Homeಮುಖಪುಟನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

ನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

ನ್ಯೂಸ್ ಲಾಂಡ್ರಿಯ ಮಹಿಳಾ ಪತ್ರಕರ್ತರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಪಟ್ಟ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ರಾಜಕೀಯ ವ್ಯಾಖ್ಯಾನಕಾರ ಮತ್ತು ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ ದೆಹಲಿ ಹೈಕೋರ್ಟ್ ಆದೇಶದಂತೆ ತೆಗೆದುಹಾಕಿದ್ದಾರೆ.

ಆದರೆ, ಮೊಕದ್ದಮೆಯಲ್ಲಿ ಮಹಿಳಾ ಪತ್ರಕರ್ತರು ಮಾನನಷ್ಟಕ್ಕೆ ಪರಿಹಾರ ಕೋರಿದ್ದಾರೆ. ಈ ಹಿನ್ನೆಲೆ, ಪ್ರಕರಣದ ವಿಚಾರಣೆ ಮುಂದುವರಿದಿದೆ. ದೆಹಲಿ ಹೈಕೋರ್ಟ್ ಸೋಮವಾರ (ಮೇ.26) ಅಭಿಜಿತ್ ಅಯ್ಯರ್‌ಗೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿ ಪರ ಮಾಧ್ಯಮ ಒಪಿಇಂಡಿಯಾ ಅಂಕಣಕಾರ ಅಭಿಜಿತ್ ಅಯ್ಯರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು 2 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮಹಿಳಾ ಪತ್ರಕರ್ತರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ನ್ಯೂಸ್‌ ಲಾಂಡ್ರಿಯ 9 ಮಹಿಳಾ ಪತ್ರಕರ್ತರು ದಾಖಲಿಸಿರುವ ಈ ಪ್ರಕರಣದಲ್ಲಿ ನ್ಯೂಸ್ ಲಾಂಡ್ರಿ ಕೂಡ ವಾದಿಯಾಗಿದೆ.

ಸೋಮವಾರ ವಿಚಾರಣೆ ವೇಳೆ ಅಭಿಜಿತ್ ಅಯ್ಯರ್ ಪರ ಹಿರಿಯ ವಕೀಲ ಪರ್ಸಿವಲ್ ಬಿಲ್ಲಿಮೋರಿಯಾ ಅವರು, ತನ್ನ ಕಕ್ಷಿದಾರರು ವಿವಾದಾತ್ಮಕ ಪೋಸ್ಟ್‌ಗಳನ್ನು ತೆಗೆದು ಹಾಕಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ನ್ಯೂಸ್‌ ಲಾಂಡ್ರಿ ಪತ್ರಕರ್ತರ ಪರ ವಕೀಲ ಬಾನಿ ದೀಕ್ಷಿತ್ ಅವರು, ಅಭಿಜಿತ್ ಅಯ್ಯರ್‌ಗೆ ಈ ಪ್ರಕರಣ ಸಂಬಂಧ ಯಾವುದೇ ಪಶ್ಚಾತ್ತಾಪವಿಲ್ಲ. ಅವರು ಈಗಲೂ ಸಾಮಾಜಿ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ ಮತ್ತು ಕಾವ್ಯಾತ್ಮಕವಾಗಿ ಬರೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಮಧ್ಯೆ ಅಭಿಜಿತ್ ಪರ ವಕೀಲ, ಮಾನನಷ್ಟ ಪ್ರಕರಣವನ್ನು ವೆಚ್ಚದೊಂದಿಗೆ ವಜಾಗೊಳಿಸುವಂತೆ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರಿಗೆ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ತನ್ನ ಕೈಯಲ್ಲಿರುವ ವಿಷಯವು ಅಭಿಜಿತ್ ಅಯ್ಯರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಮಾತ್ರ ಸೀಮಿತವಾಗಿದೆ. ನಿಮಗೆ ಇತರ ಯಾವುದೇ ದೂರು ಇದ್ದರೆ ಅದನ್ನು ಬೇರೆಲ್ಲಿಯಾದರೂ ಹೇಳಿಕೊಳ್ಳಿ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಭಿಜಿತ್ ಪರ ವಕೀಲ ಬಿಲ್ಲಿಮೋರಿಯಾ, ನ್ಯೂಸ್ ಲಾಂಡ್ರಿ ಅತ್ಯಂತ ಕಪಟ ಸುದ್ದಿವಾಹಿನಿಗಳಲ್ಲೊಂದಾಗಿದೆ. ಅದು ಇಟಲಿಯ ಪ್ರಧಾನಿಯ ಜೊತೆಗೆ ಪ್ರಧಾನಿ ಮೋದಿಯವರ ಸಂಬಂಧದ ಬಗ್ಗೆ ಟೀಕಿಸಿತ್ತು ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ಲಕ್ಷ್ಮಣ ರೇಖೆ ಎಲ್ಲಿದೆ ಎನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಒಂದು ಪೋಸ್ಟ್ ಮನಹಾನಿಕರವಾಗಿದ್ದಾಗ ಅವರು ನ್ಯಾಯಾಲಯದ ಮೆಟ್ಟಿಲೇರುವ ಹಕ್ಕು ಹೊಂದಿರುತ್ತಾರೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, ಮೊಕದ್ದಮೆಯಲ್ಲಿ ಉಲ್ಲೇಖಿಸಿರುವಂತೆ ಪರಿಹಾರ ಪಡೆಯುವ ವಿಷಯವನ್ನು ಮುಂದುವರಿಸಲು ಬಯಸುವುದಾಗಿ ಮಹಿಳಾ ಪತ್ರಕರ್ತರ ಪರ ವಕೀಲರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಅಭಿಜಿತ್ ಅಯ್ಯರ್ ಪರ ವಕೀಲರನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ ಕೌರವ್, “ಅವರು (ಅರ್ಜಿದಾರ) ಖ್ಯಾತಿ ನಷ್ಟವಾಗಿದೆ ಎಂದು ಹೇಳುತ್ತಿದ್ದಾರೆ. ಆದ್ದರಿಂದ ನೀವು ನಿಮ್ಮ ಲಿಖಿತ ಹೇಳಿಕೆಗಳನ್ನು ಸಲ್ಲಿಸಿ” ಎಂದು ಮೌಖಿಕವಾಗಿ ಸೂಚನೆ ನೀಡಿದ್ದಾರೆ. ನಂತರ ನ್ಯಾಯಾಲಯವು ಎರಡೂ ಪಕ್ಷಗಳ ವಾದಗಳನ್ನು ಪೂರ್ಣಗೊಳಿಸಲು ಜಂಟಿ ರಿಜಿಸ್ಟ್ರಾರ್ ಮುಂದೆ ವಿಷಯವನ್ನು ಇಡುವಂತೆ ನಿರ್ದೇಶಿಸಿದೆ.

ಏನಿದು ಪ್ರಕರಣ?

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ಅಭಿಜಿತ್ ಅಯ್ಯರ್ ಮಿತ್ರ ವಿರುದ್ದ ಪತ್ರಕರ್ತೆಯರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ತೀಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದವರು. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...