Homeಮುಖಪುಟಬೆಂಗಳೂರಿನಲ್ಲಿ ಹುಟ್ಟಿದ INDIA ಒಕ್ಕೂಟದ 'ಸಾಮೂಹಿಕ ಸಂಕಲ್ಪ' ಹೀಗಿದೆ...

ಬೆಂಗಳೂರಿನಲ್ಲಿ ಹುಟ್ಟಿದ INDIA ಒಕ್ಕೂಟದ ‘ಸಾಮೂಹಿಕ ಸಂಕಲ್ಪ’ ಹೀಗಿದೆ…

- Advertisement -
- Advertisement -

ಇಂದು ಬೆಂಗಳೂರಿನಲ್ಲಿ ಹೊಸದಾಗಿ ರೂಪುಗೊಂಡ INDIA ಮೈತ್ರಿಕೂಟವು ಜಾತಿ ಗಣತಿ, ಮಣಿಪುರ ಹಿಂಸಾಚಾರದಿಂದ ಹಿಡಿದು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗೌರ್ವರ್‌ಗಳ ಪಾತ್ರ ಮತ್ತು ನೋಟು ಅಮಾನ್ಯೀಕರಣದವರೆಗಿನ ವಿವಿಧ ವಿಷಯಗಳ ಕುರಿತು ಪ್ರಸ್ತಾಪಿಸುವ ‘ಸಾಮೂಹಿಕ ಸಂಕಲ್ಪ’ ಘೋಷಣೆಯನ್ನು ಸಹ ಬಿಡುಗಡೆ ಮಾಡಿದೆ. ಅದರ ಕನ್ನಡ ಅನುವಾದ ಇಲ್ಲಿದೆ.

ನಾವು, ಭಾರತದ 26 ಪ್ರಗತಿಪರ ಪಕ್ಷಗಳ ನಾಯಕರು, ಸಂವಿಧಾನದಲ್ಲಿ ಪ್ರತಿಪಾದಿಸಿರುವ ಭಾರತದ ಪರಿಕಲ್ಪನೆಯನ್ನು ರಕ್ಷಿಸಲು ನಮ್ಮ ದೃಢ ಸಂಕಲ್ಪ ಮಾಡುತ್ತೇವೆ. ನಮ್ಮ ರಾಷ್ಟ್ರದ ಇತಿಹಾಸದಲ್ಲಿ ನಿರ್ಣಾಯಕ ಘಟ್ಟದಲ್ಲಿದ್ದೇವೆ. ಏಕೆಂದರೆ ನಮ್ಮ ಗಣರಾಜ್ಯದ ಸ್ವರೂಪದ ಮೇಲೆ ಬಿಜೆಪಿಯು ವ್ಯವಸ್ಥಿತ ರೀತಿಯಲ್ಲಿ ತೀವ್ರವಾಗಿ ಆಕ್ರಮಣ ಮಾಡುತ್ತಿದೆ. ಭಾರತೀಯ ಸಂವಿಧಾನದ ಮೂಲ ಸ್ತಂಭಗಳಾದ ಜಾತ್ಯತೀತ ಪ್ರಜಾಪ್ರಭುತ್ವ, ಆರ್ಥಿಕ ಸಾರ್ವಭೌಮತ್ವ, ಸಾಮಾಜಿಕ ನ್ಯಾಯ ಮತ್ತು ಫೆಡರಲಿಸಂ ತತ್ವಗಳನ್ನು ಒಂದೊಂದ ಮೇಲೆ ಒಂದರಂತೆ ಭಯಂಕರವಾಗಿ ದುರ್ಬಲಗೊಳಿಸಲಾಗುತ್ತಿದೆ.

ಮಣಿಪುರವನ್ನು ನಾಶಪಡಿಸಿದ ಮಾನವೀಯ ದುರಂತದ ಬಗ್ಗೆ ನಾವು ನಮ್ಮ ತೀವ್ರ ಕಳವಳವನ್ನು ವ್ಯಕ್ತಪಡಿಸುತ್ತೇವೆ. ಪ್ರಧಾನಿಯವರ ಮೌನ ಆಘಾತಕಾರಿಯಾಗಿದೆ. ಮಣಿಪುರವನ್ನು ಶಾಂತಿ ಮತ್ತು ಸೌಹಾರ್ದತೆಯ ಹಾದಿಗೆ ಮರಳಿ ತರುವ ತುರ್ತು ಅಗತ್ಯವಿದೆ.

