Homeಮುಖಪುಟಕಲ್ಲಿದ್ದಲು ಗಣಿಗಾರಿಕೆಗಾಗಿ 1 ಲಕ್ಷಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಕಂಪನಿ : ಸರ್ಕಾರಕ್ಕೆ ಎನ್‌ಜಿಟಿ...

ಕಲ್ಲಿದ್ದಲು ಗಣಿಗಾರಿಕೆಗಾಗಿ 1 ಲಕ್ಷಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಕಂಪನಿ : ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್

- Advertisement -
- Advertisement -

ಒಡಿಶಾದ ಅಂಗುಲ್ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗಾಗಿ 1,05,092 ಮರಗಳನ್ನು ಕಡಿಯಲು ಮುಂದಾಗಿರುವುದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಸಿಂಗರೇಣಿ ಕೋಲೀಯರೀಸ್ ಕಂಪನಿ ಲಿಮಿಟೆಡ್ (ಎಸ್‌ಸಿಸಿಎಲ್‌) ಗೆ ನೋಟಿಸ್ ಜಾರಿ ಮಾಡಿದೆ.

ಅರಣ್ಯ ಸಂರಕ್ಷಣಾ ಕಾಯ್ದೆ-1980ರ ನಿಯಮಗಳನ್ನು ಸರಿಯಾಗಿ ಅನುಸರಿಸದೆ ನೈನಿ ಓಪನ್‌ಕಾಸ್ಟ್ ಕಲ್ಲಿದ್ದಲು ಯೋಜನೆಗಾಗಿ ಎಸ್‌ಸಿಸಿಎಲ್ ಕಂಪನಿಗೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಚೆಂಡಿಪಾಡಾ ಮತ್ತು ಸಲೂಯಿಖಾಮನ್‌ನ ಒಂಬತ್ತು ಗ್ರಾಮಸ್ಥರು ಎನ್‌ಜಿಟಿಯ ಪೂರ್ವ ವಲಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.

ತೆಲಂಗಾಣ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜಂಟಿ ಒಡೆತನದ ಸಾರ್ವಜನಿಕ ವಲಯದ ಕಂಪನಿಯಾದ ಎಸ್‌ಸಿಸಿಎಲ್‌ ಅಂಗುಲ್‌ನ ಚೆಂಡಿಪಾಡಾ ತಾಲೂಕಿನಲ್ಲಿ ಗಣಿಗಾರಿಕೆ ಮಾಡಲು ತಯಾರಿ ನಡೆಸುತ್ತಿದೆ.

ಅರ್ಜಿದಾರರ ಪ್ರಕಾರ, ಎಸ್‌ಸಿಸಿಎಲ್ ಈಗಾಗಲೇ ಅರಣ್ಯದ ಕೆಲವು ಭಾಗಗಳಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಮರಗಳನ್ನು ಕಡಿಯಲು ಪ್ರಾರಂಭಿಸಿದೆ.

“ಚೆಂಡಿಪಾಡಾ ಮೀಸಲು ಅರಣ್ಯದ 643.095 ಹೆಕ್ಟೇರ್ ಪ್ರದೇಶವನ್ನು ಕಲ್ಲಿದ್ದಲು ಗಣಿಗಾರಿಕೆಗಾಗಿ ಹಸ್ತಾಂತರಿಸುವ ಸಂಬಂಧ ಅಂಗುಲ್‌ನ ವಿಭಾಗೀಯ ಅರಣ್ಯಾಧಿಕಾರಿಯವರು ಎಸ್‌ಸಿಸಿಎಲ್ ಕಂಪನಿಯ ಜನರಲ್ ಮ್ಯಾನೇಜರ್‌ಗೆ ಪತ್ರ ಬರೆದಿದ್ದಾರೆ. ಚೆಂಡಿಪಾಡಾ ಮೀಸಲು ಅರಣ್ಯ ಪ್ರದೇಶದ ಸುಮಾರು 1,05,092 ಮರಗಳನ್ನು ಕಡಿಯಲು ಮುಂದಾಗಿದ್ದಾರೆ. ಈ ಪೈಕಿ ಕಂದಾಯ ಅರಣ್ಯದ 1,087 ಮರಗಳು ಮತ್ತು ಅರಣ್ಯೇತರ ಪ್ರದೇಶದ 327 ಮರಗಳು ಒಳಗೊಂಡಿದೆ. ಇದು ಸಂಪೂರ್ಣ ಕಾನೂನು ಬಾಹಿರವಾಗಿದೆ” ಎಂದು ಗ್ರಾಮಸ್ಥರ ಪರ ವಕೀಲ ಶಂಕರ್ ಪಾಣಿ ಹೇಳಿದ್ದಾರೆ.

