Homeಅಂತರಾಷ್ಟ್ರೀಯನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

ನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

- Advertisement -
- Advertisement -

ವೆಲ್ಲಿಂಗ್ಟನ್: ನಿರಂತರವಾಗಿ ಕಾರ್ಮಿಕರ ಕೊರತೆಗಳ ಮಧ್ಯೆ, ವಲಸೆ ಕಾರ್ಯವಿಧಾನಗಳನ್ನು ಸುಗಮಗೊಳಿಸಲು ನ್ಯೂಜಿಲೆಂಡ್ ತನ್ನ ವೀಸಾ ಮತ್ತು ಉದ್ಯೋಗದ ಅವಶ್ಯಕತೆಗೆ ಅನುಗುಣವಾಗಿ ಗಮನಾರ್ಹವಾದ ಮಾರ್ಪಡುಗಳೊಂದಿಗೆ ಹೊಸ ನಿಯಮಗಳನ್ನು ಹೊರಡಿಸಿದೆ. ಈ ನಿಯಮ ಉದ್ಯೋಗಿಗಳಿಗೆ ಮತ್ತು ಉದ್ಯೋಗದಾತರಿಗೆ ವಲಸೆ ದಾರಿಗಳನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ.

ಕಾರ್ಮಿಕರ ಕೊರತೆಯನ್ನು ನಿವಾರಿಸಲು, ನ್ಯೂಜಿಲೆಂಡ್ ಸರ್ಕಾರವು ವಲಸಿಗರಿಗೆ ಕೆಲಸದ ಅನುಭವದ ಮಾನದಂಡವನ್ನು ಮೂರರಿಂದ ಎರಡು ವರ್ಷಗಳವರೆಗೆ ಇಳಿಕೆ ಮಾಡಿದೆ. ಈ ಕ್ರಮವು ಸಮರ್ಥ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಹೆಚ್ಚು ಸುಲಭದ ಉದ್ಯೋಗವನ್ನು ಹುಡುಕಲು ಅನುವು ಮಾಡಿಕೊಡುತ್ತದೆ. ಈ ಹೊಸ ನಿಯಮಗಳು ನ್ಯೂಜಿಲೆಂಡ್‌ನಲ್ಲಿ ಉದ್ಯೋಗಾವಕಾಶಗಳನ್ನು ಬಯಸುವ ಭಾರತೀಯ ವಲಸಿಗರಿಗೆ ಸಹಾಯ ಮಾಡುವ ನಿರೀಕ್ಷೆಯಿದೆ.

ಋತುಮಾನಕ್ಕನುಗುಣವಾದ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ಉಳಿಯಲು ದೇಶವು ಎರಡು ಹೊಸ ಮಾರ್ಗಗಳನ್ನು ಪರಿಚಯಿಸಿದೆ. ಅನುಭವಿಗಳಾದ ಋತುಮಾನಕ್ಕನುಗುಣದ ಕೆಲಸಗಾರರಿಗೆ ಮೂರು ವರ್ಷಗಳ ಬಹುಪ್ರವೇಶ ವೀಸಾ ಮತ್ತು ಕಡಿಮೆ ಕುಶಲ ಕೆಲಸಗಾರರಿಗೆ ಏಳು ತಿಂಗಳ ಏಕಪ್ರವೇಶ ವೀಸಾವನ್ನು ಪರಿಚಯಿಸಲಾಗಿದೆ. ಕಾಲಕ್ಕನುಗುಣವಾದ ಕಾರ್ಮಿಕರ ಬೇಡಿಕೆಗಳನ್ನು ಸರಿಹೊಂದಿಸಲು ಈ ನಿಯಮಗಳನ್ನು ಮಾಡಲಾಗಿದೆ.

ಇದಲ್ಲದೆ, ಮಾನ್ಯತೆ ಪಡೆದ ಉದ್ಯೋಗದಾತರ ಕೆಲಸದ ವೀಸಾ (AEWV) ಮತ್ತು ನಿರ್ದಿಷ್ಟ ಉದ್ದೇಶದ ಕೆಲಸದ ವೀಸಾ (SPWV) ಗಾಗಿ ಸರಾಸರಿ ವೇತನ ಮಾನದಂಡಗಳನ್ನು ಸರ್ಕಾರವು ತೆಗೆದುಹಾಕಿದೆ. ಹೊಸ ನಿಯಮಗಳ ಅಡಿಯಲ್ಲಿ ಉದ್ಯೋಗದಾತರು ಉದ್ಯೋಗಾವಕಾಶಗಳನ್ನು ಒದಗಿಸುವಾಗ ಮಾರುಕಟ್ಟೆ ದರದ ಪ್ರಕಾರ ಸಂಬಳವನ್ನು ನೀಡಲು ನಿರ್ಬಂಧಿತರಾಗಿದ್ದರೂ, ಅವರು ಇನ್ನು ಮುಂದೆ ಪೂರ್ವನಿರ್ಧರಿತ ಸಂಬಳದ ಮಾನದಂಡವನ್ನು ಪೂರೈಸುವ ಅಗತ್ಯವಿಲ್ಲ. ಇದು ಉದ್ಯೋಗದಾತರಿಗೆ ಸಮಾನವಾದ ಕಾರ್ಮಿಕರ ಸಂಭಾವನೆಯನ್ನು ಉಳಿಸಿಕೊಳ್ಳುವ ಸ್ವಾತಂತ್ರ್ಯವನ್ನು ನೀಡುತ್ತದೆ.

