Homeಮುಖಪುಟಎನ್.ಹೆಚ್ 10 ಸಿನಿಮಾದ ಕಥೆ: ಭಾರತ ಪ್ರಕಾಶಿಸುತ್ತಿದೆ - ಹಳ್ಳಿಗಳು ಕಗ್ಗತ್ತಲೆಯಲ್ಲಿವೆ

ಎನ್.ಹೆಚ್ 10 ಸಿನಿಮಾದ ಕಥೆ: ಭಾರತ ಪ್ರಕಾಶಿಸುತ್ತಿದೆ – ಹಳ್ಳಿಗಳು ಕಗ್ಗತ್ತಲೆಯಲ್ಲಿವೆ

- Advertisement -
- Advertisement -

“ಆರ್ಟಿಕಲ್ 15” ಸಿನೆಮಾ ಆರಂಭವಾಗುವುದೇ 8 ಲೈನ್ ಹೆದ್ದಾರಿಯನ್ನು ತೋರಿಸುವುದರ ಮೂಲಕ. ನಂತರ ಇದು ಒಳಹಾದಿ ಮೂಲಕ ಹಳ್ಳಿಗಳಿಗೆ ತೆರಳುತ್ತದೆ. ಹಳ್ಳಿಗಳಲ್ಲಿನ ಜಾತೀಯತೆ ಸ್ವರೂಪ ಹೇಗಿದೆ ಎಂಬುದನ್ನು ಬಿಚ್ಚಿಡುತ್ತಾ ಹೋಗುತ್ತದೆ. ನಿರ್ದೇಶಕ ಸಿನ್ಹಾ ಆರಂಭದಲ್ಲಿಯೇ ತೋರಿಸುವ ರಾಷ್ಟ್ರೀಯ ಹೆದ್ದಾರಿ ಕೂಡ ಸಾಂಕೇತಿಕ. ಹಿಂದೆ ಈ ರಸ್ತೆ ಬದಿಗಳಲ್ಲಿ “ಭಾರತ ಪ್ರಕಾಶಿಸುತ್ತಿದೆ” ಎಂಬ ಬೃಹತ್ ಫಲಕ ಕಾಣುತ್ತಿತ್ತು. ಇದರ ಅಣಕವನ್ನು ಈ ಸಿನೆಮಾ ಮಾಡುತ್ತದೆ. ಇದು ಬಹು ಪರಿಣಾಮಕಾರಿ.

ಇಂಥದ್ದೇ ಅಣಕವನ್ನು ಕೆಲವರ್ಷಗಳ ಹಿಂದೆ ತೆರೆಕಂಡ ಎನ್.ಹೆಚ್. 10 ಕೂಡ ಮಾಡಿತ್ತು. ವಿಶಾಲವಾದ, ಜಗಮಗಿಸುವ ನುಣ್ಣನೆಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿಯೇ ಇರುವ ಹಳ್ಳಿಗಳಲ್ಲಿ ಜಾತೀಯತೆಯ ಭೀಕರ ಕಬಂಧಬಾಹು ಹೇಗಿದೆ ಎಂಬುದನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ.

