Homeಮುಖಪುಟಎನ್.ಹೆಚ್ 10 ಸಿನಿಮಾದ ಕಥೆ: ಭಾರತ ಪ್ರಕಾಶಿಸುತ್ತಿದೆ - ಹಳ್ಳಿಗಳು ಕಗ್ಗತ್ತಲೆಯಲ್ಲಿವೆ

ಎನ್.ಹೆಚ್ 10 ಸಿನಿಮಾದ ಕಥೆ: ಭಾರತ ಪ್ರಕಾಶಿಸುತ್ತಿದೆ – ಹಳ್ಳಿಗಳು ಕಗ್ಗತ್ತಲೆಯಲ್ಲಿವೆ

- Advertisement -
- Advertisement -

“ಆರ್ಟಿಕಲ್ 15” ಸಿನೆಮಾ ಆರಂಭವಾಗುವುದೇ 8 ಲೈನ್ ಹೆದ್ದಾರಿಯನ್ನು ತೋರಿಸುವುದರ ಮೂಲಕ. ನಂತರ ಇದು ಒಳಹಾದಿ ಮೂಲಕ ಹಳ್ಳಿಗಳಿಗೆ ತೆರಳುತ್ತದೆ. ಹಳ್ಳಿಗಳಲ್ಲಿನ ಜಾತೀಯತೆ ಸ್ವರೂಪ ಹೇಗಿದೆ ಎಂಬುದನ್ನು ಬಿಚ್ಚಿಡುತ್ತಾ ಹೋಗುತ್ತದೆ. ನಿರ್ದೇಶಕ ಸಿನ್ಹಾ ಆರಂಭದಲ್ಲಿಯೇ ತೋರಿಸುವ ರಾಷ್ಟ್ರೀಯ ಹೆದ್ದಾರಿ ಕೂಡ ಸಾಂಕೇತಿಕ. ಹಿಂದೆ ಈ ರಸ್ತೆ ಬದಿಗಳಲ್ಲಿ “ಭಾರತ ಪ್ರಕಾಶಿಸುತ್ತಿದೆ” ಎಂಬ ಬೃಹತ್ ಫಲಕ ಕಾಣುತ್ತಿತ್ತು. ಇದರ ಅಣಕವನ್ನು ಈ ಸಿನೆಮಾ ಮಾಡುತ್ತದೆ. ಇದು ಬಹು ಪರಿಣಾಮಕಾರಿ.

ಇಂಥದ್ದೇ ಅಣಕವನ್ನು ಕೆಲವರ್ಷಗಳ ಹಿಂದೆ ತೆರೆಕಂಡ ಎನ್.ಹೆಚ್. 10 ಕೂಡ ಮಾಡಿತ್ತು. ವಿಶಾಲವಾದ, ಜಗಮಗಿಸುವ ನುಣ್ಣನೆಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿಯೇ ಇರುವ ಹಳ್ಳಿಗಳಲ್ಲಿ ಜಾತೀಯತೆಯ ಭೀಕರ ಕಬಂಧಬಾಹು ಹೇಗಿದೆ ಎಂಬುದನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ.

ಈ ನಿಟ್ಟಿನಲ್ಲಿ ಹಿಂದಿ ಸಿನೆಮಾ ಎನ್.ಎಚ್. 10 ಅನೇಕ ಕಾರಣಗಳಿಗೆ ಮುಖ್ಯವಾಗುತ್ತದೆ. ಅಂತರ್ಜಾತಿಯ ಪ್ರೇಮಿಗಳ ಆತಂಕ, ನಗರಗಳಲ್ಲಿನ ದುಡಿಯುವ ಮಹಳೆಯರ ಅಭದ್ರತೆ, ಅಸಹಾಯಕ ಆಗಿರುವ ಪೊಲೀಸ್, ಅಪರಾಧಗಳಿಗೆ ‘ಹೆದ್ದಾರಿ’ ಆಗಿರುವ ಹೆದ್ದಾರಿಗಳು, ‘ಭಾರತ ಪ್ರಕಾಶಿಸುತ್ತಿದೆ’ ಎಂಬ ಹಣೆಪಟ್ಟಿ ಹೊತ್ತ ರಾಷ್ಟ್ರೀಯ ಹೆದ್ದಾರಿ ಮಗ್ಗುಲುಗಳಲ್ಲಿ ಇರುವ ಹಳ್ಳಿಗಳಲ್ಲಿನ ಜಾತೀಯತೆ ಕಾರಣದಿಂದ ಕೊಳೆತ ಮನಸುಗಳು, ಫ್ಯೂಡಲ್ ಸಿಸ್ಟಂ ನೆರಳಿಗೆ ನೆರಳಾಗಿರುವ ಪೊಲೀಸ್ ಮತ್ತು ಇವೆಲ್ಲದರ ಜೊತೆಗೆ ವಿದ್ಯಾವಂತ ಪುರುಷರ ನಿಸತ್ವ ‘ಇಗೋ’.

