HomeಮುಖಪುಟUAPA ಪ್ರಕರಣ: ಜಾಮೀನು ಕೋರಿ ಕೋರ್ಟ್‌ ಮೆಟ್ಟಿಲೇರಿದ ನ್ಯೂಸ್‌ಕ್ಲಿಕ್‌ ಎಚ್ಆರ್ ಚಕ್ರವರ್ತಿ

UAPA ಪ್ರಕರಣ: ಜಾಮೀನು ಕೋರಿ ಕೋರ್ಟ್‌ ಮೆಟ್ಟಿಲೇರಿದ ನ್ಯೂಸ್‌ಕ್ಲಿಕ್‌ ಎಚ್ಆರ್ ಚಕ್ರವರ್ತಿ

- Advertisement -
- Advertisement -

ನ್ಯೂಸ್‌ಕ್ಲಿಕ್‌ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ(ಎಚ್‌ಆರ್‌) ಅಮಿತ್ ಚಕ್ರವರ್ತಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ)ಯಡಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ  ಅರ್ಜಿ ಸಲ್ಲಿಸಿದ್ದಾರೆ.

ಜಸ್ಟಿಸ್ ಸ್ವರಣಾ ಕಾಂತ ಶರ್ಮಾ ಅವರ ಏಕಸದಸ್ಯ ಪೀಠಕ್ಕೆ ಚಕ್ರವರ್ತಿ ಪರ ವಕೀಲರು ತಮ್ಮ ಕಕ್ಷಿದಾರರು ಈಗಾಗಲೇ ಪ್ರಕರಣದಲ್ಲಿ ಅಕ್ಟೋಬರ್ 3, 2023ರಿಂದ ಕಸ್ಟಡಿಯಲ್ಲಿದ್ದಾರೆ. ಅವರಿಗೆ ಸೆಷನ್ಸ್ ನ್ಯಾಯಾಲಯದಿಂದ ಕ್ಷಮೆ ನೀಡಲಾಗಿದೆ. ವಿಷಯವು ಇನ್ನೂ ತನಿಖಾ ಹಂತದಲ್ಲಿದೆ ಮತ್ತು ಇನ್ನೂ ಯಾವುದೇ ಆರೋಪಪಟ್ಟಿ ಸಲ್ಲಿಸಲಾಗಿಲ್ಲ. ಅವರು ತನಿಖಾ ಸಂಸ್ಥೆ ಜೊತೆ ಸಹಕರಿಸುತ್ತಿದ್ದಾರೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದರು.

ದೆಹಲಿ ಪೊಲೀಸರ ಪರ ವಾದ ಮಂಡಿಸಿದ ವಕೀಲರು ಚಕ್ರವರ್ತಿಗೆ ಜಾಮೀನು ನೀಡಿದರೆ ತಮ್ಮ ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಆದೇಶವನ್ನು ಕಾಯ್ದಿರಿಸಲಾಗಿದೆ ಎಂದು ನ್ಯಾಯಮೂರ್ತಿ ಶರ್ಮಾ ಅವರು ಹೇಳಿದ್ದಾರೆ.

ಚಕ್ರವರ್ತಿ ಕಳೆದ ವರ್ಷ ಡಿಸೆಂಬರ್‌ನಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ಪ್ರಕರಣದಲ್ಲಿ  ದೆಹಲಿ ಪೊಲೀಸರಿಗೆ ಮಾಹಿತಿಯನ್ನು ಬಹಿರಂಗಪಡಿಸಲು ಇಚ್ಛೆ ವ್ಯಕ್ತಪಡಿಸಿದ್ದರು. ಪಟಿಯಾಲ ಹೌಸ್ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಇದಕ್ಕೆ ಅವಕಾಶ ಮಾಡಿಕೊಟ್ಟರು ಮತ್ತು ಕಳೆದ ತಿಂಗಳು ಈ ವಿಷಯದಲ್ಲಿ ಅವರಿಗೆ ಕ್ಷಮಾದಾನವನ್ನೂ ನೀಡಿದ್ದರು.

