Homeಕರ್ನಾಟಕತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’!

ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’!

ದ್ವೇಷ ಕಾರುವ ಚಾನೆಲ್‌ಗಳ ವಿರುದ್ದ ಹೋರಾಟ ನಡೆಸಿ ಜಯಗಳಿಸಿದ್ದಕ್ಕೆ ‘ಹೇಟ್‌ ಸ್ಪೀಚ್ ಬೇಡ’ ಅಭಿಯಾನ ತಂಡಕ್ಕೆ ಹಲವಾರು ಮಂದಿ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -
- Advertisement -

ಕೊರೊನಾ ಒಂದನೆ ಅಲೆಯ ಸಮಯದಲ್ಲಿ ‘ತಬ್ಲೀಘಿ ಜಮಾಅತ್‌‌’ ವಿರುದ್ದ ಅಪಪ್ರಚಾರ ಮಾಡಿದ್ದಕ್ಕೆ ‘ನ್ಯೂಸ್ 18 ಕನ್ನಡ’ ಚಾನೆಲ್‌‌‌ ಬುಧವಾರ ರಾತ್ರಿ ಕ್ಷಮೆ ಕೇಳಿದೆ. ಕೊರೊನಾ ಹರಡುವಿಕೆಗೆ ‘ಒಂದು ಸಮುದಾಯ ಕಾರಣ’ ಎಂಬಂತೆ ಬಿಂಬಿಸಿ ಹಲವು ಚಾನೆಲ್‌ಗಳು ದ್ವೇಷ ಹರಡಿದ್ದವು. ಈ ಚಾನೆಲ್‌ಗಳ ವಿರುದ್ದ, ಬೆಂಗಳೂರು ಮೂಲದ ‘ಹೇಟ್‌ ಸ್ಪೀಚ್‌ ಬೇಡ’ ಎಂಬ ದ್ವೇಷ ಭಾಷಣಗಳ ವಿರುದ್ದ ಅಭಿಯಾನದ ತಂಡವು ನಡೆಸಿದ ಹೋರಾಟಕ್ಕೆ ಗೆಲುವು ಸಿಕ್ಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಅಭಿನಂದನೆ ಸಲ್ಲಿಸಿದ್ದಾರೆ.

‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾವು NBSA ಗೆ ದೂರುಗಳನ್ನು ಸಲ್ಲಿಸಿ, ಏಪ್ರಿಲ್ 1, 2020 ರಂದು ತಬ್ಲಿಘಿ ಜಮಾಅತ್‌ ಬಗ್ಗೆ ‘ನ್ಯೂಸ್‌ 18 ಕನ್ನಡ’ ಪ್ರಸಾರ ಮಾಡಿದ ಎರಡು ಕಾರ್ಯಕ್ರಮಗಳಿಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ದೂರಿನ ವಿಚಾರಣೆ ನಡೆಸಿದ್ದ NBSA, ವಿವಾದಾತ್ಮಕ ಕಾರ್ಯಕ್ರಮವನ್ನು ಪ್ರಸಾರ ಮಾಡಿದ್ದಕ್ಕೆ ನ್ಯೂಸ್‌ 18 ಕನ್ನಡಕ್ಕೆ 1 ಲಕ್ಷ ದಂಡ ವಿಧಿಸಿತ್ತು. ಅಲ್ಲದೆ ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೂನ್ 23 ರಂದು ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸುವುದನ್ನು ಪ್ರಸಾರ ಮಾಡಬೇಕು ಎಂದು ಚಾನೆಲ್‌ಗೆ ನಿರ್ದೇಶನ ನೀಡಿತ್ತು. ಜೊತೆಗೆ ಎಲ್ಲಾ ವೆಬ್ ಪೋರ್ಟಲ್‌ಗಳಿಂದ ಎರಡು ಕಾರ್ಯಕ್ರಮಗಳ ವೀಡಿಯೊಗಳನ್ನು ತೆಗೆಯುವಂತೆ ಆದೇಶಿಸಿತ್ತು.

ಇದನ್ನೂ ಓದಿ:  ಸುದ್ದಿಯೇನೇ ಮನೋಲ್ಲಾಸಿನಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-1

ಈ ಹಿನ್ನಲೆಯಲ್ಲಿ ಬುಧವಾರ ರಾತ್ರಿ ನ್ಯೂಸ್‌18 ಕನ್ನಡ ಕಳೆದ ವರ್ಷ ನಡೆಸಿದ ಎರಡು ಕಾರ್ಯಕ್ರಮಗಳಿಗೆ ಕ್ಷಮೆಯಾಚಿಸಿದೆ.

