Homeಮುಖಪುಟನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

ನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

ನ್ಯೂಸ್ ಲಾಂಡ್ರಿಯ ಮಹಿಳಾ ಪತ್ರಕರ್ತರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಪಟ್ಟ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ರಾಜಕೀಯ ವ್ಯಾಖ್ಯಾನಕಾರ ಮತ್ತು ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ ದೆಹಲಿ ಹೈಕೋರ್ಟ್ ಆದೇಶದಂತೆ ತೆಗೆದುಹಾಕಿದ್ದಾರೆ.

ಆದರೆ, ಮೊಕದ್ದಮೆಯಲ್ಲಿ ಮಹಿಳಾ ಪತ್ರಕರ್ತರು ಮಾನನಷ್ಟಕ್ಕೆ ಪರಿಹಾರ ಕೋರಿದ್ದಾರೆ. ಈ ಹಿನ್ನೆಲೆ, ಪ್ರಕರಣದ ವಿಚಾರಣೆ ಮುಂದುವರಿದಿದೆ. ದೆಹಲಿ ಹೈಕೋರ್ಟ್ ಸೋಮವಾರ (ಮೇ.26) ಅಭಿಜಿತ್ ಅಯ್ಯರ್‌ಗೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿ ಪರ ಮಾಧ್ಯಮ ಒಪಿಇಂಡಿಯಾ ಅಂಕಣಕಾರ ಅಭಿಜಿತ್ ಅಯ್ಯರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು 2 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮಹಿಳಾ ಪತ್ರಕರ್ತರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ನ್ಯೂಸ್‌ ಲಾಂಡ್ರಿಯ 9 ಮಹಿಳಾ ಪತ್ರಕರ್ತರು ದಾಖಲಿಸಿರುವ ಈ ಪ್ರಕರಣದಲ್ಲಿ ನ್ಯೂಸ್ ಲಾಂಡ್ರಿ ಕೂಡ ವಾದಿಯಾಗಿದೆ.

ಸೋಮವಾರ ವಿಚಾರಣೆ ವೇಳೆ ಅಭಿಜಿತ್ ಅಯ್ಯರ್ ಪರ ಹಿರಿಯ ವಕೀಲ ಪರ್ಸಿವಲ್ ಬಿಲ್ಲಿಮೋರಿಯಾ ಅವರು, ತನ್ನ ಕಕ್ಷಿದಾರರು ವಿವಾದಾತ್ಮಕ ಪೋಸ್ಟ್‌ಗಳನ್ನು ತೆಗೆದು ಹಾಕಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ನ್ಯೂಸ್‌ ಲಾಂಡ್ರಿ ಪತ್ರಕರ್ತರ ಪರ ವಕೀಲ ಬಾನಿ ದೀಕ್ಷಿತ್ ಅವರು, ಅಭಿಜಿತ್ ಅಯ್ಯರ್‌ಗೆ ಈ ಪ್ರಕರಣ ಸಂಬಂಧ ಯಾವುದೇ ಪಶ್ಚಾತ್ತಾಪವಿಲ್ಲ. ಅವರು ಈಗಲೂ ಸಾಮಾಜಿ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ ಮತ್ತು ಕಾವ್ಯಾತ್ಮಕವಾಗಿ ಬರೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಮಧ್ಯೆ ಅಭಿಜಿತ್ ಪರ ವಕೀಲ, ಮಾನನಷ್ಟ ಪ್ರಕರಣವನ್ನು ವೆಚ್ಚದೊಂದಿಗೆ ವಜಾಗೊಳಿಸುವಂತೆ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರಿಗೆ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ತನ್ನ ಕೈಯಲ್ಲಿರುವ ವಿಷಯವು ಅಭಿಜಿತ್ ಅಯ್ಯರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಮಾತ್ರ ಸೀಮಿತವಾಗಿದೆ. ನಿಮಗೆ ಇತರ ಯಾವುದೇ ದೂರು ಇದ್ದರೆ ಅದನ್ನು ಬೇರೆಲ್ಲಿಯಾದರೂ ಹೇಳಿಕೊಳ್ಳಿ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಭಿಜಿತ್ ಪರ ವಕೀಲ ಬಿಲ್ಲಿಮೋರಿಯಾ, ನ್ಯೂಸ್ ಲಾಂಡ್ರಿ ಅತ್ಯಂತ ಕಪಟ ಸುದ್ದಿವಾಹಿನಿಗಳಲ್ಲೊಂದಾಗಿದೆ. ಅದು ಇಟಲಿಯ ಪ್ರಧಾನಿಯ ಜೊತೆಗೆ ಪ್ರಧಾನಿ ಮೋದಿಯವರ ಸಂಬಂಧದ ಬಗ್ಗೆ ಟೀಕಿಸಿತ್ತು ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ಲಕ್ಷ್ಮಣ ರೇಖೆ ಎಲ್ಲಿದೆ ಎನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಒಂದು ಪೋಸ್ಟ್ ಮನಹಾನಿಕರವಾಗಿದ್ದಾಗ ಅವರು ನ್ಯಾಯಾಲಯದ ಮೆಟ್ಟಿಲೇರುವ ಹಕ್ಕು ಹೊಂದಿರುತ್ತಾರೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, ಮೊಕದ್ದಮೆಯಲ್ಲಿ ಉಲ್ಲೇಖಿಸಿರುವಂತೆ ಪರಿಹಾರ ಪಡೆಯುವ ವಿಷಯವನ್ನು ಮುಂದುವರಿಸಲು ಬಯಸುವುದಾಗಿ ಮಹಿಳಾ ಪತ್ರಕರ್ತರ ಪರ ವಕೀಲರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಅಭಿಜಿತ್ ಅಯ್ಯರ್ ಪರ ವಕೀಲರನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ ಕೌರವ್, “ಅವರು (ಅರ್ಜಿದಾರ) ಖ್ಯಾತಿ ನಷ್ಟವಾಗಿದೆ ಎಂದು ಹೇಳುತ್ತಿದ್ದಾರೆ. ಆದ್ದರಿಂದ ನೀವು ನಿಮ್ಮ ಲಿಖಿತ ಹೇಳಿಕೆಗಳನ್ನು ಸಲ್ಲಿಸಿ” ಎಂದು ಮೌಖಿಕವಾಗಿ ಸೂಚನೆ ನೀಡಿದ್ದಾರೆ. ನಂತರ ನ್ಯಾಯಾಲಯವು ಎರಡೂ ಪಕ್ಷಗಳ ವಾದಗಳನ್ನು ಪೂರ್ಣಗೊಳಿಸಲು ಜಂಟಿ ರಿಜಿಸ್ಟ್ರಾರ್ ಮುಂದೆ ವಿಷಯವನ್ನು ಇಡುವಂತೆ ನಿರ್ದೇಶಿಸಿದೆ.

ಏನಿದು ಪ್ರಕರಣ?

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ಅಭಿಜಿತ್ ಅಯ್ಯರ್ ಮಿತ್ರ ವಿರುದ್ದ ಪತ್ರಕರ್ತೆಯರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ತೀಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದವರು. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...