Homeಮುಖಪುಟನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

ನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

ನ್ಯೂಸ್ ಲಾಂಡ್ರಿಯ ಮಹಿಳಾ ಪತ್ರಕರ್ತರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಪಟ್ಟ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ರಾಜಕೀಯ ವ್ಯಾಖ್ಯಾನಕಾರ ಮತ್ತು ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ ದೆಹಲಿ ಹೈಕೋರ್ಟ್ ಆದೇಶದಂತೆ ತೆಗೆದುಹಾಕಿದ್ದಾರೆ.

ಆದರೆ, ಮೊಕದ್ದಮೆಯಲ್ಲಿ ಮಹಿಳಾ ಪತ್ರಕರ್ತರು ಮಾನನಷ್ಟಕ್ಕೆ ಪರಿಹಾರ ಕೋರಿದ್ದಾರೆ. ಈ ಹಿನ್ನೆಲೆ, ಪ್ರಕರಣದ ವಿಚಾರಣೆ ಮುಂದುವರಿದಿದೆ. ದೆಹಲಿ ಹೈಕೋರ್ಟ್ ಸೋಮವಾರ (ಮೇ.26) ಅಭಿಜಿತ್ ಅಯ್ಯರ್‌ಗೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿ ಪರ ಮಾಧ್ಯಮ ಒಪಿಇಂಡಿಯಾ ಅಂಕಣಕಾರ ಅಭಿಜಿತ್ ಅಯ್ಯರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು 2 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮಹಿಳಾ ಪತ್ರಕರ್ತರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ನ್ಯೂಸ್‌ ಲಾಂಡ್ರಿಯ 9 ಮಹಿಳಾ ಪತ್ರಕರ್ತರು ದಾಖಲಿಸಿರುವ ಈ ಪ್ರಕರಣದಲ್ಲಿ ನ್ಯೂಸ್ ಲಾಂಡ್ರಿ ಕೂಡ ವಾದಿಯಾಗಿದೆ.

ಸೋಮವಾರ ವಿಚಾರಣೆ ವೇಳೆ ಅಭಿಜಿತ್ ಅಯ್ಯರ್ ಪರ ಹಿರಿಯ ವಕೀಲ ಪರ್ಸಿವಲ್ ಬಿಲ್ಲಿಮೋರಿಯಾ ಅವರು, ತನ್ನ ಕಕ್ಷಿದಾರರು ವಿವಾದಾತ್ಮಕ ಪೋಸ್ಟ್‌ಗಳನ್ನು ತೆಗೆದು ಹಾಕಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ನ್ಯೂಸ್‌ ಲಾಂಡ್ರಿ ಪತ್ರಕರ್ತರ ಪರ ವಕೀಲ ಬಾನಿ ದೀಕ್ಷಿತ್ ಅವರು, ಅಭಿಜಿತ್ ಅಯ್ಯರ್‌ಗೆ ಈ ಪ್ರಕರಣ ಸಂಬಂಧ ಯಾವುದೇ ಪಶ್ಚಾತ್ತಾಪವಿಲ್ಲ. ಅವರು ಈಗಲೂ ಸಾಮಾಜಿ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ ಮತ್ತು ಕಾವ್ಯಾತ್ಮಕವಾಗಿ ಬರೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಮಧ್ಯೆ ಅಭಿಜಿತ್ ಪರ ವಕೀಲ, ಮಾನನಷ್ಟ ಪ್ರಕರಣವನ್ನು ವೆಚ್ಚದೊಂದಿಗೆ ವಜಾಗೊಳಿಸುವಂತೆ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರಿಗೆ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ತನ್ನ ಕೈಯಲ್ಲಿರುವ ವಿಷಯವು ಅಭಿಜಿತ್ ಅಯ್ಯರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಮಾತ್ರ ಸೀಮಿತವಾಗಿದೆ. ನಿಮಗೆ ಇತರ ಯಾವುದೇ ದೂರು ಇದ್ದರೆ ಅದನ್ನು ಬೇರೆಲ್ಲಿಯಾದರೂ ಹೇಳಿಕೊಳ್ಳಿ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಭಿಜಿತ್ ಪರ ವಕೀಲ ಬಿಲ್ಲಿಮೋರಿಯಾ, ನ್ಯೂಸ್ ಲಾಂಡ್ರಿ ಅತ್ಯಂತ ಕಪಟ ಸುದ್ದಿವಾಹಿನಿಗಳಲ್ಲೊಂದಾಗಿದೆ. ಅದು ಇಟಲಿಯ ಪ್ರಧಾನಿಯ ಜೊತೆಗೆ ಪ್ರಧಾನಿ ಮೋದಿಯವರ ಸಂಬಂಧದ ಬಗ್ಗೆ ಟೀಕಿಸಿತ್ತು ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ಲಕ್ಷ್ಮಣ ರೇಖೆ ಎಲ್ಲಿದೆ ಎನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಒಂದು ಪೋಸ್ಟ್ ಮನಹಾನಿಕರವಾಗಿದ್ದಾಗ ಅವರು ನ್ಯಾಯಾಲಯದ ಮೆಟ್ಟಿಲೇರುವ ಹಕ್ಕು ಹೊಂದಿರುತ್ತಾರೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, ಮೊಕದ್ದಮೆಯಲ್ಲಿ ಉಲ್ಲೇಖಿಸಿರುವಂತೆ ಪರಿಹಾರ ಪಡೆಯುವ ವಿಷಯವನ್ನು ಮುಂದುವರಿಸಲು ಬಯಸುವುದಾಗಿ ಮಹಿಳಾ ಪತ್ರಕರ್ತರ ಪರ ವಕೀಲರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಅಭಿಜಿತ್ ಅಯ್ಯರ್ ಪರ ವಕೀಲರನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ ಕೌರವ್, “ಅವರು (ಅರ್ಜಿದಾರ) ಖ್ಯಾತಿ ನಷ್ಟವಾಗಿದೆ ಎಂದು ಹೇಳುತ್ತಿದ್ದಾರೆ. ಆದ್ದರಿಂದ ನೀವು ನಿಮ್ಮ ಲಿಖಿತ ಹೇಳಿಕೆಗಳನ್ನು ಸಲ್ಲಿಸಿ” ಎಂದು ಮೌಖಿಕವಾಗಿ ಸೂಚನೆ ನೀಡಿದ್ದಾರೆ. ನಂತರ ನ್ಯಾಯಾಲಯವು ಎರಡೂ ಪಕ್ಷಗಳ ವಾದಗಳನ್ನು ಪೂರ್ಣಗೊಳಿಸಲು ಜಂಟಿ ರಿಜಿಸ್ಟ್ರಾರ್ ಮುಂದೆ ವಿಷಯವನ್ನು ಇಡುವಂತೆ ನಿರ್ದೇಶಿಸಿದೆ.

ಏನಿದು ಪ್ರಕರಣ?

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ಅಭಿಜಿತ್ ಅಯ್ಯರ್ ಮಿತ್ರ ವಿರುದ್ದ ಪತ್ರಕರ್ತೆಯರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ತೀಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದವರು. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...