Homeಮುಖಪುಟಎನ್.ಹೆಚ್ 10 ಸಿನಿಮಾದ ಕಥೆ: ಭಾರತ ಪ್ರಕಾಶಿಸುತ್ತಿದೆ - ಹಳ್ಳಿಗಳು ಕಗ್ಗತ್ತಲೆಯಲ್ಲಿವೆ

ಎನ್.ಹೆಚ್ 10 ಸಿನಿಮಾದ ಕಥೆ: ಭಾರತ ಪ್ರಕಾಶಿಸುತ್ತಿದೆ – ಹಳ್ಳಿಗಳು ಕಗ್ಗತ್ತಲೆಯಲ್ಲಿವೆ

- Advertisement -
- Advertisement -

“ಆರ್ಟಿಕಲ್ 15” ಸಿನೆಮಾ ಆರಂಭವಾಗುವುದೇ 8 ಲೈನ್ ಹೆದ್ದಾರಿಯನ್ನು ತೋರಿಸುವುದರ ಮೂಲಕ. ನಂತರ ಇದು ಒಳಹಾದಿ ಮೂಲಕ ಹಳ್ಳಿಗಳಿಗೆ ತೆರಳುತ್ತದೆ. ಹಳ್ಳಿಗಳಲ್ಲಿನ ಜಾತೀಯತೆ ಸ್ವರೂಪ ಹೇಗಿದೆ ಎಂಬುದನ್ನು ಬಿಚ್ಚಿಡುತ್ತಾ ಹೋಗುತ್ತದೆ. ನಿರ್ದೇಶಕ ಸಿನ್ಹಾ ಆರಂಭದಲ್ಲಿಯೇ ತೋರಿಸುವ ರಾಷ್ಟ್ರೀಯ ಹೆದ್ದಾರಿ ಕೂಡ ಸಾಂಕೇತಿಕ. ಹಿಂದೆ ಈ ರಸ್ತೆ ಬದಿಗಳಲ್ಲಿ “ಭಾರತ ಪ್ರಕಾಶಿಸುತ್ತಿದೆ” ಎಂಬ ಬೃಹತ್ ಫಲಕ ಕಾಣುತ್ತಿತ್ತು. ಇದರ ಅಣಕವನ್ನು ಈ ಸಿನೆಮಾ ಮಾಡುತ್ತದೆ. ಇದು ಬಹು ಪರಿಣಾಮಕಾರಿ.

ಇಂಥದ್ದೇ ಅಣಕವನ್ನು ಕೆಲವರ್ಷಗಳ ಹಿಂದೆ ತೆರೆಕಂಡ ಎನ್.ಹೆಚ್. 10 ಕೂಡ ಮಾಡಿತ್ತು. ವಿಶಾಲವಾದ, ಜಗಮಗಿಸುವ ನುಣ್ಣನೆಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿಯೇ ಇರುವ ಹಳ್ಳಿಗಳಲ್ಲಿ ಜಾತೀಯತೆಯ ಭೀಕರ ಕಬಂಧಬಾಹು ಹೇಗಿದೆ ಎಂಬುದನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ.

ಈ ನಿಟ್ಟಿನಲ್ಲಿ ಹಿಂದಿ ಸಿನೆಮಾ ಎನ್.ಎಚ್. 10 ಅನೇಕ ಕಾರಣಗಳಿಗೆ ಮುಖ್ಯವಾಗುತ್ತದೆ. ಅಂತರ್ಜಾತಿಯ ಪ್ರೇಮಿಗಳ ಆತಂಕ, ನಗರಗಳಲ್ಲಿನ ದುಡಿಯುವ ಮಹಳೆಯರ ಅಭದ್ರತೆ, ಅಸಹಾಯಕ ಆಗಿರುವ ಪೊಲೀಸ್, ಅಪರಾಧಗಳಿಗೆ ‘ಹೆದ್ದಾರಿ’ ಆಗಿರುವ ಹೆದ್ದಾರಿಗಳು, ‘ಭಾರತ ಪ್ರಕಾಶಿಸುತ್ತಿದೆ’ ಎಂಬ ಹಣೆಪಟ್ಟಿ ಹೊತ್ತ ರಾಷ್ಟ್ರೀಯ ಹೆದ್ದಾರಿ ಮಗ್ಗುಲುಗಳಲ್ಲಿ ಇರುವ ಹಳ್ಳಿಗಳಲ್ಲಿನ ಜಾತೀಯತೆ ಕಾರಣದಿಂದ ಕೊಳೆತ ಮನಸುಗಳು, ಫ್ಯೂಡಲ್ ಸಿಸ್ಟಂ ನೆರಳಿಗೆ ನೆರಳಾಗಿರುವ ಪೊಲೀಸ್ ಮತ್ತು ಇವೆಲ್ಲದರ ಜೊತೆಗೆ ವಿದ್ಯಾವಂತ ಪುರುಷರ ನಿಸತ್ವ ‘ಇಗೋ’.

