Homeಮುಖಪುಟಕೋಮು ದ್ವೇಷ ಹರಡುವ ಕಾರ್ಯಕ್ರಮ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌ 18ಗೆ ದಂಡ, ಆಜ್‌ತಕ್‌ಗೆ ಎಚ್ಚರಿಕೆ...

ಕೋಮು ದ್ವೇಷ ಹರಡುವ ಕಾರ್ಯಕ್ರಮ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌ 18ಗೆ ದಂಡ, ಆಜ್‌ತಕ್‌ಗೆ ಎಚ್ಚರಿಕೆ ನೀಡಿದ ಎನ್‌ಬಿಡಿಎಸ್‌ಎ

- Advertisement -
- Advertisement -

ದ್ವೇಷ ಹರಡುವ ಮತ್ತು ಕೋಮು ಸೌಹಾರ್ದತೆಯನ್ನು ಕೆಡಿಸುವ ಸುದ್ದಿ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಮತ್ತು ದಂಡ ಪಾವತಿಸಲು ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಕೆಲ ಟಿವಿ ಚಾನೆಲ್‌ಗಳಿಗೆ ಸೂಚಿಸಿದೆ. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು ಪ್ರಸ್ತುತ ಎನ್‌ಬಿಡಿಎಸ್‌ಎಯ ಅಧ್ಯಕ್ಷರಾಗಿದ್ದಾರೆ.

ಟೈಮ್ಸ್ ನೌ ನವಭಾರತ್‌ಗೆ 1 ಲಕ್ಷ ರೂಪಾಯಿ ಹಾಗೂ ನ್ಯೂಸ್ 18 ಇಂಡಿಯಾಗೆ 50 ಸಾವಿರ ರೂ. ದಂಡ ವಿಧಿಸಲಾಗಿದ್ದು, ಆಜ್ ತಕ್ ಸುದ್ದಿ ವಾಹಿನಿಗೆ ಎನ್‌ಬಿಡಿಎಸ್‌ಎ ಎಚ್ಚರಿಕೆ ನೀಡಿದೆ. ಈ ಮೂರು ಚಾನೆಲ್‌ಗಳು ತಮ್ಮ ಕಾರ್ಯಕ್ರಮಗಳ ಆನ್‌ಲೈನ್ ಆವೃತ್ತಿಗಳನ್ನು ಏಳು ದಿನಗಳಲ್ಲಿ ತೆಗೆದುಹಾಕಲು ಆದೇಶಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ಟಿವಿ ವಾಹಿನಿಗಳು ಕೋಮು ಸೌಹಾರ್ದತೆ ಕೆಡಿಸುವ ಮತ್ತು ಮತೀಯವಾದವನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿವೆ ಎಂದು ಸಾಮಾಜಿಕ ಕಾರ್ಯಕರ್ತ ಇಂದ್ರಜೀತ್ ಘೋರ್ಪಡೆ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಎನ್‌ಬಿಡಿಎಸ್‌ಎ ಕ್ರಮ ಕೈಗೊಂಡಿದೆ.

ಟೈಮ್ಸ್ ನೌ ನವಭಾರತ್, ಮೆಗಾ ಟೈಮ್ಸ್ ಗ್ರೂಪ್‌ನ ಭಾಗವಾಗಿದ್ದು, ಇದರ ನಿರೂಪಕ ಹಿಮಾಂಶು ದೀಕ್ಷಿತ್ ಅವರು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮು ದ್ವೇಷ ಹರಡಿದ್ದಾರೆ. ಅಂತರ್-ಧರ್ಮೀಯ ಸಂಬಂಧಗಳನ್ನು “ಲವ್ ಜಿಹಾದ್” ಎಂದು ಕರೆದಿದ್ದಾರೆ ಎಂಬ ಆರೋಪದ ಮೇಲೆ ದಂಡ ವಿಧಿಸಲಾಗಿದೆ.

ನ್ಯೂಸ್ 18 ಇಂಡಿಯಾ ಉದ್ಯಮಿ ಮುಖೇಶ್ ಅಂಬಾನಿಯವರ ರಿಲಾಯನ್ಸ್ ಗ್ರೂಪ್‌ನ ಭಾಗವಾಗಿದೆ. ಈ ಚಾನೆಲ್‌ನ ಮೂರು ಶೋಗಳಿಗೆ ದಂಡ ವಿಧಿಸಲಾಗಿದೆ. ಈ ಪೈಕಿ ಎರಡು ಶೋಗಳನ್ನು ಅಮನ್ ಚೋಪ್ರಾ ಮತ್ತು ಒಂದನ್ನು ಅಮಿಶ್ ದೇವಗನ್ ನಿರೂಪಿಸಿದ್ದಾರೆ. ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು “ಲವ್ ಜಿಹಾದ್” ಎಂದು ಆರೋಪಿಸಿ ಒಂದು ಸಮುದಾಯದ ವಿರುದ್ಧ ಕೋಮು ದ್ವೇಷ ಹರಡಿದ್ದಕ್ಕೆ ಈ ಚಾನೆಲ್‌ಗೆ ದಂಡ ವಿಧಿಸಲಾಗಿದೆ.

ಇಂಡಿಯಾ ಟುಡೇ ಗ್ರೂಪ್‌ನ ಆಜ್ ತಕ್ ಚಾನೆಲ್‌ನಲ್ಲಿ ಸುಧೀರ್ ಚೌಧರಿ ನಿರೂಪಣೆ ಮಾಡಿರುವ ಕಾರ್ಯಕ್ರಮವೊಂದಕ್ಕೆ ಎಚ್ಚರಿಕೆ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಮನವಮಿ ಸಮಯದಲ್ಲಿ ನಡೆದ ಹಿಂಸಾಚಾರದ ಸುದ್ದಿ ಹೇಳುವಾಗ ಒಂದು ನಿರ್ದಿಷ್ಟ ಸಮುದಾಯದ ಗುರಿಯಾಗಿಸಲಾಗಿತ್ತು.

ಕಾರ್ಯಕ್ರಮ ಪ್ರಸಾರ ಮಾಡುವಾಗ ನಿಷ್ಪಕ್ಷಪಾತತನ, ತಟಸ್ಥ ನಿಲುವು ಹಾಗು ನಿಖರತೆಯನ್ನು ಕಾಪಾಡಬೇಕೆಂಬ ನೀತಿ ಸಂಹಿತ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದರು.

‘ಲವ್‌ ಜಿಹಾದ್‌’ ಎಂಬ ಪದವನ್ನು ಗಂಭೀರ ಅವಲೋಕನದ ನಂತರ ಬಳಸಬೇಕು ಇಲ್ಲದೇ ಹೋದಲ್ಲಿ ಅದು ದೇಶದ ಜಾತ್ಯತೀತ ಪರಿಕಲ್ಪನೆಗೆ ಮಾರಕವಾಗಬಹುದು ಎಂದು ಎನ್‌ಬಿಡಿಎಸ್‌ಎ ಹೇಳಿದೆ.

ಇದನ್ನೂ ಓದಿ: ಮಣಿಪುರ ಗಲಭೆ: ಮಿಲಿಟೆಂಟ್ ಗುಂಪುಗಳೊಂದಿಗಿನ ಒಪ್ಪಂದ ರದ್ದುಗೊಳಿಸುವ ನಿರ್ಣಯ ವಿರೋಧಿಸಿದ ಕುಕಿ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...