Homeಮುಖಪುಟಎನ್.ಹೆಚ್ 10 ಸಿನಿಮಾದ ಕಥೆ: ಭಾರತ ಪ್ರಕಾಶಿಸುತ್ತಿದೆ - ಹಳ್ಳಿಗಳು ಕಗ್ಗತ್ತಲೆಯಲ್ಲಿವೆ

ಎನ್.ಹೆಚ್ 10 ಸಿನಿಮಾದ ಕಥೆ: ಭಾರತ ಪ್ರಕಾಶಿಸುತ್ತಿದೆ – ಹಳ್ಳಿಗಳು ಕಗ್ಗತ್ತಲೆಯಲ್ಲಿವೆ

- Advertisement -
- Advertisement -

“ಆರ್ಟಿಕಲ್ 15” ಸಿನೆಮಾ ಆರಂಭವಾಗುವುದೇ 8 ಲೈನ್ ಹೆದ್ದಾರಿಯನ್ನು ತೋರಿಸುವುದರ ಮೂಲಕ. ನಂತರ ಇದು ಒಳಹಾದಿ ಮೂಲಕ ಹಳ್ಳಿಗಳಿಗೆ ತೆರಳುತ್ತದೆ. ಹಳ್ಳಿಗಳಲ್ಲಿನ ಜಾತೀಯತೆ ಸ್ವರೂಪ ಹೇಗಿದೆ ಎಂಬುದನ್ನು ಬಿಚ್ಚಿಡುತ್ತಾ ಹೋಗುತ್ತದೆ. ನಿರ್ದೇಶಕ ಸಿನ್ಹಾ ಆರಂಭದಲ್ಲಿಯೇ ತೋರಿಸುವ ರಾಷ್ಟ್ರೀಯ ಹೆದ್ದಾರಿ ಕೂಡ ಸಾಂಕೇತಿಕ. ಹಿಂದೆ ಈ ರಸ್ತೆ ಬದಿಗಳಲ್ಲಿ “ಭಾರತ ಪ್ರಕಾಶಿಸುತ್ತಿದೆ” ಎಂಬ ಬೃಹತ್ ಫಲಕ ಕಾಣುತ್ತಿತ್ತು. ಇದರ ಅಣಕವನ್ನು ಈ ಸಿನೆಮಾ ಮಾಡುತ್ತದೆ. ಇದು ಬಹು ಪರಿಣಾಮಕಾರಿ.

ಇಂಥದ್ದೇ ಅಣಕವನ್ನು ಕೆಲವರ್ಷಗಳ ಹಿಂದೆ ತೆರೆಕಂಡ ಎನ್.ಹೆಚ್. 10 ಕೂಡ ಮಾಡಿತ್ತು. ವಿಶಾಲವಾದ, ಜಗಮಗಿಸುವ ನುಣ್ಣನೆಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿಯೇ ಇರುವ ಹಳ್ಳಿಗಳಲ್ಲಿ ಜಾತೀಯತೆಯ ಭೀಕರ ಕಬಂಧಬಾಹು ಹೇಗಿದೆ ಎಂಬುದನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ.

ಈ ನಿಟ್ಟಿನಲ್ಲಿ ಹಿಂದಿ ಸಿನೆಮಾ ಎನ್.ಎಚ್. 10 ಅನೇಕ ಕಾರಣಗಳಿಗೆ ಮುಖ್ಯವಾಗುತ್ತದೆ. ಅಂತರ್ಜಾತಿಯ ಪ್ರೇಮಿಗಳ ಆತಂಕ, ನಗರಗಳಲ್ಲಿನ ದುಡಿಯುವ ಮಹಳೆಯರ ಅಭದ್ರತೆ, ಅಸಹಾಯಕ ಆಗಿರುವ ಪೊಲೀಸ್, ಅಪರಾಧಗಳಿಗೆ ‘ಹೆದ್ದಾರಿ’ ಆಗಿರುವ ಹೆದ್ದಾರಿಗಳು, ‘ಭಾರತ ಪ್ರಕಾಶಿಸುತ್ತಿದೆ’ ಎಂಬ ಹಣೆಪಟ್ಟಿ ಹೊತ್ತ ರಾಷ್ಟ್ರೀಯ ಹೆದ್ದಾರಿ ಮಗ್ಗುಲುಗಳಲ್ಲಿ ಇರುವ ಹಳ್ಳಿಗಳಲ್ಲಿನ ಜಾತೀಯತೆ ಕಾರಣದಿಂದ ಕೊಳೆತ ಮನಸುಗಳು, ಫ್ಯೂಡಲ್ ಸಿಸ್ಟಂ ನೆರಳಿಗೆ ನೆರಳಾಗಿರುವ ಪೊಲೀಸ್ ಮತ್ತು ಇವೆಲ್ಲದರ ಜೊತೆಗೆ ವಿದ್ಯಾವಂತ ಪುರುಷರ ನಿಸತ್ವ ‘ಇಗೋ’.