ಕಾರ್ಪೊರೇಟ್ ಕಂಪನಿಗಳಲ್ಲಿ ಸಮಯದ ಪರಿಮಿತಿ ಇಲ್ಲದೆ ದುಡಿಯುತ್ತಾ ಅಭದ್ರತೆ ಕಾರಣಕ್ಕೆ ಸದಾ ಆತಂಕದಲ್ಲಿ ನೆರಳಿನಲ್ಲಿರುವ ಮಹಿಳೆಯರ ಪ್ರತಿನಿಧಿಯಂತೆ ಈ ಚಿತ್ರದ ಮೀರಾ ಕಾಣುತ್ತಾಳೆ. ತಡರಾತ್ರಿಗಳಲ್ಲಿಯೂ ಕಚೇರಿಗೆ ತೆರಳಬೇಕಾದ ಅನಿವಾರ್ಯತೆ ಇವರ ನೆಮ್ಮದಿ ಕಸಿದುಕೊಳ್ಳುತ್ತದೆ. ಆಗಬಹುದಾದ ಅನಾಹುತಗಳ ಅರಿವಿಲ್ಲದೆ ಮಹಾನಗರಗಳಲ್ಲಿ ತಡರಾತ್ರಿ ವಹಿವಾಟು ಜಾರಿಯಲ್ಲಿರಬೇಕು ಎಂದು ಹಂಬಲಿಸುವ ವ್ಯಕ್ತಿಗಳನ್ನು ಪ್ರತಿನಿಧಿಸುವ ಪಾತ್ರವೊಂದರ ವಿವರ ಸಂಕ್ಷಿಪ್ತವಾಗಿದ್ದರೂ ಪರಿಣಾಮಕಾರಿಯಾಗಿ ಚಿತ್ರಿತವಾಗಿದೆ.

ಎಗ್ಗಿಲ್ಲದೆ ಬೆಳೆದ, ಬೆಳೆಯುತ್ತಿರುವ ಮಹಾನಗರಗಳು, ಇದರ ಫಾಯಿದೆ ತೆಗೆದುಕೊಳ್ಳುತ್ತಿರುವ ಪುಂಡು-ಫೋಕರಿಗಳು, ಇವರನ್ನು ನಿಯಂತ್ರಿಸಲಾಗದ ಅಸಹಾಯಕರಾದ ಪೊಲೀಸರು, ಇಂಥ ಪೊಲೀಸರ ಪ್ರತಿನಿಧಿಯಂತೆ ಕಾಣುವ ಠಾಣಾಧಿಕಾರಿಯಿಂದ ಸ್ವಯಂರಕ್ಷಣೆಗಾಗಿ ಗನ್ ತೆಗೆದುಕೊಳ್ಳುವಂತೆ ಮೀರಾ ಮತ್ತು ನೈಲ್ ಭೂಪಾಲನ್ ದಂಪತಿಗೆ ಶಿಫಾರಸು.

ಮೀರಾ ಕೈಗೆ ಗನ್ ಬರುತ್ತದೆ. ರಕ್ಷಣೆ ಸಲುವಾಗಿ ತೆಗೆದುಕೊಳ್ಳುವ ಗನ್ ಇವರ ಅಭದ್ರತೆಗೂ ಕಾರಣವಾಗುತ್ತದೆ. ಈ ಮೂಲಕ ಎಲ್ಲೆಡೆ ಮೊಬೈಲ್, ಇಂಟರ್ನೆಟ್ ನೆಟ್ ವರ್ಕ್. ಅಲ್ಲಲ್ಲಿ ಪೊಲೀಸ್ ಠಾಣೆಗಳು ಇರುವ ನುಣ್ಣನೆ ಮೈ ಹೊದ್ದ ಹೆದ್ದಾರಿ ಬದಿಯ ಹಳ್ಳಿಗಳಲ್ಲಿ ಇಂದಿಗೂ ಜಾರಿಯಲ್ಲಿರುವ ಅಮಾನುಷ ‘ಮಾರ್ಯಾದಾ ಹತ್ಯೆ’ ಅನಾವರಣಗೊಳ್ಳುತ್ತದೆ.

