Homeಮುಖಪುಟನವ ವಿವಾಹಿತೆ ಆತ್ಮಹತ್ಯೆ: 800 ಗ್ರಾಂ. ಚಿನ್ನ, ವೋಲ್ವೋ ಕಾರು ಕೊಟ್ಟರೂ ಗಂಡನ ಮನೆಯವರಿಂದ ವರದಕ್ಷಿಣೆ...

ನವ ವಿವಾಹಿತೆ ಆತ್ಮಹತ್ಯೆ: 800 ಗ್ರಾಂ. ಚಿನ್ನ, ವೋಲ್ವೋ ಕಾರು ಕೊಟ್ಟರೂ ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ

- Advertisement -
- Advertisement -

ತಮಿಳುನಾಡಿನ ತಿರುಪ್ಪೂರಿನಲ್ಲಿ 27 ವರ್ಷದ ನವವಿವಾಹಿತೆ ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಗಾರ್ಮೆಂಟ್ಸ್ ಕಂಪನಿ ನಡೆಸುತ್ತಿರುವ ಅಣ್ಣಾದೊರೈ ಎಂಬವರ ಮಗಳು ರಿಧನ್ಯಾ ಸಾವಿಗೆ ಶರಣಾದ ಯುವತಿ ಎಂದು ತಿಳಿದು ಬಂದಿದೆ. ರಿಧನ್ಯಾ ಅವರ ಮದುವೆ ಈ ವರ್ಷದ ಏಪ್ರಿಲ್‌ನಲ್ಲಿ 28 ವರ್ಷದ ಕವಿನ್ ಕುಮಾರ್ ಎಂಬಾತನ ಜೊತೆ ನಡೆದಿತ್ತು. ವರದಿಗಳ ಪ್ರಕಾರ, ಮದುವೆ ಸಮಯದಲ್ಲಿ 100 ಸವರನ್ (800 ಗ್ರಾಂ.) ಚಿನ್ನಾಭರಣ ಮತ್ತು 70 ಲಕ್ಷ ರೂಪಾಯಿ ಮೌಲ್ಯದ ವೋಲ್ವೋ ಕಾರು ವರದಕ್ಷಿಣೆಯಾಗಿ ನೀಡಲಾಗಿತ್ತು.

ಭಾನುವಾರ, ಮೊಂಡಿಪಾಳ್ಯಂನಲ್ಲಿರುವ ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ರಿಧನ್ಯಾ, ಮಾರ್ಗ ಮಧ್ಯೆ ತನ್ನ ಕಾರನ್ನು ನಿಲ್ಲಿಸಿ ಕೀಟನಾಶಕದ ಮಾತ್ರೆಗಳನ್ನು ಸೇವಿಸಿದ್ದಾರೆ ಎಂದು ವರದಿಯಾಗಿದೆ. ತುಂಬಾ ಹೊತ್ತು ರಸ್ತೆ ಬದಿ ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಪರಿಶೀಲಿಸಿದಾಗ ರಿಧನ್ಯಾ ಶವ ಕಂಡು ಬಂದಿದೆ. ಆಕೆಯ ಬಾಯಲ್ಲಿ ನೊರೆ ಬಂದಿತ್ತು ಎಂದು ವರದಿ ವಿವರಿಸಿದೆ.

ಮೂಲಗಳ ಪ್ರಕಾರ, ರಿಧನ್ಯಾ ಸಾಯುವ ಮೊದಲು ತಮ್ಮ ತಂದೆಗೆ ವಾಟ್ಸಾಪ್‌ನಲ್ಲಿ ಏಳು ಆಡಿಯೋ ಸಂದೇಶಗಳನ್ನು ಕಳುಹಿಸಿದ್ದರು. ಅದರಲ್ಲಿ ಅವರು ತಮ್ಮ ನಿರ್ಧಾರಕ್ಕೆ ಕ್ಷಮೆಯಾಚಿಸಿದ್ದು, ಆಪಾದಿತ ವರದಕ್ಷಿಣೆ ಕಿರುಕುಳ ಸಹಿಸಲಾಗದ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ.

ಒಂದು ಆಡಿಯೋ ಮೆಸೇಜ್‌ನಲ್ಲಿ ಆಕೆ, ಕವಿನ್ ಜೊತೆಗಿನ ತನ್ನ ಮದುವೆಯು ಆತ ಮತ್ತು ಆತನ ಪೋಷಕರು ರೂಪಿಸಿದ ಯೋಜನೆಯ ಭಾಗವಾಗಿದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