ಸಂವಿಧಾನದ ಮೇಲೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ರಾಜ್ಯ ಸರ್ಕಾರಗಳ ಸಾಂವಿಧಾನಿಕ ಹಕ್ಕುಗಳ ಮೇಲಿನ ನಿರಂತರ ದಾಳಿಯನ್ನು ಎದುರಿಸಲು ನಾವು ನಿರ್ಧರಿಸಿದ್ದೇವೆ. ಏಕೆಂದರೆ ನಮ್ಮ ರಾಜಕೀಯದ ಫೆಡರಲ್ ರಚನೆಯನ್ನು ದುರ್ಬಲಗೊಳಿಸುವ ಉದ್ದೇಶಪೂರ್ವಕ ಪ್ರಯತ್ನ ನಡೆಯುತ್ತಿದೆ. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ಪಾತ್ರವು ಎಲ್ಲಾ ಸಾಂವಿಧಾನಿಕ ಮಾನದಂಡಗಳನ್ನು ಮೀರಿದೆ. ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಬಿಜೆಪಿ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ನಮ್ಮ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯೇತರ ರಾಜ್ಯಗಳ ಕಾನೂನುಬದ್ಧ ಅಗತ್ಯಗಳು, ಅವಶ್ಯಕತೆಗಳು ಮತ್ತು ಅರ್ಹತೆಗಳನ್ನು ಕೇಂದ್ರವು ಸಕ್ರಿಯವಾಗಿ ನಿರಾಕರಿಸುತ್ತಿದೆ.

ನಿರಂತರವಾಗಿ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆಗಳು ಮತ್ತು ದಾಖಲೆಯ ನಿರುದ್ಯೋಗದ ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸುತ್ತೇವೆ. ಏಕೆಂದರೆ ನೋಟು ಅಮಾನ್ಯೀಕರಣವು MSME ಮತ್ತು ಅಸಂಘಟಿತ ವಲಯಗಳಿಗೆ ಹೇಳಲಾಗದ ನಷ್ಟ ಉಂಟುಮಾಡಿದೆ. ಇದರ ಪರಿಣಾಮವಾಗಿ ನಮ್ಮ ಯುವಕರಲ್ಲಿ ದೊಡ್ಡ ಪ್ರಮಾಣದ ನಿರುದ್ಯೋಗ ಉಂಟಾಗಿದೆ. ರಾಷ್ಟ್ರದ ಸಂಪತ್ತನ್ನು ಕೇವಲ ಪ್ರಧಾನಿಯರವರ  ಸ್ನೇಹಿತರಿಗೆ ಅಜಾಗರೂಕತೆಯಿಂದ ಮಾರಾಟ ಮಾಡುವುದನ್ನು ನಾವು ವಿರೋಧಿಸುತ್ತೇವೆ. ನಾವು ಬಲವಾದ ಮತ್ತು ಸೂಕ್ತ ಕಾರ್ಯತಂತ್ರದ ಮೂಲಕ ಸಾರ್ವಜನಿಕ ವಲಯವನ್ನು ಅಭಿವೃದ್ದಿಪಡಿಸಿ ಪ್ರವರ್ಧಮಾನಕ್ಕೆ ಬರುತ್ತಿರುವ ಖಾಸಗಿ ವಲಯದೊಂದಿಗೆ ನ್ಯಾಯಯುತ ಆರ್ಥಿಕತೆಯನ್ನು ನಿರ್ಮಿಸುತ್ತೇವೆ. ಇದರಲ್ಲಿ ಉದ್ಯಮದ ಮನೋಭಾವವನ್ನು ಬೆಳೆಸಲಾಗುತ್ತದೆ ಮತ್ತು ವಿಸ್ತರಿಸಲು ಪ್ರತಿ ಅವಕಾಶವನ್ನು ನೀಡಲಾಗುತ್ತದೆ. ಕೃಷಿಕ ರೈತರ ಪರವಾಗಿ ಹೋರಾಡುತ್ತೇವೆ.

