Homeಮುಖಪುಟಬೆಂಗಳೂರಿನಲ್ಲಿ ಹುಟ್ಟಿದ INDIA ಒಕ್ಕೂಟದ 'ಸಾಮೂಹಿಕ ಸಂಕಲ್ಪ' ಹೀಗಿದೆ...

ಬೆಂಗಳೂರಿನಲ್ಲಿ ಹುಟ್ಟಿದ INDIA ಒಕ್ಕೂಟದ ‘ಸಾಮೂಹಿಕ ಸಂಕಲ್ಪ’ ಹೀಗಿದೆ…

- Advertisement -
- Advertisement -

ಇಂದು ಬೆಂಗಳೂರಿನಲ್ಲಿ ಹೊಸದಾಗಿ ರೂಪುಗೊಂಡ INDIA ಮೈತ್ರಿಕೂಟವು ಜಾತಿ ಗಣತಿ, ಮಣಿಪುರ ಹಿಂಸಾಚಾರದಿಂದ ಹಿಡಿದು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗೌರ್ವರ್‌ಗಳ ಪಾತ್ರ ಮತ್ತು ನೋಟು ಅಮಾನ್ಯೀಕರಣದವರೆಗಿನ ವಿವಿಧ ವಿಷಯಗಳ ಕುರಿತು ಪ್ರಸ್ತಾಪಿಸುವ ‘ಸಾಮೂಹಿಕ ಸಂಕಲ್ಪ’ ಘೋಷಣೆಯನ್ನು ಸಹ ಬಿಡುಗಡೆ ಮಾಡಿದೆ. ಅದರ ಕನ್ನಡ ಅನುವಾದ ಇಲ್ಲಿದೆ.

ನಾವು, ಭಾರತದ 26 ಪ್ರಗತಿಪರ ಪಕ್ಷಗಳ ನಾಯಕರು, ಸಂವಿಧಾನದಲ್ಲಿ ಪ್ರತಿಪಾದಿಸಿರುವ ಭಾರತದ ಪರಿಕಲ್ಪನೆಯನ್ನು ರಕ್ಷಿಸಲು ನಮ್ಮ ದೃಢ ಸಂಕಲ್ಪ ಮಾಡುತ್ತೇವೆ. ನಮ್ಮ ರಾಷ್ಟ್ರದ ಇತಿಹಾಸದಲ್ಲಿ ನಿರ್ಣಾಯಕ ಘಟ್ಟದಲ್ಲಿದ್ದೇವೆ. ಏಕೆಂದರೆ ನಮ್ಮ ಗಣರಾಜ್ಯದ ಸ್ವರೂಪದ ಮೇಲೆ ಬಿಜೆಪಿಯು ವ್ಯವಸ್ಥಿತ ರೀತಿಯಲ್ಲಿ ತೀವ್ರವಾಗಿ ಆಕ್ರಮಣ ಮಾಡುತ್ತಿದೆ. ಭಾರತೀಯ ಸಂವಿಧಾನದ ಮೂಲ ಸ್ತಂಭಗಳಾದ ಜಾತ್ಯತೀತ ಪ್ರಜಾಪ್ರಭುತ್ವ, ಆರ್ಥಿಕ ಸಾರ್ವಭೌಮತ್ವ, ಸಾಮಾಜಿಕ ನ್ಯಾಯ ಮತ್ತು ಫೆಡರಲಿಸಂ ತತ್ವಗಳನ್ನು ಒಂದೊಂದ ಮೇಲೆ ಒಂದರಂತೆ ಭಯಂಕರವಾಗಿ ದುರ್ಬಲಗೊಳಿಸಲಾಗುತ್ತಿದೆ.

ಮಣಿಪುರವನ್ನು ನಾಶಪಡಿಸಿದ ಮಾನವೀಯ ದುರಂತದ ಬಗ್ಗೆ ನಾವು ನಮ್ಮ ತೀವ್ರ ಕಳವಳವನ್ನು ವ್ಯಕ್ತಪಡಿಸುತ್ತೇವೆ. ಪ್ರಧಾನಿಯವರ ಮೌನ ಆಘಾತಕಾರಿಯಾಗಿದೆ. ಮಣಿಪುರವನ್ನು ಶಾಂತಿ ಮತ್ತು ಸೌಹಾರ್ದತೆಯ ಹಾದಿಗೆ ಮರಳಿ ತರುವ ತುರ್ತು ಅಗತ್ಯವಿದೆ.

