Homeಮುಖಪುಟಕಲ್ಲಿದ್ದಲು ಗಣಿಗಾರಿಕೆಗಾಗಿ 1 ಲಕ್ಷಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಕಂಪನಿ : ಸರ್ಕಾರಕ್ಕೆ ಎನ್‌ಜಿಟಿ...

ಕಲ್ಲಿದ್ದಲು ಗಣಿಗಾರಿಕೆಗಾಗಿ 1 ಲಕ್ಷಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಕಂಪನಿ : ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್

- Advertisement -
- Advertisement -

ಒಡಿಶಾದ ಅಂಗುಲ್ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗಾಗಿ 1,05,092 ಮರಗಳನ್ನು ಕಡಿಯಲು ಮುಂದಾಗಿರುವುದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಸಿಂಗರೇಣಿ ಕೋಲೀಯರೀಸ್ ಕಂಪನಿ ಲಿಮಿಟೆಡ್ (ಎಸ್‌ಸಿಸಿಎಲ್‌) ಗೆ ನೋಟಿಸ್ ಜಾರಿ ಮಾಡಿದೆ.

ಅರಣ್ಯ ಸಂರಕ್ಷಣಾ ಕಾಯ್ದೆ-1980ರ ನಿಯಮಗಳನ್ನು ಸರಿಯಾಗಿ ಅನುಸರಿಸದೆ ನೈನಿ ಓಪನ್‌ಕಾಸ್ಟ್ ಕಲ್ಲಿದ್ದಲು ಯೋಜನೆಗಾಗಿ ಎಸ್‌ಸಿಸಿಎಲ್ ಕಂಪನಿಗೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಚೆಂಡಿಪಾಡಾ ಮತ್ತು ಸಲೂಯಿಖಾಮನ್‌ನ ಒಂಬತ್ತು ಗ್ರಾಮಸ್ಥರು ಎನ್‌ಜಿಟಿಯ ಪೂರ್ವ ವಲಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.

ತೆಲಂಗಾಣ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜಂಟಿ ಒಡೆತನದ ಸಾರ್ವಜನಿಕ ವಲಯದ ಕಂಪನಿಯಾದ ಎಸ್‌ಸಿಸಿಎಲ್‌ ಅಂಗುಲ್‌ನ ಚೆಂಡಿಪಾಡಾ ತಾಲೂಕಿನಲ್ಲಿ ಗಣಿಗಾರಿಕೆ ಮಾಡಲು ತಯಾರಿ ನಡೆಸುತ್ತಿದೆ.

ಅರ್ಜಿದಾರರ ಪ್ರಕಾರ, ಎಸ್‌ಸಿಸಿಎಲ್ ಈಗಾಗಲೇ ಅರಣ್ಯದ ಕೆಲವು ಭಾಗಗಳಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಮರಗಳನ್ನು ಕಡಿಯಲು ಪ್ರಾರಂಭಿಸಿದೆ.

“ಚೆಂಡಿಪಾಡಾ ಮೀಸಲು ಅರಣ್ಯದ 643.095 ಹೆಕ್ಟೇರ್ ಪ್ರದೇಶವನ್ನು ಕಲ್ಲಿದ್ದಲು ಗಣಿಗಾರಿಕೆಗಾಗಿ ಹಸ್ತಾಂತರಿಸುವ ಸಂಬಂಧ ಅಂಗುಲ್‌ನ ವಿಭಾಗೀಯ ಅರಣ್ಯಾಧಿಕಾರಿಯವರು ಎಸ್‌ಸಿಸಿಎಲ್ ಕಂಪನಿಯ ಜನರಲ್ ಮ್ಯಾನೇಜರ್‌ಗೆ ಪತ್ರ ಬರೆದಿದ್ದಾರೆ. ಚೆಂಡಿಪಾಡಾ ಮೀಸಲು ಅರಣ್ಯ ಪ್ರದೇಶದ ಸುಮಾರು 1,05,092 ಮರಗಳನ್ನು ಕಡಿಯಲು ಮುಂದಾಗಿದ್ದಾರೆ. ಈ ಪೈಕಿ ಕಂದಾಯ ಅರಣ್ಯದ 1,087 ಮರಗಳು ಮತ್ತು ಅರಣ್ಯೇತರ ಪ್ರದೇಶದ 327 ಮರಗಳು ಒಳಗೊಂಡಿದೆ. ಇದು ಸಂಪೂರ್ಣ ಕಾನೂನು ಬಾಹಿರವಾಗಿದೆ” ಎಂದು ಗ್ರಾಮಸ್ಥರ ಪರ ವಕೀಲ ಶಂಕರ್ ಪಾಣಿ ಹೇಳಿದ್ದಾರೆ.

