Homeಮುಖಪುಟಕಲ್ಲಿದ್ದಲು ಗಣಿಗಾರಿಕೆಗಾಗಿ 1 ಲಕ್ಷಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಕಂಪನಿ : ಸರ್ಕಾರಕ್ಕೆ ಎನ್‌ಜಿಟಿ...

ಕಲ್ಲಿದ್ದಲು ಗಣಿಗಾರಿಕೆಗಾಗಿ 1 ಲಕ್ಷಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಕಂಪನಿ : ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್

- Advertisement -
- Advertisement -

ಒಡಿಶಾದ ಅಂಗುಲ್ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗಾಗಿ 1,05,092 ಮರಗಳನ್ನು ಕಡಿಯಲು ಮುಂದಾಗಿರುವುದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಸಿಂಗರೇಣಿ ಕೋಲೀಯರೀಸ್ ಕಂಪನಿ ಲಿಮಿಟೆಡ್ (ಎಸ್‌ಸಿಸಿಎಲ್‌) ಗೆ ನೋಟಿಸ್ ಜಾರಿ ಮಾಡಿದೆ.

ಅರಣ್ಯ ಸಂರಕ್ಷಣಾ ಕಾಯ್ದೆ-1980ರ ನಿಯಮಗಳನ್ನು ಸರಿಯಾಗಿ ಅನುಸರಿಸದೆ ನೈನಿ ಓಪನ್‌ಕಾಸ್ಟ್ ಕಲ್ಲಿದ್ದಲು ಯೋಜನೆಗಾಗಿ ಎಸ್‌ಸಿಸಿಎಲ್ ಕಂಪನಿಗೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಚೆಂಡಿಪಾಡಾ ಮತ್ತು ಸಲೂಯಿಖಾಮನ್‌ನ ಒಂಬತ್ತು ಗ್ರಾಮಸ್ಥರು ಎನ್‌ಜಿಟಿಯ ಪೂರ್ವ ವಲಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.

ತೆಲಂಗಾಣ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜಂಟಿ ಒಡೆತನದ ಸಾರ್ವಜನಿಕ ವಲಯದ ಕಂಪನಿಯಾದ ಎಸ್‌ಸಿಸಿಎಲ್‌ ಅಂಗುಲ್‌ನ ಚೆಂಡಿಪಾಡಾ ತಾಲೂಕಿನಲ್ಲಿ ಗಣಿಗಾರಿಕೆ ಮಾಡಲು ತಯಾರಿ ನಡೆಸುತ್ತಿದೆ.

ಅರ್ಜಿದಾರರ ಪ್ರಕಾರ, ಎಸ್‌ಸಿಸಿಎಲ್ ಈಗಾಗಲೇ ಅರಣ್ಯದ ಕೆಲವು ಭಾಗಗಳಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಮರಗಳನ್ನು ಕಡಿಯಲು ಪ್ರಾರಂಭಿಸಿದೆ.

“ಚೆಂಡಿಪಾಡಾ ಮೀಸಲು ಅರಣ್ಯದ 643.095 ಹೆಕ್ಟೇರ್ ಪ್ರದೇಶವನ್ನು ಕಲ್ಲಿದ್ದಲು ಗಣಿಗಾರಿಕೆಗಾಗಿ ಹಸ್ತಾಂತರಿಸುವ ಸಂಬಂಧ ಅಂಗುಲ್‌ನ ವಿಭಾಗೀಯ ಅರಣ್ಯಾಧಿಕಾರಿಯವರು ಎಸ್‌ಸಿಸಿಎಲ್ ಕಂಪನಿಯ ಜನರಲ್ ಮ್ಯಾನೇಜರ್‌ಗೆ ಪತ್ರ ಬರೆದಿದ್ದಾರೆ. ಚೆಂಡಿಪಾಡಾ ಮೀಸಲು ಅರಣ್ಯ ಪ್ರದೇಶದ ಸುಮಾರು 1,05,092 ಮರಗಳನ್ನು ಕಡಿಯಲು ಮುಂದಾಗಿದ್ದಾರೆ. ಈ ಪೈಕಿ ಕಂದಾಯ ಅರಣ್ಯದ 1,087 ಮರಗಳು ಮತ್ತು ಅರಣ್ಯೇತರ ಪ್ರದೇಶದ 327 ಮರಗಳು ಒಳಗೊಂಡಿದೆ. ಇದು ಸಂಪೂರ್ಣ ಕಾನೂನು ಬಾಹಿರವಾಗಿದೆ” ಎಂದು ಗ್ರಾಮಸ್ಥರ ಪರ ವಕೀಲ ಶಂಕರ್ ಪಾಣಿ ಹೇಳಿದ್ದಾರೆ.