ಅದು ತನ್ನ ವಿಷಾದ ಸಂದೇಶದಲ್ಲಿ, “ನ್ಯೂಸ್‌18 ಕನ್ನಡವು 1-4-2020 ರಂದು ಪ್ರಸಾರ ಮಾಡಿದ ‘ದೇಶಕ್ಕೆ ಕೊರೊನಾ ವೈರಸ್ ಹಬ್ಬಿಸಿದ ದೆಹಲಿ ನಿಝಾಮುದ್ದೀನ್ ಹೇಗಿದೆ ಗೊತ್ತಾ?’ ಮತ್ತು ‘ಕರ್ನಾಟಕದಿಂದ ದೆಹಲಿಯ ಜಮಾಅತ್‌ ಸಭೆಗೆ ಹೋದವರ ಸಂಖ್ಯೆ ಎಷ್ಟು?’ ಎಂಬ ಎರಡು ವರದಿಗಳನ್ನು ಪ್ರಸಾರ ಮಾಡಿದ್ದು, ನೀತಿ ಸಂಹಿತೆ ಹಾಗೂ ಪ್ರಸಾರ ಮತ್ತು ಗುಣಮಟ್ಟದ ಪ್ರಕಾರ ಪ್ರಸಾರ ಮಾಧ್ಯಮ ಪಾಲಿಸಬೇಕಾದ ನಿಷ್ಪಕ್ಷತೆ, ವಸ್ತುನಿಷ್ಠತೆ ಹಾಗೂ ತಟಸ್ಥತೆ ಕಾಪಾಡಿಕೊಳ್ಳುವುದರಲ್ಲಿ ನಾವು ನಿಯಮ ಉಲ್ಲಂಘಿಸಿದ್ದು, ಈ ಕಾರ್ಯಕ್ರಮ ಪ್ರಸಾರವಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದೇವೆ” ಎಂದು ಹೇಳಿದೆ.

ಜನಾಂಗೀಯ ಮತ್ತು ಧಾರ್ಮಿಕ ಸಾಮರಸ್ಯದ ಕುರಿತಾದ ವರದಿಗಾರಿಕೆಯಲ್ಲಿ ಪ್ರಸಾರ ಮಾಧ್ಯಮ ಪಾಲಿಸಬೇಕಾದ ನಿರ್ದಿಷ್ಟ ಮಾರ್ಗಸೂಚಿ ಅನುಸರಿಸುವುದರಲ್ಲೂ ನಿಯಮ ಉಲ್ಲಂಘನೆಯಾಗಿದೆ. ಯಾವುದೆ ಸಮುದಾಯವನ್ನು ಕೀಳುಮಟ್ಟದಲ್ಲಿ ಅಥವಾ ಸಮುದಾಯದಲ್ಲಿ ದ್ವೇಷ ಭಾವನೆಗಳನ್ನು ಹೆಚ್ಚಿಸುವ ಉದ್ದೇಶ ನಮ್ಮದಾಗಿರಲಿಲ್ಲ ಎಂದು ಸ್ಪಷ್ಟ ಪಡಿಸುತ್ತೇವೆ. ಈ ವಿಷಯವನ್ನು ಭಾವೋದ್ರಕಗೊಳಿಸುವುದು ನಮ್ಮ ಉದ್ದೇಶವಾಗಿರಲಿಲ್ಲ. ಬ್ರಾಡ್‌ಕಾಸ್ಟಿಂಗ್‌ ಮಾನದಂಡಗಳನ್ನು ಸುಧಾರಿಸುವ ಪ್ರಯತ್ನದಲ್ಲಿ NBSA ಜಾರಿಗೊಳಿಸಿದ ಕೋಡ್‌ ಆಫ್‌ ಎಥಿಕ್ಸ್‌‌ ಮತ್ತು ಬ್ರಾಡ್‌ ಕಾಸ್ಟಿಂಗ್‌‌ ಸ್ಟಾಂಡರ್ಡ್ಸ್ ಮತ್ತು ಗೈಡ್ ಲೈನ್‌ಗಳಿಗೆ ನಾವು ಬದ್ದರಾಗಿರುತ್ತೇವೆ” ಎಂದು ಚಾನೆಲ್‌ ಕ್ಷಮೆಯಾಚಿಸಿದೆ.

