Homeಮುಖಪುಟಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

- Advertisement -
- Advertisement -

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ.

ಈ ಆದೇಶವನ್ನು ತಕ್ಷಣವೇ ರದ್ದುಗೊಳಿಸುವಂತೆ ಪರಿಸರವಾದಿಗಳು ಮತ್ತು ನಿವೃತ್ತ ಅರಣ್ಯಾಧಿಕಾರಿಗಳು ಅಸ್ಸಾಂ ಸರ್ಕಾರಕ್ಕೆ ಪತ್ರ ಬರೆದ ನಾಲ್ಕು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ಅರಣ್ಯ ಸಿಬ್ಬಂದಿಯನ್ನು ಚುನಾವಣೆ ಅಥವಾ ಇತರ ಅರಣ್ಯೇತರ ಕೆಲಸಗಳಿಗೆ ಬಳಸಬಾರದು ಎಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಅಸ್ಸಾಂ ಸರ್ಕಾರ ಉಲ್ಲಂಘಿಸಿದೆ ಎಂದು ಆರೋಪಿಸಿ ವಕೀಲ ಗೌರವ್ ಬನ್ಸಾಲ್ ಸಲ್ಲಿಸಿದ್ದ ಅರ್ಜಿಯನ್ನು ಎನ್‌ಜಿಟಿ ವಿಚಾರಣೆ ನಡೆಸುತ್ತಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2024ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಈ ತೀರ್ಪಿನಲ್ಲಿ, ರಾಜ್ಯಗಳು ಅರಣ್ಯ ಸಿಬ್ಬಂದಿಯನ್ನು ಚುನಾವಣೆ ಅಥವಾ ಚಾರ್ ಧಾಮ್ ಯಾತ್ರೆಯಂತಹ ಅರಣ್ಯೇತರ ಕಾರ್ಯಗಳಿಗೆ ನಿಯೋಜಿಸಬಾರದು ಎಂದು ಸ್ಪಷ್ಟಪಡಿಸಿತ್ತು.

ಅರ್ಜಿದಾರರು ಸರ್ಕಾರದ ಆದೇಶ ಭಾರತದ ಜೈವಿಕ ವೈವಿಧ್ಯತೆ ಕಾಯ್ದೆ, 2002ರ ಉಲ್ಲಂಘನೆಯೂ ಹೌದು ಎಂದೂ ವಾದಿಸಿದ್ದಾರೆ. ಈ ಕಾಯ್ದೆಯ ಪ್ರಕಾರ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಂತಹ ಸಂಪನ್ಮೂಲ ಭರಿತ ಪ್ರದೇಶಗಳ ಮೇಲೆ ಸರ್ಕಾರ ನಿರಂತರ ನಿಗಾ ವಹಿಸುವುದು ಕಡ್ಡಾಯವಾಗಿದೆ. ಅಲ್ಲದೆ, ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ ಮುಖ್ಯ ಕರ್ತವ್ಯವು ಅರಣ್ಯಗಳು ಮತ್ತು ಸಂರಕ್ಷಿತ ಪ್ರದೇಶಗಳನ್ನು ರಕ್ಷಿಸುವುದೇ ಆಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಎನ್‌ಜಿಟಿ ಸರ್ಕಾರದ ಆದೇಶವನ್ನು ತಡೆಹಿಡಿದು ತೀರ್ಪು ನೀಡಿದೆ. ಇಲ್ಲದಿದ್ದರೆ ಅದು ‘ಇದು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡುತ್ತದೆ’ ಎಂದು ಹೇಳಿದೆ. ಎನ್‌ಜಿಟಿಯ ನ್ಯಾಯಾಂಗ ಸದಸ್ಯ ನ್ಯಾಯಮೂರ್ತಿ ಅರುಣ್ ಕುಮಾರ್ ತ್ಯಾಗಿ ಮತ್ತು ತಜ್ಞ ಸದಸ್ಯ ಈಶ್ವರ್ ಸಿಂಗ್ ಅವರಿದ್ದ ಪೀಠವು, ರಾಜ್ಯ ಸರ್ಕಾರ, ಪರಿಸರ ಸಚಿವಾಲಯ, ರಾಷ್ಟ್ರೀಯ ಜೀವವೈವಿಧ್ಯ ಪ್ರಾಧಿಕಾರ, ಅಸ್ಸಾಂನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವಿಶೇಷ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ, ಅಸ್ಸಾಂ ಚುನಾವಣೆಯಲ್ಲಿ ಅರಣ್ಯ ಸಿಬ್ಬಂದಿಯನ್ನು ನಿಯೋಜಿಸುವ ಕ್ರಮವನ್ನು ‘ಕಾನೂನುಬಾಹಿರ’ ಎಂದು ಕರೆದಿರುವುದಾಗಿ ದಿ ವೈರ್ ವರದಿ ಮಾಡಿದೆ.

ಪೀಠವು ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಪಟ್ಟಿ ಮಾಡಿದೆ.

ಮಾರ್ಚ್ 30ರಂದು ‘ದಿ ವೈರ್’ ವರದಿ ಮಾಡಿದಂತೆ, ಅಸ್ಸಾಂ ಚುನಾವಣೆಗೆ ಅರಣ್ಯ ಸಿಬ್ಬಂದಿಯನ್ನು ನಿಯೋಜಿಸುವ ಸರ್ಕಾರದ ನಿರ್ಧಾರದ ವಿರುದ್ಧ ಪರಿಸರವಾದಿಗಳು ಮತ್ತು ಮಾಜಿ ನಾಗರಿಕ ಸೇವಾ ಅಧಿಕಾರಿಗಳು ತಕ್ಷಣವೇ ಆದೇಶ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ, ಮಾರ್ಚ್ 31 ರಂದು 40 ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಅಸ್ಸಾಂ ಮುಖ್ಯ ಕಾರ್ಯದರ್ಶಿಯವರಿಗೆ ಮತ್ತೊಮ್ಮೆ ಪತ್ರ ಬರೆದು, ಈ ಆದೇಶವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದರು.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...