Homeಕರೋನಾ ತಲ್ಲಣಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

ಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

- Advertisement -
- Advertisement -

ಭಾರತ್ ಬಯೋಟೆಕ್ ಅಭಿವೃದ್ದಿಪಡಿಸುವ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯ ತಯಾರಿಕೆಯಲ್ಲಿ ನವಜಾತ ಕರುವಿನ ರಕ್ತದ್ರವ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಗೌರವ್ ಪಾಂಡಿ ಆರೋಪಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಅವರು ಟ್ವಿಟರ್‌ನಲ್ಲಿ  ಆರ್‌ಟಿಐ ಮಾಹಿತಿ ಆಧರಿಸಿದ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಕೊವಾಕ್ಸಿನ್‍ ತಯಾರಿಸಲು ಗೋವಿನ ರಕ್ತವನ್ನು ಬಳಸುತ್ತಾರೆ. ಇದು ಗೋವಧೆ ಎಂದು ಹೇಳಿದ ನಂತರ ಕೇಂದ್ರ ಸರ್ಕಾರ ಮತ್ತು ಭಾರತ್‍ ಬಯೋಟೆಕ್‍ ಕೋವ್ಯಾಕ್ಸಿನ್ ಬಗ್ಗೆ ಸ್ಪಷ್ಟೀಕರಣವನ್ನು ನೀಡಿವೆ.

“ಕೋವ್ಯಾಕ್ಸಿನ್ ಲಸಿಕೆಯ ಸಂಯೋಜನೆಗೆ ಸಂಬಂಧಿಸಿದಂತೆ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಬಂದಿವೆ, ಅಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ನವಜಾತ ಕರುವಿನ ರಕ್ತದ್ರವವನ್ನು (ಸೀರಮ್) ಬಳಸಲಾಗಿರುತ್ತದೆ ಎಂದು ಸೂಚಿಸಲಾಗಿದೆ. ಈ ಪೋಸ್ಟ್‌ಗಳಲ್ಲಿ ಸತ್ಯಗಳನ್ನು ತಿರುಚಲಾಗಿದೆ ಮತ್ತು ತಪ್ಪಾಗಿ ನಿರೂಪಿಸಲಾಗಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಬುಧವಾರ ತಮ್ಮ ಟ್ವೀಟ್‍ನಲ್ಲಿ, “ಆರ್‌ಟಿಐ ಪ್ರತಿಕ್ರಿಯೆಯಲ್ಲಿ, ಕೋವ್ಯಾಕ್ಸಿನ್ ನವಜಾತ ಕರುವಿನ ರಕ್ತದ್ರವ (ಸೀರಮ್) ಅನ್ನು ಒಳಗೊಂಡಿದೆ ಎಂದು ಮೋದಿ ಸರ್ಕಾರ ಒಪ್ಪಿಕೊಂಡಿದೆ… ಇದು 20 ದಿನಗಳಿಗಿಂತ ಕಡಿಮೆ ವಯಸ್ಸಿನ ನವಜಾತ ಹಸು-ಕರುಗಳ ವಧೆಯ ಮೂಲಕ ಪಡೆದ ಹೆಪ್ಪುಗಟ್ಟಿದ ರಕ್ತದ ಒಂದು ಭಾಗವಾಗಿದೆ. ಇದು ಭೀಕರವಾಗಿದೆ! ಈ ಮಾಹಿತಿಯನ್ನು ಈ ಮೊದಲೇ ಸಾರ್ವಜನಿಕವಾಗಿ ಪ್ರಕಟಿಸಬೇಕಾಗಿತ್ತು” ಎಂದು ಟೀಕಿಸಿದ್ದರು.

“ನವಜಾತ ಕರುವಿನ ಸೀರಮ್ ಅನ್ನು ವೆರೋ ಕೋಶಗಳ ತಯಾರಿಕೆ/ಬೆಳವಣಿಗೆಗೆ ಮಾತ್ರ ಬಳಸಲಾಗುತ್ತದೆ. ವಿವಿಧ ರೀತಿಯ ಗೋವಿನ ಮತ್ತು ಇತರ ಪ್ರಾಣಿ ಸೀರಮ್‍ಗಳನ್ನು ವೆರೋ ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ. ಇದು ಜಾಗತಿಕವಾಗಿ ಪ್ರಮಾಣಿತ ವೈಜ್ಞಾನಿಕ ಅಂಶವಾಗಿದೆ. ಲಸಿಕೆಗಳ ಉತ್ಪಾದನೆಗೆ ಸಹಾಯ ಮಾಡುವ ಜೀವಕೋಶದ ಬೆಳವಣಿಗೆಯನ್ನು ಸ್ಥಾಪಿಸಲು ವೆರೋ ಕೋಶಗಳನ್ನು ಬಳಸಲಾಗುತ್ತದೆ. ಪೋಲಿಯೊ, ರೇಬೀಸ್ ಮತ್ತು ಇತರ ಹಲವು ಲಸಿಕೆಗಳಲ್ಲಿ ಈ ತಂತ್ರವನ್ನು ದಶಕಗಳಿಂದ ಬಳಸಲಾಗುತ್ತಿದೆ’ ಎಂದು ಕೇಂದ್ರವು ಪ್ರತಿಕ್ರಿಯೆ ನೀಡಿದೆ.

