Homeಕರೋನಾ ತಲ್ಲಣಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

ಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

- Advertisement -
- Advertisement -

ಭಾರತ್ ಬಯೋಟೆಕ್ ಅಭಿವೃದ್ದಿಪಡಿಸುವ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯ ತಯಾರಿಕೆಯಲ್ಲಿ ನವಜಾತ ಕರುವಿನ ರಕ್ತದ್ರವ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಗೌರವ್ ಪಾಂಡಿ ಆರೋಪಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಅವರು ಟ್ವಿಟರ್‌ನಲ್ಲಿ  ಆರ್‌ಟಿಐ ಮಾಹಿತಿ ಆಧರಿಸಿದ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಕೊವಾಕ್ಸಿನ್‍ ತಯಾರಿಸಲು ಗೋವಿನ ರಕ್ತವನ್ನು ಬಳಸುತ್ತಾರೆ. ಇದು ಗೋವಧೆ ಎಂದು ಹೇಳಿದ ನಂತರ ಕೇಂದ್ರ ಸರ್ಕಾರ ಮತ್ತು ಭಾರತ್‍ ಬಯೋಟೆಕ್‍ ಕೋವ್ಯಾಕ್ಸಿನ್ ಬಗ್ಗೆ ಸ್ಪಷ್ಟೀಕರಣವನ್ನು ನೀಡಿವೆ.

“ಕೋವ್ಯಾಕ್ಸಿನ್ ಲಸಿಕೆಯ ಸಂಯೋಜನೆಗೆ ಸಂಬಂಧಿಸಿದಂತೆ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಬಂದಿವೆ, ಅಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ನವಜಾತ ಕರುವಿನ ರಕ್ತದ್ರವವನ್ನು (ಸೀರಮ್) ಬಳಸಲಾಗಿರುತ್ತದೆ ಎಂದು ಸೂಚಿಸಲಾಗಿದೆ. ಈ ಪೋಸ್ಟ್‌ಗಳಲ್ಲಿ ಸತ್ಯಗಳನ್ನು ತಿರುಚಲಾಗಿದೆ ಮತ್ತು ತಪ್ಪಾಗಿ ನಿರೂಪಿಸಲಾಗಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಬುಧವಾರ ತಮ್ಮ ಟ್ವೀಟ್‍ನಲ್ಲಿ, “ಆರ್‌ಟಿಐ ಪ್ರತಿಕ್ರಿಯೆಯಲ್ಲಿ, ಕೋವ್ಯಾಕ್ಸಿನ್ ನವಜಾತ ಕರುವಿನ ರಕ್ತದ್ರವ (ಸೀರಮ್) ಅನ್ನು ಒಳಗೊಂಡಿದೆ ಎಂದು ಮೋದಿ ಸರ್ಕಾರ ಒಪ್ಪಿಕೊಂಡಿದೆ… ಇದು 20 ದಿನಗಳಿಗಿಂತ ಕಡಿಮೆ ವಯಸ್ಸಿನ ನವಜಾತ ಹಸು-ಕರುಗಳ ವಧೆಯ ಮೂಲಕ ಪಡೆದ ಹೆಪ್ಪುಗಟ್ಟಿದ ರಕ್ತದ ಒಂದು ಭಾಗವಾಗಿದೆ. ಇದು ಭೀಕರವಾಗಿದೆ! ಈ ಮಾಹಿತಿಯನ್ನು ಈ ಮೊದಲೇ ಸಾರ್ವಜನಿಕವಾಗಿ ಪ್ರಕಟಿಸಬೇಕಾಗಿತ್ತು” ಎಂದು ಟೀಕಿಸಿದ್ದರು.

“ನವಜಾತ ಕರುವಿನ ಸೀರಮ್ ಅನ್ನು ವೆರೋ ಕೋಶಗಳ ತಯಾರಿಕೆ/ಬೆಳವಣಿಗೆಗೆ ಮಾತ್ರ ಬಳಸಲಾಗುತ್ತದೆ. ವಿವಿಧ ರೀತಿಯ ಗೋವಿನ ಮತ್ತು ಇತರ ಪ್ರಾಣಿ ಸೀರಮ್‍ಗಳನ್ನು ವೆರೋ ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ. ಇದು ಜಾಗತಿಕವಾಗಿ ಪ್ರಮಾಣಿತ ವೈಜ್ಞಾನಿಕ ಅಂಶವಾಗಿದೆ. ಲಸಿಕೆಗಳ ಉತ್ಪಾದನೆಗೆ ಸಹಾಯ ಮಾಡುವ ಜೀವಕೋಶದ ಬೆಳವಣಿಗೆಯನ್ನು ಸ್ಥಾಪಿಸಲು ವೆರೋ ಕೋಶಗಳನ್ನು ಬಳಸಲಾಗುತ್ತದೆ. ಪೋಲಿಯೊ, ರೇಬೀಸ್ ಮತ್ತು ಇತರ ಹಲವು ಲಸಿಕೆಗಳಲ್ಲಿ ಈ ತಂತ್ರವನ್ನು ದಶಕಗಳಿಂದ ಬಳಸಲಾಗುತ್ತಿದೆ’ ಎಂದು ಕೇಂದ್ರವು ಪ್ರತಿಕ್ರಿಯೆ ನೀಡಿದೆ.