ಸಂವಿಧಾನದ ಮೇಲೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ರಾಜ್ಯ ಸರ್ಕಾರಗಳ ಸಾಂವಿಧಾನಿಕ ಹಕ್ಕುಗಳ ಮೇಲಿನ ನಿರಂತರ ದಾಳಿಯನ್ನು ಎದುರಿಸಲು ನಾವು ನಿರ್ಧರಿಸಿದ್ದೇವೆ. ಏಕೆಂದರೆ ನಮ್ಮ ರಾಜಕೀಯದ ಫೆಡರಲ್ ರಚನೆಯನ್ನು ದುರ್ಬಲಗೊಳಿಸುವ ಉದ್ದೇಶಪೂರ್ವಕ ಪ್ರಯತ್ನ ನಡೆಯುತ್ತಿದೆ. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ಪಾತ್ರವು ಎಲ್ಲಾ ಸಾಂವಿಧಾನಿಕ ಮಾನದಂಡಗಳನ್ನು ಮೀರಿದೆ. ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಬಿಜೆಪಿ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ನಮ್ಮ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯೇತರ ರಾಜ್ಯಗಳ ಕಾನೂನುಬದ್ಧ ಅಗತ್ಯಗಳು, ಅವಶ್ಯಕತೆಗಳು ಮತ್ತು ಅರ್ಹತೆಗಳನ್ನು ಕೇಂದ್ರವು ಸಕ್ರಿಯವಾಗಿ ನಿರಾಕರಿಸುತ್ತಿದೆ.

ನಿರಂತರವಾಗಿ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆಗಳು ಮತ್ತು ದಾಖಲೆಯ ನಿರುದ್ಯೋಗದ ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸುತ್ತೇವೆ. ಏಕೆಂದರೆ ನೋಟು ಅಮಾನ್ಯೀಕರಣವು MSME ಮತ್ತು ಅಸಂಘಟಿತ ವಲಯಗಳಿಗೆ ಹೇಳಲಾಗದ ನಷ್ಟ ಉಂಟುಮಾಡಿದೆ. ಇದರ ಪರಿಣಾಮವಾಗಿ ನಮ್ಮ ಯುವಕರಲ್ಲಿ ದೊಡ್ಡ ಪ್ರಮಾಣದ ನಿರುದ್ಯೋಗ ಉಂಟಾಗಿದೆ. ರಾಷ್ಟ್ರದ ಸಂಪತ್ತನ್ನು ಕೇವಲ ಪ್ರಧಾನಿಯರವರ  ಸ್ನೇಹಿತರಿಗೆ ಅಜಾಗರೂಕತೆಯಿಂದ ಮಾರಾಟ ಮಾಡುವುದನ್ನು ನಾವು ವಿರೋಧಿಸುತ್ತೇವೆ. ನಾವು ಬಲವಾದ ಮತ್ತು ಸೂಕ್ತ ಕಾರ್ಯತಂತ್ರದ ಮೂಲಕ ಸಾರ್ವಜನಿಕ ವಲಯವನ್ನು ಅಭಿವೃದ್ದಿಪಡಿಸಿ ಪ್ರವರ್ಧಮಾನಕ್ಕೆ ಬರುತ್ತಿರುವ ಖಾಸಗಿ ವಲಯದೊಂದಿಗೆ ನ್ಯಾಯಯುತ ಆರ್ಥಿಕತೆಯನ್ನು ನಿರ್ಮಿಸುತ್ತೇವೆ. ಇದರಲ್ಲಿ ಉದ್ಯಮದ ಮನೋಭಾವವನ್ನು ಬೆಳೆಸಲಾಗುತ್ತದೆ ಮತ್ತು ವಿಸ್ತರಿಸಲು ಪ್ರತಿ ಅವಕಾಶವನ್ನು ನೀಡಲಾಗುತ್ತದೆ. ಕೃಷಿಕ ರೈತರ ಪರವಾಗಿ ಹೋರಾಡುತ್ತೇವೆ.

