Homeಕರೋನಾ ತಲ್ಲಣಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

ಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

- Advertisement -
- Advertisement -

ಭಾರತ್ ಬಯೋಟೆಕ್ ಅಭಿವೃದ್ದಿಪಡಿಸುವ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯ ತಯಾರಿಕೆಯಲ್ಲಿ ನವಜಾತ ಕರುವಿನ ರಕ್ತದ್ರವ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಗೌರವ್ ಪಾಂಡಿ ಆರೋಪಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಅವರು ಟ್ವಿಟರ್‌ನಲ್ಲಿ  ಆರ್‌ಟಿಐ ಮಾಹಿತಿ ಆಧರಿಸಿದ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಕೊವಾಕ್ಸಿನ್‍ ತಯಾರಿಸಲು ಗೋವಿನ ರಕ್ತವನ್ನು ಬಳಸುತ್ತಾರೆ. ಇದು ಗೋವಧೆ ಎಂದು ಹೇಳಿದ ನಂತರ ಕೇಂದ್ರ ಸರ್ಕಾರ ಮತ್ತು ಭಾರತ್‍ ಬಯೋಟೆಕ್‍ ಕೋವ್ಯಾಕ್ಸಿನ್ ಬಗ್ಗೆ ಸ್ಪಷ್ಟೀಕರಣವನ್ನು ನೀಡಿವೆ.

“ಕೋವ್ಯಾಕ್ಸಿನ್ ಲಸಿಕೆಯ ಸಂಯೋಜನೆಗೆ ಸಂಬಂಧಿಸಿದಂತೆ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಬಂದಿವೆ, ಅಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ನವಜಾತ ಕರುವಿನ ರಕ್ತದ್ರವವನ್ನು (ಸೀರಮ್) ಬಳಸಲಾಗಿರುತ್ತದೆ ಎಂದು ಸೂಚಿಸಲಾಗಿದೆ. ಈ ಪೋಸ್ಟ್‌ಗಳಲ್ಲಿ ಸತ್ಯಗಳನ್ನು ತಿರುಚಲಾಗಿದೆ ಮತ್ತು ತಪ್ಪಾಗಿ ನಿರೂಪಿಸಲಾಗಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಬುಧವಾರ ತಮ್ಮ ಟ್ವೀಟ್‍ನಲ್ಲಿ, “ಆರ್‌ಟಿಐ ಪ್ರತಿಕ್ರಿಯೆಯಲ್ಲಿ, ಕೋವ್ಯಾಕ್ಸಿನ್ ನವಜಾತ ಕರುವಿನ ರಕ್ತದ್ರವ (ಸೀರಮ್) ಅನ್ನು ಒಳಗೊಂಡಿದೆ ಎಂದು ಮೋದಿ ಸರ್ಕಾರ ಒಪ್ಪಿಕೊಂಡಿದೆ… ಇದು 20 ದಿನಗಳಿಗಿಂತ ಕಡಿಮೆ ವಯಸ್ಸಿನ ನವಜಾತ ಹಸು-ಕರುಗಳ ವಧೆಯ ಮೂಲಕ ಪಡೆದ ಹೆಪ್ಪುಗಟ್ಟಿದ ರಕ್ತದ ಒಂದು ಭಾಗವಾಗಿದೆ. ಇದು ಭೀಕರವಾಗಿದೆ! ಈ ಮಾಹಿತಿಯನ್ನು ಈ ಮೊದಲೇ ಸಾರ್ವಜನಿಕವಾಗಿ ಪ್ರಕಟಿಸಬೇಕಾಗಿತ್ತು” ಎಂದು ಟೀಕಿಸಿದ್ದರು.

“ನವಜಾತ ಕರುವಿನ ಸೀರಮ್ ಅನ್ನು ವೆರೋ ಕೋಶಗಳ ತಯಾರಿಕೆ/ಬೆಳವಣಿಗೆಗೆ ಮಾತ್ರ ಬಳಸಲಾಗುತ್ತದೆ. ವಿವಿಧ ರೀತಿಯ ಗೋವಿನ ಮತ್ತು ಇತರ ಪ್ರಾಣಿ ಸೀರಮ್‍ಗಳನ್ನು ವೆರೋ ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ. ಇದು ಜಾಗತಿಕವಾಗಿ ಪ್ರಮಾಣಿತ ವೈಜ್ಞಾನಿಕ ಅಂಶವಾಗಿದೆ. ಲಸಿಕೆಗಳ ಉತ್ಪಾದನೆಗೆ ಸಹಾಯ ಮಾಡುವ ಜೀವಕೋಶದ ಬೆಳವಣಿಗೆಯನ್ನು ಸ್ಥಾಪಿಸಲು ವೆರೋ ಕೋಶಗಳನ್ನು ಬಳಸಲಾಗುತ್ತದೆ. ಪೋಲಿಯೊ, ರೇಬೀಸ್ ಮತ್ತು ಇತರ ಹಲವು ಲಸಿಕೆಗಳಲ್ಲಿ ಈ ತಂತ್ರವನ್ನು ದಶಕಗಳಿಂದ ಬಳಸಲಾಗುತ್ತಿದೆ’ ಎಂದು ಕೇಂದ್ರವು ಪ್ರತಿಕ್ರಿಯೆ ನೀಡಿದೆ.