ಕಾರ್ಪೊರೇಟ್ ಕಂಪನಿಗಳಲ್ಲಿ ಸಮಯದ ಪರಿಮಿತಿ ಇಲ್ಲದೆ ದುಡಿಯುತ್ತಾ ಅಭದ್ರತೆ ಕಾರಣಕ್ಕೆ ಸದಾ ಆತಂಕದಲ್ಲಿ ನೆರಳಿನಲ್ಲಿರುವ ಮಹಿಳೆಯರ ಪ್ರತಿನಿಧಿಯಂತೆ ಈ ಚಿತ್ರದ ಮೀರಾ ಕಾಣುತ್ತಾಳೆ. ತಡರಾತ್ರಿಗಳಲ್ಲಿಯೂ ಕಚೇರಿಗೆ ತೆರಳಬೇಕಾದ ಅನಿವಾರ್ಯತೆ ಇವರ ನೆಮ್ಮದಿ ಕಸಿದುಕೊಳ್ಳುತ್ತದೆ. ಆಗಬಹುದಾದ ಅನಾಹುತಗಳ ಅರಿವಿಲ್ಲದೆ ಮಹಾನಗರಗಳಲ್ಲಿ ತಡರಾತ್ರಿ ವಹಿವಾಟು ಜಾರಿಯಲ್ಲಿರಬೇಕು ಎಂದು ಹಂಬಲಿಸುವ ವ್ಯಕ್ತಿಗಳನ್ನು ಪ್ರತಿನಿಧಿಸುವ ಪಾತ್ರವೊಂದರ ವಿವರ ಸಂಕ್ಷಿಪ್ತವಾಗಿದ್ದರೂ ಪರಿಣಾಮಕಾರಿಯಾಗಿ ಚಿತ್ರಿತವಾಗಿದೆ.

ಎಗ್ಗಿಲ್ಲದೆ ಬೆಳೆದ, ಬೆಳೆಯುತ್ತಿರುವ ಮಹಾನಗರಗಳು, ಇದರ ಫಾಯಿದೆ ತೆಗೆದುಕೊಳ್ಳುತ್ತಿರುವ ಪುಂಡು-ಫೋಕರಿಗಳು, ಇವರನ್ನು ನಿಯಂತ್ರಿಸಲಾಗದ ಅಸಹಾಯಕರಾದ ಪೊಲೀಸರು, ಇಂಥ ಪೊಲೀಸರ ಪ್ರತಿನಿಧಿಯಂತೆ ಕಾಣುವ ಠಾಣಾಧಿಕಾರಿಯಿಂದ ಸ್ವಯಂರಕ್ಷಣೆಗಾಗಿ ಗನ್ ತೆಗೆದುಕೊಳ್ಳುವಂತೆ ಮೀರಾ ಮತ್ತು ನೈಲ್ ಭೂಪಾಲನ್ ದಂಪತಿಗೆ ಶಿಫಾರಸು.

ಮೀರಾ ಕೈಗೆ ಗನ್ ಬರುತ್ತದೆ. ರಕ್ಷಣೆ ಸಲುವಾಗಿ ತೆಗೆದುಕೊಳ್ಳುವ ಗನ್ ಇವರ ಅಭದ್ರತೆಗೂ ಕಾರಣವಾಗುತ್ತದೆ. ಈ ಮೂಲಕ ಎಲ್ಲೆಡೆ ಮೊಬೈಲ್, ಇಂಟರ್ನೆಟ್ ನೆಟ್ ವರ್ಕ್. ಅಲ್ಲಲ್ಲಿ ಪೊಲೀಸ್ ಠಾಣೆಗಳು ಇರುವ ನುಣ್ಣನೆ ಮೈ ಹೊದ್ದ ಹೆದ್ದಾರಿ ಬದಿಯ ಹಳ್ಳಿಗಳಲ್ಲಿ ಇಂದಿಗೂ ಜಾರಿಯಲ್ಲಿರುವ ಅಮಾನುಷ ‘ಮಾರ್ಯಾದಾ ಹತ್ಯೆ’ ಅನಾವರಣಗೊಳ್ಳುತ್ತದೆ.

