Homeಮುಖಪುಟಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

- Advertisement -
- Advertisement -

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ.

ಈ ಆದೇಶವನ್ನು ತಕ್ಷಣವೇ ರದ್ದುಗೊಳಿಸುವಂತೆ ಪರಿಸರವಾದಿಗಳು ಮತ್ತು ನಿವೃತ್ತ ಅರಣ್ಯಾಧಿಕಾರಿಗಳು ಅಸ್ಸಾಂ ಸರ್ಕಾರಕ್ಕೆ ಪತ್ರ ಬರೆದ ನಾಲ್ಕು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ಅರಣ್ಯ ಸಿಬ್ಬಂದಿಯನ್ನು ಚುನಾವಣೆ ಅಥವಾ ಇತರ ಅರಣ್ಯೇತರ ಕೆಲಸಗಳಿಗೆ ಬಳಸಬಾರದು ಎಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಅಸ್ಸಾಂ ಸರ್ಕಾರ ಉಲ್ಲಂಘಿಸಿದೆ ಎಂದು ಆರೋಪಿಸಿ ವಕೀಲ ಗೌರವ್ ಬನ್ಸಾಲ್ ಸಲ್ಲಿಸಿದ್ದ ಅರ್ಜಿಯನ್ನು ಎನ್‌ಜಿಟಿ ವಿಚಾರಣೆ ನಡೆಸುತ್ತಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2024ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಈ ತೀರ್ಪಿನಲ್ಲಿ, ರಾಜ್ಯಗಳು ಅರಣ್ಯ ಸಿಬ್ಬಂದಿಯನ್ನು ಚುನಾವಣೆ ಅಥವಾ ಚಾರ್ ಧಾಮ್ ಯಾತ್ರೆಯಂತಹ ಅರಣ್ಯೇತರ ಕಾರ್ಯಗಳಿಗೆ ನಿಯೋಜಿಸಬಾರದು ಎಂದು ಸ್ಪಷ್ಟಪಡಿಸಿತ್ತು.

ಅರ್ಜಿದಾರರು ಸರ್ಕಾರದ ಆದೇಶ ಭಾರತದ ಜೈವಿಕ ವೈವಿಧ್ಯತೆ ಕಾಯ್ದೆ, 2002ರ ಉಲ್ಲಂಘನೆಯೂ ಹೌದು ಎಂದೂ ವಾದಿಸಿದ್ದಾರೆ. ಈ ಕಾಯ್ದೆಯ ಪ್ರಕಾರ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಂತಹ ಸಂಪನ್ಮೂಲ ಭರಿತ ಪ್ರದೇಶಗಳ ಮೇಲೆ ಸರ್ಕಾರ ನಿರಂತರ ನಿಗಾ ವಹಿಸುವುದು ಕಡ್ಡಾಯವಾಗಿದೆ. ಅಲ್ಲದೆ, ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ ಮುಖ್ಯ ಕರ್ತವ್ಯವು ಅರಣ್ಯಗಳು ಮತ್ತು ಸಂರಕ್ಷಿತ ಪ್ರದೇಶಗಳನ್ನು ರಕ್ಷಿಸುವುದೇ ಆಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಎನ್‌ಜಿಟಿ ಸರ್ಕಾರದ ಆದೇಶವನ್ನು ತಡೆಹಿಡಿದು ತೀರ್ಪು ನೀಡಿದೆ. ಇಲ್ಲದಿದ್ದರೆ ಅದು ‘ಇದು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡುತ್ತದೆ’ ಎಂದು ಹೇಳಿದೆ. ಎನ್‌ಜಿಟಿಯ ನ್ಯಾಯಾಂಗ ಸದಸ್ಯ ನ್ಯಾಯಮೂರ್ತಿ ಅರುಣ್ ಕುಮಾರ್ ತ್ಯಾಗಿ ಮತ್ತು ತಜ್ಞ ಸದಸ್ಯ ಈಶ್ವರ್ ಸಿಂಗ್ ಅವರಿದ್ದ ಪೀಠವು, ರಾಜ್ಯ ಸರ್ಕಾರ, ಪರಿಸರ ಸಚಿವಾಲಯ, ರಾಷ್ಟ್ರೀಯ ಜೀವವೈವಿಧ್ಯ ಪ್ರಾಧಿಕಾರ, ಅಸ್ಸಾಂನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವಿಶೇಷ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ, ಅಸ್ಸಾಂ ಚುನಾವಣೆಯಲ್ಲಿ ಅರಣ್ಯ ಸಿಬ್ಬಂದಿಯನ್ನು ನಿಯೋಜಿಸುವ ಕ್ರಮವನ್ನು ‘ಕಾನೂನುಬಾಹಿರ’ ಎಂದು ಕರೆದಿರುವುದಾಗಿ ದಿ ವೈರ್ ವರದಿ ಮಾಡಿದೆ.

ಪೀಠವು ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಪಟ್ಟಿ ಮಾಡಿದೆ.

ಮಾರ್ಚ್ 30ರಂದು ‘ದಿ ವೈರ್’ ವರದಿ ಮಾಡಿದಂತೆ, ಅಸ್ಸಾಂ ಚುನಾವಣೆಗೆ ಅರಣ್ಯ ಸಿಬ್ಬಂದಿಯನ್ನು ನಿಯೋಜಿಸುವ ಸರ್ಕಾರದ ನಿರ್ಧಾರದ ವಿರುದ್ಧ ಪರಿಸರವಾದಿಗಳು ಮತ್ತು ಮಾಜಿ ನಾಗರಿಕ ಸೇವಾ ಅಧಿಕಾರಿಗಳು ತಕ್ಷಣವೇ ಆದೇಶ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ, ಮಾರ್ಚ್ 31 ರಂದು 40 ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಅಸ್ಸಾಂ ಮುಖ್ಯ ಕಾರ್ಯದರ್ಶಿಯವರಿಗೆ ಮತ್ತೊಮ್ಮೆ ಪತ್ರ ಬರೆದು, ಈ ಆದೇಶವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದರು.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...