ಈ ನಿಟ್ಟಿನಲ್ಲಿ ಹಿಂದಿ ಸಿನೆಮಾ ಎನ್.ಎಚ್. 10 ಅನೇಕ ಕಾರಣಗಳಿಗೆ ಮುಖ್ಯವಾಗುತ್ತದೆ. ಅಂತರ್ಜಾತಿಯ ಪ್ರೇಮಿಗಳ ಆತಂಕ, ನಗರಗಳಲ್ಲಿನ ದುಡಿಯುವ ಮಹಳೆಯರ ಅಭದ್ರತೆ, ಅಸಹಾಯಕ ಆಗಿರುವ ಪೊಲೀಸ್, ಅಪರಾಧಗಳಿಗೆ ‘ಹೆದ್ದಾರಿ’ ಆಗಿರುವ ಹೆದ್ದಾರಿಗಳು, ‘ಭಾರತ ಪ್ರಕಾಶಿಸುತ್ತಿದೆ’ ಎಂಬ ಹಣೆಪಟ್ಟಿ ಹೊತ್ತ ರಾಷ್ಟ್ರೀಯ ಹೆದ್ದಾರಿ ಮಗ್ಗುಲುಗಳಲ್ಲಿ ಇರುವ ಹಳ್ಳಿಗಳಲ್ಲಿನ ಜಾತೀಯತೆ ಕಾರಣದಿಂದ ಕೊಳೆತ ಮನಸುಗಳು, ಫ್ಯೂಡಲ್ ಸಿಸ್ಟಂ ನೆರಳಿಗೆ ನೆರಳಾಗಿರುವ ಪೊಲೀಸ್ ಮತ್ತು ಇವೆಲ್ಲದರ ಜೊತೆಗೆ ವಿದ್ಯಾವಂತ ಪುರುಷರ ನಿಸತ್ವ ‘ಇಗೋ’.

ಕಾರ್ಪೊರೇಟ್ ಕಂಪನಿಗಳಲ್ಲಿ ಸಮಯದ ಪರಿಮಿತಿ ಇಲ್ಲದೆ ದುಡಿಯುತ್ತಾ ಅಭದ್ರತೆ ಕಾರಣಕ್ಕೆ ಸದಾ ಆತಂಕದಲ್ಲಿ ನೆರಳಿನಲ್ಲಿರುವ ಮಹಿಳೆಯರ ಪ್ರತಿನಿಧಿಯಂತೆ ಈ ಚಿತ್ರದ ಮೀರಾ ಕಾಣುತ್ತಾಳೆ. ತಡರಾತ್ರಿಗಳಲ್ಲಿಯೂ ಕಚೇರಿಗೆ ತೆರಳಬೇಕಾದ ಅನಿವಾರ್ಯತೆ ಇವರ ನೆಮ್ಮದಿ ಕಸಿದುಕೊಳ್ಳುತ್ತದೆ. ಆಗಬಹುದಾದ ಅನಾಹುತಗಳ ಅರಿವಿಲ್ಲದೆ ಮಹಾನಗರಗಳಲ್ಲಿ ತಡರಾತ್ರಿ ವಹಿವಾಟು ಜಾರಿಯಲ್ಲಿರಬೇಕು ಎಂದು ಹಂಬಲಿಸುವ ವ್ಯಕ್ತಿಗಳನ್ನು ಪ್ರತಿನಿಧಿಸುವ ಪಾತ್ರವೊಂದರ ವಿವರ ಸಂಕ್ಷಿಪ್ತವಾಗಿದ್ದರೂ ಪರಿಣಾಮಕಾರಿಯಾಗಿ ಚಿತ್ರಿತವಾಗಿದೆ.

ಎಗ್ಗಿಲ್ಲದೆ ಬೆಳೆದ, ಬೆಳೆಯುತ್ತಿರುವ ಮಹಾನಗರಗಳು, ಇದರ ಫಾಯಿದೆ ತೆಗೆದುಕೊಳ್ಳುತ್ತಿರುವ ಪುಂಡು-ಫೋಕರಿಗಳು, ಇವರನ್ನು ನಿಯಂತ್ರಿಸಲಾಗದ ಅಸಹಾಯಕರಾದ ಪೊಲೀಸರು, ಇಂಥ ಪೊಲೀಸರ ಪ್ರತಿನಿಧಿಯಂತೆ ಕಾಣುವ ಠಾಣಾಧಿಕಾರಿಯಿಂದ ಸ್ವಯಂರಕ್ಷಣೆಗಾಗಿ ಗನ್ ತೆಗೆದುಕೊಳ್ಳುವಂತೆ ಮೀರಾ ಮತ್ತು ನೈಲ್ ಭೂಪಾಲನ್ ದಂಪತಿಗೆ ಶಿಫಾರಸು.