ಪೊಳ್ಳು ಇಗೋ:

ಮಹಾನಗರಗಳ ವಿದ್ಯಾವಂತ ಯುವಕರಲ್ಲಿ ಸಂಗಾತಿಯನ್ನು ಮೆಚ್ಚಿಸುವ, ಹೀರೋಯಿಸಂ ತೋರಿಸುವ ತವಕ ಹೆಚ್ಚಿರುತ್ತದೆ. ಆದರೆ ಹೀಗೆ ಮಾಡಲು ಹೋಗುವ ಮುನ್ನ ಜೊತೆಗಿರುವ; ತನ್ನನ್ನೆ ನಂಬಿದ ಸಂಗಾತಿಯ ಭದ್ರತೆ ಜೊತೆಗೆ ತನ್ನ ಬಲಾಬಲ ಬಗ್ಗೆ ಯೋಚಿಸದೆ ದುಡುಕುವವವರ ಪ್ರತಿನಿಧಿಯಂತೆ ನೈಲ್ ಭೂಪಾಲನ್ ಕಾಣುತ್ತಾನೆ.

ಢಾಭಾ ಆವರಣದಲ್ಲಿ ಯುವ ಪ್ರೇಮಿಗಳಿಬ್ಬರನ್ನು ಥಳಿಸುತ್ತಿರುವ ಗ್ಯಾಂಗಿನ ಕೃತ್ಯವನ್ನು ಹಳ್ಳಿಗರು, ಪ್ರಯಾಣಿಕರು ಮೌನವಾಗಿ ನೋಡುತ್ತಿರುತ್ತಾರೆ. ಭೂಪಾಲನ್ ಇದನ್ನು ಪ್ರಶ್ನಿಸಿ ಏಟು ತಿನ್ನುತ್ತಾನೆ. ಆದರೆ ಅಲ್ಲೆ ಮರು ಏಟು ಹಾಕದೆ ಗ್ಯಾಂಗಿನ ಬೆನ್ನು ಹತ್ತುತ್ತಾನೆ. ಇದಕ್ಕೆ ಕಾರಣ  ಜೊತೆಗಿರುವ ಗನ್ ನೀಡಿದ ಧೈರ್ಯ. ಪತ್ನಿ ಪರಿಪರಿಯಾಗಿ ಬೇಡಿಕೊಂಡರೂ ಈತ ತನ್ನ ಇಗೋ ಬಿಡುವುದಿಲ್ಲ.

ಜೊತೆಗಿರುವ ಗನ್ ಅನ್ನು ಯುವಪ್ರೇಮಿಗಳು ಮತ್ತು ತನ್ನನ್ನು ರಕ್ಷಿಸಿಕೊಳ್ಳಲು ಈತ ಬಳಸುತ್ತಾನೆಯೇ ? ಅದು ಇಲ್ಲ. ಗ್ಯಾಂಗಿನ ಕೃತ್ಯವನ್ನು ಅಸಹಾಯಕನಂತೆ ನೋಡುತ್ತಾನೆ. ಪಾರಾಗುವ ಯತ್ನದಲ್ಲಿ ತಾನೂ ಅವರಿಗೆ ಸಿಕ್ಕಿ ಬೀಳುವುದಲ್ಲದೆ ಪತ್ನಿಯೂ ಸಿಲುಕಿಕೊಳ್ಳುವಂತೆ ಮಾಡುತ್ತಾನೆ. ಮತ್ತೆ ಪಾರಾಗುವ ಯತ್ನ ಮಾಡುತ್ತಾನೆ. ಆಗ ಘಟಿಸುವುದೆ ಬೇರೆ…

ಜಾತಿಯ ಮರ್ಯಾದೆ ಕಾರಣಕ್ಕೆ ತನ್ನ ಒಡ ಹುಟ್ಟಿದ ತಂಗಿ ಮತ್ತು ಈಕೆಯ ಪ್ರೇಮಿಯನ್ನು ಕೊಲ್ಲುವ ಸತ್ಬೀರ್ ಇಂಥವರೆಲ್ಲರ ಪ್ರತಿನಿಧಿಯಾಗಿ ಕಾಣುತ್ತಾನೆ. ಈ ಕೃತ್ಯಕ್ಕೆ ಸಾಕ್ಷಿಯಾದ ದಂಪತಿಗಳನ್ನು ಮುಗಿಸಲು ಇವನು ಮತ್ತಿವನ ತಂಡ ಬೆನ್ನು ಬೀಳುತ್ತದೆ. ಈ ಕೊಲೆಗಡುಕರಿಂದ ಪಾರಾಗುತ್ತಾ ಮತ್ತೆಮತ್ತೆ ಅಂಥವರೊಂದಿಗೆ ನೆಂಟು ಇರುವವರ ಹಿಡಿತಕ್ಕೆ ಸಿಲುಕಿ ಮತ್ತೆ ಅವರಿಂದ ಪಾರಾಗುತ್ತಾ ಮತ್ತೆ ಅಂಥವರ ಕೈಗೆ ಸಿಲುಕುವ ಮೀರಾ ಸ್ಥಿತಿ ತಲ್ಲಣ ಮೂಡಿಸುತ್ತದೆ.

