Homeಮುಖಪುಟಕಲ್ಲಿದ್ದಲು ಗಣಿಗಾರಿಕೆಗಾಗಿ 1 ಲಕ್ಷಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಕಂಪನಿ : ಸರ್ಕಾರಕ್ಕೆ ಎನ್‌ಜಿಟಿ...

ಕಲ್ಲಿದ್ದಲು ಗಣಿಗಾರಿಕೆಗಾಗಿ 1 ಲಕ್ಷಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಕಂಪನಿ : ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್

- Advertisement -
- Advertisement -

ಒಡಿಶಾದ ಅಂಗುಲ್ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗಾಗಿ 1,05,092 ಮರಗಳನ್ನು ಕಡಿಯಲು ಮುಂದಾಗಿರುವುದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಸಿಂಗರೇಣಿ ಕೋಲೀಯರೀಸ್ ಕಂಪನಿ ಲಿಮಿಟೆಡ್ (ಎಸ್‌ಸಿಸಿಎಲ್‌) ಗೆ ನೋಟಿಸ್ ಜಾರಿ ಮಾಡಿದೆ.

ಅರಣ್ಯ ಸಂರಕ್ಷಣಾ ಕಾಯ್ದೆ-1980ರ ನಿಯಮಗಳನ್ನು ಸರಿಯಾಗಿ ಅನುಸರಿಸದೆ ನೈನಿ ಓಪನ್‌ಕಾಸ್ಟ್ ಕಲ್ಲಿದ್ದಲು ಯೋಜನೆಗಾಗಿ ಎಸ್‌ಸಿಸಿಎಲ್ ಕಂಪನಿಗೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಚೆಂಡಿಪಾಡಾ ಮತ್ತು ಸಲೂಯಿಖಾಮನ್‌ನ ಒಂಬತ್ತು ಗ್ರಾಮಸ್ಥರು ಎನ್‌ಜಿಟಿಯ ಪೂರ್ವ ವಲಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.

ತೆಲಂಗಾಣ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜಂಟಿ ಒಡೆತನದ ಸಾರ್ವಜನಿಕ ವಲಯದ ಕಂಪನಿಯಾದ ಎಸ್‌ಸಿಸಿಎಲ್‌ ಅಂಗುಲ್‌ನ ಚೆಂಡಿಪಾಡಾ ತಾಲೂಕಿನಲ್ಲಿ ಗಣಿಗಾರಿಕೆ ಮಾಡಲು ತಯಾರಿ ನಡೆಸುತ್ತಿದೆ.

ಅರ್ಜಿದಾರರ ಪ್ರಕಾರ, ಎಸ್‌ಸಿಸಿಎಲ್ ಈಗಾಗಲೇ ಅರಣ್ಯದ ಕೆಲವು ಭಾಗಗಳಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಮರಗಳನ್ನು ಕಡಿಯಲು ಪ್ರಾರಂಭಿಸಿದೆ.

“ಚೆಂಡಿಪಾಡಾ ಮೀಸಲು ಅರಣ್ಯದ 643.095 ಹೆಕ್ಟೇರ್ ಪ್ರದೇಶವನ್ನು ಕಲ್ಲಿದ್ದಲು ಗಣಿಗಾರಿಕೆಗಾಗಿ ಹಸ್ತಾಂತರಿಸುವ ಸಂಬಂಧ ಅಂಗುಲ್‌ನ ವಿಭಾಗೀಯ ಅರಣ್ಯಾಧಿಕಾರಿಯವರು ಎಸ್‌ಸಿಸಿಎಲ್ ಕಂಪನಿಯ ಜನರಲ್ ಮ್ಯಾನೇಜರ್‌ಗೆ ಪತ್ರ ಬರೆದಿದ್ದಾರೆ. ಚೆಂಡಿಪಾಡಾ ಮೀಸಲು ಅರಣ್ಯ ಪ್ರದೇಶದ ಸುಮಾರು 1,05,092 ಮರಗಳನ್ನು ಕಡಿಯಲು ಮುಂದಾಗಿದ್ದಾರೆ. ಈ ಪೈಕಿ ಕಂದಾಯ ಅರಣ್ಯದ 1,087 ಮರಗಳು ಮತ್ತು ಅರಣ್ಯೇತರ ಪ್ರದೇಶದ 327 ಮರಗಳು ಒಳಗೊಂಡಿದೆ. ಇದು ಸಂಪೂರ್ಣ ಕಾನೂನು ಬಾಹಿರವಾಗಿದೆ” ಎಂದು ಗ್ರಾಮಸ್ಥರ ಪರ ವಕೀಲ ಶಂಕರ್ ಪಾಣಿ ಹೇಳಿದ್ದಾರೆ.

