Homeಮುಖಪುಟಎನ್.ಹೆಚ್ 10 ಸಿನಿಮಾದ ಕಥೆ: ಭಾರತ ಪ್ರಕಾಶಿಸುತ್ತಿದೆ - ಹಳ್ಳಿಗಳು ಕಗ್ಗತ್ತಲೆಯಲ್ಲಿವೆ

ಎನ್.ಹೆಚ್ 10 ಸಿನಿಮಾದ ಕಥೆ: ಭಾರತ ಪ್ರಕಾಶಿಸುತ್ತಿದೆ – ಹಳ್ಳಿಗಳು ಕಗ್ಗತ್ತಲೆಯಲ್ಲಿವೆ

- Advertisement -
- Advertisement -

“ಆರ್ಟಿಕಲ್ 15” ಸಿನೆಮಾ ಆರಂಭವಾಗುವುದೇ 8 ಲೈನ್ ಹೆದ್ದಾರಿಯನ್ನು ತೋರಿಸುವುದರ ಮೂಲಕ. ನಂತರ ಇದು ಒಳಹಾದಿ ಮೂಲಕ ಹಳ್ಳಿಗಳಿಗೆ ತೆರಳುತ್ತದೆ. ಹಳ್ಳಿಗಳಲ್ಲಿನ ಜಾತೀಯತೆ ಸ್ವರೂಪ ಹೇಗಿದೆ ಎಂಬುದನ್ನು ಬಿಚ್ಚಿಡುತ್ತಾ ಹೋಗುತ್ತದೆ. ನಿರ್ದೇಶಕ ಸಿನ್ಹಾ ಆರಂಭದಲ್ಲಿಯೇ ತೋರಿಸುವ ರಾಷ್ಟ್ರೀಯ ಹೆದ್ದಾರಿ ಕೂಡ ಸಾಂಕೇತಿಕ. ಹಿಂದೆ ಈ ರಸ್ತೆ ಬದಿಗಳಲ್ಲಿ “ಭಾರತ ಪ್ರಕಾಶಿಸುತ್ತಿದೆ” ಎಂಬ ಬೃಹತ್ ಫಲಕ ಕಾಣುತ್ತಿತ್ತು. ಇದರ ಅಣಕವನ್ನು ಈ ಸಿನೆಮಾ ಮಾಡುತ್ತದೆ. ಇದು ಬಹು ಪರಿಣಾಮಕಾರಿ.

ಇಂಥದ್ದೇ ಅಣಕವನ್ನು ಕೆಲವರ್ಷಗಳ ಹಿಂದೆ ತೆರೆಕಂಡ ಎನ್.ಹೆಚ್. 10 ಕೂಡ ಮಾಡಿತ್ತು. ವಿಶಾಲವಾದ, ಜಗಮಗಿಸುವ ನುಣ್ಣನೆಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿಯೇ ಇರುವ ಹಳ್ಳಿಗಳಲ್ಲಿ ಜಾತೀಯತೆಯ ಭೀಕರ ಕಬಂಧಬಾಹು ಹೇಗಿದೆ ಎಂಬುದನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ.

ಈ ನಿಟ್ಟಿನಲ್ಲಿ ಹಿಂದಿ ಸಿನೆಮಾ ಎನ್.ಎಚ್. 10 ಅನೇಕ ಕಾರಣಗಳಿಗೆ ಮುಖ್ಯವಾಗುತ್ತದೆ. ಅಂತರ್ಜಾತಿಯ ಪ್ರೇಮಿಗಳ ಆತಂಕ, ನಗರಗಳಲ್ಲಿನ ದುಡಿಯುವ ಮಹಳೆಯರ ಅಭದ್ರತೆ, ಅಸಹಾಯಕ ಆಗಿರುವ ಪೊಲೀಸ್, ಅಪರಾಧಗಳಿಗೆ ‘ಹೆದ್ದಾರಿ’ ಆಗಿರುವ ಹೆದ್ದಾರಿಗಳು, ‘ಭಾರತ ಪ್ರಕಾಶಿಸುತ್ತಿದೆ’ ಎಂಬ ಹಣೆಪಟ್ಟಿ ಹೊತ್ತ ರಾಷ್ಟ್ರೀಯ ಹೆದ್ದಾರಿ ಮಗ್ಗುಲುಗಳಲ್ಲಿ ಇರುವ ಹಳ್ಳಿಗಳಲ್ಲಿನ ಜಾತೀಯತೆ ಕಾರಣದಿಂದ ಕೊಳೆತ ಮನಸುಗಳು, ಫ್ಯೂಡಲ್ ಸಿಸ್ಟಂ ನೆರಳಿಗೆ ನೆರಳಾಗಿರುವ ಪೊಲೀಸ್ ಮತ್ತು ಇವೆಲ್ಲದರ ಜೊತೆಗೆ ವಿದ್ಯಾವಂತ ಪುರುಷರ ನಿಸತ್ವ ‘ಇಗೋ’.

