Homeಕರೋನಾ ತಲ್ಲಣಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

ಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

- Advertisement -
- Advertisement -

ಭಾರತ್ ಬಯೋಟೆಕ್ ಅಭಿವೃದ್ದಿಪಡಿಸುವ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯ ತಯಾರಿಕೆಯಲ್ಲಿ ನವಜಾತ ಕರುವಿನ ರಕ್ತದ್ರವ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಗೌರವ್ ಪಾಂಡಿ ಆರೋಪಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಅವರು ಟ್ವಿಟರ್‌ನಲ್ಲಿ  ಆರ್‌ಟಿಐ ಮಾಹಿತಿ ಆಧರಿಸಿದ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಕೊವಾಕ್ಸಿನ್‍ ತಯಾರಿಸಲು ಗೋವಿನ ರಕ್ತವನ್ನು ಬಳಸುತ್ತಾರೆ. ಇದು ಗೋವಧೆ ಎಂದು ಹೇಳಿದ ನಂತರ ಕೇಂದ್ರ ಸರ್ಕಾರ ಮತ್ತು ಭಾರತ್‍ ಬಯೋಟೆಕ್‍ ಕೋವ್ಯಾಕ್ಸಿನ್ ಬಗ್ಗೆ ಸ್ಪಷ್ಟೀಕರಣವನ್ನು ನೀಡಿವೆ.

“ಕೋವ್ಯಾಕ್ಸಿನ್ ಲಸಿಕೆಯ ಸಂಯೋಜನೆಗೆ ಸಂಬಂಧಿಸಿದಂತೆ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಬಂದಿವೆ, ಅಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ನವಜಾತ ಕರುವಿನ ರಕ್ತದ್ರವವನ್ನು (ಸೀರಮ್) ಬಳಸಲಾಗಿರುತ್ತದೆ ಎಂದು ಸೂಚಿಸಲಾಗಿದೆ. ಈ ಪೋಸ್ಟ್‌ಗಳಲ್ಲಿ ಸತ್ಯಗಳನ್ನು ತಿರುಚಲಾಗಿದೆ ಮತ್ತು ತಪ್ಪಾಗಿ ನಿರೂಪಿಸಲಾಗಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಬುಧವಾರ ತಮ್ಮ ಟ್ವೀಟ್‍ನಲ್ಲಿ, “ಆರ್‌ಟಿಐ ಪ್ರತಿಕ್ರಿಯೆಯಲ್ಲಿ, ಕೋವ್ಯಾಕ್ಸಿನ್ ನವಜಾತ ಕರುವಿನ ರಕ್ತದ್ರವ (ಸೀರಮ್) ಅನ್ನು ಒಳಗೊಂಡಿದೆ ಎಂದು ಮೋದಿ ಸರ್ಕಾರ ಒಪ್ಪಿಕೊಂಡಿದೆ… ಇದು 20 ದಿನಗಳಿಗಿಂತ ಕಡಿಮೆ ವಯಸ್ಸಿನ ನವಜಾತ ಹಸು-ಕರುಗಳ ವಧೆಯ ಮೂಲಕ ಪಡೆದ ಹೆಪ್ಪುಗಟ್ಟಿದ ರಕ್ತದ ಒಂದು ಭಾಗವಾಗಿದೆ. ಇದು ಭೀಕರವಾಗಿದೆ! ಈ ಮಾಹಿತಿಯನ್ನು ಈ ಮೊದಲೇ ಸಾರ್ವಜನಿಕವಾಗಿ ಪ್ರಕಟಿಸಬೇಕಾಗಿತ್ತು” ಎಂದು ಟೀಕಿಸಿದ್ದರು.

“ನವಜಾತ ಕರುವಿನ ಸೀರಮ್ ಅನ್ನು ವೆರೋ ಕೋಶಗಳ ತಯಾರಿಕೆ/ಬೆಳವಣಿಗೆಗೆ ಮಾತ್ರ ಬಳಸಲಾಗುತ್ತದೆ. ವಿವಿಧ ರೀತಿಯ ಗೋವಿನ ಮತ್ತು ಇತರ ಪ್ರಾಣಿ ಸೀರಮ್‍ಗಳನ್ನು ವೆರೋ ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ. ಇದು ಜಾಗತಿಕವಾಗಿ ಪ್ರಮಾಣಿತ ವೈಜ್ಞಾನಿಕ ಅಂಶವಾಗಿದೆ. ಲಸಿಕೆಗಳ ಉತ್ಪಾದನೆಗೆ ಸಹಾಯ ಮಾಡುವ ಜೀವಕೋಶದ ಬೆಳವಣಿಗೆಯನ್ನು ಸ್ಥಾಪಿಸಲು ವೆರೋ ಕೋಶಗಳನ್ನು ಬಳಸಲಾಗುತ್ತದೆ. ಪೋಲಿಯೊ, ರೇಬೀಸ್ ಮತ್ತು ಇತರ ಹಲವು ಲಸಿಕೆಗಳಲ್ಲಿ ಈ ತಂತ್ರವನ್ನು ದಶಕಗಳಿಂದ ಬಳಸಲಾಗುತ್ತಿದೆ’ ಎಂದು ಕೇಂದ್ರವು ಪ್ರತಿಕ್ರಿಯೆ ನೀಡಿದೆ.