ಪೊಳ್ಳು ಇಗೋ:

ಮಹಾನಗರಗಳ ವಿದ್ಯಾವಂತ ಯುವಕರಲ್ಲಿ ಸಂಗಾತಿಯನ್ನು ಮೆಚ್ಚಿಸುವ, ಹೀರೋಯಿಸಂ ತೋರಿಸುವ ತವಕ ಹೆಚ್ಚಿರುತ್ತದೆ. ಆದರೆ ಹೀಗೆ ಮಾಡಲು ಹೋಗುವ ಮುನ್ನ ಜೊತೆಗಿರುವ; ತನ್ನನ್ನೆ ನಂಬಿದ ಸಂಗಾತಿಯ ಭದ್ರತೆ ಜೊತೆಗೆ ತನ್ನ ಬಲಾಬಲ ಬಗ್ಗೆ ಯೋಚಿಸದೆ ದುಡುಕುವವವರ ಪ್ರತಿನಿಧಿಯಂತೆ ನೈಲ್ ಭೂಪಾಲನ್ ಕಾಣುತ್ತಾನೆ.

ಢಾಭಾ ಆವರಣದಲ್ಲಿ ಯುವ ಪ್ರೇಮಿಗಳಿಬ್ಬರನ್ನು ಥಳಿಸುತ್ತಿರುವ ಗ್ಯಾಂಗಿನ ಕೃತ್ಯವನ್ನು ಹಳ್ಳಿಗರು, ಪ್ರಯಾಣಿಕರು ಮೌನವಾಗಿ ನೋಡುತ್ತಿರುತ್ತಾರೆ. ಭೂಪಾಲನ್ ಇದನ್ನು ಪ್ರಶ್ನಿಸಿ ಏಟು ತಿನ್ನುತ್ತಾನೆ. ಆದರೆ ಅಲ್ಲೆ ಮರು ಏಟು ಹಾಕದೆ ಗ್ಯಾಂಗಿನ ಬೆನ್ನು ಹತ್ತುತ್ತಾನೆ. ಇದಕ್ಕೆ ಕಾರಣ  ಜೊತೆಗಿರುವ ಗನ್ ನೀಡಿದ ಧೈರ್ಯ. ಪತ್ನಿ ಪರಿಪರಿಯಾಗಿ ಬೇಡಿಕೊಂಡರೂ ಈತ ತನ್ನ ಇಗೋ ಬಿಡುವುದಿಲ್ಲ.

ಜೊತೆಗಿರುವ ಗನ್ ಅನ್ನು ಯುವಪ್ರೇಮಿಗಳು ಮತ್ತು ತನ್ನನ್ನು ರಕ್ಷಿಸಿಕೊಳ್ಳಲು ಈತ ಬಳಸುತ್ತಾನೆಯೇ ? ಅದು ಇಲ್ಲ. ಗ್ಯಾಂಗಿನ ಕೃತ್ಯವನ್ನು ಅಸಹಾಯಕನಂತೆ ನೋಡುತ್ತಾನೆ. ಪಾರಾಗುವ ಯತ್ನದಲ್ಲಿ ತಾನೂ ಅವರಿಗೆ ಸಿಕ್ಕಿ ಬೀಳುವುದಲ್ಲದೆ ಪತ್ನಿಯೂ ಸಿಲುಕಿಕೊಳ್ಳುವಂತೆ ಮಾಡುತ್ತಾನೆ. ಮತ್ತೆ ಪಾರಾಗುವ ಯತ್ನ ಮಾಡುತ್ತಾನೆ. ಆಗ ಘಟಿಸುವುದೆ ಬೇರೆ…

ಜಾತಿಯ ಮರ್ಯಾದೆ ಕಾರಣಕ್ಕೆ ತನ್ನ ಒಡ ಹುಟ್ಟಿದ ತಂಗಿ ಮತ್ತು ಈಕೆಯ ಪ್ರೇಮಿಯನ್ನು ಕೊಲ್ಲುವ ಸತ್ಬೀರ್ ಇಂಥವರೆಲ್ಲರ ಪ್ರತಿನಿಧಿಯಾಗಿ ಕಾಣುತ್ತಾನೆ. ಈ ಕೃತ್ಯಕ್ಕೆ ಸಾಕ್ಷಿಯಾದ ದಂಪತಿಗಳನ್ನು ಮುಗಿಸಲು ಇವನು ಮತ್ತಿವನ ತಂಡ ಬೆನ್ನು ಬೀಳುತ್ತದೆ. ಈ ಕೊಲೆಗಡುಕರಿಂದ ಪಾರಾಗುತ್ತಾ ಮತ್ತೆಮತ್ತೆ ಅಂಥವರೊಂದಿಗೆ ನೆಂಟು ಇರುವವರ ಹಿಡಿತಕ್ಕೆ ಸಿಲುಕಿ ಮತ್ತೆ ಅವರಿಂದ ಪಾರಾಗುತ್ತಾ ಮತ್ತೆ ಅಂಥವರ ಕೈಗೆ ಸಿಲುಕುವ ಮೀರಾ ಸ್ಥಿತಿ ತಲ್ಲಣ ಮೂಡಿಸುತ್ತದೆ.