ಬೆಳವಣಿಗೆಯ ನಂತರ ಈ ವೆರೋ ಕೋಶಗಳನ್ನು ನೀರು ಅಥವಾ ರಾಸಾಯನಿಕಗಳಿಂದ ತೊಳೆಯಲಾಗುತ್ತದೆ. ನವಜಾತ ಕರುವಿನ ಸೀರಮ್‌ನಿಂದ ಮುಕ್ತವಾಗಿಸಲು ಈ ವಿಧಾನ ಅನುಸರಿಸಲಾಗುತ್ತದೆ. ಆ ನಂತರ ಈ ವೆರೋ ಕೋಶಗಳು ಕೊರೋನಾ ವೈರಸ್ ಸೋಂಕಿಗೆ ಒಳಗಾಗುತ್ತವೆ. ವೈರಸ್ ಬೆಳವಣಿಗೆಯ ಪ್ರಕ್ರಿಯೆಯಲ್ಲಿ ವೆರೋ ಕೋಶಗಳು ಸಂಪೂರ್ಣವಾಗಿ ನಾಶವಾಗುತ್ತವೆ. ಅದರ ನಂತರ ಈ ಬೆಳೆದ ವೈರಸ್ ಅನ್ನು ಸಹ ಕೊಲ್ಲಲಾಗುತ್ತದೆ (ನಿಷ್ಕ್ರಿಯಗೊಳಿಸಲಾಗುತ್ತದೆ) ಮತ್ತು ಶುದ್ಧೀಕರಿಸಲಾಗುತ್ತದೆ. ಈ ಕೊಲ್ಲಲ್ಪಟ್ಟ ವೈರಸ್ ಅನ್ನು ಅಂತಿಮ ಲಸಿಕೆ ತಯಾರಿಸಲು ಬಳಸಲಾಗುತ್ತದೆ. ಅಂತಿಮ ಲಸಿಕೆ ಸೂತ್ರೀಕರಣದಲ್ಲಿ ಯಾವುದೇ ಕರುವಿನ ಸೀರಮ್ ಅನ್ನು ಬಳಸಲಾಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಭಾರತ್ ಬಯೋಟೆಕ್ ಸಹ ಹೇಳಿಕೆ ನೀಡಿ, “ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಅನ್ನು ವೈರಲ್ ಲಸಿಕೆಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದನ್ನು ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ, ಆದರೆ ವೈರಸ್‍ನ ಬೆಳವಣಿಗೆಯಲ್ಲಿ ಅಥವಾ ಅಂತಿಮ ಸೂತ್ರೀಕರಣದಲ್ಲಿ ಬಳಸಲಾಗುವುದಿಲ್ಲ. ಎಲ್ಲಾ ಇತರ ಕಲ್ಮಶಗಳನ್ನು ತೆಗೆದುಹಾಕುವ ಮೂಲಕ ನಿಷ್ಕ್ರಿಯಗೊಂಡ ವೈರಸ್ ಘಟಕಗಳನ್ನು ಮಾತ್ರ ಒಳಗೊಂಡಿರುವಂತೆ ಕೊವಾಕ್ಸಿನ್‍ ಅನ್ನು ಶುದ್ಧೀಕರಿಸಲಾಗಿದೆ” ಎಂದು ವಿವರಣೆ ನೀಡಿದೆ.

“ಹಲವಾರು ದಶಕಗಳಿಂದ ಜಾಗತಿಕವಾಗಿ ಲಸಿಕೆಗಳ ತಯಾರಿಕೆಯಲ್ಲಿ ಪ್ರಾಣಿಗಳ ಸೀರಮ್ ಅನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಬಳಕೆಯನ್ನು ಕಳೆದ 9 ತಿಂಗಳುಗಳಿಂದ ಪಾರದರ್ಶಕವಾಗಿ ದಾಖಲಿಸಲಾಗಿದೆ’  ಎಂದು ಅದು ಸ್ಪಷ್ಟಪಡಿಸಿದೆ.


ಇದನ್ನೂ ಓದಿ: ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...