Homeಮುಖಪುಟಬೆಂಗಳೂರಿನಲ್ಲಿ ಹುಟ್ಟಿದ INDIA ಒಕ್ಕೂಟದ 'ಸಾಮೂಹಿಕ ಸಂಕಲ್ಪ' ಹೀಗಿದೆ...

ಬೆಂಗಳೂರಿನಲ್ಲಿ ಹುಟ್ಟಿದ INDIA ಒಕ್ಕೂಟದ ‘ಸಾಮೂಹಿಕ ಸಂಕಲ್ಪ’ ಹೀಗಿದೆ…

- Advertisement -
- Advertisement -

ಇಂದು ಬೆಂಗಳೂರಿನಲ್ಲಿ ಹೊಸದಾಗಿ ರೂಪುಗೊಂಡ INDIA ಮೈತ್ರಿಕೂಟವು ಜಾತಿ ಗಣತಿ, ಮಣಿಪುರ ಹಿಂಸಾಚಾರದಿಂದ ಹಿಡಿದು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗೌರ್ವರ್‌ಗಳ ಪಾತ್ರ ಮತ್ತು ನೋಟು ಅಮಾನ್ಯೀಕರಣದವರೆಗಿನ ವಿವಿಧ ವಿಷಯಗಳ ಕುರಿತು ಪ್ರಸ್ತಾಪಿಸುವ ‘ಸಾಮೂಹಿಕ ಸಂಕಲ್ಪ’ ಘೋಷಣೆಯನ್ನು ಸಹ ಬಿಡುಗಡೆ ಮಾಡಿದೆ. ಅದರ ಕನ್ನಡ ಅನುವಾದ ಇಲ್ಲಿದೆ.

ನಾವು, ಭಾರತದ 26 ಪ್ರಗತಿಪರ ಪಕ್ಷಗಳ ನಾಯಕರು, ಸಂವಿಧಾನದಲ್ಲಿ ಪ್ರತಿಪಾದಿಸಿರುವ ಭಾರತದ ಪರಿಕಲ್ಪನೆಯನ್ನು ರಕ್ಷಿಸಲು ನಮ್ಮ ದೃಢ ಸಂಕಲ್ಪ ಮಾಡುತ್ತೇವೆ. ನಮ್ಮ ರಾಷ್ಟ್ರದ ಇತಿಹಾಸದಲ್ಲಿ ನಿರ್ಣಾಯಕ ಘಟ್ಟದಲ್ಲಿದ್ದೇವೆ. ಏಕೆಂದರೆ ನಮ್ಮ ಗಣರಾಜ್ಯದ ಸ್ವರೂಪದ ಮೇಲೆ ಬಿಜೆಪಿಯು ವ್ಯವಸ್ಥಿತ ರೀತಿಯಲ್ಲಿ ತೀವ್ರವಾಗಿ ಆಕ್ರಮಣ ಮಾಡುತ್ತಿದೆ. ಭಾರತೀಯ ಸಂವಿಧಾನದ ಮೂಲ ಸ್ತಂಭಗಳಾದ ಜಾತ್ಯತೀತ ಪ್ರಜಾಪ್ರಭುತ್ವ, ಆರ್ಥಿಕ ಸಾರ್ವಭೌಮತ್ವ, ಸಾಮಾಜಿಕ ನ್ಯಾಯ ಮತ್ತು ಫೆಡರಲಿಸಂ ತತ್ವಗಳನ್ನು ಒಂದೊಂದ ಮೇಲೆ ಒಂದರಂತೆ ಭಯಂಕರವಾಗಿ ದುರ್ಬಲಗೊಳಿಸಲಾಗುತ್ತಿದೆ.

ಮಣಿಪುರವನ್ನು ನಾಶಪಡಿಸಿದ ಮಾನವೀಯ ದುರಂತದ ಬಗ್ಗೆ ನಾವು ನಮ್ಮ ತೀವ್ರ ಕಳವಳವನ್ನು ವ್ಯಕ್ತಪಡಿಸುತ್ತೇವೆ. ಪ್ರಧಾನಿಯವರ ಮೌನ ಆಘಾತಕಾರಿಯಾಗಿದೆ. ಮಣಿಪುರವನ್ನು ಶಾಂತಿ ಮತ್ತು ಸೌಹಾರ್ದತೆಯ ಹಾದಿಗೆ ಮರಳಿ ತರುವ ತುರ್ತು ಅಗತ್ಯವಿದೆ.