ಮೀರಾ ಕೈಗೆ ಗನ್ ಬರುತ್ತದೆ. ರಕ್ಷಣೆ ಸಲುವಾಗಿ ತೆಗೆದುಕೊಳ್ಳುವ ಗನ್ ಇವರ ಅಭದ್ರತೆಗೂ ಕಾರಣವಾಗುತ್ತದೆ. ಈ ಮೂಲಕ ಎಲ್ಲೆಡೆ ಮೊಬೈಲ್, ಇಂಟರ್ನೆಟ್ ನೆಟ್ ವರ್ಕ್. ಅಲ್ಲಲ್ಲಿ ಪೊಲೀಸ್ ಠಾಣೆಗಳು ಇರುವ ನುಣ್ಣನೆ ಮೈ ಹೊದ್ದ ಹೆದ್ದಾರಿ ಬದಿಯ ಹಳ್ಳಿಗಳಲ್ಲಿ ಇಂದಿಗೂ ಜಾರಿಯಲ್ಲಿರುವ ಅಮಾನುಷ ‘ಮಾರ್ಯಾದಾ ಹತ್ಯೆ’ ಅನಾವರಣಗೊಳ್ಳುತ್ತದೆ.

ಪೊಳ್ಳು ಇಗೋ:

ಮಹಾನಗರಗಳ ವಿದ್ಯಾವಂತ ಯುವಕರಲ್ಲಿ ಸಂಗಾತಿಯನ್ನು ಮೆಚ್ಚಿಸುವ, ಹೀರೋಯಿಸಂ ತೋರಿಸುವ ತವಕ ಹೆಚ್ಚಿರುತ್ತದೆ. ಆದರೆ ಹೀಗೆ ಮಾಡಲು ಹೋಗುವ ಮುನ್ನ ಜೊತೆಗಿರುವ; ತನ್ನನ್ನೆ ನಂಬಿದ ಸಂಗಾತಿಯ ಭದ್ರತೆ ಜೊತೆಗೆ ತನ್ನ ಬಲಾಬಲ ಬಗ್ಗೆ ಯೋಚಿಸದೆ ದುಡುಕುವವವರ ಪ್ರತಿನಿಧಿಯಂತೆ ನೈಲ್ ಭೂಪಾಲನ್ ಕಾಣುತ್ತಾನೆ.

ಢಾಭಾ ಆವರಣದಲ್ಲಿ ಯುವ ಪ್ರೇಮಿಗಳಿಬ್ಬರನ್ನು ಥಳಿಸುತ್ತಿರುವ ಗ್ಯಾಂಗಿನ ಕೃತ್ಯವನ್ನು ಹಳ್ಳಿಗರು, ಪ್ರಯಾಣಿಕರು ಮೌನವಾಗಿ ನೋಡುತ್ತಿರುತ್ತಾರೆ. ಭೂಪಾಲನ್ ಇದನ್ನು ಪ್ರಶ್ನಿಸಿ ಏಟು ತಿನ್ನುತ್ತಾನೆ. ಆದರೆ ಅಲ್ಲೆ ಮರು ಏಟು ಹಾಕದೆ ಗ್ಯಾಂಗಿನ ಬೆನ್ನು ಹತ್ತುತ್ತಾನೆ. ಇದಕ್ಕೆ ಕಾರಣ  ಜೊತೆಗಿರುವ ಗನ್ ನೀಡಿದ ಧೈರ್ಯ. ಪತ್ನಿ ಪರಿಪರಿಯಾಗಿ ಬೇಡಿಕೊಂಡರೂ ಈತ ತನ್ನ ಇಗೋ ಬಿಡುವುದಿಲ್ಲ.