ಕಾರ್ಪೊರೇಟ್ ಕಂಪನಿಗಳಲ್ಲಿ ಸಮಯದ ಪರಿಮಿತಿ ಇಲ್ಲದೆ ದುಡಿಯುತ್ತಾ ಅಭದ್ರತೆ ಕಾರಣಕ್ಕೆ ಸದಾ ಆತಂಕದಲ್ಲಿ ನೆರಳಿನಲ್ಲಿರುವ ಮಹಿಳೆಯರ ಪ್ರತಿನಿಧಿಯಂತೆ ಈ ಚಿತ್ರದ ಮೀರಾ ಕಾಣುತ್ತಾಳೆ. ತಡರಾತ್ರಿಗಳಲ್ಲಿಯೂ ಕಚೇರಿಗೆ ತೆರಳಬೇಕಾದ ಅನಿವಾರ್ಯತೆ ಇವರ ನೆಮ್ಮದಿ ಕಸಿದುಕೊಳ್ಳುತ್ತದೆ. ಆಗಬಹುದಾದ ಅನಾಹುತಗಳ ಅರಿವಿಲ್ಲದೆ ಮಹಾನಗರಗಳಲ್ಲಿ ತಡರಾತ್ರಿ ವಹಿವಾಟು ಜಾರಿಯಲ್ಲಿರಬೇಕು ಎಂದು ಹಂಬಲಿಸುವ ವ್ಯಕ್ತಿಗಳನ್ನು ಪ್ರತಿನಿಧಿಸುವ ಪಾತ್ರವೊಂದರ ವಿವರ ಸಂಕ್ಷಿಪ್ತವಾಗಿದ್ದರೂ ಪರಿಣಾಮಕಾರಿಯಾಗಿ ಚಿತ್ರಿತವಾಗಿದೆ.

ಎಗ್ಗಿಲ್ಲದೆ ಬೆಳೆದ, ಬೆಳೆಯುತ್ತಿರುವ ಮಹಾನಗರಗಳು, ಇದರ ಫಾಯಿದೆ ತೆಗೆದುಕೊಳ್ಳುತ್ತಿರುವ ಪುಂಡು-ಫೋಕರಿಗಳು, ಇವರನ್ನು ನಿಯಂತ್ರಿಸಲಾಗದ ಅಸಹಾಯಕರಾದ ಪೊಲೀಸರು, ಇಂಥ ಪೊಲೀಸರ ಪ್ರತಿನಿಧಿಯಂತೆ ಕಾಣುವ ಠಾಣಾಧಿಕಾರಿಯಿಂದ ಸ್ವಯಂರಕ್ಷಣೆಗಾಗಿ ಗನ್ ತೆಗೆದುಕೊಳ್ಳುವಂತೆ ಮೀರಾ ಮತ್ತು ನೈಲ್ ಭೂಪಾಲನ್ ದಂಪತಿಗೆ ಶಿಫಾರಸು.

ಮೀರಾ ಕೈಗೆ ಗನ್ ಬರುತ್ತದೆ. ರಕ್ಷಣೆ ಸಲುವಾಗಿ ತೆಗೆದುಕೊಳ್ಳುವ ಗನ್ ಇವರ ಅಭದ್ರತೆಗೂ ಕಾರಣವಾಗುತ್ತದೆ. ಈ ಮೂಲಕ ಎಲ್ಲೆಡೆ ಮೊಬೈಲ್, ಇಂಟರ್ನೆಟ್ ನೆಟ್ ವರ್ಕ್. ಅಲ್ಲಲ್ಲಿ ಪೊಲೀಸ್ ಠಾಣೆಗಳು ಇರುವ ನುಣ್ಣನೆ ಮೈ ಹೊದ್ದ ಹೆದ್ದಾರಿ ಬದಿಯ ಹಳ್ಳಿಗಳಲ್ಲಿ ಇಂದಿಗೂ ಜಾರಿಯಲ್ಲಿರುವ ಅಮಾನುಷ ‘ಮಾರ್ಯಾದಾ ಹತ್ಯೆ’ ಅನಾವರಣಗೊಳ್ಳುತ್ತದೆ.