ಬೆಳವಣಿಗೆಯ ನಂತರ ಈ ವೆರೋ ಕೋಶಗಳನ್ನು ನೀರು ಅಥವಾ ರಾಸಾಯನಿಕಗಳಿಂದ ತೊಳೆಯಲಾಗುತ್ತದೆ. ನವಜಾತ ಕರುವಿನ ಸೀರಮ್‌ನಿಂದ ಮುಕ್ತವಾಗಿಸಲು ಈ ವಿಧಾನ ಅನುಸರಿಸಲಾಗುತ್ತದೆ. ಆ ನಂತರ ಈ ವೆರೋ ಕೋಶಗಳು ಕೊರೋನಾ ವೈರಸ್ ಸೋಂಕಿಗೆ ಒಳಗಾಗುತ್ತವೆ. ವೈರಸ್ ಬೆಳವಣಿಗೆಯ ಪ್ರಕ್ರಿಯೆಯಲ್ಲಿ ವೆರೋ ಕೋಶಗಳು ಸಂಪೂರ್ಣವಾಗಿ ನಾಶವಾಗುತ್ತವೆ. ಅದರ ನಂತರ ಈ ಬೆಳೆದ ವೈರಸ್ ಅನ್ನು ಸಹ ಕೊಲ್ಲಲಾಗುತ್ತದೆ (ನಿಷ್ಕ್ರಿಯಗೊಳಿಸಲಾಗುತ್ತದೆ) ಮತ್ತು ಶುದ್ಧೀಕರಿಸಲಾಗುತ್ತದೆ. ಈ ಕೊಲ್ಲಲ್ಪಟ್ಟ ವೈರಸ್ ಅನ್ನು ಅಂತಿಮ ಲಸಿಕೆ ತಯಾರಿಸಲು ಬಳಸಲಾಗುತ್ತದೆ. ಅಂತಿಮ ಲಸಿಕೆ ಸೂತ್ರೀಕರಣದಲ್ಲಿ ಯಾವುದೇ ಕರುವಿನ ಸೀರಮ್ ಅನ್ನು ಬಳಸಲಾಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಭಾರತ್ ಬಯೋಟೆಕ್ ಸಹ ಹೇಳಿಕೆ ನೀಡಿ, “ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಅನ್ನು ವೈರಲ್ ಲಸಿಕೆಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದನ್ನು ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ, ಆದರೆ ವೈರಸ್‍ನ ಬೆಳವಣಿಗೆಯಲ್ಲಿ ಅಥವಾ ಅಂತಿಮ ಸೂತ್ರೀಕರಣದಲ್ಲಿ ಬಳಸಲಾಗುವುದಿಲ್ಲ. ಎಲ್ಲಾ ಇತರ ಕಲ್ಮಶಗಳನ್ನು ತೆಗೆದುಹಾಕುವ ಮೂಲಕ ನಿಷ್ಕ್ರಿಯಗೊಂಡ ವೈರಸ್ ಘಟಕಗಳನ್ನು ಮಾತ್ರ ಒಳಗೊಂಡಿರುವಂತೆ ಕೊವಾಕ್ಸಿನ್‍ ಅನ್ನು ಶುದ್ಧೀಕರಿಸಲಾಗಿದೆ” ಎಂದು ವಿವರಣೆ ನೀಡಿದೆ.

“ಹಲವಾರು ದಶಕಗಳಿಂದ ಜಾಗತಿಕವಾಗಿ ಲಸಿಕೆಗಳ ತಯಾರಿಕೆಯಲ್ಲಿ ಪ್ರಾಣಿಗಳ ಸೀರಮ್ ಅನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಬಳಕೆಯನ್ನು ಕಳೆದ 9 ತಿಂಗಳುಗಳಿಂದ ಪಾರದರ್ಶಕವಾಗಿ ದಾಖಲಿಸಲಾಗಿದೆ’  ಎಂದು ಅದು ಸ್ಪಷ್ಟಪಡಿಸಿದೆ.


ಇದನ್ನೂ ಓದಿ: ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...