ವಿಭಾಗೀಯ ಅರಣ್ಯಾಧಿಕಾರಿಯು ತನ್ನ ಪತ್ರದಲ್ಲಿ ಅರಣ್ಯ ಭೂಮಿ ವರ್ಗಾವಣೆಗೆ ಅರಣ್ಯ ಸಂರಕ್ಷಣಾ ಕಾಯ್ದೆ-1980ರ ಸೆಕ್ಷನ್ (2) ಅಡಿಯಲ್ಲಿ ನೀಡಿರುವ ಅನುಮೋದನೆ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯದ ಅನುಮೋದನೆ ಆದೇಶದ ಷರತ್ತುಗಳ ಹಂತ-Iಮತ್ತು ಹಂತ-IIರ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಶಂಕರ್ ಪಾಣಿ ತಿಳಿಸಿದ್ದಾರೆ.

ಅನುಮೋದನೆ ಷರತ್ತಿನ ಹಂತ-I ಮತ್ತು ಹಂತ-IIನ್ನು ಇಲ್ಲಿ ಅನುಸರಿಸಿಲ್ಲ. ವಿಶೇಷವಾಗಿ ಹಂತ-IIರ ಕ್ಲಿಯರೆನ್ಸ್‌ನ ಷರತ್ತು ಸಂಖ್ಯೆ (ಬಿ) 13 ಅನ್ನು ಪೂರೈಸಿಲ್ಲ. ಈ ಷರತ್ತು, ಅರಣ್ಯ ಹಕ್ಕುಗಳ ಇತ್ಯರ್ಥ, ಗ್ರಾಮ ಸಭೆಯ ಲಿಖಿತ ಒಪ್ಪಿಗೆ ಪಡೆಯುವುದು ಮತ್ತು ಕಛೇರಿಯ ಜ್ಞಾಪಕ ಪತ್ರದ ಸಂಪೂರ್ಣ ಅನುಸರಣೆಯನ್ನು ಒಳಗೊಂಡಿರುತ್ತದೆ ಎಂದು ಶಂಕರ್ ಪಾಣಿ ವಿವರಿಸಿದ್ದಾರೆ.

ಆದಾಗ್ಯೂ, ಷರತ್ತು 13ರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಅರಣ್ಯೇತರ ಬಳಕೆಗಾಗಿ ಭೂಮಿಯನ್ನು ಅಕ್ರಮವಾಗಿ ಎಸ್‌ಸಿಸಿಎಲ್‌ ಕಂಪನಿಗೆ ವರ್ಗಾಯಿಸಲಾಗಿದೆ ಎಂದು ಪಾಣಿ ಆರೋಪಿಸಿದ್ದಾರೆ. ಅರಣ್ಯ ಪ್ರದೇಶದ ನಿವ್ವಳ ಪ್ರಸ್ತುತ ಮೌಲ್ಯವನ್ನು (ಎನ್‌ಪಿವಿ) ಪೂರ್ಣವಾಗಿ ಠೇವಣಿ ಮಾಡುವಂತೆ ಎಸ್‌ಸಿಸಿಎಲ್ ಕೇಳಲಾಗಿದೆ. ಆದರೆ, ಅದನ್ನೂ ಮಾಡಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.

ನ್ಯಾಯಾಂಗ ಸದಸ್ಯ ಅಮಿತ್ ಸ್ಥಾಲೇಕರ್ ಮತ್ತು ತಜ್ಞ ಸದಸ್ಯ ಅರುಣ್ ಕುಮಾರ್ ವರ್ಮಾ ಅವರನ್ನೊಳಗೊಂಡ ಎನ್‌ಜಿಟಿ ಪೀಠವು ನಾಲ್ಕು ವಾರಗಳಲ್ಲಿ ಅಫಿಡವಿಟ್‌ ಸಲ್ಲಿಸುವಂತೆ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ, ಬುಡಕಟ್ಟು ವ್ಯವಹಾರಗಳ ಸಚಿವಾಲಯ ಮತ್ತು ಎಸ್‌ಸಿಸಿಎಲ್‌ ಕಂಪನಿಗೆ ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 21ಕ್ಕೆ ನಿಗದಿಪಡಿಸಿದೆ.

ಇದನ್ನೂ ಓದಿ : ಲಂಚ ಪ್ರಕರಣ: ಉದ್ಯಮಿ ಅದಾನಿ ವಿರುದ್ಧ ಜಂಟಿ ವಿಚಾರಣೆಗೆ ಯುಎಸ್ ನ್ಯಾಯಾಲಯ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...