Homeಕರೋನಾ ತಲ್ಲಣಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

ಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

- Advertisement -
- Advertisement -

ಭಾರತ್ ಬಯೋಟೆಕ್ ಅಭಿವೃದ್ದಿಪಡಿಸುವ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯ ತಯಾರಿಕೆಯಲ್ಲಿ ನವಜಾತ ಕರುವಿನ ರಕ್ತದ್ರವ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಗೌರವ್ ಪಾಂಡಿ ಆರೋಪಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಅವರು ಟ್ವಿಟರ್‌ನಲ್ಲಿ  ಆರ್‌ಟಿಐ ಮಾಹಿತಿ ಆಧರಿಸಿದ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಕೊವಾಕ್ಸಿನ್‍ ತಯಾರಿಸಲು ಗೋವಿನ ರಕ್ತವನ್ನು ಬಳಸುತ್ತಾರೆ. ಇದು ಗೋವಧೆ ಎಂದು ಹೇಳಿದ ನಂತರ ಕೇಂದ್ರ ಸರ್ಕಾರ ಮತ್ತು ಭಾರತ್‍ ಬಯೋಟೆಕ್‍ ಕೋವ್ಯಾಕ್ಸಿನ್ ಬಗ್ಗೆ ಸ್ಪಷ್ಟೀಕರಣವನ್ನು ನೀಡಿವೆ.

“ಕೋವ್ಯಾಕ್ಸಿನ್ ಲಸಿಕೆಯ ಸಂಯೋಜನೆಗೆ ಸಂಬಂಧಿಸಿದಂತೆ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಬಂದಿವೆ, ಅಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ನವಜಾತ ಕರುವಿನ ರಕ್ತದ್ರವವನ್ನು (ಸೀರಮ್) ಬಳಸಲಾಗಿರುತ್ತದೆ ಎಂದು ಸೂಚಿಸಲಾಗಿದೆ. ಈ ಪೋಸ್ಟ್‌ಗಳಲ್ಲಿ ಸತ್ಯಗಳನ್ನು ತಿರುಚಲಾಗಿದೆ ಮತ್ತು ತಪ್ಪಾಗಿ ನಿರೂಪಿಸಲಾಗಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಬುಧವಾರ ತಮ್ಮ ಟ್ವೀಟ್‍ನಲ್ಲಿ, “ಆರ್‌ಟಿಐ ಪ್ರತಿಕ್ರಿಯೆಯಲ್ಲಿ, ಕೋವ್ಯಾಕ್ಸಿನ್ ನವಜಾತ ಕರುವಿನ ರಕ್ತದ್ರವ (ಸೀರಮ್) ಅನ್ನು ಒಳಗೊಂಡಿದೆ ಎಂದು ಮೋದಿ ಸರ್ಕಾರ ಒಪ್ಪಿಕೊಂಡಿದೆ… ಇದು 20 ದಿನಗಳಿಗಿಂತ ಕಡಿಮೆ ವಯಸ್ಸಿನ ನವಜಾತ ಹಸು-ಕರುಗಳ ವಧೆಯ ಮೂಲಕ ಪಡೆದ ಹೆಪ್ಪುಗಟ್ಟಿದ ರಕ್ತದ ಒಂದು ಭಾಗವಾಗಿದೆ. ಇದು ಭೀಕರವಾಗಿದೆ! ಈ ಮಾಹಿತಿಯನ್ನು ಈ ಮೊದಲೇ ಸಾರ್ವಜನಿಕವಾಗಿ ಪ್ರಕಟಿಸಬೇಕಾಗಿತ್ತು” ಎಂದು ಟೀಕಿಸಿದ್ದರು.

“ನವಜಾತ ಕರುವಿನ ಸೀರಮ್ ಅನ್ನು ವೆರೋ ಕೋಶಗಳ ತಯಾರಿಕೆ/ಬೆಳವಣಿಗೆಗೆ ಮಾತ್ರ ಬಳಸಲಾಗುತ್ತದೆ. ವಿವಿಧ ರೀತಿಯ ಗೋವಿನ ಮತ್ತು ಇತರ ಪ್ರಾಣಿ ಸೀರಮ್‍ಗಳನ್ನು ವೆರೋ ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ. ಇದು ಜಾಗತಿಕವಾಗಿ ಪ್ರಮಾಣಿತ ವೈಜ್ಞಾನಿಕ ಅಂಶವಾಗಿದೆ. ಲಸಿಕೆಗಳ ಉತ್ಪಾದನೆಗೆ ಸಹಾಯ ಮಾಡುವ ಜೀವಕೋಶದ ಬೆಳವಣಿಗೆಯನ್ನು ಸ್ಥಾಪಿಸಲು ವೆರೋ ಕೋಶಗಳನ್ನು ಬಳಸಲಾಗುತ್ತದೆ. ಪೋಲಿಯೊ, ರೇಬೀಸ್ ಮತ್ತು ಇತರ ಹಲವು ಲಸಿಕೆಗಳಲ್ಲಿ ಈ ತಂತ್ರವನ್ನು ದಶಕಗಳಿಂದ ಬಳಸಲಾಗುತ್ತಿದೆ’ ಎಂದು ಕೇಂದ್ರವು ಪ್ರತಿಕ್ರಿಯೆ ನೀಡಿದೆ.