ಕಾರ್ಪೊರೇಟ್ ಕಂಪನಿಗಳಲ್ಲಿ ಸಮಯದ ಪರಿಮಿತಿ ಇಲ್ಲದೆ ದುಡಿಯುತ್ತಾ ಅಭದ್ರತೆ ಕಾರಣಕ್ಕೆ ಸದಾ ಆತಂಕದಲ್ಲಿ ನೆರಳಿನಲ್ಲಿರುವ ಮಹಿಳೆಯರ ಪ್ರತಿನಿಧಿಯಂತೆ ಈ ಚಿತ್ರದ ಮೀರಾ ಕಾಣುತ್ತಾಳೆ. ತಡರಾತ್ರಿಗಳಲ್ಲಿಯೂ ಕಚೇರಿಗೆ ತೆರಳಬೇಕಾದ ಅನಿವಾರ್ಯತೆ ಇವರ ನೆಮ್ಮದಿ ಕಸಿದುಕೊಳ್ಳುತ್ತದೆ. ಆಗಬಹುದಾದ ಅನಾಹುತಗಳ ಅರಿವಿಲ್ಲದೆ ಮಹಾನಗರಗಳಲ್ಲಿ ತಡರಾತ್ರಿ ವಹಿವಾಟು ಜಾರಿಯಲ್ಲಿರಬೇಕು ಎಂದು ಹಂಬಲಿಸುವ ವ್ಯಕ್ತಿಗಳನ್ನು ಪ್ರತಿನಿಧಿಸುವ ಪಾತ್ರವೊಂದರ ವಿವರ ಸಂಕ್ಷಿಪ್ತವಾಗಿದ್ದರೂ ಪರಿಣಾಮಕಾರಿಯಾಗಿ ಚಿತ್ರಿತವಾಗಿದೆ.

ಎಗ್ಗಿಲ್ಲದೆ ಬೆಳೆದ, ಬೆಳೆಯುತ್ತಿರುವ ಮಹಾನಗರಗಳು, ಇದರ ಫಾಯಿದೆ ತೆಗೆದುಕೊಳ್ಳುತ್ತಿರುವ ಪುಂಡು-ಫೋಕರಿಗಳು, ಇವರನ್ನು ನಿಯಂತ್ರಿಸಲಾಗದ ಅಸಹಾಯಕರಾದ ಪೊಲೀಸರು, ಇಂಥ ಪೊಲೀಸರ ಪ್ರತಿನಿಧಿಯಂತೆ ಕಾಣುವ ಠಾಣಾಧಿಕಾರಿಯಿಂದ ಸ್ವಯಂರಕ್ಷಣೆಗಾಗಿ ಗನ್ ತೆಗೆದುಕೊಳ್ಳುವಂತೆ ಮೀರಾ ಮತ್ತು ನೈಲ್ ಭೂಪಾಲನ್ ದಂಪತಿಗೆ ಶಿಫಾರಸು.

ಮೀರಾ ಕೈಗೆ ಗನ್ ಬರುತ್ತದೆ. ರಕ್ಷಣೆ ಸಲುವಾಗಿ ತೆಗೆದುಕೊಳ್ಳುವ ಗನ್ ಇವರ ಅಭದ್ರತೆಗೂ ಕಾರಣವಾಗುತ್ತದೆ. ಈ ಮೂಲಕ ಎಲ್ಲೆಡೆ ಮೊಬೈಲ್, ಇಂಟರ್ನೆಟ್ ನೆಟ್ ವರ್ಕ್. ಅಲ್ಲಲ್ಲಿ ಪೊಲೀಸ್ ಠಾಣೆಗಳು ಇರುವ ನುಣ್ಣನೆ ಮೈ ಹೊದ್ದ ಹೆದ್ದಾರಿ ಬದಿಯ ಹಳ್ಳಿಗಳಲ್ಲಿ ಇಂದಿಗೂ ಜಾರಿಯಲ್ಲಿರುವ ಅಮಾನುಷ ‘ಮಾರ್ಯಾದಾ ಹತ್ಯೆ’ ಅನಾವರಣಗೊಳ್ಳುತ್ತದೆ.