ತಮ್ಮ ಮಕ್ಕಳನ್ನು ನ್ಯೂಜಿಲೆಂಡ್‌ಗೆ ಕರೆತರಲು ಬಯಸುವ ವಲಸಿಗರಿಗೆ, AEWV ಹೊಂದಿರುವವರು ಈಗ ವಾರ್ಷಿಕವಾಗಿ ಕನಿಷ್ಠ NZ$55,844 ಗಳಿಸಬೇಕು. ಈ ಕನಿಷ್ಠ ಮಿತಿಯನ್ನು 2019ರಿಂದ ಬದಲಾಯಿಸಲಾಗಿಲ್ಲ, ವಲಸೆ ಕುಟುಂಬಗಳು ದೇಶದಲ್ಲಿ ವಾಸಿಸುತ್ತಿರುವಾಗ ಆರ್ಥಿಕವಾಗಿ ತಮ್ಮನ್ನು ತಾವು ಆರ್ಥಿಕವಾಗಿ ಸಬಲರಾಗುವುದನ್ನು ಖಚಿತಪಡಿಸಿಕೊಳ್ಳುವುದೇ ಈ ಉದ್ದೇಶದ ಹಿಂದೆ ಆಡಗಿದೆ.

ಇದಲ್ಲದೆ, ಆಸ್ಟ್ರೇಲಿಯನ್ ಮತ್ತು ನ್ಯೂಜಿಲೆಂಡ್ ಸ್ಟ್ಯಾಂಡರ್ಡ್ ಕ್ಲಾಸಿಫಿಕೇಶನ್ ಆಫ್ ಆಕ್ಯುಪೇಷನ್ಸ್ (ANZSCO) ಕೌಶಲ್ಯ ಮಟ್ಟದಲ್ಲಿ 4 ಅಥವಾ 5 ರೊಳಗೆ ಬರುವ ಉದ್ಯೋಗಿಗಳಿಗೆ ನ್ಯೂಜಿಲೆಂಡ್ ಎರಡು ವರ್ಷಗಳ ವೀಸಾ ಅವಧಿಯನ್ನು ಮೂರು ವರ್ಷಗಳವರೆಗೆ ವಿಸ್ತರಿಸಿದೆ. ಎರಡು ವರ್ಷಗಳ ವೀಸಾ ಹೊಂದಿರುವ ಈ ಉದ್ಯೋಗಗಳಲ್ಲಿ ಪ್ರಸ್ತುತ ಉದ್ಯೋಗಿಗಳು ಒಂದು ವರ್ಷದ ವಿಸ್ತರಣೆಯನ್ನು ಕೋರಬಹುದಾಗಿದೆ.

ಕೌಶಲ್ಯ ಮಟ್ಟ 4 ಅಥವಾ 5 ಗಾಗಿ ಉದ್ಯೋಗಾವಕಾಶಗಳನ್ನು ಒದಗಿಸುವಾಗ ಉದ್ಯೋಗದಾತರು 21 ದಿನದ ಕಡ್ಡಾಯ ನೇಮಕಾತಿ ಅವಧಿಯನ್ನು ಅನುಸರಿಸುವ ಅಗತ್ಯವಿಲ್ಲ. ಅವರು ಸ್ಥಳೀಯವಾಗಿ ನೇಮಕ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ತೋರಿಸಲು ಅರ್ಹ ಅಭ್ಯರ್ಥಿಗಳಿಗಾಗಿ ಜಾಹೀರಾತು ಮತ್ತು ಸಂದರ್ಶನ ಮಾಡಬಹುದಾಗಿದೆ.

ಕಟ್ಟಡದಂತಹ ನಿರ್ಮಾಣ ಉದ್ಯಮದಲ್ಲಿನ ಕಾರ್ಮಿಕರ ಕೊರತೆಯನ್ನು ಪರಿಹರಿಸುವ ಸಲುವಾಗಿ ಸರ್ಕಾರವು  ದೇಶೀಯ ಉದ್ಯೋಗಿಗಳ ಮಾನದಂಡವನ್ನು %35ರಿಂದ % 15ಕ್ಕೆ ಇಳಿಕೆ ಮಾಡಿದೆ.

ಈ ವರ್ಷದಿಂದ ಮಾನ್ಯತೆ ಪಡೆದ ಉದ್ಯೋಗದಾತರು ನ್ಯೂಜಿಲೆಂಡ್ ಒದಗಿಸಿದ ಆನ್‌ಲೈನ್ ತರಬೇತಿ ಮಾನದಂಡಗಳನ್ನು ಪೂರ್ಣಗೊಳಿಸುವ ಅಗತ್ಯವಿಲ್ಲ. ಬದಲಿಗೆ ಉದ್ಯೋಗ ಹಕ್ಕುಗಳು ಮತ್ತು ಜವಾಬ್ದಾರಿಗಳ ಮೇಲೆ ಸುಲಭ ಪ್ರವೇಶದ ಕೊಡುಗೆಯನ್ನು ಅದು ನೀಡಿದೆ.

ಏಪ್ರಿಲ್ 2025ರಿಂದ ವಿದ್ಯಾರ್ಥಿ ವೀಸಾ ಅಥವಾ ಯಾವುದೇ ಇತರ ಕೆಲಸದಿಂದ AEWVಗೆ ಪರಿವರ್ತನೆ ಮಾಡಲು ಬಯಸುವ ವಲಸಿಗರಿಗೆ ಮಧ್ಯಂತರ ಕೆಲಸದ ಹಕ್ಕುಗಳನ್ನು ನೀಡಲಾಗುತ್ತದೆ.

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...