ಬೆಳವಣಿಗೆಯ ನಂತರ ಈ ವೆರೋ ಕೋಶಗಳನ್ನು ನೀರು ಅಥವಾ ರಾಸಾಯನಿಕಗಳಿಂದ ತೊಳೆಯಲಾಗುತ್ತದೆ. ನವಜಾತ ಕರುವಿನ ಸೀರಮ್‌ನಿಂದ ಮುಕ್ತವಾಗಿಸಲು ಈ ವಿಧಾನ ಅನುಸರಿಸಲಾಗುತ್ತದೆ. ಆ ನಂತರ ಈ ವೆರೋ ಕೋಶಗಳು ಕೊರೋನಾ ವೈರಸ್ ಸೋಂಕಿಗೆ ಒಳಗಾಗುತ್ತವೆ. ವೈರಸ್ ಬೆಳವಣಿಗೆಯ ಪ್ರಕ್ರಿಯೆಯಲ್ಲಿ ವೆರೋ ಕೋಶಗಳು ಸಂಪೂರ್ಣವಾಗಿ ನಾಶವಾಗುತ್ತವೆ. ಅದರ ನಂತರ ಈ ಬೆಳೆದ ವೈರಸ್ ಅನ್ನು ಸಹ ಕೊಲ್ಲಲಾಗುತ್ತದೆ (ನಿಷ್ಕ್ರಿಯಗೊಳಿಸಲಾಗುತ್ತದೆ) ಮತ್ತು ಶುದ್ಧೀಕರಿಸಲಾಗುತ್ತದೆ. ಈ ಕೊಲ್ಲಲ್ಪಟ್ಟ ವೈರಸ್ ಅನ್ನು ಅಂತಿಮ ಲಸಿಕೆ ತಯಾರಿಸಲು ಬಳಸಲಾಗುತ್ತದೆ. ಅಂತಿಮ ಲಸಿಕೆ ಸೂತ್ರೀಕರಣದಲ್ಲಿ ಯಾವುದೇ ಕರುವಿನ ಸೀರಮ್ ಅನ್ನು ಬಳಸಲಾಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಭಾರತ್ ಬಯೋಟೆಕ್ ಸಹ ಹೇಳಿಕೆ ನೀಡಿ, “ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಅನ್ನು ವೈರಲ್ ಲಸಿಕೆಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದನ್ನು ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ, ಆದರೆ ವೈರಸ್‍ನ ಬೆಳವಣಿಗೆಯಲ್ಲಿ ಅಥವಾ ಅಂತಿಮ ಸೂತ್ರೀಕರಣದಲ್ಲಿ ಬಳಸಲಾಗುವುದಿಲ್ಲ. ಎಲ್ಲಾ ಇತರ ಕಲ್ಮಶಗಳನ್ನು ತೆಗೆದುಹಾಕುವ ಮೂಲಕ ನಿಷ್ಕ್ರಿಯಗೊಂಡ ವೈರಸ್ ಘಟಕಗಳನ್ನು ಮಾತ್ರ ಒಳಗೊಂಡಿರುವಂತೆ ಕೊವಾಕ್ಸಿನ್‍ ಅನ್ನು ಶುದ್ಧೀಕರಿಸಲಾಗಿದೆ” ಎಂದು ವಿವರಣೆ ನೀಡಿದೆ.

“ಹಲವಾರು ದಶಕಗಳಿಂದ ಜಾಗತಿಕವಾಗಿ ಲಸಿಕೆಗಳ ತಯಾರಿಕೆಯಲ್ಲಿ ಪ್ರಾಣಿಗಳ ಸೀರಮ್ ಅನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಬಳಕೆಯನ್ನು ಕಳೆದ 9 ತಿಂಗಳುಗಳಿಂದ ಪಾರದರ್ಶಕವಾಗಿ ದಾಖಲಿಸಲಾಗಿದೆ’  ಎಂದು ಅದು ಸ್ಪಷ್ಟಪಡಿಸಿದೆ.


ಇದನ್ನೂ ಓದಿ: ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...