Homeಕರೋನಾ ತಲ್ಲಣಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

ಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

- Advertisement -
- Advertisement -

ಭಾರತ್ ಬಯೋಟೆಕ್ ಅಭಿವೃದ್ದಿಪಡಿಸುವ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯ ತಯಾರಿಕೆಯಲ್ಲಿ ನವಜಾತ ಕರುವಿನ ರಕ್ತದ್ರವ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಗೌರವ್ ಪಾಂಡಿ ಆರೋಪಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಅವರು ಟ್ವಿಟರ್‌ನಲ್ಲಿ  ಆರ್‌ಟಿಐ ಮಾಹಿತಿ ಆಧರಿಸಿದ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಕೊವಾಕ್ಸಿನ್‍ ತಯಾರಿಸಲು ಗೋವಿನ ರಕ್ತವನ್ನು ಬಳಸುತ್ತಾರೆ. ಇದು ಗೋವಧೆ ಎಂದು ಹೇಳಿದ ನಂತರ ಕೇಂದ್ರ ಸರ್ಕಾರ ಮತ್ತು ಭಾರತ್‍ ಬಯೋಟೆಕ್‍ ಕೋವ್ಯಾಕ್ಸಿನ್ ಬಗ್ಗೆ ಸ್ಪಷ್ಟೀಕರಣವನ್ನು ನೀಡಿವೆ.

“ಕೋವ್ಯಾಕ್ಸಿನ್ ಲಸಿಕೆಯ ಸಂಯೋಜನೆಗೆ ಸಂಬಂಧಿಸಿದಂತೆ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಬಂದಿವೆ, ಅಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ನವಜಾತ ಕರುವಿನ ರಕ್ತದ್ರವವನ್ನು (ಸೀರಮ್) ಬಳಸಲಾಗಿರುತ್ತದೆ ಎಂದು ಸೂಚಿಸಲಾಗಿದೆ. ಈ ಪೋಸ್ಟ್‌ಗಳಲ್ಲಿ ಸತ್ಯಗಳನ್ನು ತಿರುಚಲಾಗಿದೆ ಮತ್ತು ತಪ್ಪಾಗಿ ನಿರೂಪಿಸಲಾಗಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಬುಧವಾರ ತಮ್ಮ ಟ್ವೀಟ್‍ನಲ್ಲಿ, “ಆರ್‌ಟಿಐ ಪ್ರತಿಕ್ರಿಯೆಯಲ್ಲಿ, ಕೋವ್ಯಾಕ್ಸಿನ್ ನವಜಾತ ಕರುವಿನ ರಕ್ತದ್ರವ (ಸೀರಮ್) ಅನ್ನು ಒಳಗೊಂಡಿದೆ ಎಂದು ಮೋದಿ ಸರ್ಕಾರ ಒಪ್ಪಿಕೊಂಡಿದೆ… ಇದು 20 ದಿನಗಳಿಗಿಂತ ಕಡಿಮೆ ವಯಸ್ಸಿನ ನವಜಾತ ಹಸು-ಕರುಗಳ ವಧೆಯ ಮೂಲಕ ಪಡೆದ ಹೆಪ್ಪುಗಟ್ಟಿದ ರಕ್ತದ ಒಂದು ಭಾಗವಾಗಿದೆ. ಇದು ಭೀಕರವಾಗಿದೆ! ಈ ಮಾಹಿತಿಯನ್ನು ಈ ಮೊದಲೇ ಸಾರ್ವಜನಿಕವಾಗಿ ಪ್ರಕಟಿಸಬೇಕಾಗಿತ್ತು” ಎಂದು ಟೀಕಿಸಿದ್ದರು.

“ನವಜಾತ ಕರುವಿನ ಸೀರಮ್ ಅನ್ನು ವೆರೋ ಕೋಶಗಳ ತಯಾರಿಕೆ/ಬೆಳವಣಿಗೆಗೆ ಮಾತ್ರ ಬಳಸಲಾಗುತ್ತದೆ. ವಿವಿಧ ರೀತಿಯ ಗೋವಿನ ಮತ್ತು ಇತರ ಪ್ರಾಣಿ ಸೀರಮ್‍ಗಳನ್ನು ವೆರೋ ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ. ಇದು ಜಾಗತಿಕವಾಗಿ ಪ್ರಮಾಣಿತ ವೈಜ್ಞಾನಿಕ ಅಂಶವಾಗಿದೆ. ಲಸಿಕೆಗಳ ಉತ್ಪಾದನೆಗೆ ಸಹಾಯ ಮಾಡುವ ಜೀವಕೋಶದ ಬೆಳವಣಿಗೆಯನ್ನು ಸ್ಥಾಪಿಸಲು ವೆರೋ ಕೋಶಗಳನ್ನು ಬಳಸಲಾಗುತ್ತದೆ. ಪೋಲಿಯೊ, ರೇಬೀಸ್ ಮತ್ತು ಇತರ ಹಲವು ಲಸಿಕೆಗಳಲ್ಲಿ ಈ ತಂತ್ರವನ್ನು ದಶಕಗಳಿಂದ ಬಳಸಲಾಗುತ್ತಿದೆ’ ಎಂದು ಕೇಂದ್ರವು ಪ್ರತಿಕ್ರಿಯೆ ನೀಡಿದೆ.

