಂಡರ್ಡ್ ಕ್ಲಾಸಿಫಿಕೇಶನ್ ಆಫ್ ಆಕ್ಯುಪೇಷನ್ಸ್ (ANZSCO) ಕೌಶಲ್ಯ ಮಟ್ಟದಲ್ಲಿ 4 ಅಥವಾ 5 ರೊಳಗೆ ಬರುವ ಉದ್ಯೋಗಿಗಳಿಗೆ ನ್ಯೂಜಿಲೆಂಡ್ ಎರಡು ವರ್ಷಗಳ ವೀಸಾ ಅವಧಿಯನ್ನು ಮೂರು ವರ್ಷಗಳವರೆಗೆ ವಿಸ್ತರಿಸಿದೆ. ಎರಡು ವರ್ಷಗಳ ವೀಸಾ ಹೊಂದಿರುವ ಈ ಉದ್ಯೋಗಗಳಲ್ಲಿ ಪ್ರಸ್ತುತ ಉದ್ಯೋಗಿಗಳು ಒಂದು ವರ್ಷದ ವಿಸ್ತರಣೆಯನ್ನು ಕೋರಬಹುದಾಗಿದೆ.

ಕೌಶಲ್ಯ ಮಟ್ಟ 4 ಅಥವಾ 5 ಗಾಗಿ ಉದ್ಯೋಗಾವಕಾಶಗಳನ್ನು ಒದಗಿಸುವಾಗ ಉದ್ಯೋಗದಾತರು 21 ದಿನದ ಕಡ್ಡಾಯ ನೇಮಕಾತಿ ಅವಧಿಯನ್ನು ಅನುಸರಿಸುವ ಅಗತ್ಯವಿಲ್ಲ. ಅವರು ಸ್ಥಳೀಯವಾಗಿ ನೇಮಕ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ತೋರಿಸಲು ಅರ್ಹ ಅಭ್ಯರ್ಥಿಗಳಿಗಾಗಿ ಜಾಹೀರಾತು ಮತ್ತು ಸಂದರ್ಶನ ಮಾಡಬಹುದಾಗಿದೆ.

ಕಟ್ಟಡದಂತಹ ನಿರ್ಮಾಣ ಉದ್ಯಮದಲ್ಲಿನ ಕಾರ್ಮಿಕರ ಕೊರತೆಯನ್ನು ಪರಿಹರಿಸುವ ಸಲುವಾಗಿ ಸರ್ಕಾರವು  ದೇಶೀಯ ಉದ್ಯೋಗಿಗಳ ಮಾನದಂಡವನ್ನು %35ರಿಂದ % 15ಕ್ಕೆ ಇಳಿಕೆ ಮಾಡಿದೆ.

ಈ ವರ್ಷದಿಂದ ಮಾನ್ಯತೆ ಪಡೆದ ಉದ್ಯೋಗದಾತರು ನ್ಯೂಜಿಲೆಂಡ್ ಒದಗಿಸಿದ ಆನ್‌ಲೈನ್ ತರಬೇತಿ ಮಾನದಂಡಗಳನ್ನು ಪೂರ್ಣಗೊಳಿಸುವ ಅಗತ್ಯವಿಲ್ಲ. ಬದಲಿಗೆ ಉದ್ಯೋಗ ಹಕ್ಕುಗಳು ಮತ್ತು ಜವಾಬ್ದಾರಿಗಳ ಮೇಲೆ ಸುಲಭ ಪ್ರವೇಶದ ಕೊಡುಗೆಯನ್ನು ಅದು ನೀಡಿದೆ.

ಏಪ್ರಿಲ್ 2025ರಿಂದ ವಿದ್ಯಾರ್ಥಿ ವೀಸಾ ಅಥವಾ ಯಾವುದೇ ಇತರ ಕೆಲಸದಿಂದ AEWVಗೆ ಪರಿವರ್ತನೆ ಮಾಡಲು ಬಯಸುವ ವಲಸಿಗರಿಗೆ ಮಧ್ಯಂತರ ಕೆಲಸದ ಹಕ್ಕುಗಳನ್ನು ನೀಡಲಾಗುತ್ತದೆ.

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...