Homeಮುಖಪುಟಬೆಂಗಳೂರಿನಲ್ಲಿ ಹುಟ್ಟಿದ INDIA ಒಕ್ಕೂಟದ 'ಸಾಮೂಹಿಕ ಸಂಕಲ್ಪ' ಹೀಗಿದೆ...

ಬೆಂಗಳೂರಿನಲ್ಲಿ ಹುಟ್ಟಿದ INDIA ಒಕ್ಕೂಟದ ‘ಸಾಮೂಹಿಕ ಸಂಕಲ್ಪ’ ಹೀಗಿದೆ…

- Advertisement -
- Advertisement -

ಇಂದು ಬೆಂಗಳೂರಿನಲ್ಲಿ ಹೊಸದಾಗಿ ರೂಪುಗೊಂಡ INDIA ಮೈತ್ರಿಕೂಟವು ಜಾತಿ ಗಣತಿ, ಮಣಿಪುರ ಹಿಂಸಾಚಾರದಿಂದ ಹಿಡಿದು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗೌರ್ವರ್‌ಗಳ ಪಾತ್ರ ಮತ್ತು ನೋಟು ಅಮಾನ್ಯೀಕರಣದವರೆಗಿನ ವಿವಿಧ ವಿಷಯಗಳ ಕುರಿತು ಪ್ರಸ್ತಾಪಿಸುವ ‘ಸಾಮೂಹಿಕ ಸಂಕಲ್ಪ’ ಘೋಷಣೆಯನ್ನು ಸಹ ಬಿಡುಗಡೆ ಮಾಡಿದೆ. ಅದರ ಕನ್ನಡ ಅನುವಾದ ಇಲ್ಲಿದೆ.

ನಾವು, ಭಾರತದ 26 ಪ್ರಗತಿಪರ ಪಕ್ಷಗಳ ನಾಯಕರು, ಸಂವಿಧಾನದಲ್ಲಿ ಪ್ರತಿಪಾದಿಸಿರುವ ಭಾರತದ ಪರಿಕಲ್ಪನೆಯನ್ನು ರಕ್ಷಿಸಲು ನಮ್ಮ ದೃಢ ಸಂಕಲ್ಪ ಮಾಡುತ್ತೇವೆ. ನಮ್ಮ ರಾಷ್ಟ್ರದ ಇತಿಹಾಸದಲ್ಲಿ ನಿರ್ಣಾಯಕ ಘಟ್ಟದಲ್ಲಿದ್ದೇವೆ. ಏಕೆಂದರೆ ನಮ್ಮ ಗಣರಾಜ್ಯದ ಸ್ವರೂಪದ ಮೇಲೆ ಬಿಜೆಪಿಯು ವ್ಯವಸ್ಥಿತ ರೀತಿಯಲ್ಲಿ ತೀವ್ರವಾಗಿ ಆಕ್ರಮಣ ಮಾಡುತ್ತಿದೆ. ಭಾರತೀಯ ಸಂವಿಧಾನದ ಮೂಲ ಸ್ತಂಭಗಳಾದ ಜಾತ್ಯತೀತ ಪ್ರಜಾಪ್ರಭುತ್ವ, ಆರ್ಥಿಕ ಸಾರ್ವಭೌಮತ್ವ, ಸಾಮಾಜಿಕ ನ್ಯಾಯ ಮತ್ತು ಫೆಡರಲಿಸಂ ತತ್ವಗಳನ್ನು ಒಂದೊಂದ ಮೇಲೆ ಒಂದರಂತೆ ಭಯಂಕರವಾಗಿ ದುರ್ಬಲಗೊಳಿಸಲಾಗುತ್ತಿದೆ.

ಮಣಿಪುರವನ್ನು ನಾಶಪಡಿಸಿದ ಮಾನವೀಯ ದುರಂತದ ಬಗ್ಗೆ ನಾವು ನಮ್ಮ ತೀವ್ರ ಕಳವಳವನ್ನು ವ್ಯಕ್ತಪಡಿಸುತ್ತೇವೆ. ಪ್ರಧಾನಿಯವರ ಮೌನ ಆಘಾತಕಾರಿಯಾಗಿದೆ. ಮಣಿಪುರವನ್ನು ಶಾಂತಿ ಮತ್ತು ಸೌಹಾರ್ದತೆಯ ಹಾದಿಗೆ ಮರಳಿ ತರುವ ತುರ್ತು ಅಗತ್ಯವಿದೆ.

