Homeಅಂತರಾಷ್ಟ್ರೀಯಗಾಝಾ: ಅಲ್-ಶಿಫಾ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಪ್ರಾಣ ಉಳಿಸಲು ಪರದಾಟ

ಗಾಝಾ: ಅಲ್-ಶಿಫಾ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಪ್ರಾಣ ಉಳಿಸಲು ಪರದಾಟ

- Advertisement -
- Advertisement -

ಗಾಝಾದ ಅಲ್-ಶಿಫಾ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ನವಜಾತ ಶಿಶುಗಳ ಜೀವ ಅಪಾಯದಲ್ಲಿದ್ದು, ಈಗಾಗಲೇ ಮೂರು ನವಜಾತ ಶಿಶುಗಳು ಮೃತಪಟ್ಟಿದೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ತಿಳಿಸಿದೆ.

ಅಲ್-ಶಿಫಾ ಆಸ್ಪತ್ರೆಯಲ್ಲಿ ಮೃತಪಟ್ಟ ಶಿಶುಗಳು ಸೇರಿ 37 ನವಜಾತ ಶಿಶುಗಳು ಇದ್ದವು. ಇಸ್ರೇಲ್ ದಾಳಿಯ ಪರಿಣಾಮವಾಗಿ ಸಂಪೂರ್ಣ ವಿದ್ಯುತ್ ಬಿಕ್ಕಟ್ಟು ಎದುರಾಗಿದ್ದು, ವೈದ್ಯಕೀಯ ಸಿಬ್ಬಂದಿಗಳು ಮಕ್ಕಳಿಗೆ ಕೃತಕ ಉಸಿರಾಟವನ್ನು ನೀಡುತ್ತಿದ್ದಾರೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರೋಗ್ಯ ಸಚಿವಾಲಯದ ಡೈರೆಕ್ಟರ್ ಜನರಲ್ ಡಾ.ಮುನೀರ್ ಅಲ್-ಬುರ್ಶ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಅಲ್-ಶಿಫಾ ಆಸ್ಪತ್ರೆಯಲ್ಲಿ ಮೂರು ಶಿಶುಗಳು ಸಾವನ್ನಪ್ಪಿವೆ. ನವಜಾತ ಶಿಶುಗಳ ವಾರ್ಡ್‌ನಲ್ಲಿನ ಜನರೇಟರ್ ಇಸ್ರೇಲ್‌ ದಾಳಿಯಿಂದ ನಿಷ್ಕ್ರಿಯವಾಗಿದೆ ಎಂದು ಹೇಳಿದ್ದಾರೆ.

ಅಲ್-ಶಿಫಾ ನಿರ್ದೇಶಕ ಮೊಹಮ್ಮದ್ ಅಬು ಸಲ್ಮಿಯಾ ಮಾತನಾಡಿ, ಇಸ್ರೇಲ್‌ ನಡೆಸಿದ ದಾಳಿಯಲ್ಲಿ ರಾತ್ರಿಯಲ್ಲಿ ವಿದ್ಯುತ್‌ ವ್ಯತ್ಯವಾಗಿದೆ ಎಂದು ಹೇಳಿದ್ದಾರೆ.

ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಮರ್ವಾನ್ ಅಬು ಸದಾ ಮಾತನಾಡಿ, ಅಲ್-ಶಿಫಾದ ಹೊರಗೆ ಎಲ್ಲೆಡೆ ಗುಂಡಿನ ದಾಳಿ ಮತ್ತು ಬಾಂಬ್ ದಾಳಿ ನಡೆದಿದೆ. ನೀವು ದಾಳಿಯ ಶಬ್ಧವನ್ನು ಪ್ರತಿ ಸೆಕೆಂಡಿನಲ್ಲಿ ಕೇಳಬಹುದು. ಅಲ್-ಶಿಫಾ ಆಸ್ಪತ್ರೆಯಿಂದ ಯಾರೂ ಹೊರಬರಲು ಸಾಧ್ಯವಾಗುತ್ತಿಲ್ಲ. ಯಾರೂ ಅಲ್-ಶಿಫಾ ಆಸ್ಪತ್ರೆಗೆ ಬರುವಂತಿಲ್ಲ ಎಂದು ಅವರು ಹೇಳಿದ್ದಾರೆ.

ಆಸ್ಪತ್ರೆಯಲ್ಲಿರುವ ವೈದ್ಯರು ಈಗ ವಾರ್ಡ್‌ನಲ್ಲಿರುವ 36 ಶಿಶುಗಳಿಗೆ ಕೃತಕ ಉಸಿರಾಟವನ್ನು ನೀಡುತ್ತಿದ್ದಾರೆ. ತೀವ್ರ ನಿಗಾ ಘಟಕ, ಮಕ್ಕಳ ವಿಭಾಗ ಮತ್ತು ಆಮ್ಲಜನಕ ಸಾಧನಗಳು ಕೆಲಸ ಮಾಡುವುದನ್ನು ನಿಲ್ಲಿಸಿವೆ ಎಂದು ಡಾ.ಅಶ್ರಫ್ ಅಲ್-ಕಿದ್ರಾ ಹೇಳಿದ್ದಾರೆ.

ಅಲ್-ಶಿಫಾ ಆಸ್ಪತ್ರೆಯ ಅಂಗಳವನ್ನು ಇಸ್ರೇಲ್‌ ಪಡೆಗಳು ಗುರಿಯಾಗಿಸಿದ್ದು, ಆಸ್ಪತ್ರೆಯ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಲ್-ಶಿಫಾ ಆಸ್ಪತ್ರೆಯ ಬಳಿ ಬಾಂಬ್ ದಾಳಿಯನ್ನು ತೋರಿಸುವ ವಿಡಿಯೋಗಳನ್ನು ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಪೋಸ್ಟ್‌ ಮಾಡಿದ್ದಾರೆ.