ಪಾರಾಗುವ ಹಾದಿಯಲ್ಲಿ ಇಂದಿಗೂ ಭಾರತದ ಅನೇಕ ಹಳ್ಳಿಗಳಲ್ಲಿ ಜಾರಿಯಲ್ಲಿರುವ ಫ್ಯೂಡಲ್ ಸಂಸ್ಕೃತಿ, ಜಾತೀಯ ದರ್ಬಾರು, ಪಾಳೆಗಾರಿಕೆ ಮನೋಭಾವದ ಸರಪಂಚರು ಮತ್ತು ಅಸಹಾಯಕತೆಯಿಂದ ಇಂಥವರ ಸೇವಕರಂತೆ ಆಡುವ ಪೊಲೀಸರ ಚಿತ್ರಣ ದೊರೆಯುತ್ತದೆ. ಅಸಹಾಯಕವಾಗಿ ಕಾಣುವ ಮೀರಾ ತನ್ನ ಪ್ರಾಣ ಲೆಕ್ಕಿಸದೆ ಕೊಲೆಗಡುಕರನ್ನು ಬೇಟೆಯಾಡುವ ರೀತಿ ಬಹು ಪರಿಣಾಮಕಾರಿಯಾಗಿ ಚಿತ್ರಿತವಾಗಿದೆ. ಈ ಮೂಲಕ ಹೆಣ್ಣಿನಲ್ಲಿರುವ ಕೆಚ್ಚು, ರೋಷ ಸೂಕ್ತ ರೀತಿಯಲ್ಲಿ ಚಿತ್ರಿತವಾಗಿದೆ.

ಸಮಕಾಲೀನ ಭಾರತೀಯ ಸಮಾಜದ ಹುಳುಕಗಳನ್ನು ಎತ್ತಿ ತೋರಿಸುವ ಹಾದಿಯಲ್ಲಿ ಎನ್.ಎಚ್. 10 ಡಾಕ್ಯುಮೆಂಟರಿಯಾಗಿಲ್ಲ. ಜನಪ್ರಿಯ ಸಿನೆಮಾದ ಪರಿಭಾಷೆಯಲ್ಲಿಯೆ ತಾನು ಹೇಳಬೇಕಾದ ಸಂಗತಿಗಳನ್ನು ನಿರ್ದೇಶಕ ನವದೀಪ್ ಸಿಂಗ್ ಹೇಳಿದ್ದಾರೆ. ಚಿತ್ರಕಥೆಯಲ್ಲಿರುವ ಬಿಗಿ, ಕ್ಯಾಮರಾ ಕೆಲಸ ಜೊತೆಗೆ ಎಲ್ಲ ಕಲಾವಿದರ ಅಭಿನಯ ಸಿನೆಮಾವನ್ನು ಕೊನೆಯವರೆಗೂ ನೋಡಿಸಿಕೊಂಡು ಹೋಗುತ್ತದೆ.

ವಿಶೇಷವಾಗಿ ಅನುಷ್ಕಾ ಶರ್ಮ ಅಭಿನಯ ಗಮನ ಸೆಳೆಯುತ್ತದೆ. ದೊಡ್ಡ ವಹಿವಾಟು ಇರುವ ಕಂಪನಿ ಅಧಿಕಾರಿಯಾಗಿ, ತಡರಾತ್ರಿಯಲ್ಲಿ ದಾಳಿ ಮಾಡುವ ಕಾಮಂಧರಿಂದ ಪಾರಾಗುವ ಹೆಣ್ಣಾಗಿ, ಪತಿಯನ್ನು ರಕ್ಷಿಸಿಕೊಳ್ಳಲು ಯತ್ನಿಸುವ ಪತ್ನಿಯಾಗಿ, ನಗರದತ್ತ ಧಾವಿಸಿ ಹೋಗಲು ಆಸ್ಪದ ದೊರೆತರೂ ಕೊಲೆಗಡುಕರ ದಮನಕ್ಕೆ ಹೊರಡುವ ದುರ್ಗೆಯಾಗಿ ಇವರು ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...