ಸಂವಿಧಾನದ ಮೇಲೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ರಾಜ್ಯ ಸರ್ಕಾರಗಳ ಸಾಂವಿಧಾನಿಕ ಹಕ್ಕುಗಳ ಮೇಲಿನ ನಿರಂತರ ದಾಳಿಯನ್ನು ಎದುರಿಸಲು ನಾವು ನಿರ್ಧರಿಸಿದ್ದೇವೆ. ಏಕೆಂದರೆ ನಮ್ಮ ರಾಜಕೀಯದ ಫೆಡರಲ್ ರಚನೆಯನ್ನು ದುರ್ಬಲಗೊಳಿಸುವ ಉದ್ದೇಶಪೂರ್ವಕ ಪ್ರಯತ್ನ ನಡೆಯುತ್ತಿದೆ. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ಪಾತ್ರವು ಎಲ್ಲಾ ಸಾಂವಿಧಾನಿಕ ಮಾನದಂಡಗಳನ್ನು ಮೀರಿದೆ. ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಬಿಜೆಪಿ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ನಮ್ಮ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯೇತರ ರಾಜ್ಯಗಳ ಕಾನೂನುಬದ್ಧ ಅಗತ್ಯಗಳು, ಅವಶ್ಯಕತೆಗಳು ಮತ್ತು ಅರ್ಹತೆಗಳನ್ನು ಕೇಂದ್ರವು ಸಕ್ರಿಯವಾಗಿ ನಿರಾಕರಿಸುತ್ತಿದೆ.

ನಿರಂತರವಾಗಿ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆಗಳು ಮತ್ತು ದಾಖಲೆಯ ನಿರುದ್ಯೋಗದ ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸುತ್ತೇವೆ. ಏಕೆಂದರೆ ನೋಟು ಅಮಾನ್ಯೀಕರಣವು MSME ಮತ್ತು ಅಸಂಘಟಿತ ವಲಯಗಳಿಗೆ ಹೇಳಲಾಗದ ನಷ್ಟ ಉಂಟುಮಾಡಿದೆ. ಇದರ ಪರಿಣಾಮವಾಗಿ ನಮ್ಮ ಯುವಕರಲ್ಲಿ ದೊಡ್ಡ ಪ್ರಮಾಣದ ನಿರುದ್ಯೋಗ ಉಂಟಾಗಿದೆ. ರಾಷ್ಟ್ರದ ಸಂಪತ್ತನ್ನು ಕೇವಲ ಪ್ರಧಾನಿಯರವರ  ಸ್ನೇಹಿತರಿಗೆ ಅಜಾಗರೂಕತೆಯಿಂದ ಮಾರಾಟ ಮಾಡುವುದನ್ನು ನಾವು ವಿರೋಧಿಸುತ್ತೇವೆ. ನಾವು ಬಲವಾದ ಮತ್ತು ಸೂಕ್ತ ಕಾರ್ಯತಂತ್ರದ ಮೂಲಕ ಸಾರ್ವಜನಿಕ ವಲಯವನ್ನು ಅಭಿವೃದ್ದಿಪಡಿಸಿ ಪ್ರವರ್ಧಮಾನಕ್ಕೆ ಬರುತ್ತಿರುವ ಖಾಸಗಿ ವಲಯದೊಂದಿಗೆ ನ್ಯಾಯಯುತ ಆರ್ಥಿಕತೆಯನ್ನು ನಿರ್ಮಿಸುತ್ತೇವೆ. ಇದರಲ್ಲಿ ಉದ್ಯಮದ ಮನೋಭಾವವನ್ನು ಬೆಳೆಸಲಾಗುತ್ತದೆ ಮತ್ತು ವಿಸ್ತರಿಸಲು ಪ್ರತಿ ಅವಕಾಶವನ್ನು ನೀಡಲಾಗುತ್ತದೆ. ಕೃಷಿಕ ರೈತರ ಪರವಾಗಿ ಹೋರಾಡುತ್ತೇವೆ.

