Homeಕರೋನಾ ತಲ್ಲಣಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

ಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

- Advertisement -
- Advertisement -

ಭಾರತ್ ಬಯೋಟೆಕ್ ಅಭಿವೃದ್ದಿಪಡಿಸುವ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯ ತಯಾರಿಕೆಯಲ್ಲಿ ನವಜಾತ ಕರುವಿನ ರಕ್ತದ್ರವ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಗೌರವ್ ಪಾಂಡಿ ಆರೋಪಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಅವರು ಟ್ವಿಟರ್‌ನಲ್ಲಿ  ಆರ್‌ಟಿಐ ಮಾಹಿತಿ ಆಧರಿಸಿದ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಕೊವಾಕ್ಸಿನ್‍ ತಯಾರಿಸಲು ಗೋವಿನ ರಕ್ತವನ್ನು ಬಳಸುತ್ತಾರೆ. ಇದು ಗೋವಧೆ ಎಂದು ಹೇಳಿದ ನಂತರ ಕೇಂದ್ರ ಸರ್ಕಾರ ಮತ್ತು ಭಾರತ್‍ ಬಯೋಟೆಕ್‍ ಕೋವ್ಯಾಕ್ಸಿನ್ ಬಗ್ಗೆ ಸ್ಪಷ್ಟೀಕರಣವನ್ನು ನೀಡಿವೆ.

“ಕೋವ್ಯಾಕ್ಸಿನ್ ಲಸಿಕೆಯ ಸಂಯೋಜನೆಗೆ ಸಂಬಂಧಿಸಿದಂತೆ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಬಂದಿವೆ, ಅಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ನವಜಾತ ಕರುವಿನ ರಕ್ತದ್ರವವನ್ನು (ಸೀರಮ್) ಬಳಸಲಾಗಿರುತ್ತದೆ ಎಂದು ಸೂಚಿಸಲಾಗಿದೆ. ಈ ಪೋಸ್ಟ್‌ಗಳಲ್ಲಿ ಸತ್ಯಗಳನ್ನು ತಿರುಚಲಾಗಿದೆ ಮತ್ತು ತಪ್ಪಾಗಿ ನಿರೂಪಿಸಲಾಗಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಬುಧವಾರ ತಮ್ಮ ಟ್ವೀಟ್‍ನಲ್ಲಿ, “ಆರ್‌ಟಿಐ ಪ್ರತಿಕ್ರಿಯೆಯಲ್ಲಿ, ಕೋವ್ಯಾಕ್ಸಿನ್ ನವಜಾತ ಕರುವಿನ ರಕ್ತದ್ರವ (ಸೀರಮ್) ಅನ್ನು ಒಳಗೊಂಡಿದೆ ಎಂದು ಮೋದಿ ಸರ್ಕಾರ ಒಪ್ಪಿಕೊಂಡಿದೆ… ಇದು 20 ದಿನಗಳಿಗಿಂತ ಕಡಿಮೆ ವಯಸ್ಸಿನ ನವಜಾತ ಹಸು-ಕರುಗಳ ವಧೆಯ ಮೂಲಕ ಪಡೆದ ಹೆಪ್ಪುಗಟ್ಟಿದ ರಕ್ತದ ಒಂದು ಭಾಗವಾಗಿದೆ. ಇದು ಭೀಕರವಾಗಿದೆ! ಈ ಮಾಹಿತಿಯನ್ನು ಈ ಮೊದಲೇ ಸಾರ್ವಜನಿಕವಾಗಿ ಪ್ರಕಟಿಸಬೇಕಾಗಿತ್ತು” ಎಂದು ಟೀಕಿಸಿದ್ದರು.

“ನವಜಾತ ಕರುವಿನ ಸೀರಮ್ ಅನ್ನು ವೆರೋ ಕೋಶಗಳ ತಯಾರಿಕೆ/ಬೆಳವಣಿಗೆಗೆ ಮಾತ್ರ ಬಳಸಲಾಗುತ್ತದೆ. ವಿವಿಧ ರೀತಿಯ ಗೋವಿನ ಮತ್ತು ಇತರ ಪ್ರಾಣಿ ಸೀರಮ್‍ಗಳನ್ನು ವೆರೋ ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ. ಇದು ಜಾಗತಿಕವಾಗಿ ಪ್ರಮಾಣಿತ ವೈಜ್ಞಾನಿಕ ಅಂಶವಾಗಿದೆ. ಲಸಿಕೆಗಳ ಉತ್ಪಾದನೆಗೆ ಸಹಾಯ ಮಾಡುವ ಜೀವಕೋಶದ ಬೆಳವಣಿಗೆಯನ್ನು ಸ್ಥಾಪಿಸಲು ವೆರೋ ಕೋಶಗಳನ್ನು ಬಳಸಲಾಗುತ್ತದೆ. ಪೋಲಿಯೊ, ರೇಬೀಸ್ ಮತ್ತು ಇತರ ಹಲವು ಲಸಿಕೆಗಳಲ್ಲಿ ಈ ತಂತ್ರವನ್ನು ದಶಕಗಳಿಂದ ಬಳಸಲಾಗುತ್ತಿದೆ’ ಎಂದು ಕೇಂದ್ರವು ಪ್ರತಿಕ್ರಿಯೆ ನೀಡಿದೆ.