ಬೆಳವಣಿಗೆಯ ನಂತರ ಈ ವೆರೋ ಕೋಶಗಳನ್ನು ನೀರು ಅಥವಾ ರಾಸಾಯನಿಕಗಳಿಂದ ತೊಳೆಯಲಾಗುತ್ತದೆ. ನವಜಾತ ಕರುವಿನ ಸೀರಮ್‌ನಿಂದ ಮುಕ್ತವಾಗಿಸಲು ಈ ವಿಧಾನ ಅನುಸರಿಸಲಾಗುತ್ತದೆ. ಆ ನಂತರ ಈ ವೆರೋ ಕೋಶಗಳು ಕೊರೋನಾ ವೈರಸ್ ಸೋಂಕಿಗೆ ಒಳಗಾಗುತ್ತವೆ. ವೈರಸ್ ಬೆಳವಣಿಗೆಯ ಪ್ರಕ್ರಿಯೆಯಲ್ಲಿ ವೆರೋ ಕೋಶಗಳು ಸಂಪೂರ್ಣವಾಗಿ ನಾಶವಾಗುತ್ತವೆ. ಅದರ ನಂತರ ಈ ಬೆಳೆದ ವೈರಸ್ ಅನ್ನು ಸಹ ಕೊಲ್ಲಲಾಗುತ್ತದೆ (ನಿಷ್ಕ್ರಿಯಗೊಳಿಸಲಾಗುತ್ತದೆ) ಮತ್ತು ಶುದ್ಧೀಕರಿಸಲಾಗುತ್ತದೆ. ಈ ಕೊಲ್ಲಲ್ಪಟ್ಟ ವೈರಸ್ ಅನ್ನು ಅಂತಿಮ ಲಸಿಕೆ ತಯಾರಿಸಲು ಬಳಸಲಾಗುತ್ತದೆ. ಅಂತಿಮ ಲಸಿಕೆ ಸೂತ್ರೀಕರಣದಲ್ಲಿ ಯಾವುದೇ ಕರುವಿನ ಸೀರಮ್ ಅನ್ನು ಬಳಸಲಾಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಭಾರತ್ ಬಯೋಟೆಕ್ ಸಹ ಹೇಳಿಕೆ ನೀಡಿ, “ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಅನ್ನು ವೈರಲ್ ಲಸಿಕೆಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದನ್ನು ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ, ಆದರೆ ವೈರಸ್‍ನ ಬೆಳವಣಿಗೆಯಲ್ಲಿ ಅಥವಾ ಅಂತಿಮ ಸೂತ್ರೀಕರಣದಲ್ಲಿ ಬಳಸಲಾಗುವುದಿಲ್ಲ. ಎಲ್ಲಾ ಇತರ ಕಲ್ಮಶಗಳನ್ನು ತೆಗೆದುಹಾಕುವ ಮೂಲಕ ನಿಷ್ಕ್ರಿಯಗೊಂಡ ವೈರಸ್ ಘಟಕಗಳನ್ನು ಮಾತ್ರ ಒಳಗೊಂಡಿರುವಂತೆ ಕೊವಾಕ್ಸಿನ್‍ ಅನ್ನು ಶುದ್ಧೀಕರಿಸಲಾಗಿದೆ” ಎಂದು ವಿವರಣೆ ನೀಡಿದೆ.

“ಹಲವಾರು ದಶಕಗಳಿಂದ ಜಾಗತಿಕವಾಗಿ ಲಸಿಕೆಗಳ ತಯಾರಿಕೆಯಲ್ಲಿ ಪ್ರಾಣಿಗಳ ಸೀರಮ್ ಅನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಬಳಕೆಯನ್ನು ಕಳೆದ 9 ತಿಂಗಳುಗಳಿಂದ ಪಾರದರ್ಶಕವಾಗಿ ದಾಖಲಿಸಲಾಗಿದೆ’  ಎಂದು ಅದು ಸ್ಪಷ್ಟಪಡಿಸಿದೆ.


ಇದನ್ನೂ ಓದಿ: ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...