ಅಲ್ಪಸಂಖ್ಯಾತರ ವಿರುದ್ಧ ನಿರ್ಮಾಣವಾಗುತ್ತಿರುವ ದ್ವೇಷ ಮತ್ತು ಹಿಂಸೆಯನ್ನು ಸೋಲಿಸಲು ನಾವು ಒಟ್ಟಾಗಿದ್ದೇವೆ. ಮಹಿಳೆಯರು, ದಲಿತರು, ಆದಿವಾಸಿಗಳು ಮತ್ತು ಕಾಶ್ಮೀರಿ ಪಂಡಿತರ ಮೇಲೆ ಹೆಚ್ಚುತ್ತಿರುವ ಅಪರಾಧಗಳನ್ನು ನಿಲ್ಲಿಸಿ; ಎಲ್ಲಾ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ನ್ಯಾಯಯುತ ಪಾಲು ನೀಡಲು ಮೊದಲ ಹಂತವಾಗಿ, ಜಾತಿ ಗಣತಿಯನ್ನು ಜಾರಿಗೊಳಿಸಿ.

ನಮ್ಮ ಸಹ ಭಾರತೀಯರನ್ನು ಗುರಿಯಾಗಿಸುವ, ಕಿರುಕುಳ ನೀಡುವ ಮತ್ತು ನಿಗ್ರಹಿಸುವ ಬಿಜೆಪಿಯ ವ್ಯವಸ್ಥಿತ ಪಿತೂರಿಯ ವಿರುದ್ಧ ಹೋರಾಡಲು ನಾವು ನಿರ್ಧರಿಸುತ್ತೇವೆ. ಏಕೆಂದರೆ ಅವರ ದ್ವೇಷ ವಿಷಪೂರಿತ ಪ್ರಚಾರವು ಆಡಳಿತ ಪಕ್ಷ ಮತ್ತು ಅದರ ವಿಭಜಕ ಸಿದ್ಧಾಂತವನ್ನು ವಿರೋಧಿಸುವ ಎಲ್ಲರ ವಿರುದ್ಧ ಕೆಟ್ಟ ಹಿಂಸೆಗೆ ಕಾರಣವಾಗಿದೆ. ಈ ದಾಳಿಗಳು ಸಾಂವಿಧಾನಿಕ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಉಲ್ಲಂಘಿಸುವುದು ಮಾತ್ರವಲ್ಲದೆ ಭಾರತ ಗಣರಾಜ್ಯವನ್ನು ಸ್ಥಾಪಿಸಿದ ಮೂಲಭೂತ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಮತ್ತು ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ನಾಶಪಡಿಸುತ್ತಿವೆ. ಭಾರತೀಯ ಇತಿಹಾಸವನ್ನು ಮರುಶೋಧಿಸುವ ಮತ್ತು ತಿರುಚುವ ಮೂಲಕ ಸಾರ್ವಜನಿಕ ಸಂವಾದವನ್ನು ಹಾಳುಮಾಡಲು ಬಿಜೆಪಿಯ ಪುನರಾವರ್ತಿತ ಪ್ರಯತ್ನಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿವೆ.

ಪರ್ಯಾಯ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಕಾರ್ಯಸೂಚಿಯನ್ನು ರಾಷ್ಟ್ರಕ್ಕೆ ಪ್ರಸ್ತುತಪಡಿಸಲು ನಾವು ಪ್ರತಿಜ್ಞೆ ಮಾಡುತ್ತೇವೆ. ಹೆಚ್ಚು ಸಮಾಲೋಚನೆ, ಪ್ರಜಾಪ್ರಭುತ್ವ ಮತ್ತು ಭಾಗವಹಿಸುವಿಕೆ ಇರುವ ಆಡಳಿತದ ಸಾರ ಮತ್ತು ಶೈಲಿ ಎರಡನ್ನೂ ಪರಿವರ್ತಿಸಲು ನಾವು ಭರವಸೆ ನೀಡುತ್ತೇವೆ.

ಇದನ್ನೂ ಓದಿ; INDIA ಗೆಲ್ಲುತ್ತದೆ, ನಮ್ಮ ದೇಶ ಗೆಲ್ಲುತ್ತದೆ ಮತ್ತು ಬಿಜೆಪಿ ಸೋಲುತ್ತದೆ: ವಿಪಕ್ಷಗಳ ಸಭೆ ಬಳಿಕೆ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...