ಅಲ್ಪಸಂಖ್ಯಾತರ ವಿರುದ್ಧ ನಿರ್ಮಾಣವಾಗುತ್ತಿರುವ ದ್ವೇಷ ಮತ್ತು ಹಿಂಸೆಯನ್ನು ಸೋಲಿಸಲು ನಾವು ಒಟ್ಟಾಗಿದ್ದೇವೆ. ಮಹಿಳೆಯರು, ದಲಿತರು, ಆದಿವಾಸಿಗಳು ಮತ್ತು ಕಾಶ್ಮೀರಿ ಪಂಡಿತರ ಮೇಲೆ ಹೆಚ್ಚುತ್ತಿರುವ ಅಪರಾಧಗಳನ್ನು ನಿಲ್ಲಿಸಿ; ಎಲ್ಲಾ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ನ್ಯಾಯಯುತ ಪಾಲು ನೀಡಲು ಮೊದಲ ಹಂತವಾಗಿ, ಜಾತಿ ಗಣತಿಯನ್ನು ಜಾರಿಗೊಳಿಸಿ.

ನಮ್ಮ ಸಹ ಭಾರತೀಯರನ್ನು ಗುರಿಯಾಗಿಸುವ, ಕಿರುಕುಳ ನೀಡುವ ಮತ್ತು ನಿಗ್ರಹಿಸುವ ಬಿಜೆಪಿಯ ವ್ಯವಸ್ಥಿತ ಪಿತೂರಿಯ ವಿರುದ್ಧ ಹೋರಾಡಲು ನಾವು ನಿರ್ಧರಿಸುತ್ತೇವೆ. ಏಕೆಂದರೆ ಅವರ ದ್ವೇಷ ವಿಷಪೂರಿತ ಪ್ರಚಾರವು ಆಡಳಿತ ಪಕ್ಷ ಮತ್ತು ಅದರ ವಿಭಜಕ ಸಿದ್ಧಾಂತವನ್ನು ವಿರೋಧಿಸುವ ಎಲ್ಲರ ವಿರುದ್ಧ ಕೆಟ್ಟ ಹಿಂಸೆಗೆ ಕಾರಣವಾಗಿದೆ. ಈ ದಾಳಿಗಳು ಸಾಂವಿಧಾನಿಕ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಉಲ್ಲಂಘಿಸುವುದು ಮಾತ್ರವಲ್ಲದೆ ಭಾರತ ಗಣರಾಜ್ಯವನ್ನು ಸ್ಥಾಪಿಸಿದ ಮೂಲಭೂತ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಮತ್ತು ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ನಾಶಪಡಿಸುತ್ತಿವೆ. ಭಾರತೀಯ ಇತಿಹಾಸವನ್ನು ಮರುಶೋಧಿಸುವ ಮತ್ತು ತಿರುಚುವ ಮೂಲಕ ಸಾರ್ವಜನಿಕ ಸಂವಾದವನ್ನು ಹಾಳುಮಾಡಲು ಬಿಜೆಪಿಯ ಪುನರಾವರ್ತಿತ ಪ್ರಯತ್ನಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿವೆ.

ಪರ್ಯಾಯ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಕಾರ್ಯಸೂಚಿಯನ್ನು ರಾಷ್ಟ್ರಕ್ಕೆ ಪ್ರಸ್ತುತಪಡಿಸಲು ನಾವು ಪ್ರತಿಜ್ಞೆ ಮಾಡುತ್ತೇವೆ. ಹೆಚ್ಚು ಸಮಾಲೋಚನೆ, ಪ್ರಜಾಪ್ರಭುತ್ವ ಮತ್ತು ಭಾಗವಹಿಸುವಿಕೆ ಇರುವ ಆಡಳಿತದ ಸಾರ ಮತ್ತು ಶೈಲಿ ಎರಡನ್ನೂ ಪರಿವರ್ತಿಸಲು ನಾವು ಭರವಸೆ ನೀಡುತ್ತೇವೆ.

ಇದನ್ನೂ ಓದಿ; INDIA ಗೆಲ್ಲುತ್ತದೆ, ನಮ್ಮ ದೇಶ ಗೆಲ್ಲುತ್ತದೆ ಮತ್ತು ಬಿಜೆಪಿ ಸೋಲುತ್ತದೆ: ವಿಪಕ್ಷಗಳ ಸಭೆ ಬಳಿಕೆ ಮಮತಾ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...