ಅಲ್ಪಸಂಖ್ಯಾತರ ವಿರುದ್ಧ ನಿರ್ಮಾಣವಾಗುತ್ತಿರುವ ದ್ವೇಷ ಮತ್ತು ಹಿಂಸೆಯನ್ನು ಸೋಲಿಸಲು ನಾವು ಒಟ್ಟಾಗಿದ್ದೇವೆ. ಮಹಿಳೆಯರು, ದಲಿತರು, ಆದಿವಾಸಿಗಳು ಮತ್ತು ಕಾಶ್ಮೀರಿ ಪಂಡಿತರ ಮೇಲೆ ಹೆಚ್ಚುತ್ತಿರುವ ಅಪರಾಧಗಳನ್ನು ನಿಲ್ಲಿಸಿ; ಎಲ್ಲಾ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ನ್ಯಾಯಯುತ ಪಾಲು ನೀಡಲು ಮೊದಲ ಹಂತವಾಗಿ, ಜಾತಿ ಗಣತಿಯನ್ನು ಜಾರಿಗೊಳಿಸಿ.

ನಮ್ಮ ಸಹ ಭಾರತೀಯರನ್ನು ಗುರಿಯಾಗಿಸುವ, ಕಿರುಕುಳ ನೀಡುವ ಮತ್ತು ನಿಗ್ರಹಿಸುವ ಬಿಜೆಪಿಯ ವ್ಯವಸ್ಥಿತ ಪಿತೂರಿಯ ವಿರುದ್ಧ ಹೋರಾಡಲು ನಾವು ನಿರ್ಧರಿಸುತ್ತೇವೆ. ಏಕೆಂದರೆ ಅವರ ದ್ವೇಷ ವಿಷಪೂರಿತ ಪ್ರಚಾರವು ಆಡಳಿತ ಪಕ್ಷ ಮತ್ತು ಅದರ ವಿಭಜಕ ಸಿದ್ಧಾಂತವನ್ನು ವಿರೋಧಿಸುವ ಎಲ್ಲರ ವಿರುದ್ಧ ಕೆಟ್ಟ ಹಿಂಸೆಗೆ ಕಾರಣವಾಗಿದೆ. ಈ ದಾಳಿಗಳು ಸಾಂವಿಧಾನಿಕ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಉಲ್ಲಂಘಿಸುವುದು ಮಾತ್ರವಲ್ಲದೆ ಭಾರತ ಗಣರಾಜ್ಯವನ್ನು ಸ್ಥಾಪಿಸಿದ ಮೂಲಭೂತ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಮತ್ತು ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ನಾಶಪಡಿಸುತ್ತಿವೆ. ಭಾರತೀಯ ಇತಿಹಾಸವನ್ನು ಮರುಶೋಧಿಸುವ ಮತ್ತು ತಿರುಚುವ ಮೂಲಕ ಸಾರ್ವಜನಿಕ ಸಂವಾದವನ್ನು ಹಾಳುಮಾಡಲು ಬಿಜೆಪಿಯ ಪುನರಾವರ್ತಿತ ಪ್ರಯತ್ನಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿವೆ.

ಪರ್ಯಾಯ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಕಾರ್ಯಸೂಚಿಯನ್ನು ರಾಷ್ಟ್ರಕ್ಕೆ ಪ್ರಸ್ತುತಪಡಿಸಲು ನಾವು ಪ್ರತಿಜ್ಞೆ ಮಾಡುತ್ತೇವೆ. ಹೆಚ್ಚು ಸಮಾಲೋಚನೆ, ಪ್ರಜಾಪ್ರಭುತ್ವ ಮತ್ತು ಭಾಗವಹಿಸುವಿಕೆ ಇರುವ ಆಡಳಿತದ ಸಾರ ಮತ್ತು ಶೈಲಿ ಎರಡನ್ನೂ ಪರಿವರ್ತಿಸಲು ನಾವು ಭರವಸೆ ನೀಡುತ್ತೇವೆ.

ಇದನ್ನೂ ಓದಿ; INDIA ಗೆಲ್ಲುತ್ತದೆ, ನಮ್ಮ ದೇಶ ಗೆಲ್ಲುತ್ತದೆ ಮತ್ತು ಬಿಜೆಪಿ ಸೋಲುತ್ತದೆ: ವಿಪಕ್ಷಗಳ ಸಭೆ ಬಳಿಕೆ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...