ಇಸ್ರೇಲ್ ರಕ್ಷಣಾ ಪಡೆಗಳು, ಗಾಝಾ ಪಟ್ಟಿಯಲ್ಲಿ ಭಯೋತ್ಪಾದಕರು ಉಡಾಯಿಸಿದ ಕ್ಷಿಪಣಿ ಅಲ್-ಶಿಫಾ ಆಸ್ಪತ್ರೆಯ ಮೇಲೆ ಹೊಡೆದಿದೆ ಎಂದು ಹಮಾಸ್‌ ವಿರುದ್ದವೇ ಆರೋಪವನ್ನು ಮಾಡಿದೆ.

ಆಸ್ಪತ್ರೆಯ ಹೊರಗೆ ಆಂಬ್ಯುಲೆನ್ಸ್‌ನ್ನು ಗುರಿಯಾಗಿಸಿಕೊಂಡ ದಾಳಿ ನಡೆಸಿದ ಒಂದು ವಾರದ ನಂತರ ಈ ಬೆಳವಣಿಗೆ ನಡೆದಿದೆ. ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿದ್ದರು.

ಇದನ್ನು ಓದಿ: ಗಾಝಾದಲ್ಲಿ ನಾಗರಿಕರ ಹತ್ಯಾಕಾಂಡ: ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ ಸೌದಿ, ಇರಾನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್‌ಐಆರ್‌: 5 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್; 60 ಲಕ್ಷಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ಬಾಕಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್‌) ಪ್ರಕ್ರಿಯೆ ನಂತರ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ 5.46 ಲಕ್ಷ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಅನುಮಾನಾಸ್ಪದ ಎಂಬ ಕಾರಣಕ್ಕೆ 60,06,675 ಹೆಸರುಗಳು...

‘ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ’: ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಂಧಿಸಿದ್ದ ಒಂಬತ್ತು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರಿಗೆ ದೆಹಲಿ ನ್ಯಾಯಾಲಯ ಭಾನುವಾರ (ಮಾ.1) ಸಂಜೆ ಜಾಮೀನು ನೀಡಿದೆ barandbench.com...

ವಯನಾಡ್ ಭೂಕುಸಿತ; ಪುನರ್ವಸತಿ ಕಾರ್ಯದಲ್ಲಿ ಸಂತ್ರಸ್ತರಿಗೆ 229 ಮನೆಗಳನ್ನು ಹಸ್ತಾಂತರಿಸಿದ ಕೇರಳ ಸರ್ಕಾರ, ಐಯುಎಂಎಲ್

ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಬೃಹತ್ ಭೂಕುಸಿತದ ಸುಮಾರು ಎರಡು ವರ್ಷಗಳ ನಂತರ, ರಾಜ್ಯ ಸರ್ಕಾರವು ಭಾನುವಾರ ಕಲ್ಪೆಟ್ಟಾದ ಪುನರ್ವಸತಿ ಪಟ್ಟಣದಲ್ಲಿ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸಿತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ₹299...

ಬೆಂಗಳೂರು | ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ : ಮತ್ತೆ ಮೂವರ ಬಂಧನ

ಬೆಂಗಳೂರಿನ ಜಕ್ಕೂರು ಬಳಿಯ ವಿಲ್ಲಾವೊಂದರಲ್ಲಿ ತಮಿಳುನಾಡಿನ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಅಮೃತಹಳ್ಳಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ...

ಇಸ್ರೇಲ್-ಅಮೆರಿಕ ದಾಳಿ: ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಹತ್ಯೆ

ಇಸ್ರೇಲ್ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಶನಿವಾರ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯು ಟೆಹ್ರಾನ್‌ನ ಈಶಾನ್ಯ ನರ್ಮಕ್ ಜಿಲ್ಲೆಯಲ್ಲಿರುವ ಅಹ್ಮದಿನೆಜಾದ್...

ಇಸ್ರೇಲ್-ಇರಾನ್ ಕಾಳಗಕ್ಕೆ ಹಿಝ್ಬುಲ್ಲಾ ಎಂಟ್ರಿ : ಐಡಿಎಫ್‌ ದಾಳಿಗೆ ಬೈರುತ್‌ನಲ್ಲಿ 10 ಸಾವು

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಸಂಘರ್ಷಕ್ಕೆ ಈಗ ಹಿಝ್ಬುಲ್ಲಾ ಎಂಟ್ರಿಯಾಗಿದೆ. ಇಸ್ರೇಲ್ ಮತ್ತು ಲೆಬನಾನ್‌ನ ಹಿಝ್ಬುಲ್ಲಾ ನಡುವಿನ ಕಾಳಗ ಸೋಮವಾರ (ಮಾ.2) ತೀವ್ರಗೊಂಡಿದೆ. ಇಸ್ರೇಲ್ ಪಡೆಗಳು ಹಿಝ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಲೆಬನಾನ್...

ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಡವರ ವಿರುದ್ದದ 'ಅಘೋಷಿತ ಯುದ್ದ'ವಾಗಿದೆ. ಇದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಚಿಂತಕ ಶಿವಸುಂದರ್ ಹೇಳಿದರು. ಕಲಬುರಗಿ...

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

"ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ 'ನೊಬೆಲ್ ಶಾಂತಿ ಪ್ರಶಸ್ತಿ' ಕೊಡಿ" ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ...

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...