ಇದನ್ನೂ ಓದಿ:  ಡೇಟಾ ಖೋಲಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-2

ನ್ಯೂಸ್ 18 ಕನ್ನಡ ಕ್ಷಮೆಯ ವಿಚಾರದಲ್ಲಿ ಪ್ರತಿಕ್ರಿಯಿಸಿರುವ ‘ಹೇಟ್‌ ಸ್ಪೀಚ್‌ ಬೇಡ ಅಭಿಯಾನ’ವು, “ನ್ಯೂಸ್ 18 ಕನ್ನಡ NBSA ನಿರ್ದೇಶನದಂತೆ ತನ್ನ ಕ್ಷಮೆಯಾಚನೆಯನ್ನು ಪ್ರಸಾರ ಮಾಡಿದೆ. ಇದು ನಮಗೆ ಬಹಳ ಸ್ವಾಗತಾರ್ಹ ಸುದ್ದಿ. ನಾವು ಮಾಧ್ಯಮವನ್ನು ಜವಾಬ್ದಾರಿಯುತವಾಗಿ ಹಿಡಿದಿಟ್ಟುಕೊಳ್ಳಬಹುದು ಎಂದು ಈ ಮೂಲಕ ತಿಳಿಯುತ್ತದೆ. ದ್ವೇಷದ ಮಾತು ಮತ್ತು ದ್ವೇಷದ ಮಾಧ್ಯಮಗಳ ವಿರುದ್ಧ ನಾವೆಲ್ಲರೂ ಒಗ್ಗಟ್ಟಾಗಿ ನಿಂತು ಹಿಮ್ಮೆಟ್ಟಿಸಬಹುದು” ಎಂದು ಹೇಳಿದೆ.

ಜೊತೆಗೆ ದ್ವೇಷ ಕಾರುವ ಚಾನೆಲ್‌ಗಳ ವಿರುದ್ದ ಹೋರಾಟ ನಡೆಸಿ ಜಯಗಳಿಸಿದ್ದಕ್ಕೆ ‘ಹೇಟ್‌ ಸ್ಪೀಚ್ ಬೇಡ’ ಅಭಿಯಾನ ತಂಡಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

NBSA ನ್ಯೂಸ್‌ 18 ಕನ್ನಡ ಮಾತ್ರವಲ್ಲದೆ ಕನ್ನಡದ ಮತ್ತೊಂದು ಚಾನೆಲ್‌ ‘ಸುವರ್ಣ ನ್ಯೂಸ್‌’ಗೆ ಕೂಡಾ ತಬ್ಲೀಘಿಗಳ ವಿರುದ್ದ ಕಾರ್ಯಕ್ರಮ ಮಾಡಿದ್ದಕ್ಕೆ 50 ಸಾವಿರ ದಂಡವನ್ನು ಹಾಕಿತ್ತು. ಜೊತೆಗೆ ಆದೇಶದಲ್ಲಿ, “ಕಾರ್ಯಕ್ರಮದಲ್ಲಿ ಕೊರೊನಾ ವೈರಸ್ ಹರಡುವಿಕೆಯ ಸಂಪೂರ್ಣ ಆಪಾದನೆಯನ್ನು ತಬ್ಲಿಘಿ ಜಮಾಅತ್‌ ಮೇಲೆ ಹಾಕಲಾಗಿದ್ದು, ಅದನ್ನು ನಿರ್ದಿಷ್ಟ ಸಮುದಾಯದ ವಿರುದ್ದ ತಿರುಗಿಸಲಾಗಿದೆ. ಜೊತೆಗೆ ಕಾರ್ಯಕ್ರಮಗಳ ಶೀರ್ಷಿಕೆಗಳು ಕೋಮು ಹಿಂಸಾಚಾರವನ್ನು ಪ್ರಚೋದಿಸುವ ಕಪಟತೆಯನ್ನು ಹೊಂದಿವೆ” ಎಂದು ಹೇಳಿತ್ತು.

“ಈ ಕಾರ್ಯಕ್ರಮಗಳಲ್ಲಿ ಖಂಡಿತವಾಗಿಯೂ ಸಮತೋಲನ, ವಸ್ತುನಿಷ್ಠತೆ ಮತ್ತು ನಿಷ್ಪಕ್ಷಪಾತತೆಯ ಕೊರತೆಯಿದೆ. ಅಲ್ಲದೆ ಈ ಕಾರ್ಯಕ್ರಮಗಳು ಒಂದು ನಿರ್ದಿಷ್ಟ ಧರ್ಮದ ವಿರುದ್ಧ ಬಹಿರಂಗವಾಗಿ ಪೂರ್ವಾಗ್ರಹ ಪೀಡಿತವಾಗಿದ್ದವು” ಎಂದು ಸುವರ್ಣ ನ್ಯೂಸ್‌ಗೆ ಹೇಳಿತ್ತು.

ಜೊತೆಗೆ ಆಕ್ಷೇಪಾರ್ಹ‌ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದ್ದಕ್ಕೆ ಇಂಗ್ಲಿಷ್ ನ್ಯೂಸ್ ಚಾನೆಲ್ ಟೈಮ್ಸ್ ನೌ ಅನ್ನು NBSA ಖಂಡಿಸಿದೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...