ಬೆಳವಣಿಗೆಯ ನಂತರ ಈ ವೆರೋ ಕೋಶಗಳನ್ನು ನೀರು ಅಥವಾ ರಾಸಾಯನಿಕಗಳಿಂದ ತೊಳೆಯಲಾಗುತ್ತದೆ. ನವಜಾತ ಕರುವಿನ ಸೀರಮ್‌ನಿಂದ ಮುಕ್ತವಾಗಿಸಲು ಈ ವಿಧಾನ ಅನುಸರಿಸಲಾಗುತ್ತದೆ. ಆ ನಂತರ ಈ ವೆರೋ ಕೋಶಗಳು ಕೊರೋನಾ ವೈರಸ್ ಸೋಂಕಿಗೆ ಒಳಗಾಗುತ್ತವೆ. ವೈರಸ್ ಬೆಳವಣಿಗೆಯ ಪ್ರಕ್ರಿಯೆಯಲ್ಲಿ ವೆರೋ ಕೋಶಗಳು ಸಂಪೂರ್ಣವಾಗಿ ನಾಶವಾಗುತ್ತವೆ. ಅದರ ನಂತರ ಈ ಬೆಳೆದ ವೈರಸ್ ಅನ್ನು ಸಹ ಕೊಲ್ಲಲಾಗುತ್ತದೆ (ನಿಷ್ಕ್ರಿಯಗೊಳಿಸಲಾಗುತ್ತದೆ) ಮತ್ತು ಶುದ್ಧೀಕರಿಸಲಾಗುತ್ತದೆ. ಈ ಕೊಲ್ಲಲ್ಪಟ್ಟ ವೈರಸ್ ಅನ್ನು ಅಂತಿಮ ಲಸಿಕೆ ತಯಾರಿಸಲು ಬಳಸಲಾಗುತ್ತದೆ. ಅಂತಿಮ ಲಸಿಕೆ ಸೂತ್ರೀಕರಣದಲ್ಲಿ ಯಾವುದೇ ಕರುವಿನ ಸೀರಮ್ ಅನ್ನು ಬಳಸಲಾಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಭಾರತ್ ಬಯೋಟೆಕ್ ಸಹ ಹೇಳಿಕೆ ನೀಡಿ, “ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಅನ್ನು ವೈರಲ್ ಲಸಿಕೆಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದನ್ನು ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ, ಆದರೆ ವೈರಸ್‍ನ ಬೆಳವಣಿಗೆಯಲ್ಲಿ ಅಥವಾ ಅಂತಿಮ ಸೂತ್ರೀಕರಣದಲ್ಲಿ ಬಳಸಲಾಗುವುದಿಲ್ಲ. ಎಲ್ಲಾ ಇತರ ಕಲ್ಮಶಗಳನ್ನು ತೆಗೆದುಹಾಕುವ ಮೂಲಕ ನಿಷ್ಕ್ರಿಯಗೊಂಡ ವೈರಸ್ ಘಟಕಗಳನ್ನು ಮಾತ್ರ ಒಳಗೊಂಡಿರುವಂತೆ ಕೊವಾಕ್ಸಿನ್‍ ಅನ್ನು ಶುದ್ಧೀಕರಿಸಲಾಗಿದೆ” ಎಂದು ವಿವರಣೆ ನೀಡಿದೆ.

“ಹಲವಾರು ದಶಕಗಳಿಂದ ಜಾಗತಿಕವಾಗಿ ಲಸಿಕೆಗಳ ತಯಾರಿಕೆಯಲ್ಲಿ ಪ್ರಾಣಿಗಳ ಸೀರಮ್ ಅನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಬಳಕೆಯನ್ನು ಕಳೆದ 9 ತಿಂಗಳುಗಳಿಂದ ಪಾರದರ್ಶಕವಾಗಿ ದಾಖಲಿಸಲಾಗಿದೆ’  ಎಂದು ಅದು ಸ್ಪಷ್ಟಪಡಿಸಿದೆ.


ಇದನ್ನೂ ಓದಿ: ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...