ಬೆಳವಣಿಗೆಯ ನಂತರ ಈ ವೆರೋ ಕೋಶಗಳನ್ನು ನೀರು ಅಥವಾ ರಾಸಾಯನಿಕಗಳಿಂದ ತೊಳೆಯಲಾಗುತ್ತದೆ. ನವಜಾತ ಕರುವಿನ ಸೀರಮ್‌ನಿಂದ ಮುಕ್ತವಾಗಿಸಲು ಈ ವಿಧಾನ ಅನುಸರಿಸಲಾಗುತ್ತದೆ. ಆ ನಂತರ ಈ ವೆರೋ ಕೋಶಗಳು ಕೊರೋನಾ ವೈರಸ್ ಸೋಂಕಿಗೆ ಒಳಗಾಗುತ್ತವೆ. ವೈರಸ್ ಬೆಳವಣಿಗೆಯ ಪ್ರಕ್ರಿಯೆಯಲ್ಲಿ ವೆರೋ ಕೋಶಗಳು ಸಂಪೂರ್ಣವಾಗಿ ನಾಶವಾಗುತ್ತವೆ. ಅದರ ನಂತರ ಈ ಬೆಳೆದ ವೈರಸ್ ಅನ್ನು ಸಹ ಕೊಲ್ಲಲಾಗುತ್ತದೆ (ನಿಷ್ಕ್ರಿಯಗೊಳಿಸಲಾಗುತ್ತದೆ) ಮತ್ತು ಶುದ್ಧೀಕರಿಸಲಾಗುತ್ತದೆ. ಈ ಕೊಲ್ಲಲ್ಪಟ್ಟ ವೈರಸ್ ಅನ್ನು ಅಂತಿಮ ಲಸಿಕೆ ತಯಾರಿಸಲು ಬಳಸಲಾಗುತ್ತದೆ. ಅಂತಿಮ ಲಸಿಕೆ ಸೂತ್ರೀಕರಣದಲ್ಲಿ ಯಾವುದೇ ಕರುವಿನ ಸೀರಮ್ ಅನ್ನು ಬಳಸಲಾಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಭಾರತ್ ಬಯೋಟೆಕ್ ಸಹ ಹೇಳಿಕೆ ನೀಡಿ, “ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಅನ್ನು ವೈರಲ್ ಲಸಿಕೆಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದನ್ನು ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ, ಆದರೆ ವೈರಸ್‍ನ ಬೆಳವಣಿಗೆಯಲ್ಲಿ ಅಥವಾ ಅಂತಿಮ ಸೂತ್ರೀಕರಣದಲ್ಲಿ ಬಳಸಲಾಗುವುದಿಲ್ಲ. ಎಲ್ಲಾ ಇತರ ಕಲ್ಮಶಗಳನ್ನು ತೆಗೆದುಹಾಕುವ ಮೂಲಕ ನಿಷ್ಕ್ರಿಯಗೊಂಡ ವೈರಸ್ ಘಟಕಗಳನ್ನು ಮಾತ್ರ ಒಳಗೊಂಡಿರುವಂತೆ ಕೊವಾಕ್ಸಿನ್‍ ಅನ್ನು ಶುದ್ಧೀಕರಿಸಲಾಗಿದೆ” ಎಂದು ವಿವರಣೆ ನೀಡಿದೆ.

“ಹಲವಾರು ದಶಕಗಳಿಂದ ಜಾಗತಿಕವಾಗಿ ಲಸಿಕೆಗಳ ತಯಾರಿಕೆಯಲ್ಲಿ ಪ್ರಾಣಿಗಳ ಸೀರಮ್ ಅನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಬಳಕೆಯನ್ನು ಕಳೆದ 9 ತಿಂಗಳುಗಳಿಂದ ಪಾರದರ್ಶಕವಾಗಿ ದಾಖಲಿಸಲಾಗಿದೆ’  ಎಂದು ಅದು ಸ್ಪಷ್ಟಪಡಿಸಿದೆ.


ಇದನ್ನೂ ಓದಿ: ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...