Homeಮುಖಪುಟಕೋಮು ದ್ವೇಷ ಹರಡುವ ಸುದ್ದಿ ಪ್ರಸಾರ: ಅರ್ನಾಬ್‌ ಗೋಸ್ವಾಮಿಗೆ ಶೋಕಾಸ್ ನೋಟಿಸ್!

ಕೋಮು ದ್ವೇಷ ಹರಡುವ ಸುದ್ದಿ ಪ್ರಸಾರ: ಅರ್ನಾಬ್‌ ಗೋಸ್ವಾಮಿಗೆ ಶೋಕಾಸ್ ನೋಟಿಸ್!

ಅರ್ನಾಬ್ ವಿರುದ್ಧ ಈಗಾಗಲೇ ಮುಂಬೈನ ಎನ್‌ಎಂ ಜೋಶಿ ಮಾರ್ಗ ಮತ್ತು ವೈಧೋನಿ ಪೊಲೀಸ್ ಠಾಣೆಗಳಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದು, ಇಂತದ್ದೇ ಆರೋಪಗಳನ್ನು ಮಾಡಲಾಗಿದೆ.

- Advertisement -
- Advertisement -

ಪಾಲ್ಘಾರ್ ಲಿಂಚಿಂಗ್‌ಗೆ ಸಂಬಂಧಿಸಿದಂತೆ ಹಿಂದೂ ಮುಸ್ಲಿಮರ ನಡುವೆ ಕೋಮು ದ್ವೇಷ ಉಂಟುಮಾಡುವ ಮತ್ತು ಸುಳ್ಳು ಮಾಹಿತಿ ನೀಡಿ ಬಾಂದ್ರಾ ರೈಲು ನಿಲ್ದಾಣದ ಬಳಿ ವಲಸಿಗರನ್ನು ಸೇರಿಸಿದ್ದಕ್ಕೆ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಶೋಕಾಸ್ ನೋಟಿಸ್‌ನ್ನು ಹೊರಡಿಸಿದ್ದಾರೆ.

ಇದನ್ನೂ ಓದಿ: ಜಾಮಿಯಾ ವಿದ್ಯಾರ್ಥಿ ಮೇಲೆ ಗುಂಡು: ಸುಳ್ಳು ಸುದ್ದಿ ಪ್ರಸಾರ ಮಾಡಿದ ರಿಪಬ್ಲಿಕ್‌ ಟವಿಗೆ ಛೀಮಾರಿ…

ಅಪರಾಧ ಪ್ರಕ್ರಿಯೆ ಸಂಹಿತೆಯ ಕಲಂ 107 ಮತ್ತು 108ರ ಅಡಿಯಲ್ಲಿ ಅರ್ನಾಬ್ ವಿರುದ್ದ ‘ಚಾಪರ್ ಪ್ರೊಸೀಡಿಂಗ್’ಅನ್ನು ಏಕೆ ಆರಂಭಿಸಬಾರದು ಎಂದು ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಶೋಕಾಸ್ ನೋಟಿಸ್‌ನ್ನು ಹೊರಡಿಸಿದ್ದಾರೆ. ಚಾಪ್ಟರ್ ಪ್ರೊಸೀಡಿಂಗ್‌ನಡಿ ಪೊಲೀಸರು ಯಾವುದೇ ನಾಗರಿಕನಿಂದ ಮೂರು ವರ್ಷಗಳವರೆಗೆ ಸದ್ವರ್ತನೆಯ ಬಾಂಡ್ ಅನ್ನು ಪಡೆದುಕೊಳ್ಳಬಹುದಾಗಿದೆ ಎಂದು ಸ್ಕ್ರಾಲ್‌.ಇನ್ ವರದಿ ಮಾಡಿದೆ.

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ: ಏನಾಗುತ್ತಿದೆ ಈ ದೇಶದಲ್ಲಿ?

ಅಕ್ಟೋಬರ್16 ರಂದು ವಿಚಾರಣೆಗೆ ಹಾಜರಾಗುವಂತೆ ವರ್ಲಿ ವಿಭಾಗದ ಎಸಿಪಿ ಸುಧೀರ್ ಜಾಂಬವಾಡೇಕರ್ ಅರ್ನಾಬ್‌ಗೆ ನೀಡಿದ ನೋಟಿಸಿನಲ್ಲಿ ಸೂಚಿಸಿದ್ದಾರೆ.

ಮಹಾರಾಷ್ಟ್ರದ ಪಾಲ್ಘಾರ್‌ ಜಿಲ್ಲೆಯಲ್ಲಿ ಸಾಧುಗಳ ಹತ್ಯೆ ಮತ್ತು ಲಾಕ್‌ಡೌನ್ ಸಂದರ್ಭದಲ್ಲಿ ಬಾಂದ್ರಾ ರೈಲು ನಿಲ್ದಾಣದಲ್ಲಿ ವಲಸೆ ಕಾರ್ಮಿಕರ ಜಮಾವಣೆ ಘಟನೆಗಳ ಆಕ್ಷೇಪಾರ್ಹ ಸುದ್ದಿ ಪ್ರಸಾರವನ್ನು ಮಾಡಿದ್ದು ಮತ್ತು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: TRP ತಿರುಚಿದ ಆರೋಪ; ರಿಪಬ್ಲಿಕ್ ಸೇರಿ 3 ಚಾನೆಲ್‌ಗಳ ಮೇಲೆ ತನಿಖೆ!

ಅರ್ನಾಬ್ ವಿರುದ್ಧ ಈಗಾಗಲೇ ಮುಂಬೈನ ಎನ್‌ಎಂ ಜೋಶಿ ಮಾರ್ಗ ಮತ್ತು ವೈಧೋನಿ ಪೊಲೀಸ್ ಠಾಣೆಗಳಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದು, ಕೋಮು ದ್ವೇಷ ಆರೋಪಗಳನ್ನು ಮಾಡಲಾಗಿದೆ.

ಇದು ಮಹಾರಾಷ್ಟ್ರ ಸರ್ಕಾರದ ದುರುದ್ದೇಶಪೂರಿತ ಸಂಚು ಎಂದು ಕರೆದಿರುವ ರಿಪಬ್ಲಿಕ್ ಟಿವಿ, “ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ ಈಗಾಗಲೆ ಇದಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿದ್ದಾಗ್ಯೂ, ಈಗ ಶೋಕಾಸ್ ನೊಟೀಸ್ ನೀಡಿರುವುದು ಕಾನೂನು ಬಾಹಿರ” ಎಂದು ಕರೆದಿದೆ.


ಇದನ್ನೂ ಓದಿ: ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...