ವಿಭಾಗೀಯ ಅರಣ್ಯಾಧಿಕಾರಿಯು ತನ್ನ ಪತ್ರದಲ್ಲಿ ಅರಣ್ಯ ಭೂಮಿ ವರ್ಗಾವಣೆಗೆ ಅರಣ್ಯ ಸಂರಕ್ಷಣಾ ಕಾಯ್ದೆ-1980ರ ಸೆಕ್ಷನ್ (2) ಅಡಿಯಲ್ಲಿ ನೀಡಿರುವ ಅನುಮೋದನೆ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯದ ಅನುಮೋದನೆ ಆದೇಶದ ಷರತ್ತುಗಳ ಹಂತ-Iಮತ್ತು ಹಂತ-IIರ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಶಂಕರ್ ಪಾಣಿ ತಿಳಿಸಿದ್ದಾರೆ.

ಅನುಮೋದನೆ ಷರತ್ತಿನ ಹಂತ-I ಮತ್ತು ಹಂತ-IIನ್ನು ಇಲ್ಲಿ ಅನುಸರಿಸಿಲ್ಲ. ವಿಶೇಷವಾಗಿ ಹಂತ-IIರ ಕ್ಲಿಯರೆನ್ಸ್‌ನ ಷರತ್ತು ಸಂಖ್ಯೆ (ಬಿ) 13 ಅನ್ನು ಪೂರೈಸಿಲ್ಲ. ಈ ಷರತ್ತು, ಅರಣ್ಯ ಹಕ್ಕುಗಳ ಇತ್ಯರ್ಥ, ಗ್ರಾಮ ಸಭೆಯ ಲಿಖಿತ ಒಪ್ಪಿಗೆ ಪಡೆಯುವುದು ಮತ್ತು ಕಛೇರಿಯ ಜ್ಞಾಪಕ ಪತ್ರದ ಸಂಪೂರ್ಣ ಅನುಸರಣೆಯನ್ನು ಒಳಗೊಂಡಿರುತ್ತದೆ ಎಂದು ಶಂಕರ್ ಪಾಣಿ ವಿವರಿಸಿದ್ದಾರೆ.

ಆದಾಗ್ಯೂ, ಷರತ್ತು 13ರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಅರಣ್ಯೇತರ ಬಳಕೆಗಾಗಿ ಭೂಮಿಯನ್ನು ಅಕ್ರಮವಾಗಿ ಎಸ್‌ಸಿಸಿಎಲ್‌ ಕಂಪನಿಗೆ ವರ್ಗಾಯಿಸಲಾಗಿದೆ ಎಂದು ಪಾಣಿ ಆರೋಪಿಸಿದ್ದಾರೆ. ಅರಣ್ಯ ಪ್ರದೇಶದ ನಿವ್ವಳ ಪ್ರಸ್ತುತ ಮೌಲ್ಯವನ್ನು (ಎನ್‌ಪಿವಿ) ಪೂರ್ಣವಾಗಿ ಠೇವಣಿ ಮಾಡುವಂತೆ ಎಸ್‌ಸಿಸಿಎಲ್ ಕೇಳಲಾಗಿದೆ. ಆದರೆ, ಅದನ್ನೂ ಮಾಡಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.

ನ್ಯಾಯಾಂಗ ಸದಸ್ಯ ಅಮಿತ್ ಸ್ಥಾಲೇಕರ್ ಮತ್ತು ತಜ್ಞ ಸದಸ್ಯ ಅರುಣ್ ಕುಮಾರ್ ವರ್ಮಾ ಅವರನ್ನೊಳಗೊಂಡ ಎನ್‌ಜಿಟಿ ಪೀಠವು ನಾಲ್ಕು ವಾರಗಳಲ್ಲಿ ಅಫಿಡವಿಟ್‌ ಸಲ್ಲಿಸುವಂತೆ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ, ಬುಡಕಟ್ಟು ವ್ಯವಹಾರಗಳ ಸಚಿವಾಲಯ ಮತ್ತು ಎಸ್‌ಸಿಸಿಎಲ್‌ ಕಂಪನಿಗೆ ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 21ಕ್ಕೆ ನಿಗದಿಪಡಿಸಿದೆ.

ಇದನ್ನೂ ಓದಿ : ಲಂಚ ಪ್ರಕರಣ: ಉದ್ಯಮಿ ಅದಾನಿ ವಿರುದ್ಧ ಜಂಟಿ ವಿಚಾರಣೆಗೆ ಯುಎಸ್ ನ್ಯಾಯಾಲಯ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...