ವಿಭಾಗೀಯ ಅರಣ್ಯಾಧಿಕಾರಿಯು ತನ್ನ ಪತ್ರದಲ್ಲಿ ಅರಣ್ಯ ಭೂಮಿ ವರ್ಗಾವಣೆಗೆ ಅರಣ್ಯ ಸಂರಕ್ಷಣಾ ಕಾಯ್ದೆ-1980ರ ಸೆಕ್ಷನ್ (2) ಅಡಿಯಲ್ಲಿ ನೀಡಿರುವ ಅನುಮೋದನೆ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯದ ಅನುಮೋದನೆ ಆದೇಶದ ಷರತ್ತುಗಳ ಹಂತ-Iಮತ್ತು ಹಂತ-IIರ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಶಂಕರ್ ಪಾಣಿ ತಿಳಿಸಿದ್ದಾರೆ.

ಅನುಮೋದನೆ ಷರತ್ತಿನ ಹಂತ-I ಮತ್ತು ಹಂತ-IIನ್ನು ಇಲ್ಲಿ ಅನುಸರಿಸಿಲ್ಲ. ವಿಶೇಷವಾಗಿ ಹಂತ-IIರ ಕ್ಲಿಯರೆನ್ಸ್‌ನ ಷರತ್ತು ಸಂಖ್ಯೆ (ಬಿ) 13 ಅನ್ನು ಪೂರೈಸಿಲ್ಲ. ಈ ಷರತ್ತು, ಅರಣ್ಯ ಹಕ್ಕುಗಳ ಇತ್ಯರ್ಥ, ಗ್ರಾಮ ಸಭೆಯ ಲಿಖಿತ ಒಪ್ಪಿಗೆ ಪಡೆಯುವುದು ಮತ್ತು ಕಛೇರಿಯ ಜ್ಞಾಪಕ ಪತ್ರದ ಸಂಪೂರ್ಣ ಅನುಸರಣೆಯನ್ನು ಒಳಗೊಂಡಿರುತ್ತದೆ ಎಂದು ಶಂಕರ್ ಪಾಣಿ ವಿವರಿಸಿದ್ದಾರೆ.

ಆದಾಗ್ಯೂ, ಷರತ್ತು 13ರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಅರಣ್ಯೇತರ ಬಳಕೆಗಾಗಿ ಭೂಮಿಯನ್ನು ಅಕ್ರಮವಾಗಿ ಎಸ್‌ಸಿಸಿಎಲ್‌ ಕಂಪನಿಗೆ ವರ್ಗಾಯಿಸಲಾಗಿದೆ ಎಂದು ಪಾಣಿ ಆರೋಪಿಸಿದ್ದಾರೆ. ಅರಣ್ಯ ಪ್ರದೇಶದ ನಿವ್ವಳ ಪ್ರಸ್ತುತ ಮೌಲ್ಯವನ್ನು (ಎನ್‌ಪಿವಿ) ಪೂರ್ಣವಾಗಿ ಠೇವಣಿ ಮಾಡುವಂತೆ ಎಸ್‌ಸಿಸಿಎಲ್ ಕೇಳಲಾಗಿದೆ. ಆದರೆ, ಅದನ್ನೂ ಮಾಡಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.

ನ್ಯಾಯಾಂಗ ಸದಸ್ಯ ಅಮಿತ್ ಸ್ಥಾಲೇಕರ್ ಮತ್ತು ತಜ್ಞ ಸದಸ್ಯ ಅರುಣ್ ಕುಮಾರ್ ವರ್ಮಾ ಅವರನ್ನೊಳಗೊಂಡ ಎನ್‌ಜಿಟಿ ಪೀಠವು ನಾಲ್ಕು ವಾರಗಳಲ್ಲಿ ಅಫಿಡವಿಟ್‌ ಸಲ್ಲಿಸುವಂತೆ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ, ಬುಡಕಟ್ಟು ವ್ಯವಹಾರಗಳ ಸಚಿವಾಲಯ ಮತ್ತು ಎಸ್‌ಸಿಸಿಎಲ್‌ ಕಂಪನಿಗೆ ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 21ಕ್ಕೆ ನಿಗದಿಪಡಿಸಿದೆ.

ಇದನ್ನೂ ಓದಿ : ಲಂಚ ಪ್ರಕರಣ: ಉದ್ಯಮಿ ಅದಾನಿ ವಿರುದ್ಧ ಜಂಟಿ ವಿಚಾರಣೆಗೆ ಯುಎಸ್ ನ್ಯಾಯಾಲಯ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...