Homeಮುಖಪುಟರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

- Advertisement -
- Advertisement -

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ.

ಆರು ಸದಸ್ಯರ ಎನ್‌ಜಿಟಿಯ ವಿಶೇಷ ಪೀಠವು ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಅಥವಾ ತಡೆ ನೀಡಲು ಯಾವುದೇ ಕಾರಣಗಳಿಲ್ಲ. ಯೋಜನೆಯ ಪರಿಸರ ಅನುಮತಿಯಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ ಎಂದು ಹೇಳಿದೆ.

ಯೋಜನೆಯ ಪರಿಸರ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಪೀಠ ವಜಾಗೊಳಿಸಿದೆ. ಪರಿಸರ ಅನುಮತಿಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಮತ್ತು ರಕ್ಷಣಾತ್ಮಕ ಕ್ರಮಗಳನ್ನು ನಿರ್ದೇಶಿಸಲಾಗಿದೆ ಎಂದಿದೆ. ಉನ್ನತ ಮಟ್ಟದ ಸಮಿತಿಯು ಈ ಹಿಂದಿನ ಕಳವಳಗಳನ್ನು ಪರೀಕ್ಷಿಸಿ ಪರಿಹರಿಸಿದೆ ಎಂದು ಹೇಳಿದೆ. ರಾಷ್ಟ್ರದ ಭದ್ರತೆ ಮತ್ತು ಆರ್ಥಿಕ ಅಭಿವೃದ್ಧಿಯ ದೃಷ್ಟಿಯಿಂದ ಈ ಯೋಜನೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಸಮರ್ಥಿಸಿಕೊಂಡಿದೆ. ಯೋಜನೆಯ ಅನುಷ್ಠಾನದ ವೇಳೆ ಕಟ್ಟುನಿಟ್ಟಾದ ಪರಿಸರ ನಿಯಮಗಳ ಪಾಲನೆಯನ್ನು ಮೇಲ್ವಿಚಾರಣೆ ಮಾಡಲು ಸೂಚಿಸಿದೆ.

ವಿದೇಶಿ ಶಕ್ತಿಗಳಿಂದ ಹೆಚ್ಚುತ್ತಿರುವ ಒತ್ತಡದ ನಡುವೆ, ಈ ಯೋಜನೆಯು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ಉಪಸ್ಥಿತಿಯನ್ನು ಬಲಪಡಿಸಲಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಸುಮಾರು 166 ಚದರ ಕಿಲೋಮೀಟರ್ ವ್ಯಾಪ್ತಿಯಲ್ಲಿ ಹರಡಿರುವ ಈ ಯೋಜನೆಗಾಗಿ 130 ಚದರ ಕಿಲೋಮೀಟರ್ ಅರಣ್ಯ ಭೂಮಿಯನ್ನು ಬಳಸಿಕೊಳ್ಳಲಾಗುತ್ತಿದೆ. ಗ್ರೇಟ್ ನಿಕೋಬಾರ್ ದ್ವೀಪದಲ್ಲಿ ಒಂದು ಪ್ರಮುಖ ಸರಕು ವರ್ಗಾವಣೆ ಬಂದರು ಹಾಗೂ ನಾಗರಿಕ ಮತ್ತು ಮಿಲಿಟರಿ ಎರಡೂ ಉದ್ದೇಶಗಳಿಗೆ ಬಳಸಬಹುದಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಹಲವಾರು ಪೂರಕ ಯೋಜನೆಗಳನ್ನು ನಿರ್ಮಿಸಲಾಗುವುದು ಎಂದಿದೆ.

ಮಲಕ್ಕಾ ಜಲಸಂಧಿಯಂತಹ ಪ್ರಮುಖ ಜಾಗತಿಕ ಹಡಗು ಮಾರ್ಗಗಳ ಸಮೀಪವಿರುವುದರಿಂದ, ಇದು ಭಾರತದ ಕಡಲ ಭದ್ರತೆ ಮತ್ತು ವ್ಯಾಪಾರಕ್ಕೆ ಹೆಚ್ಚಿನ ಶಕ್ತಿ ನೀಡಲಿದೆ. ಅಂತಾರಾಷ್ಟ್ರೀಯ ಕಂಟೇನರ್ ಟರ್ಮಿನಲ್ ಜೊತೆಗೆ ಹೊಸ ಪಟ್ಟಣ ಮತ್ತು 450 ಎಂವಿಎ ಸಾಮರ್ಥ್ಯದ ಅನಿಲ ಹಾಗೂ ಸೌರಶಕ್ತಿ ಆಧಾರಿತ ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ಯೋಜಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಅರಣ್ಯ ನಾಶದ ಬಗ್ಗೆ ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದರೂ, ಎನ್‌ಜಿಟಿ ಸಾಕಷ್ಟು ಸುರಕ್ಷತಾ ಕ್ರಮಗಳೊಂದಿಗೆ ಯೋಜನೆಗೆ ಅನುಮತಿ ನೀಡಲಾಗಿದೆ ಎಂದು ಸಮರ್ಥಿಸಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...