ಪೊಳ್ಳು ಇಗೋ:

ಮಹಾನಗರಗಳ ವಿದ್ಯಾವಂತ ಯುವಕರಲ್ಲಿ ಸಂಗಾತಿಯನ್ನು ಮೆಚ್ಚಿಸುವ, ಹೀರೋಯಿಸಂ ತೋರಿಸುವ ತವಕ ಹೆಚ್ಚಿರುತ್ತದೆ. ಆದರೆ ಹೀಗೆ ಮಾಡಲು ಹೋಗುವ ಮುನ್ನ ಜೊತೆಗಿರುವ; ತನ್ನನ್ನೆ ನಂಬಿದ ಸಂಗಾತಿಯ ಭದ್ರತೆ ಜೊತೆಗೆ ತನ್ನ ಬಲಾಬಲ ಬಗ್ಗೆ ಯೋಚಿಸದೆ ದುಡುಕುವವವರ ಪ್ರತಿನಿಧಿಯಂತೆ ನೈಲ್ ಭೂಪಾಲನ್ ಕಾಣುತ್ತಾನೆ.

ಢಾಭಾ ಆವರಣದಲ್ಲಿ ಯುವ ಪ್ರೇಮಿಗಳಿಬ್ಬರನ್ನು ಥಳಿಸುತ್ತಿರುವ ಗ್ಯಾಂಗಿನ ಕೃತ್ಯವನ್ನು ಹಳ್ಳಿಗರು, ಪ್ರಯಾಣಿಕರು ಮೌನವಾಗಿ ನೋಡುತ್ತಿರುತ್ತಾರೆ. ಭೂಪಾಲನ್ ಇದನ್ನು ಪ್ರಶ್ನಿಸಿ ಏಟು ತಿನ್ನುತ್ತಾನೆ. ಆದರೆ ಅಲ್ಲೆ ಮರು ಏಟು ಹಾಕದೆ ಗ್ಯಾಂಗಿನ ಬೆನ್ನು ಹತ್ತುತ್ತಾನೆ. ಇದಕ್ಕೆ ಕಾರಣ  ಜೊತೆಗಿರುವ ಗನ್ ನೀಡಿದ ಧೈರ್ಯ. ಪತ್ನಿ ಪರಿಪರಿಯಾಗಿ ಬೇಡಿಕೊಂಡರೂ ಈತ ತನ್ನ ಇಗೋ ಬಿಡುವುದಿಲ್ಲ.

ಜೊತೆಗಿರುವ ಗನ್ ಅನ್ನು ಯುವಪ್ರೇಮಿಗಳು ಮತ್ತು ತನ್ನನ್ನು ರಕ್ಷಿಸಿಕೊಳ್ಳಲು ಈತ ಬಳಸುತ್ತಾನೆಯೇ ? ಅದು ಇಲ್ಲ. ಗ್ಯಾಂಗಿನ ಕೃತ್ಯವನ್ನು ಅಸಹಾಯಕನಂತೆ ನೋಡುತ್ತಾನೆ. ಪಾರಾಗುವ ಯತ್ನದಲ್ಲಿ ತಾನೂ ಅವರಿಗೆ ಸಿಕ್ಕಿ ಬೀಳುವುದಲ್ಲದೆ ಪತ್ನಿಯೂ ಸಿಲುಕಿಕೊಳ್ಳುವಂತೆ ಮಾಡುತ್ತಾನೆ. ಮತ್ತೆ ಪಾರಾಗುವ ಯತ್ನ ಮಾಡುತ್ತಾನೆ. ಆಗ ಘಟಿಸುವುದೆ ಬೇರೆ…

ಜಾತಿಯ ಮರ್ಯಾದೆ ಕಾರಣಕ್ಕೆ ತನ್ನ ಒಡ ಹುಟ್ಟಿದ ತಂಗಿ ಮತ್ತು ಈಕೆಯ ಪ್ರೇಮಿಯನ್ನು ಕೊಲ್ಲುವ ಸತ್ಬೀರ್ ಇಂಥವರೆಲ್ಲರ ಪ್ರತಿನಿಧಿಯಾಗಿ ಕಾಣುತ್ತಾನೆ. ಈ ಕೃತ್ಯಕ್ಕೆ ಸಾಕ್ಷಿಯಾದ ದಂಪತಿಗಳನ್ನು ಮುಗಿಸಲು ಇವನು ಮತ್ತಿವನ ತಂಡ ಬೆನ್ನು ಬೀಳುತ್ತದೆ. ಈ ಕೊಲೆಗಡುಕರಿಂದ ಪಾರಾಗುತ್ತಾ ಮತ್ತೆಮತ್ತೆ ಅಂಥವರೊಂದಿಗೆ ನೆಂಟು ಇರುವವರ ಹಿಡಿತಕ್ಕೆ ಸಿಲುಕಿ ಮತ್ತೆ ಅವರಿಂದ ಪಾರಾಗುತ್ತಾ ಮತ್ತೆ ಅಂಥವರ ಕೈಗೆ ಸಿಲುಕುವ ಮೀರಾ ಸ್ಥಿತಿ ತಲ್ಲಣ ಮೂಡಿಸುತ್ತದೆ.

