Homeಮುಖಪುಟನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

ನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

ನ್ಯೂಸ್ ಲಾಂಡ್ರಿಯ ಮಹಿಳಾ ಪತ್ರಕರ್ತರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಪಟ್ಟ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ರಾಜಕೀಯ ವ್ಯಾಖ್ಯಾನಕಾರ ಮತ್ತು ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ ದೆಹಲಿ ಹೈಕೋರ್ಟ್ ಆದೇಶದಂತೆ ತೆಗೆದುಹಾಕಿದ್ದಾರೆ.

ಆದರೆ, ಮೊಕದ್ದಮೆಯಲ್ಲಿ ಮಹಿಳಾ ಪತ್ರಕರ್ತರು ಮಾನನಷ್ಟಕ್ಕೆ ಪರಿಹಾರ ಕೋರಿದ್ದಾರೆ. ಈ ಹಿನ್ನೆಲೆ, ಪ್ರಕರಣದ ವಿಚಾರಣೆ ಮುಂದುವರಿದಿದೆ. ದೆಹಲಿ ಹೈಕೋರ್ಟ್ ಸೋಮವಾರ (ಮೇ.26) ಅಭಿಜಿತ್ ಅಯ್ಯರ್‌ಗೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿ ಪರ ಮಾಧ್ಯಮ ಒಪಿಇಂಡಿಯಾ ಅಂಕಣಕಾರ ಅಭಿಜಿತ್ ಅಯ್ಯರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು 2 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮಹಿಳಾ ಪತ್ರಕರ್ತರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ನ್ಯೂಸ್‌ ಲಾಂಡ್ರಿಯ 9 ಮಹಿಳಾ ಪತ್ರಕರ್ತರು ದಾಖಲಿಸಿರುವ ಈ ಪ್ರಕರಣದಲ್ಲಿ ನ್ಯೂಸ್ ಲಾಂಡ್ರಿ ಕೂಡ ವಾದಿಯಾಗಿದೆ.

ಸೋಮವಾರ ವಿಚಾರಣೆ ವೇಳೆ ಅಭಿಜಿತ್ ಅಯ್ಯರ್ ಪರ ಹಿರಿಯ ವಕೀಲ ಪರ್ಸಿವಲ್ ಬಿಲ್ಲಿಮೋರಿಯಾ ಅವರು, ತನ್ನ ಕಕ್ಷಿದಾರರು ವಿವಾದಾತ್ಮಕ ಪೋಸ್ಟ್‌ಗಳನ್ನು ತೆಗೆದು ಹಾಕಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ನ್ಯೂಸ್‌ ಲಾಂಡ್ರಿ ಪತ್ರಕರ್ತರ ಪರ ವಕೀಲ ಬಾನಿ ದೀಕ್ಷಿತ್ ಅವರು, ಅಭಿಜಿತ್ ಅಯ್ಯರ್‌ಗೆ ಈ ಪ್ರಕರಣ ಸಂಬಂಧ ಯಾವುದೇ ಪಶ್ಚಾತ್ತಾಪವಿಲ್ಲ. ಅವರು ಈಗಲೂ ಸಾಮಾಜಿ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ ಮತ್ತು ಕಾವ್ಯಾತ್ಮಕವಾಗಿ ಬರೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಮಧ್ಯೆ ಅಭಿಜಿತ್ ಪರ ವಕೀಲ, ಮಾನನಷ್ಟ ಪ್ರಕರಣವನ್ನು ವೆಚ್ಚದೊಂದಿಗೆ ವಜಾಗೊಳಿಸುವಂತೆ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರಿಗೆ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ತನ್ನ ಕೈಯಲ್ಲಿರುವ ವಿಷಯವು ಅಭಿಜಿತ್ ಅಯ್ಯರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಮಾತ್ರ ಸೀಮಿತವಾಗಿದೆ. ನಿಮಗೆ ಇತರ ಯಾವುದೇ ದೂರು ಇದ್ದರೆ ಅದನ್ನು ಬೇರೆಲ್ಲಿಯಾದರೂ ಹೇಳಿಕೊಳ್ಳಿ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಭಿಜಿತ್ ಪರ ವಕೀಲ ಬಿಲ್ಲಿಮೋರಿಯಾ, ನ್ಯೂಸ್ ಲಾಂಡ್ರಿ ಅತ್ಯಂತ ಕಪಟ ಸುದ್ದಿವಾಹಿನಿಗಳಲ್ಲೊಂದಾಗಿದೆ. ಅದು ಇಟಲಿಯ ಪ್ರಧಾನಿಯ ಜೊತೆಗೆ ಪ್ರಧಾನಿ ಮೋದಿಯವರ ಸಂಬಂಧದ ಬಗ್ಗೆ ಟೀಕಿಸಿತ್ತು ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ಲಕ್ಷ್ಮಣ ರೇಖೆ ಎಲ್ಲಿದೆ ಎನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಒಂದು ಪೋಸ್ಟ್ ಮನಹಾನಿಕರವಾಗಿದ್ದಾಗ ಅವರು ನ್ಯಾಯಾಲಯದ ಮೆಟ್ಟಿಲೇರುವ ಹಕ್ಕು ಹೊಂದಿರುತ್ತಾರೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, ಮೊಕದ್ದಮೆಯಲ್ಲಿ ಉಲ್ಲೇಖಿಸಿರುವಂತೆ ಪರಿಹಾರ ಪಡೆಯುವ ವಿಷಯವನ್ನು ಮುಂದುವರಿಸಲು ಬಯಸುವುದಾಗಿ ಮಹಿಳಾ ಪತ್ರಕರ್ತರ ಪರ ವಕೀಲರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಅಭಿಜಿತ್ ಅಯ್ಯರ್ ಪರ ವಕೀಲರನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ ಕೌರವ್, “ಅವರು (ಅರ್ಜಿದಾರ) ಖ್ಯಾತಿ ನಷ್ಟವಾಗಿದೆ ಎಂದು ಹೇಳುತ್ತಿದ್ದಾರೆ. ಆದ್ದರಿಂದ ನೀವು ನಿಮ್ಮ ಲಿಖಿತ ಹೇಳಿಕೆಗಳನ್ನು ಸಲ್ಲಿಸಿ” ಎಂದು ಮೌಖಿಕವಾಗಿ ಸೂಚನೆ ನೀಡಿದ್ದಾರೆ. ನಂತರ ನ್ಯಾಯಾಲಯವು ಎರಡೂ ಪಕ್ಷಗಳ ವಾದಗಳನ್ನು ಪೂರ್ಣಗೊಳಿಸಲು ಜಂಟಿ ರಿಜಿಸ್ಟ್ರಾರ್ ಮುಂದೆ ವಿಷಯವನ್ನು ಇಡುವಂತೆ ನಿರ್ದೇಶಿಸಿದೆ.

ಏನಿದು ಪ್ರಕರಣ?

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ಅಭಿಜಿತ್ ಅಯ್ಯರ್ ಮಿತ್ರ ವಿರುದ್ದ ಪತ್ರಕರ್ತೆಯರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ತೀಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದವರು. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...