Homeಮುಖಪುಟಕೋಮು ದ್ವೇಷ ಹರಡುವ ಕಾರ್ಯಕ್ರಮ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌ 18ಗೆ ದಂಡ, ಆಜ್‌ತಕ್‌ಗೆ ಎಚ್ಚರಿಕೆ...

ಕೋಮು ದ್ವೇಷ ಹರಡುವ ಕಾರ್ಯಕ್ರಮ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌ 18ಗೆ ದಂಡ, ಆಜ್‌ತಕ್‌ಗೆ ಎಚ್ಚರಿಕೆ ನೀಡಿದ ಎನ್‌ಬಿಡಿಎಸ್‌ಎ

- Advertisement -
- Advertisement -

ದ್ವೇಷ ಹರಡುವ ಮತ್ತು ಕೋಮು ಸೌಹಾರ್ದತೆಯನ್ನು ಕೆಡಿಸುವ ಸುದ್ದಿ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಮತ್ತು ದಂಡ ಪಾವತಿಸಲು ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಕೆಲ ಟಿವಿ ಚಾನೆಲ್‌ಗಳಿಗೆ ಸೂಚಿಸಿದೆ. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು ಪ್ರಸ್ತುತ ಎನ್‌ಬಿಡಿಎಸ್‌ಎಯ ಅಧ್ಯಕ್ಷರಾಗಿದ್ದಾರೆ.

ಟೈಮ್ಸ್ ನೌ ನವಭಾರತ್‌ಗೆ 1 ಲಕ್ಷ ರೂಪಾಯಿ ಹಾಗೂ ನ್ಯೂಸ್ 18 ಇಂಡಿಯಾಗೆ 50 ಸಾವಿರ ರೂ. ದಂಡ ವಿಧಿಸಲಾಗಿದ್ದು, ಆಜ್ ತಕ್ ಸುದ್ದಿ ವಾಹಿನಿಗೆ ಎನ್‌ಬಿಡಿಎಸ್‌ಎ ಎಚ್ಚರಿಕೆ ನೀಡಿದೆ. ಈ ಮೂರು ಚಾನೆಲ್‌ಗಳು ತಮ್ಮ ಕಾರ್ಯಕ್ರಮಗಳ ಆನ್‌ಲೈನ್ ಆವೃತ್ತಿಗಳನ್ನು ಏಳು ದಿನಗಳಲ್ಲಿ ತೆಗೆದುಹಾಕಲು ಆದೇಶಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ಟಿವಿ ವಾಹಿನಿಗಳು ಕೋಮು ಸೌಹಾರ್ದತೆ ಕೆಡಿಸುವ ಮತ್ತು ಮತೀಯವಾದವನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿವೆ ಎಂದು ಸಾಮಾಜಿಕ ಕಾರ್ಯಕರ್ತ ಇಂದ್ರಜೀತ್ ಘೋರ್ಪಡೆ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಎನ್‌ಬಿಡಿಎಸ್‌ಎ ಕ್ರಮ ಕೈಗೊಂಡಿದೆ.

ಟೈಮ್ಸ್ ನೌ ನವಭಾರತ್, ಮೆಗಾ ಟೈಮ್ಸ್ ಗ್ರೂಪ್‌ನ ಭಾಗವಾಗಿದ್ದು, ಇದರ ನಿರೂಪಕ ಹಿಮಾಂಶು ದೀಕ್ಷಿತ್ ಅವರು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮು ದ್ವೇಷ ಹರಡಿದ್ದಾರೆ. ಅಂತರ್-ಧರ್ಮೀಯ ಸಂಬಂಧಗಳನ್ನು “ಲವ್ ಜಿಹಾದ್” ಎಂದು ಕರೆದಿದ್ದಾರೆ ಎಂಬ ಆರೋಪದ ಮೇಲೆ ದಂಡ ವಿಧಿಸಲಾಗಿದೆ.

ನ್ಯೂಸ್ 18 ಇಂಡಿಯಾ ಉದ್ಯಮಿ ಮುಖೇಶ್ ಅಂಬಾನಿಯವರ ರಿಲಾಯನ್ಸ್ ಗ್ರೂಪ್‌ನ ಭಾಗವಾಗಿದೆ. ಈ ಚಾನೆಲ್‌ನ ಮೂರು ಶೋಗಳಿಗೆ ದಂಡ ವಿಧಿಸಲಾಗಿದೆ. ಈ ಪೈಕಿ ಎರಡು ಶೋಗಳನ್ನು ಅಮನ್ ಚೋಪ್ರಾ ಮತ್ತು ಒಂದನ್ನು ಅಮಿಶ್ ದೇವಗನ್ ನಿರೂಪಿಸಿದ್ದಾರೆ. ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು “ಲವ್ ಜಿಹಾದ್” ಎಂದು ಆರೋಪಿಸಿ ಒಂದು ಸಮುದಾಯದ ವಿರುದ್ಧ ಕೋಮು ದ್ವೇಷ ಹರಡಿದ್ದಕ್ಕೆ ಈ ಚಾನೆಲ್‌ಗೆ ದಂಡ ವಿಧಿಸಲಾಗಿದೆ.

ಇಂಡಿಯಾ ಟುಡೇ ಗ್ರೂಪ್‌ನ ಆಜ್ ತಕ್ ಚಾನೆಲ್‌ನಲ್ಲಿ ಸುಧೀರ್ ಚೌಧರಿ ನಿರೂಪಣೆ ಮಾಡಿರುವ ಕಾರ್ಯಕ್ರಮವೊಂದಕ್ಕೆ ಎಚ್ಚರಿಕೆ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಮನವಮಿ ಸಮಯದಲ್ಲಿ ನಡೆದ ಹಿಂಸಾಚಾರದ ಸುದ್ದಿ ಹೇಳುವಾಗ ಒಂದು ನಿರ್ದಿಷ್ಟ ಸಮುದಾಯದ ಗುರಿಯಾಗಿಸಲಾಗಿತ್ತು.

ಕಾರ್ಯಕ್ರಮ ಪ್ರಸಾರ ಮಾಡುವಾಗ ನಿಷ್ಪಕ್ಷಪಾತತನ, ತಟಸ್ಥ ನಿಲುವು ಹಾಗು ನಿಖರತೆಯನ್ನು ಕಾಪಾಡಬೇಕೆಂಬ ನೀತಿ ಸಂಹಿತ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದರು.

‘ಲವ್‌ ಜಿಹಾದ್‌’ ಎಂಬ ಪದವನ್ನು ಗಂಭೀರ ಅವಲೋಕನದ ನಂತರ ಬಳಸಬೇಕು ಇಲ್ಲದೇ ಹೋದಲ್ಲಿ ಅದು ದೇಶದ ಜಾತ್ಯತೀತ ಪರಿಕಲ್ಪನೆಗೆ ಮಾರಕವಾಗಬಹುದು ಎಂದು ಎನ್‌ಬಿಡಿಎಸ್‌ಎ ಹೇಳಿದೆ.

ಇದನ್ನೂ ಓದಿ: ಮಣಿಪುರ ಗಲಭೆ: ಮಿಲಿಟೆಂಟ್ ಗುಂಪುಗಳೊಂದಿಗಿನ ಒಪ್ಪಂದ ರದ್ದುಗೊಳಿಸುವ ನಿರ್ಣಯ ವಿರೋಧಿಸಿದ ಕುಕಿ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...