ಪಾರಾಗುವ ಹಾದಿಯಲ್ಲಿ ಇಂದಿಗೂ ಭಾರತದ ಅನೇಕ ಹಳ್ಳಿಗಳಲ್ಲಿ ಜಾರಿಯಲ್ಲಿರುವ ಫ್ಯೂಡಲ್ ಸಂಸ್ಕೃತಿ, ಜಾತೀಯ ದರ್ಬಾರು, ಪಾಳೆಗಾರಿಕೆ ಮನೋಭಾವದ ಸರಪಂಚರು ಮತ್ತು ಅಸಹಾಯಕತೆಯಿಂದ ಇಂಥವರ ಸೇವಕರಂತೆ ಆಡುವ ಪೊಲೀಸರ ಚಿತ್ರಣ ದೊರೆಯುತ್ತದೆ. ಅಸಹಾಯಕವಾಗಿ ಕಾಣುವ ಮೀರಾ ತನ್ನ ಪ್ರಾಣ ಲೆಕ್ಕಿಸದೆ ಕೊಲೆಗಡುಕರನ್ನು ಬೇಟೆಯಾಡುವ ರೀತಿ ಬಹು ಪರಿಣಾಮಕಾರಿಯಾಗಿ ಚಿತ್ರಿತವಾಗಿದೆ. ಈ ಮೂಲಕ ಹೆಣ್ಣಿನಲ್ಲಿರುವ ಕೆಚ್ಚು, ರೋಷ ಸೂಕ್ತ ರೀತಿಯಲ್ಲಿ ಚಿತ್ರಿತವಾಗಿದೆ.

ಸಮಕಾಲೀನ ಭಾರತೀಯ ಸಮಾಜದ ಹುಳುಕಗಳನ್ನು ಎತ್ತಿ ತೋರಿಸುವ ಹಾದಿಯಲ್ಲಿ ಎನ್.ಎಚ್. 10 ಡಾಕ್ಯುಮೆಂಟರಿಯಾಗಿಲ್ಲ. ಜನಪ್ರಿಯ ಸಿನೆಮಾದ ಪರಿಭಾಷೆಯಲ್ಲಿಯೆ ತಾನು ಹೇಳಬೇಕಾದ ಸಂಗತಿಗಳನ್ನು ನಿರ್ದೇಶಕ ನವದೀಪ್ ಸಿಂಗ್ ಹೇಳಿದ್ದಾರೆ. ಚಿತ್ರಕಥೆಯಲ್ಲಿರುವ ಬಿಗಿ, ಕ್ಯಾಮರಾ ಕೆಲಸ ಜೊತೆಗೆ ಎಲ್ಲ ಕಲಾವಿದರ ಅಭಿನಯ ಸಿನೆಮಾವನ್ನು ಕೊನೆಯವರೆಗೂ ನೋಡಿಸಿಕೊಂಡು ಹೋಗುತ್ತದೆ.

ವಿಶೇಷವಾಗಿ ಅನುಷ್ಕಾ ಶರ್ಮ ಅಭಿನಯ ಗಮನ ಸೆಳೆಯುತ್ತದೆ. ದೊಡ್ಡ ವಹಿವಾಟು ಇರುವ ಕಂಪನಿ ಅಧಿಕಾರಿಯಾಗಿ, ತಡರಾತ್ರಿಯಲ್ಲಿ ದಾಳಿ ಮಾಡುವ ಕಾಮಂಧರಿಂದ ಪಾರಾಗುವ ಹೆಣ್ಣಾಗಿ, ಪತಿಯನ್ನು ರಕ್ಷಿಸಿಕೊಳ್ಳಲು ಯತ್ನಿಸುವ ಪತ್ನಿಯಾಗಿ, ನಗರದತ್ತ ಧಾವಿಸಿ ಹೋಗಲು ಆಸ್ಪದ ದೊರೆತರೂ ಕೊಲೆಗಡುಕರ ದಮನಕ್ಕೆ ಹೊರಡುವ ದುರ್ಗೆಯಾಗಿ ಇವರು ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...