ಸಂವಿಧಾನದ ಮೇಲೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ರಾಜ್ಯ ಸರ್ಕಾರಗಳ ಸಾಂವಿಧಾನಿಕ ಹಕ್ಕುಗಳ ಮೇಲಿನ ನಿರಂತರ ದಾಳಿಯನ್ನು ಎದುರಿಸಲು ನಾವು ನಿರ್ಧರಿಸಿದ್ದೇವೆ. ಏಕೆಂದರೆ ನಮ್ಮ ರಾಜಕೀಯದ ಫೆಡರಲ್ ರಚನೆಯನ್ನು ದುರ್ಬಲಗೊಳಿಸುವ ಉದ್ದೇಶಪೂರ್ವಕ ಪ್ರಯತ್ನ ನಡೆಯುತ್ತಿದೆ. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ಪಾತ್ರವು ಎಲ್ಲಾ ಸಾಂವಿಧಾನಿಕ ಮಾನದಂಡಗಳನ್ನು ಮೀರಿದೆ. ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಬಿಜೆಪಿ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ನಮ್ಮ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯೇತರ ರಾಜ್ಯಗಳ ಕಾನೂನುಬದ್ಧ ಅಗತ್ಯಗಳು, ಅವಶ್ಯಕತೆಗಳು ಮತ್ತು ಅರ್ಹತೆಗಳನ್ನು ಕೇಂದ್ರವು ಸಕ್ರಿಯವಾಗಿ ನಿರಾಕರಿಸುತ್ತಿದೆ.

ನಿರಂತರವಾಗಿ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆಗಳು ಮತ್ತು ದಾಖಲೆಯ ನಿರುದ್ಯೋಗದ ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸುತ್ತೇವೆ. ಏಕೆಂದರೆ ನೋಟು ಅಮಾನ್ಯೀಕರಣವು MSME ಮತ್ತು ಅಸಂಘಟಿತ ವಲಯಗಳಿಗೆ ಹೇಳಲಾಗದ ನಷ್ಟ ಉಂಟುಮಾಡಿದೆ. ಇದರ ಪರಿಣಾಮವಾಗಿ ನಮ್ಮ ಯುವಕರಲ್ಲಿ ದೊಡ್ಡ ಪ್ರಮಾಣದ ನಿರುದ್ಯೋಗ ಉಂಟಾಗಿದೆ. ರಾಷ್ಟ್ರದ ಸಂಪತ್ತನ್ನು ಕೇವಲ ಪ್ರಧಾನಿಯರವರ  ಸ್ನೇಹಿತರಿಗೆ ಅಜಾಗರೂಕತೆಯಿಂದ ಮಾರಾಟ ಮಾಡುವುದನ್ನು ನಾವು ವಿರೋಧಿಸುತ್ತೇವೆ. ನಾವು ಬಲವಾದ ಮತ್ತು ಸೂಕ್ತ ಕಾರ್ಯತಂತ್ರದ ಮೂಲಕ ಸಾರ್ವಜನಿಕ ವಲಯವನ್ನು ಅಭಿವೃದ್ದಿಪಡಿಸಿ ಪ್ರವರ್ಧಮಾನಕ್ಕೆ ಬರುತ್ತಿರುವ ಖಾಸಗಿ ವಲಯದೊಂದಿಗೆ ನ್ಯಾಯಯುತ ಆರ್ಥಿಕತೆಯನ್ನು ನಿರ್ಮಿಸುತ್ತೇವೆ. ಇದರಲ್ಲಿ ಉದ್ಯಮದ ಮನೋಭಾವವನ್ನು ಬೆಳೆಸಲಾಗುತ್ತದೆ ಮತ್ತು ವಿಸ್ತರಿಸಲು ಪ್ರತಿ ಅವಕಾಶವನ್ನು ನೀಡಲಾಗುತ್ತದೆ. ಕೃಷಿಕ ರೈತರ ಪರವಾಗಿ ಹೋರಾಡುತ್ತೇವೆ.