ಪೊಳ್ಳು ಇಗೋ:

ಮಹಾನಗರಗಳ ವಿದ್ಯಾವಂತ ಯುವಕರಲ್ಲಿ ಸಂಗಾತಿಯನ್ನು ಮೆಚ್ಚಿಸುವ, ಹೀರೋಯಿಸಂ ತೋರಿಸುವ ತವಕ ಹೆಚ್ಚಿರುತ್ತದೆ. ಆದರೆ ಹೀಗೆ ಮಾಡಲು ಹೋಗುವ ಮುನ್ನ ಜೊತೆಗಿರುವ; ತನ್ನನ್ನೆ ನಂಬಿದ ಸಂಗಾತಿಯ ಭದ್ರತೆ ಜೊತೆಗೆ ತನ್ನ ಬಲಾಬಲ ಬಗ್ಗೆ ಯೋಚಿಸದೆ ದುಡುಕುವವವರ ಪ್ರತಿನಿಧಿಯಂತೆ ನೈಲ್ ಭೂಪಾಲನ್ ಕಾಣುತ್ತಾನೆ.

ಢಾಭಾ ಆವರಣದಲ್ಲಿ ಯುವ ಪ್ರೇಮಿಗಳಿಬ್ಬರನ್ನು ಥಳಿಸುತ್ತಿರುವ ಗ್ಯಾಂಗಿನ ಕೃತ್ಯವನ್ನು ಹಳ್ಳಿಗರು, ಪ್ರಯಾಣಿಕರು ಮೌನವಾಗಿ ನೋಡುತ್ತಿರುತ್ತಾರೆ. ಭೂಪಾಲನ್ ಇದನ್ನು ಪ್ರಶ್ನಿಸಿ ಏಟು ತಿನ್ನುತ್ತಾನೆ. ಆದರೆ ಅಲ್ಲೆ ಮರು ಏಟು ಹಾಕದೆ ಗ್ಯಾಂಗಿನ ಬೆನ್ನು ಹತ್ತುತ್ತಾನೆ. ಇದಕ್ಕೆ ಕಾರಣ  ಜೊತೆಗಿರುವ ಗನ್ ನೀಡಿದ ಧೈರ್ಯ. ಪತ್ನಿ ಪರಿಪರಿಯಾಗಿ ಬೇಡಿಕೊಂಡರೂ ಈತ ತನ್ನ ಇಗೋ ಬಿಡುವುದಿಲ್ಲ.

ಜೊತೆಗಿರುವ ಗನ್ ಅನ್ನು ಯುವಪ್ರೇಮಿಗಳು ಮತ್ತು ತನ್ನನ್ನು ರಕ್ಷಿಸಿಕೊಳ್ಳಲು ಈತ ಬಳಸುತ್ತಾನೆಯೇ ? ಅದು ಇಲ್ಲ. ಗ್ಯಾಂಗಿನ ಕೃತ್ಯವನ್ನು ಅಸಹಾಯಕನಂತೆ ನೋಡುತ್ತಾನೆ. ಪಾರಾಗುವ ಯತ್ನದಲ್ಲಿ ತಾನೂ ಅವರಿಗೆ ಸಿಕ್ಕಿ ಬೀಳುವುದಲ್ಲದೆ ಪತ್ನಿಯೂ ಸಿಲುಕಿಕೊಳ್ಳುವಂತೆ ಮಾಡುತ್ತಾನೆ. ಮತ್ತೆ ಪಾರಾಗುವ ಯತ್ನ ಮಾಡುತ್ತಾನೆ. ಆಗ ಘಟಿಸುವುದೆ ಬೇರೆ…

ಜಾತಿಯ ಮರ್ಯಾದೆ ಕಾರಣಕ್ಕೆ ತನ್ನ ಒಡ ಹುಟ್ಟಿದ ತಂಗಿ ಮತ್ತು ಈಕೆಯ ಪ್ರೇಮಿಯನ್ನು ಕೊಲ್ಲುವ ಸತ್ಬೀರ್ ಇಂಥವರೆಲ್ಲರ ಪ್ರತಿನಿಧಿಯಾಗಿ ಕಾಣುತ್ತಾನೆ. ಈ ಕೃತ್ಯಕ್ಕೆ ಸಾಕ್ಷಿಯಾದ ದಂಪತಿಗಳನ್ನು ಮುಗಿಸಲು ಇವನು ಮತ್ತಿವನ ತಂಡ ಬೆನ್ನು ಬೀಳುತ್ತದೆ. ಈ ಕೊಲೆಗಡುಕರಿಂದ ಪಾರಾಗುತ್ತಾ ಮತ್ತೆಮತ್ತೆ ಅಂಥವರೊಂದಿಗೆ ನೆಂಟು ಇರುವವರ ಹಿಡಿತಕ್ಕೆ ಸಿಲುಕಿ ಮತ್ತೆ ಅವರಿಂದ ಪಾರಾಗುತ್ತಾ ಮತ್ತೆ ಅಂಥವರ ಕೈಗೆ ಸಿಲುಕುವ ಮೀರಾ ಸ್ಥಿತಿ ತಲ್ಲಣ ಮೂಡಿಸುತ್ತದೆ.

