Homeಮುಖಪುಟನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

ನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

ನ್ಯೂಸ್ ಲಾಂಡ್ರಿಯ ಮಹಿಳಾ ಪತ್ರಕರ್ತರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಪಟ್ಟ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ರಾಜಕೀಯ ವ್ಯಾಖ್ಯಾನಕಾರ ಮತ್ತು ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ ದೆಹಲಿ ಹೈಕೋರ್ಟ್ ಆದೇಶದಂತೆ ತೆಗೆದುಹಾಕಿದ್ದಾರೆ.

ಆದರೆ, ಮೊಕದ್ದಮೆಯಲ್ಲಿ ಮಹಿಳಾ ಪತ್ರಕರ್ತರು ಮಾನನಷ್ಟಕ್ಕೆ ಪರಿಹಾರ ಕೋರಿದ್ದಾರೆ. ಈ ಹಿನ್ನೆಲೆ, ಪ್ರಕರಣದ ವಿಚಾರಣೆ ಮುಂದುವರಿದಿದೆ. ದೆಹಲಿ ಹೈಕೋರ್ಟ್ ಸೋಮವಾರ (ಮೇ.26) ಅಭಿಜಿತ್ ಅಯ್ಯರ್‌ಗೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿ ಪರ ಮಾಧ್ಯಮ ಒಪಿಇಂಡಿಯಾ ಅಂಕಣಕಾರ ಅಭಿಜಿತ್ ಅಯ್ಯರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು 2 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮಹಿಳಾ ಪತ್ರಕರ್ತರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ನ್ಯೂಸ್‌ ಲಾಂಡ್ರಿಯ 9 ಮಹಿಳಾ ಪತ್ರಕರ್ತರು ದಾಖಲಿಸಿರುವ ಈ ಪ್ರಕರಣದಲ್ಲಿ ನ್ಯೂಸ್ ಲಾಂಡ್ರಿ ಕೂಡ ವಾದಿಯಾಗಿದೆ.

ಸೋಮವಾರ ವಿಚಾರಣೆ ವೇಳೆ ಅಭಿಜಿತ್ ಅಯ್ಯರ್ ಪರ ಹಿರಿಯ ವಕೀಲ ಪರ್ಸಿವಲ್ ಬಿಲ್ಲಿಮೋರಿಯಾ ಅವರು, ತನ್ನ ಕಕ್ಷಿದಾರರು ವಿವಾದಾತ್ಮಕ ಪೋಸ್ಟ್‌ಗಳನ್ನು ತೆಗೆದು ಹಾಕಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ನ್ಯೂಸ್‌ ಲಾಂಡ್ರಿ ಪತ್ರಕರ್ತರ ಪರ ವಕೀಲ ಬಾನಿ ದೀಕ್ಷಿತ್ ಅವರು, ಅಭಿಜಿತ್ ಅಯ್ಯರ್‌ಗೆ ಈ ಪ್ರಕರಣ ಸಂಬಂಧ ಯಾವುದೇ ಪಶ್ಚಾತ್ತಾಪವಿಲ್ಲ. ಅವರು ಈಗಲೂ ಸಾಮಾಜಿ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ ಮತ್ತು ಕಾವ್ಯಾತ್ಮಕವಾಗಿ ಬರೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಮಧ್ಯೆ ಅಭಿಜಿತ್ ಪರ ವಕೀಲ, ಮಾನನಷ್ಟ ಪ್ರಕರಣವನ್ನು ವೆಚ್ಚದೊಂದಿಗೆ ವಜಾಗೊಳಿಸುವಂತೆ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರಿಗೆ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ತನ್ನ ಕೈಯಲ್ಲಿರುವ ವಿಷಯವು ಅಭಿಜಿತ್ ಅಯ್ಯರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಮಾತ್ರ ಸೀಮಿತವಾಗಿದೆ. ನಿಮಗೆ ಇತರ ಯಾವುದೇ ದೂರು ಇದ್ದರೆ ಅದನ್ನು ಬೇರೆಲ್ಲಿಯಾದರೂ ಹೇಳಿಕೊಳ್ಳಿ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಭಿಜಿತ್ ಪರ ವಕೀಲ ಬಿಲ್ಲಿಮೋರಿಯಾ, ನ್ಯೂಸ್ ಲಾಂಡ್ರಿ ಅತ್ಯಂತ ಕಪಟ ಸುದ್ದಿವಾಹಿನಿಗಳಲ್ಲೊಂದಾಗಿದೆ. ಅದು ಇಟಲಿಯ ಪ್ರಧಾನಿಯ ಜೊತೆಗೆ ಪ್ರಧಾನಿ ಮೋದಿಯವರ ಸಂಬಂಧದ ಬಗ್ಗೆ ಟೀಕಿಸಿತ್ತು ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ಲಕ್ಷ್ಮಣ ರೇಖೆ ಎಲ್ಲಿದೆ ಎನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಒಂದು ಪೋಸ್ಟ್ ಮನಹಾನಿಕರವಾಗಿದ್ದಾಗ ಅವರು ನ್ಯಾಯಾಲಯದ ಮೆಟ್ಟಿಲೇರುವ ಹಕ್ಕು ಹೊಂದಿರುತ್ತಾರೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, ಮೊಕದ್ದಮೆಯಲ್ಲಿ ಉಲ್ಲೇಖಿಸಿರುವಂತೆ ಪರಿಹಾರ ಪಡೆಯುವ ವಿಷಯವನ್ನು ಮುಂದುವರಿಸಲು ಬಯಸುವುದಾಗಿ ಮಹಿಳಾ ಪತ್ರಕರ್ತರ ಪರ ವಕೀಲರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಅಭಿಜಿತ್ ಅಯ್ಯರ್ ಪರ ವಕೀಲರನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ ಕೌರವ್, “ಅವರು (ಅರ್ಜಿದಾರ) ಖ್ಯಾತಿ ನಷ್ಟವಾಗಿದೆ ಎಂದು ಹೇಳುತ್ತಿದ್ದಾರೆ. ಆದ್ದರಿಂದ ನೀವು ನಿಮ್ಮ ಲಿಖಿತ ಹೇಳಿಕೆಗಳನ್ನು ಸಲ್ಲಿಸಿ” ಎಂದು ಮೌಖಿಕವಾಗಿ ಸೂಚನೆ ನೀಡಿದ್ದಾರೆ. ನಂತರ ನ್ಯಾಯಾಲಯವು ಎರಡೂ ಪಕ್ಷಗಳ ವಾದಗಳನ್ನು ಪೂರ್ಣಗೊಳಿಸಲು ಜಂಟಿ ರಿಜಿಸ್ಟ್ರಾರ್ ಮುಂದೆ ವಿಷಯವನ್ನು ಇಡುವಂತೆ ನಿರ್ದೇಶಿಸಿದೆ.

ಏನಿದು ಪ್ರಕರಣ?

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ಅಭಿಜಿತ್ ಅಯ್ಯರ್ ಮಿತ್ರ ವಿರುದ್ದ ಪತ್ರಕರ್ತೆಯರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ತೀಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದವರು. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...