ಬೆಳವಣಿಗೆಯ ನಂತರ ಈ ವೆರೋ ಕೋಶಗಳನ್ನು ನೀರು ಅಥವಾ ರಾಸಾಯನಿಕಗಳಿಂದ ತೊಳೆಯಲಾಗುತ್ತದೆ. ನವಜಾತ ಕರುವಿನ ಸೀರಮ್‌ನಿಂದ ಮುಕ್ತವಾಗಿಸಲು ಈ ವಿಧಾನ ಅನುಸರಿಸಲಾಗುತ್ತದೆ. ಆ ನಂತರ ಈ ವೆರೋ ಕೋಶಗಳು ಕೊರೋನಾ ವೈರಸ್ ಸೋಂಕಿಗೆ ಒಳಗಾಗುತ್ತವೆ. ವೈರಸ್ ಬೆಳವಣಿಗೆಯ ಪ್ರಕ್ರಿಯೆಯಲ್ಲಿ ವೆರೋ ಕೋಶಗಳು ಸಂಪೂರ್ಣವಾಗಿ ನಾಶವಾಗುತ್ತವೆ. ಅದರ ನಂತರ ಈ ಬೆಳೆದ ವೈರಸ್ ಅನ್ನು ಸಹ ಕೊಲ್ಲಲಾಗುತ್ತದೆ (ನಿಷ್ಕ್ರಿಯಗೊಳಿಸಲಾಗುತ್ತದೆ) ಮತ್ತು ಶುದ್ಧೀಕರಿಸಲಾಗುತ್ತದೆ. ಈ ಕೊಲ್ಲಲ್ಪಟ್ಟ ವೈರಸ್ ಅನ್ನು ಅಂತಿಮ ಲಸಿಕೆ ತಯಾರಿಸಲು ಬಳಸಲಾಗುತ್ತದೆ. ಅಂತಿಮ ಲಸಿಕೆ ಸೂತ್ರೀಕರಣದಲ್ಲಿ ಯಾವುದೇ ಕರುವಿನ ಸೀರಮ್ ಅನ್ನು ಬಳಸಲಾಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಭಾರತ್ ಬಯೋಟೆಕ್ ಸಹ ಹೇಳಿಕೆ ನೀಡಿ, “ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಅನ್ನು ವೈರಲ್ ಲಸಿಕೆಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದನ್ನು ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ, ಆದರೆ ವೈರಸ್‍ನ ಬೆಳವಣಿಗೆಯಲ್ಲಿ ಅಥವಾ ಅಂತಿಮ ಸೂತ್ರೀಕರಣದಲ್ಲಿ ಬಳಸಲಾಗುವುದಿಲ್ಲ. ಎಲ್ಲಾ ಇತರ ಕಲ್ಮಶಗಳನ್ನು ತೆಗೆದುಹಾಕುವ ಮೂಲಕ ನಿಷ್ಕ್ರಿಯಗೊಂಡ ವೈರಸ್ ಘಟಕಗಳನ್ನು ಮಾತ್ರ ಒಳಗೊಂಡಿರುವಂತೆ ಕೊವಾಕ್ಸಿನ್‍ ಅನ್ನು ಶುದ್ಧೀಕರಿಸಲಾಗಿದೆ” ಎಂದು ವಿವರಣೆ ನೀಡಿದೆ.

“ಹಲವಾರು ದಶಕಗಳಿಂದ ಜಾಗತಿಕವಾಗಿ ಲಸಿಕೆಗಳ ತಯಾರಿಕೆಯಲ್ಲಿ ಪ್ರಾಣಿಗಳ ಸೀರಮ್ ಅನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಬಳಕೆಯನ್ನು ಕಳೆದ 9 ತಿಂಗಳುಗಳಿಂದ ಪಾರದರ್ಶಕವಾಗಿ ದಾಖಲಿಸಲಾಗಿದೆ’  ಎಂದು ಅದು ಸ್ಪಷ್ಟಪಡಿಸಿದೆ.


ಇದನ್ನೂ ಓದಿ: ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...