ಪಾರಾಗುವ ಹಾದಿಯಲ್ಲಿ ಇಂದಿಗೂ ಭಾರತದ ಅನೇಕ ಹಳ್ಳಿಗಳಲ್ಲಿ ಜಾರಿಯಲ್ಲಿರುವ ಫ್ಯೂಡಲ್ ಸಂಸ್ಕೃತಿ, ಜಾತೀಯ ದರ್ಬಾರು, ಪಾಳೆಗಾರಿಕೆ ಮನೋಭಾವದ ಸರಪಂಚರು ಮತ್ತು ಅಸಹಾಯಕತೆಯಿಂದ ಇಂಥವರ ಸೇವಕರಂತೆ ಆಡುವ ಪೊಲೀಸರ ಚಿತ್ರಣ ದೊರೆಯುತ್ತದೆ. ಅಸಹಾಯಕವಾಗಿ ಕಾಣುವ ಮೀರಾ ತನ್ನ ಪ್ರಾಣ ಲೆಕ್ಕಿಸದೆ ಕೊಲೆಗಡುಕರನ್ನು ಬೇಟೆಯಾಡುವ ರೀತಿ ಬಹು ಪರಿಣಾಮಕಾರಿಯಾಗಿ ಚಿತ್ರಿತವಾಗಿದೆ. ಈ ಮೂಲಕ ಹೆಣ್ಣಿನಲ್ಲಿರುವ ಕೆಚ್ಚು, ರೋಷ ಸೂಕ್ತ ರೀತಿಯಲ್ಲಿ ಚಿತ್ರಿತವಾಗಿದೆ.

ಸಮಕಾಲೀನ ಭಾರತೀಯ ಸಮಾಜದ ಹುಳುಕಗಳನ್ನು ಎತ್ತಿ ತೋರಿಸುವ ಹಾದಿಯಲ್ಲಿ ಎನ್.ಎಚ್. 10 ಡಾಕ್ಯುಮೆಂಟರಿಯಾಗಿಲ್ಲ. ಜನಪ್ರಿಯ ಸಿನೆಮಾದ ಪರಿಭಾಷೆಯಲ್ಲಿಯೆ ತಾನು ಹೇಳಬೇಕಾದ ಸಂಗತಿಗಳನ್ನು ನಿರ್ದೇಶಕ ನವದೀಪ್ ಸಿಂಗ್ ಹೇಳಿದ್ದಾರೆ. ಚಿತ್ರಕಥೆಯಲ್ಲಿರುವ ಬಿಗಿ, ಕ್ಯಾಮರಾ ಕೆಲಸ ಜೊತೆಗೆ ಎಲ್ಲ ಕಲಾವಿದರ ಅಭಿನಯ ಸಿನೆಮಾವನ್ನು ಕೊನೆಯವರೆಗೂ ನೋಡಿಸಿಕೊಂಡು ಹೋಗುತ್ತದೆ.

ವಿಶೇಷವಾಗಿ ಅನುಷ್ಕಾ ಶರ್ಮ ಅಭಿನಯ ಗಮನ ಸೆಳೆಯುತ್ತದೆ. ದೊಡ್ಡ ವಹಿವಾಟು ಇರುವ ಕಂಪನಿ ಅಧಿಕಾರಿಯಾಗಿ, ತಡರಾತ್ರಿಯಲ್ಲಿ ದಾಳಿ ಮಾಡುವ ಕಾಮಂಧರಿಂದ ಪಾರಾಗುವ ಹೆಣ್ಣಾಗಿ, ಪತಿಯನ್ನು ರಕ್ಷಿಸಿಕೊಳ್ಳಲು ಯತ್ನಿಸುವ ಪತ್ನಿಯಾಗಿ, ನಗರದತ್ತ ಧಾವಿಸಿ ಹೋಗಲು ಆಸ್ಪದ ದೊರೆತರೂ ಕೊಲೆಗಡುಕರ ದಮನಕ್ಕೆ ಹೊರಡುವ ದುರ್ಗೆಯಾಗಿ ಇವರು ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...