ಪಾರಾಗುವ ಹಾದಿಯಲ್ಲಿ ಇಂದಿಗೂ ಭಾರತದ ಅನೇಕ ಹಳ್ಳಿಗಳಲ್ಲಿ ಜಾರಿಯಲ್ಲಿರುವ ಫ್ಯೂಡಲ್ ಸಂಸ್ಕೃತಿ, ಜಾತೀಯ ದರ್ಬಾರು, ಪಾಳೆಗಾರಿಕೆ ಮನೋಭಾವದ ಸರಪಂಚರು ಮತ್ತು ಅಸಹಾಯಕತೆಯಿಂದ ಇಂಥವರ ಸೇವಕರಂತೆ ಆಡುವ ಪೊಲೀಸರ ಚಿತ್ರಣ ದೊರೆಯುತ್ತದೆ. ಅಸಹಾಯಕವಾಗಿ ಕಾಣುವ ಮೀರಾ ತನ್ನ ಪ್ರಾಣ ಲೆಕ್ಕಿಸದೆ ಕೊಲೆಗಡುಕರನ್ನು ಬೇಟೆಯಾಡುವ ರೀತಿ ಬಹು ಪರಿಣಾಮಕಾರಿಯಾಗಿ ಚಿತ್ರಿತವಾಗಿದೆ. ಈ ಮೂಲಕ ಹೆಣ್ಣಿನಲ್ಲಿರುವ ಕೆಚ್ಚು, ರೋಷ ಸೂಕ್ತ ರೀತಿಯಲ್ಲಿ ಚಿತ್ರಿತವಾಗಿದೆ.

ಸಮಕಾಲೀನ ಭಾರತೀಯ ಸಮಾಜದ ಹುಳುಕಗಳನ್ನು ಎತ್ತಿ ತೋರಿಸುವ ಹಾದಿಯಲ್ಲಿ ಎನ್.ಎಚ್. 10 ಡಾಕ್ಯುಮೆಂಟರಿಯಾಗಿಲ್ಲ. ಜನಪ್ರಿಯ ಸಿನೆಮಾದ ಪರಿಭಾಷೆಯಲ್ಲಿಯೆ ತಾನು ಹೇಳಬೇಕಾದ ಸಂಗತಿಗಳನ್ನು ನಿರ್ದೇಶಕ ನವದೀಪ್ ಸಿಂಗ್ ಹೇಳಿದ್ದಾರೆ. ಚಿತ್ರಕಥೆಯಲ್ಲಿರುವ ಬಿಗಿ, ಕ್ಯಾಮರಾ ಕೆಲಸ ಜೊತೆಗೆ ಎಲ್ಲ ಕಲಾವಿದರ ಅಭಿನಯ ಸಿನೆಮಾವನ್ನು ಕೊನೆಯವರೆಗೂ ನೋಡಿಸಿಕೊಂಡು ಹೋಗುತ್ತದೆ.

ವಿಶೇಷವಾಗಿ ಅನುಷ್ಕಾ ಶರ್ಮ ಅಭಿನಯ ಗಮನ ಸೆಳೆಯುತ್ತದೆ. ದೊಡ್ಡ ವಹಿವಾಟು ಇರುವ ಕಂಪನಿ ಅಧಿಕಾರಿಯಾಗಿ, ತಡರಾತ್ರಿಯಲ್ಲಿ ದಾಳಿ ಮಾಡುವ ಕಾಮಂಧರಿಂದ ಪಾರಾಗುವ ಹೆಣ್ಣಾಗಿ, ಪತಿಯನ್ನು ರಕ್ಷಿಸಿಕೊಳ್ಳಲು ಯತ್ನಿಸುವ ಪತ್ನಿಯಾಗಿ, ನಗರದತ್ತ ಧಾವಿಸಿ ಹೋಗಲು ಆಸ್ಪದ ದೊರೆತರೂ ಕೊಲೆಗಡುಕರ ದಮನಕ್ಕೆ ಹೊರಡುವ ದುರ್ಗೆಯಾಗಿ ಇವರು ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...