Homeಮುಖಪುಟ'ಯುಎಪಿಎ'ಯಡಿ ಪ್ರಬೀರ್ ಪುರಕಾಯಸ್ಥ ಬಂಧನ ಅಸಿಂಧು: ತಕ್ಷಣ ಬಿಡುಗಡೆಗೆ ಸುಪ್ರೀಂಕೋರ್ಟ್‌ ಆದೇಶ

‘ಯುಎಪಿಎ’ಯಡಿ ಪ್ರಬೀರ್ ಪುರಕಾಯಸ್ಥ ಬಂಧನ ಅಸಿಂಧು: ತಕ್ಷಣ ಬಿಡುಗಡೆಗೆ ಸುಪ್ರೀಂಕೋರ್ಟ್‌ ಆದೇಶ

- Advertisement -
- Advertisement -

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಬಂಧಿಸಿರುವುದನ್ನು ಸುಪ್ರೀಂಕೋರ್ಟ್ ಬುಧವಾರ ಅಸಿಂಧು ಎಂದು ಘೋಷಿಸಿದ್ದು, ಅವರನ್ನು ತಕ್ಷಣ ಕಸ್ಟಡಿಯಿಂದ ಬಿಡುಗಡೆ ಮಾಡುವಂತೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ಆದೇಶ ಹೊರಡಿಸಿದೆ. ಪಂಕಜ್ ಬನ್ಸಾಲ್ ಪ್ರಕರಣದ ನಂತರ ಮೇಲ್ಮನವಿದಾರರು ಬಂಧನದಿಂದ ಬಿಡುಗಡೆಗೆ ಅರ್ಹನಾಗಿದ್ದಾನೆ. ರಿಮಾಂಡ್ ಆದೇಶ ಅಸಿಂಧು ಎಂದು ನ್ಯಾಯಮೂರ್ತಿ ಮೆಹ್ತಾ ಹೇಳಿದ್ದಾರೆ. ಪಂಕಜ್ ಬನ್ಸಾಲ್ ಪ್ರಕರಣದಲ್ಲಿ ಮಾರ್ಚ್‌ನಲ್ಲಿ ನೀಡಿದ ತೀರ್ಪಿನಲ್ಲಿ ಆರೋಪಿಗಳಿಗೆ ಲಿಖಿತವಾಗಿ ಬಂಧನದ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಚೀನಾ ಪರ ಪ್ರಚಾರ ಮಾಡಲು ಹಣ ಪಡೆಯಲಾಗಿದೆ ಎಂದು ನ್ಯೂಸ್‌ಕ್ಲಿಕ್ ವಿರುದ್ಧ ನ್ಯೂಯಾರ್ಕ್ ಟೈಮ್ಸ್ ತನಿಖೆ ಆಪಾದಿಸಿದ ಕೆಲವು ದಿನಗಳ ನಂತರ, ಭಯೋತ್ಪಾದನಾ-ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆಯಡಿಯಲ್ಲಿ ಪ್ರಬೀರ್‌ ಪುರ್ಕಾಯಸ್ಥ ಅವರನ್ನು ಅಕ್ಟೋಬರ್ 3ರಂದು ಬಂಧಿಸಲಾಗಿತ್ತು.

ಮಾರ್ಚ್‌ನಲ್ಲಿ ಈ ಕುರಿತು ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿತ್ತು, ದೆಹಲಿ ಪೊಲೀಸರು ನ್ಯೂಸ್‌ಕ್ಲಿಕ್ ಮತ್ತು ಪ್ರಬೀರ್‌ ಪುರ್ಕಾಯಸ್ಥ ಅವರು ಭಯೋತ್ಪಾದಕರಿಗೆ ಧನಸಹಾಯ ಮತ್ತು ಚೀನಾದ ಪರ ಪ್ರಚಾರವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿತ್ತು. ನೆವಿಲ್ಲೆ ರಾಯ್ ಸಿಂಗಮ್, ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಪರಸ್ಪರ ನೇರ ಸಂಪರ್ಕದಲ್ಲಿದ್ದರು ಮತ್ತು ಕಾಶ್ಮೀರವಿಲ್ಲದೆ ಭಾರತದ ನಕ್ಷೆಯನ್ನು ಹೇಗೆ ರಚಿಸುವುದು ಮತ್ತು ಅರುಣಾಚಲ ಪ್ರದೇಶವನ್ನು ವಿವಾದಿತ ಪ್ರದೇಶವೆಂದು ತೋರಿಸುವುದು ಹೇಗೆ ಎಂದು ಇವರು ಚರ್ಚಿಸುತ್ತಿರುವುದು ಕಂಡುಬಂದಿದೆ. ಈ ಉದ್ದೇಶವನ್ನು ಸಾಧಿಸಲು ಆರೋಪಿಗಳು ವಿದೇಶಿ ನಿಧಿಯ ಹೆಸರಿನಲ್ಲಿ ಪಿಪಿಕೆ ನ್ಯೂಸ್‌ಕ್ಲಿಕ್, ಜಿಸ್ಪಾನ್ ಇಂಡಿಯಾ, ಜೆಜೆ ಎಂಟರ್‌ಪ್ರೈಸಸ್, ವರ್ಚುನೆಟ್ ಸಿಸ್ಟಮ್ ಹೆಸರಿನ ಕಂಪನಿಗಳಲ್ಲಿ 115 ಕೋಟಿ ರೂ. ಹೆಚ್ಚು ಹಣವನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಹಾಳುಮಾಡಲು ಪ್ರಬೀರ್ ಪುರ್ಕಾಯಸ್ಥ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ ಗುಂಪಿನೊಂದಿಗೆ ಸೇರಿ ಪಿತೂರಿ ನಡೆಸಿದ್ದಾರೆ ಎಂದು ಕೂಡ ಆರೋಪಿಸಲಾಗಿತ್ತು.

ಅಮಿತ್ ಚಕ್ರವರ್ತಿ ನಂತರ ಪ್ರಕರಣದಲ್ಲಿ ಅನುಮೋದಕರಾಗಿ ಬದಲಾಗಿದ್ದಾರೆ ಮತ್ತು ಚಾರ್ಜ್ ಶೀಟ್‌ನಲ್ಲಿ ಸಾಕ್ಷಿ ಎಂದು ಹೆಸರಿಸಲಾಗಿದೆ. ಚಕ್ರವರ್ತಿ ಅವರನ್ನು ಬಿಡುಗಡೆ ಮಾಡುವಂತೆ ದೆಹಲಿ ಹೈಕೋರ್ಟ್ ಮೇ 6 ರಂದು ಆದೇಶ ನೀಡಿತ್ತು.

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಶಂಕಿತರು ಮತ್ತು ದತ್ತಾಂಶಗಳ ವಿಶ್ಲೇಷಣೆಯ ಭಾಗವಾಗಿ ಅಕ್ಟೋಬರ್ 3ರಂದು ದೆಹಲಿಯಲ್ಲಿ 88 ಸ್ಥಳಗಳಲ್ಲಿ ಮತ್ತು 7 ರಾಜ್ಯಗಳಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ  300 ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಇದನ್ನು ಓದಿ: ಕಾಲೇಜು ಲೈಬ್ರೆರಿಯಲ್ಲಿ ‘ಹಿಂದೂಫೋಬಿಕ್’ ಪುಸ್ತಕ ಇದೆ ಎಂದು ಪ್ರಾಂಶುಪಾಲರ ವಿರುದ್ಧ ಕೇಸ್: ‘ಅಸಂಬದ್ಧ’ ಎಂದು ಎಫ್‌ಐಆರ್‌ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...