ವಿಭಾಗೀಯ ಅರಣ್ಯಾಧಿಕಾರಿಯು ತನ್ನ ಪತ್ರದಲ್ಲಿ ಅರಣ್ಯ ಭೂಮಿ ವರ್ಗಾವಣೆಗೆ ಅರಣ್ಯ ಸಂರಕ್ಷಣಾ ಕಾಯ್ದೆ-1980ರ ಸೆಕ್ಷನ್ (2) ಅಡಿಯಲ್ಲಿ ನೀಡಿರುವ ಅನುಮೋದನೆ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯದ ಅನುಮೋದನೆ ಆದೇಶದ ಷರತ್ತುಗಳ ಹಂತ-Iಮತ್ತು ಹಂತ-IIರ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಶಂಕರ್ ಪಾಣಿ ತಿಳಿಸಿದ್ದಾರೆ.

ಅನುಮೋದನೆ ಷರತ್ತಿನ ಹಂತ-I ಮತ್ತು ಹಂತ-IIನ್ನು ಇಲ್ಲಿ ಅನುಸರಿಸಿಲ್ಲ. ವಿಶೇಷವಾಗಿ ಹಂತ-IIರ ಕ್ಲಿಯರೆನ್ಸ್‌ನ ಷರತ್ತು ಸಂಖ್ಯೆ (ಬಿ) 13 ಅನ್ನು ಪೂರೈಸಿಲ್ಲ. ಈ ಷರತ್ತು, ಅರಣ್ಯ ಹಕ್ಕುಗಳ ಇತ್ಯರ್ಥ, ಗ್ರಾಮ ಸಭೆಯ ಲಿಖಿತ ಒಪ್ಪಿಗೆ ಪಡೆಯುವುದು ಮತ್ತು ಕಛೇರಿಯ ಜ್ಞಾಪಕ ಪತ್ರದ ಸಂಪೂರ್ಣ ಅನುಸರಣೆಯನ್ನು ಒಳಗೊಂಡಿರುತ್ತದೆ ಎಂದು ಶಂಕರ್ ಪಾಣಿ ವಿವರಿಸಿದ್ದಾರೆ.

ಆದಾಗ್ಯೂ, ಷರತ್ತು 13ರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಅರಣ್ಯೇತರ ಬಳಕೆಗಾಗಿ ಭೂಮಿಯನ್ನು ಅಕ್ರಮವಾಗಿ ಎಸ್‌ಸಿಸಿಎಲ್‌ ಕಂಪನಿಗೆ ವರ್ಗಾಯಿಸಲಾಗಿದೆ ಎಂದು ಪಾಣಿ ಆರೋಪಿಸಿದ್ದಾರೆ. ಅರಣ್ಯ ಪ್ರದೇಶದ ನಿವ್ವಳ ಪ್ರಸ್ತುತ ಮೌಲ್ಯವನ್ನು (ಎನ್‌ಪಿವಿ) ಪೂರ್ಣವಾಗಿ ಠೇವಣಿ ಮಾಡುವಂತೆ ಎಸ್‌ಸಿಸಿಎಲ್ ಕೇಳಲಾಗಿದೆ. ಆದರೆ, ಅದನ್ನೂ ಮಾಡಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.

ನ್ಯಾಯಾಂಗ ಸದಸ್ಯ ಅಮಿತ್ ಸ್ಥಾಲೇಕರ್ ಮತ್ತು ತಜ್ಞ ಸದಸ್ಯ ಅರುಣ್ ಕುಮಾರ್ ವರ್ಮಾ ಅವರನ್ನೊಳಗೊಂಡ ಎನ್‌ಜಿಟಿ ಪೀಠವು ನಾಲ್ಕು ವಾರಗಳಲ್ಲಿ ಅಫಿಡವಿಟ್‌ ಸಲ್ಲಿಸುವಂತೆ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ, ಬುಡಕಟ್ಟು ವ್ಯವಹಾರಗಳ ಸಚಿವಾಲಯ ಮತ್ತು ಎಸ್‌ಸಿಸಿಎಲ್‌ ಕಂಪನಿಗೆ ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 21ಕ್ಕೆ ನಿಗದಿಪಡಿಸಿದೆ.

ಇದನ್ನೂ ಓದಿ : ಲಂಚ ಪ್ರಕರಣ: ಉದ್ಯಮಿ ಅದಾನಿ ವಿರುದ್ಧ ಜಂಟಿ ವಿಚಾರಣೆಗೆ ಯುಎಸ್ ನ್ಯಾಯಾಲಯ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...