ಕಳೆದ ವರ್ಷ ಆಗಸ್ಟ್‌ನಲ್ಲಿ, ದೆಹಲಿ ಪೊಲೀಸ್ ವಿಶೇಷ ಕೋಶವು ನ್ಯೂಸ್‌ಕ್ಲಿಕ್ ಸಂಸ್ಥಾಪಕ-ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಹೆಚ್‌ ಆರ್‌ ಅಮಿತ್ ಚಕ್ರವರ್ತಿ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇಬ್ಬರನ್ನೂ ಅಕ್ಟೋಬರ್ 2023ರಲ್ಲಿ ಬಂಧಿಸಲಾಗಿತ್ತು.

ನ್ಯೂಸ್‌ ಕ್ಲಿಕ್‌ ಸುದ್ದಿ ಪೋರ್ಟಲ್, ಅದರ ಸಿಬ್ಬಂದಿಗಳು, ಪೋಷಕರಿಗೆ ಸಂಬಂಧಿಸಿದ 50ಕ್ಕೂ ಹೆಚ್ಚು ಸ್ಥಳಗಳಲ್ಲಿ  ಶೋಧ ನಡೆಸಿದ ನಂತರ ಅ.3 ರಂದು ದೆಹಲಿ ಪೊಲೀಸರು ನ್ಯೂಸ್‌ ಕ್ಲಿಕ್‌ ಪೋರ್ಟಲ್‌ನ ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಹೆಚ್‌ಆರ್(HR) ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಿದ್ದರು. ನ್ಯೂಸ್‌ಕ್ಲಿಕ್ ಕಚೇರಿ ಮತ್ತು ಸಂಸ್ಥೆಗೆ ಸಂಬಂಧಿಸಿದ ಪತ್ರಕರ್ತರ ನಿವಾಸಗಳಿಂದ 300ಕ್ಕೂ ಹೆಚ್ಚು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದ್ದರು. 46 ಅನುಮಾನಿತರನ್ನು ವಿಚಾರಣೆ ನಡೆಸಿದ್ದರು. ಅಕ್ಟೋಬರ್ 13, 2023ರಂದು ಯುಎಪಿಎ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿದ್ದ ಇಬ್ಬರ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

ಅ.4 ರಂದು ಪುರ್ಕಾಯಸ್ಥ ಮತ್ತು ಚಕ್ರವರ್ತಿಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ದೆಹಲಿ ಪೊಲೀಸರು ಸಲ್ಲಿಸಿದ ಮಾಹಿತಿ ಪ್ರಕಾರ, ನೆವಿಲ್ಲೆ ರಾಯ್ ಸಿಂಗಮ್, ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಪರಸ್ಪರ ನೇರ ಸಂಪರ್ಕದಲ್ಲಿದ್ದರು ಮತ್ತು ಕಾಶ್ಮೀರವಿಲ್ಲದೆ ಭಾರತದ ನಕ್ಷೆಯನ್ನು ಹೇಗೆ ರಚಿಸುವುದು ಮತ್ತು ಅರುಣಾಚಲ ಪ್ರದೇಶವನ್ನು ವಿವಾದಿತ ಪ್ರದೇಶವೆಂದು ತೋರಿಸುವುದು ಹೇಗೆ ಎಂದು ಇವರು ಚರ್ಚಿಸುತ್ತಿರುವುದು ಕಂಡುಬಂದಿದೆ. ಈ ಉದ್ದೇಶವನ್ನು ಸಾಧಿಸಲು ಆರೋಪಿಗಳು ವಿದೇಶಿ ನಿಧಿಯ ಹೆಸರಿನಲ್ಲಿ ಪಿಪಿಕೆ ನ್ಯೂಸ್‌ಕ್ಲಿಕ್, ಜಿಸ್ಪಾನ್ ಇಂಡಿಯಾ, ಜೆಜೆ ಎಂಟರ್‌ಪ್ರೈಸಸ್, ವರ್ಚುನೆಟ್ ಸಿಸ್ಟಮ್ ಹೆಸರಿನ ಕಂಪನಿಗಳಲ್ಲಿ 115 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನು ಓದಿ: ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದ ಚು.ಆಯೋಗ: ಶರದ್ ಪವಾರ್ ಪಕ್ಷಕ್ಕೆ ಹೊಸ ಹೆಸರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...