Homeಮುಖಪುಟನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

ನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

ನ್ಯೂಸ್ ಲಾಂಡ್ರಿಯ ಮಹಿಳಾ ಪತ್ರಕರ್ತರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಪಟ್ಟ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ರಾಜಕೀಯ ವ್ಯಾಖ್ಯಾನಕಾರ ಮತ್ತು ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ ದೆಹಲಿ ಹೈಕೋರ್ಟ್ ಆದೇಶದಂತೆ ತೆಗೆದುಹಾಕಿದ್ದಾರೆ.

ಆದರೆ, ಮೊಕದ್ದಮೆಯಲ್ಲಿ ಮಹಿಳಾ ಪತ್ರಕರ್ತರು ಮಾನನಷ್ಟಕ್ಕೆ ಪರಿಹಾರ ಕೋರಿದ್ದಾರೆ. ಈ ಹಿನ್ನೆಲೆ, ಪ್ರಕರಣದ ವಿಚಾರಣೆ ಮುಂದುವರಿದಿದೆ. ದೆಹಲಿ ಹೈಕೋರ್ಟ್ ಸೋಮವಾರ (ಮೇ.26) ಅಭಿಜಿತ್ ಅಯ್ಯರ್‌ಗೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿ ಪರ ಮಾಧ್ಯಮ ಒಪಿಇಂಡಿಯಾ ಅಂಕಣಕಾರ ಅಭಿಜಿತ್ ಅಯ್ಯರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು 2 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮಹಿಳಾ ಪತ್ರಕರ್ತರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ನ್ಯೂಸ್‌ ಲಾಂಡ್ರಿಯ 9 ಮಹಿಳಾ ಪತ್ರಕರ್ತರು ದಾಖಲಿಸಿರುವ ಈ ಪ್ರಕರಣದಲ್ಲಿ ನ್ಯೂಸ್ ಲಾಂಡ್ರಿ ಕೂಡ ವಾದಿಯಾಗಿದೆ.

ಸೋಮವಾರ ವಿಚಾರಣೆ ವೇಳೆ ಅಭಿಜಿತ್ ಅಯ್ಯರ್ ಪರ ಹಿರಿಯ ವಕೀಲ ಪರ್ಸಿವಲ್ ಬಿಲ್ಲಿಮೋರಿಯಾ ಅವರು, ತನ್ನ ಕಕ್ಷಿದಾರರು ವಿವಾದಾತ್ಮಕ ಪೋಸ್ಟ್‌ಗಳನ್ನು ತೆಗೆದು ಹಾಕಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ನ್ಯೂಸ್‌ ಲಾಂಡ್ರಿ ಪತ್ರಕರ್ತರ ಪರ ವಕೀಲ ಬಾನಿ ದೀಕ್ಷಿತ್ ಅವರು, ಅಭಿಜಿತ್ ಅಯ್ಯರ್‌ಗೆ ಈ ಪ್ರಕರಣ ಸಂಬಂಧ ಯಾವುದೇ ಪಶ್ಚಾತ್ತಾಪವಿಲ್ಲ. ಅವರು ಈಗಲೂ ಸಾಮಾಜಿ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ ಮತ್ತು ಕಾವ್ಯಾತ್ಮಕವಾಗಿ ಬರೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಮಧ್ಯೆ ಅಭಿಜಿತ್ ಪರ ವಕೀಲ, ಮಾನನಷ್ಟ ಪ್ರಕರಣವನ್ನು ವೆಚ್ಚದೊಂದಿಗೆ ವಜಾಗೊಳಿಸುವಂತೆ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರಿಗೆ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ತನ್ನ ಕೈಯಲ್ಲಿರುವ ವಿಷಯವು ಅಭಿಜಿತ್ ಅಯ್ಯರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಮಾತ್ರ ಸೀಮಿತವಾಗಿದೆ. ನಿಮಗೆ ಇತರ ಯಾವುದೇ ದೂರು ಇದ್ದರೆ ಅದನ್ನು ಬೇರೆಲ್ಲಿಯಾದರೂ ಹೇಳಿಕೊಳ್ಳಿ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಭಿಜಿತ್ ಪರ ವಕೀಲ ಬಿಲ್ಲಿಮೋರಿಯಾ, ನ್ಯೂಸ್ ಲಾಂಡ್ರಿ ಅತ್ಯಂತ ಕಪಟ ಸುದ್ದಿವಾಹಿನಿಗಳಲ್ಲೊಂದಾಗಿದೆ. ಅದು ಇಟಲಿಯ ಪ್ರಧಾನಿಯ ಜೊತೆಗೆ ಪ್ರಧಾನಿ ಮೋದಿಯವರ ಸಂಬಂಧದ ಬಗ್ಗೆ ಟೀಕಿಸಿತ್ತು ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ಲಕ್ಷ್ಮಣ ರೇಖೆ ಎಲ್ಲಿದೆ ಎನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಒಂದು ಪೋಸ್ಟ್ ಮನಹಾನಿಕರವಾಗಿದ್ದಾಗ ಅವರು ನ್ಯಾಯಾಲಯದ ಮೆಟ್ಟಿಲೇರುವ ಹಕ್ಕು ಹೊಂದಿರುತ್ತಾರೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, ಮೊಕದ್ದಮೆಯಲ್ಲಿ ಉಲ್ಲೇಖಿಸಿರುವಂತೆ ಪರಿಹಾರ ಪಡೆಯುವ ವಿಷಯವನ್ನು ಮುಂದುವರಿಸಲು ಬಯಸುವುದಾಗಿ ಮಹಿಳಾ ಪತ್ರಕರ್ತರ ಪರ ವಕೀಲರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಅಭಿಜಿತ್ ಅಯ್ಯರ್ ಪರ ವಕೀಲರನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ ಕೌರವ್, “ಅವರು (ಅರ್ಜಿದಾರ) ಖ್ಯಾತಿ ನಷ್ಟವಾಗಿದೆ ಎಂದು ಹೇಳುತ್ತಿದ್ದಾರೆ. ಆದ್ದರಿಂದ ನೀವು ನಿಮ್ಮ ಲಿಖಿತ ಹೇಳಿಕೆಗಳನ್ನು ಸಲ್ಲಿಸಿ” ಎಂದು ಮೌಖಿಕವಾಗಿ ಸೂಚನೆ ನೀಡಿದ್ದಾರೆ. ನಂತರ ನ್ಯಾಯಾಲಯವು ಎರಡೂ ಪಕ್ಷಗಳ ವಾದಗಳನ್ನು ಪೂರ್ಣಗೊಳಿಸಲು ಜಂಟಿ ರಿಜಿಸ್ಟ್ರಾರ್ ಮುಂದೆ ವಿಷಯವನ್ನು ಇಡುವಂತೆ ನಿರ್ದೇಶಿಸಿದೆ.

ಏನಿದು ಪ್ರಕರಣ?

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ಅಭಿಜಿತ್ ಅಯ್ಯರ್ ಮಿತ್ರ ವಿರುದ್ದ ಪತ್ರಕರ್ತೆಯರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ತೀಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದವರು. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...