Homeಸಿನಿಮಾಕ್ರೀಡೆಮುಂದಿನ ವಿಶ್ವಕಪ್ ಭಾರತದಲ್ಲಿ: ಈಗ ವಿರಾಟ್ ಬದಲಿಗೆ ರೋಹಿತ್ ಶರ್ಮಾಗೆ ನಾಯಕತ್ವ??

ಮುಂದಿನ ವಿಶ್ವಕಪ್ ಭಾರತದಲ್ಲಿ: ಈಗ ವಿರಾಟ್ ಬದಲಿಗೆ ರೋಹಿತ್ ಶರ್ಮಾಗೆ ನಾಯಕತ್ವ??

- Advertisement -
- Advertisement -

ಅದ್ಭುತ ಪ್ರದರ್ಶನದ ಹೊರತಾಗಿಯೂ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಟೂರ್ನಿಮೆಂಟ್‍ನಿಂದ ನಿರ್ಗಮಿಸಿದ ಭಾರತ ತಂಡದಲ್ಲಿ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಶೀಘ್ರದಲ್ಲಿಯೇ ರಿವ್ಯೂ ಮೀಟಿಂಗ್ ಸಹ ನಡೆಯಲಿದ್ದು 2023ರ ವಿಶ್ವಕಪ್‍ಗೆ ಈಗಿನಿಂದಲೇ ತಯಾರಿ ಆರಂಭಿಸುವ ನಿಟ್ಟಿನಲ್ಲಿ ನಾಯಕತ್ವವನ್ನು ಎರಡು ವಿಭಾಗಗಳಾಗಿ ವಿಭಾಗಿಸಿ ಏಕದಿನ ಕ್ರಿಕೆಟ್ ರೋಹಿತ್ ಶರ್ಮಾರನ್ನು ನಾಯಕರನ್ನಾಗಿ ಮಾಡಬೇಕೆಂಬ ಚರ್ಚೆಗಳು ನಡೆಯುತ್ತಿವೆ.

ಭಾರತ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ಬಿಟ್ಟರೆ ಉಳಿದ್ಯಾವ ಆಟಗಾರರು ಬ್ಯಾಟಿಂಗ್‍ನಲ್ಲಿ ಸ್ಥಿರತೆಯ ಪ್ರದರ್ಶನ ನೀಡಿಲ್ಲ. ಇದರ ಕುರಿತು ಕೂಡಲೇ ತಲೆಕೆಡಿಸಿಕೊಳ್ಳಬೇಕಿದೆ. ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಗಳೆಲ್ಲವೂ ಈಗಾಗಲೇ ಸಿದ್ದತೆಯಲ್ಲಿದ್ದಾರೆ, ನಾವು ಕೂಡ ಸಿದ್ದರಾಗಬೇಕೆಂದು ಚರ್ಚೆ ನಡೆಯುತ್ತಿದೆ.

ಆದರೆ ಇದರಿಂದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ವೈಮನಸ್ಸು ಉಂಟಾಗಬಹುದೆಂದು ತಂಡದ ಕೋಚ್ ರವಿಶಾಸ್ತ್ರಿಯವರು ಅಭಿಪ್ರಾಯಪಟ್ಟಿದ್ದು ಮುಂದಿನ ವಿಮರ್ಶೆಯ ಸಭೆಯಲ್ಲಿ ಈ ವಿಚಾರವನ್ನು ಚರ್ಚಿಸಲಾಗುವುದು ಎಂದಿದ್ದಾರೆ.

2023ರ ವಿಶ್ವಕಪ್ ಅನ್ನು ಭಾರತವು ಸ್ವತಂತ್ರವಾಗಿ ಆಯೋಜಿಸಲಿದೆ. ಇದುವರೆಗೂ ಭಾರತ ನೆರೆಹೊರೆಯ ರಾಷ್ಟ್ರಗಳ ನೆರವಿನೊಂದಿಗೆ ವಿಶ್ವಕಪ್ ಆಯೋಜನೆ ಮಾಡುತ್ತಿತ್ತು. ಆದರೆ ಮುಂದಿನ ಬಾರಿ ಮಾತ್ರ ಸ್ವತಂತ್ರವಾಗಿ ಭಾರತದಲ್ಲಿಯೇ ವಿಶ್ವಕಪ್ ಆಯೋಜನೆ ಮಾಡಲಿದೆ. 2023ರ ಫೆಬ್ರವರಿ 9ರಿಂದ ಮಾರ್ಚ್ 26ರವರೆಗೆ ನಡೆಯಲಿದೆ.

ಆಯೋಜಕರಿಗೆ ಚಾಂಪಿಯನ್ ಪಟ್ಟ

ಕಳೆದ ಮೂರು ಬಾರಿಯಿಂದಲೂ ಆಯೋಜಿಸಿದವರೆ ವಿಶ್ವಕಪ್ ಜಯಿಸಿದ್ದಾರೆ. 2011ರಲ್ಲಿ ಭಾರತ ಮತ್ತು ನೆರೆಹೊರೆ ರಾಷ್ಟ್ರಗಳು ಆಯೋಸಿದ್ದಾಗ ಭಾರತ ಚಾಂಪಿಯನ್ ಆಗಿತ್ತು. 2015ರಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಜಂಟಿಯಾಗಿ ಆಯೋಜಿಸಿದ್ದವು. ಆ ಬಾರಿ ಆಸ್ಟ್ರೇಲಿಯಾ ಚಾಂಪಿಯನ್ ಆಗಿತ್ತು. ಈಗ 2019ರಲ್ಲಿ ಇಂಗ್ಲೆಂಡ್‍ನಲ್ಲಿ ನಡೆದ ವಿಶ್ವಕಪ್‍ನಲ್ಲಿ ಇಂಗ್ಲೆಂಡ್ ಚಾಂಪಿಯನ್ ಆಗಿದೆ. ಮುಂದೆ 2023ರಲ್ಲಿ ಭಾರತ ಆತಿಥ್ಯ ವಹಿಸುತ್ತಿದ್ದ ಭಾರತವೇ ಗೆಲ್ಲುತ್ತದೆ ಎಂದು ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...