ಅಲ್ಪಸಂಖ್ಯಾತರ ವಿರುದ್ಧ ನಿರ್ಮಾಣವಾಗುತ್ತಿರುವ ದ್ವೇಷ ಮತ್ತು ಹಿಂಸೆಯನ್ನು ಸೋಲಿಸಲು ನಾವು ಒಟ್ಟಾಗಿದ್ದೇವೆ. ಮಹಿಳೆಯರು, ದಲಿತರು, ಆದಿವಾಸಿಗಳು ಮತ್ತು ಕಾಶ್ಮೀರಿ ಪಂಡಿತರ ಮೇಲೆ ಹೆಚ್ಚುತ್ತಿರುವ ಅಪರಾಧಗಳನ್ನು ನಿಲ್ಲಿಸಿ; ಎಲ್ಲಾ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ನ್ಯಾಯಯುತ ಪಾಲು ನೀಡಲು ಮೊದಲ ಹಂತವಾಗಿ, ಜಾತಿ ಗಣತಿಯನ್ನು ಜಾರಿಗೊಳಿಸಿ.

ನಮ್ಮ ಸಹ ಭಾರತೀಯರನ್ನು ಗುರಿಯಾಗಿಸುವ, ಕಿರುಕುಳ ನೀಡುವ ಮತ್ತು ನಿಗ್ರಹಿಸುವ ಬಿಜೆಪಿಯ ವ್ಯವಸ್ಥಿತ ಪಿತೂರಿಯ ವಿರುದ್ಧ ಹೋರಾಡಲು ನಾವು ನಿರ್ಧರಿಸುತ್ತೇವೆ. ಏಕೆಂದರೆ ಅವರ ದ್ವೇಷ ವಿಷಪೂರಿತ ಪ್ರಚಾರವು ಆಡಳಿತ ಪಕ್ಷ ಮತ್ತು ಅದರ ವಿಭಜಕ ಸಿದ್ಧಾಂತವನ್ನು ವಿರೋಧಿಸುವ ಎಲ್ಲರ ವಿರುದ್ಧ ಕೆಟ್ಟ ಹಿಂಸೆಗೆ ಕಾರಣವಾಗಿದೆ. ಈ ದಾಳಿಗಳು ಸಾಂವಿಧಾನಿಕ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಉಲ್ಲಂಘಿಸುವುದು ಮಾತ್ರವಲ್ಲದೆ ಭಾರತ ಗಣರಾಜ್ಯವನ್ನು ಸ್ಥಾಪಿಸಿದ ಮೂಲಭೂತ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಮತ್ತು ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ನಾಶಪಡಿಸುತ್ತಿವೆ. ಭಾರತೀಯ ಇತಿಹಾಸವನ್ನು ಮರುಶೋಧಿಸುವ ಮತ್ತು ತಿರುಚುವ ಮೂಲಕ ಸಾರ್ವಜನಿಕ ಸಂವಾದವನ್ನು ಹಾಳುಮಾಡಲು ಬಿಜೆಪಿಯ ಪುನರಾವರ್ತಿತ ಪ್ರಯತ್ನಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿವೆ.

ಪರ್ಯಾಯ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಕಾರ್ಯಸೂಚಿಯನ್ನು ರಾಷ್ಟ್ರಕ್ಕೆ ಪ್ರಸ್ತುತಪಡಿಸಲು ನಾವು ಪ್ರತಿಜ್ಞೆ ಮಾಡುತ್ತೇವೆ. ಹೆಚ್ಚು ಸಮಾಲೋಚನೆ, ಪ್ರಜಾಪ್ರಭುತ್ವ ಮತ್ತು ಭಾಗವಹಿಸುವಿಕೆ ಇರುವ ಆಡಳಿತದ ಸಾರ ಮತ್ತು ಶೈಲಿ ಎರಡನ್ನೂ ಪರಿವರ್ತಿಸಲು ನಾವು ಭರವಸೆ ನೀಡುತ್ತೇವೆ.

ಇದನ್ನೂ ಓದಿ; INDIA ಗೆಲ್ಲುತ್ತದೆ, ನಮ್ಮ ದೇಶ ಗೆಲ್ಲುತ್ತದೆ ಮತ್ತು ಬಿಜೆಪಿ ಸೋಲುತ್ತದೆ: ವಿಪಕ್ಷಗಳ ಸಭೆ ಬಳಿಕೆ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...