“ನಾನು ಪ್ರತಿದಿನ ಅವರ ಮಾನಸಿಕ ಹಿಂಸೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಇದರ ಬಗ್ಗೆ ಯಾರಿಗೆ ಹೇಳಬೇಕೆಂದು ನನಗೆ ತಿಳಿದಿಲ್ಲ. ಹೇಳಿದರೆ ಜೀವನ ಅಂದ್ರೆ ಹೀಗೆ ಸುಧಾರಿಸುಕೊಂಡು ಹೋಗು ಎಂದು ಹೇಳುತ್ತಾರೆ. ನನ್ನ ನೋವನ್ನು ಅರ್ಥಮಾಡಿಕೊಳ್ಳಲು ಯಾರಿಗೂ ಸಾಧ್ಯವಾಗುತ್ತಿಲ್ಲ” ಎಂದು ರಿಧನ್ಯಾ ಮೆಸೇಜ್‌ನಲ್ಲಿ ಅಳಲು ತೋಡಿಕೊಂಡಿದ್ದಾರೆ.

ಪೋಷಕರು ತನ್ನನ್ನು ಅನುಮಾನಿಸಬಹುದು. ಆದರೆ ತಾನು ಸುಳ್ಳು ಹೇಳುತ್ತಿಲ್ಲ. ನನ್ನ ಸುತ್ತಲಿನ ಎಲ್ಲರೂ ನಟಿಸುತ್ತಿದ್ದಾರೆ. ನಾನು ಯಾಕೆ ಮೌನವಾಗಿದ್ದೇನೆ ಅಥವಾ ಹೀಗೆ ಆಗಿದ್ದೇನೆ ಎಂದು ನನಗೆ ಅರ್ಥವಾಗುತ್ತಿಲ್ಲ. ಈ ರೀತಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಮತ್ತೊಂದು ಮಸೇಜ್‌ನಲ್ಲಿ ರಿಧನ್ಯಾ ಹೇಳಿದ್ದಾರೆ.

“ನನ್ನ ಜೀವನದುದ್ದಕ್ಕೂ ನಾನು ನಿಮಗೆ ಹೊರೆಯಾಗಿರಲು ಬಯಸುವುದಿಲ್ಲ. ಈ ಬಾರಿ ನಾನು ಯಾವುದೇ ತಪ್ಪು ಮಾಡಿಲ್ಲ. ನನಗೆ ಈ ಜೀವನ ಇಷ್ಟವಿಲ್ಲ. ಅವರು ನನ್ನ ಮೇಲೆ ಮಾನಸಿಕವಾಗಿ ಹಲ್ಲೆ ಮಾಡುತ್ತಿದ್ದಾರೆ. ಅವನು ನನ್ನನ್ನು ದೈಹಿಕವಾಗಿ ಹಿಂಸಿಸುತ್ತಿದ್ದಾನೆ. ನನಗೆ ಜೀವನ ಮುಂದುವರಿಸಲು ಸಾಧ್ಯವಾಗುತ್ತಿಲ್ಲ” ಎಂದಿದ್ದಾರೆ.

“ನೀನು ಮತ್ತು ಅಮ್ಮ ನನ್ನ ಪ್ರಪಂಚ. ನನ್ನ ಕೊನೆಯ ಉಸಿರಿನವರೆಗೂ ನೀನು ನನ್ನ ಭರವಸೆಯಾಗಿದ್ದೆ. ಆದರೆ, ನಾನು ನಿನ್ನನ್ನು ತುಂಬಾ ನೋಯಿಸಿದೆ. ನೀನು ಇದನ್ನು ಬಹಿರಂಗವಾಗಿ ಹೇಳಲು ಸಾಧ್ಯವಾಗುತ್ತಿಲ್ಲ, ಆದರೂ, ನೀನು ನನ್ನನ್ನು ಹೀಗೆ ನೋಡಲು ಸಾಧ್ಯವಾಗುತ್ತಿಲ್ಲ. ನಿನ್ನ ನೋವನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಕ್ಷಮಿಸಿ ಅಪ್ಪಾ, ಎಲ್ಲವೂ ಮುಗಿದುಹೋಗಿದೆ. ನಾನು ಹೊರಡುತ್ತಿದ್ದೇನೆ” ರಿಧನ್ಯಾ ಆಡಿಯೋ ಮೆಸೇಜ್‌ನಲ್ಲಿ ಹೇಳಿದ್ದಾಗಿ ವರದಿಗಳು ವಿವರಿಸಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಯ ಪತಿ ಕವಿನ್ ಕುಮಾರ್, ಮಾವ ಈಶ್ವರಮೂರ್ತಿ ಮತ್ತು ಅತ್ತೆ ಚಿತ್ರಾದೇವಿಯನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಅತ್ಯಾಚಾರ ಸಂತ್ರಸ್ತೆ ಕುರಿತು ವಿವಾದಾತ್ಮಕ ಹೇಳಿಕೆ: ಶಾಸಕನಿಗೆ ಶೋಕಾಸ್ ನೋಟಿಸ್ ಕೊಟ್ಟ ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...