ಜೊತೆಗಿರುವ ಗನ್ ಅನ್ನು ಯುವಪ್ರೇಮಿಗಳು ಮತ್ತು ತನ್ನನ್ನು ರಕ್ಷಿಸಿಕೊಳ್ಳಲು ಈತ ಬಳಸುತ್ತಾನೆಯೇ ? ಅದು ಇಲ್ಲ. ಗ್ಯಾಂಗಿನ ಕೃತ್ಯವನ್ನು ಅಸಹಾಯಕನಂತೆ ನೋಡುತ್ತಾನೆ. ಪಾರಾಗುವ ಯತ್ನದಲ್ಲಿ ತಾನೂ ಅವರಿಗೆ ಸಿಕ್ಕಿ ಬೀಳುವುದಲ್ಲದೆ ಪತ್ನಿಯೂ ಸಿಲುಕಿಕೊಳ್ಳುವಂತೆ ಮಾಡುತ್ತಾನೆ. ಮತ್ತೆ ಪಾರಾಗುವ ಯತ್ನ ಮಾಡುತ್ತಾನೆ. ಆಗ ಘಟಿಸುವುದೆ ಬೇರೆ…

ಜಾತಿಯ ಮರ್ಯಾದೆ ಕಾರಣಕ್ಕೆ ತನ್ನ ಒಡ ಹುಟ್ಟಿದ ತಂಗಿ ಮತ್ತು ಈಕೆಯ ಪ್ರೇಮಿಯನ್ನು ಕೊಲ್ಲುವ ಸತ್ಬೀರ್ ಇಂಥವರೆಲ್ಲರ ಪ್ರತಿನಿಧಿಯಾಗಿ ಕಾಣುತ್ತಾನೆ. ಈ ಕೃತ್ಯಕ್ಕೆ ಸಾಕ್ಷಿಯಾದ ದಂಪತಿಗಳನ್ನು ಮುಗಿಸಲು ಇವನು ಮತ್ತಿವನ ತಂಡ ಬೆನ್ನು ಬೀಳುತ್ತದೆ. ಈ ಕೊಲೆಗಡುಕರಿಂದ ಪಾರಾಗುತ್ತಾ ಮತ್ತೆಮತ್ತೆ ಅಂಥವರೊಂದಿಗೆ ನೆಂಟು ಇರುವವರ ಹಿಡಿತಕ್ಕೆ ಸಿಲುಕಿ ಮತ್ತೆ ಅವರಿಂದ ಪಾರಾಗುತ್ತಾ ಮತ್ತೆ ಅಂಥವರ ಕೈಗೆ ಸಿಲುಕುವ ಮೀರಾ ಸ್ಥಿತಿ ತಲ್ಲಣ ಮೂಡಿಸುತ್ತದೆ.

ಪಾರಾಗುವ ಹಾದಿಯಲ್ಲಿ ಇಂದಿಗೂ ಭಾರತದ ಅನೇಕ ಹಳ್ಳಿಗಳಲ್ಲಿ ಜಾರಿಯಲ್ಲಿರುವ ಫ್ಯೂಡಲ್ ಸಂಸ್ಕೃತಿ, ಜಾತೀಯ ದರ್ಬಾರು, ಪಾಳೆಗಾರಿಕೆ ಮನೋಭಾವದ ಸರಪಂಚರು ಮತ್ತು ಅಸಹಾಯಕತೆಯಿಂದ ಇಂಥವರ ಸೇವಕರಂತೆ ಆಡುವ ಪೊಲೀಸರ ಚಿತ್ರಣ ದೊರೆಯುತ್ತದೆ. ಅಸಹಾಯಕವಾಗಿ ಕಾಣುವ ಮೀರಾ ತನ್ನ ಪ್ರಾಣ ಲೆಕ್ಕಿಸದೆ ಕೊಲೆಗಡುಕರನ್ನು ಬೇಟೆಯಾಡುವ ರೀತಿ ಬಹು ಪರಿಣಾಮಕಾರಿಯಾಗಿ ಚಿತ್ರಿತವಾಗಿದೆ. ಈ ಮೂಲಕ ಹೆಣ್ಣಿನಲ್ಲಿರುವ ಕೆಚ್ಚು, ರೋಷ ಸೂಕ್ತ ರೀತಿಯಲ್ಲಿ ಚಿತ್ರಿತವಾಗಿದೆ.

ಸಮಕಾಲೀನ ಭಾರತೀಯ ಸಮಾಜದ ಹುಳುಕಗಳನ್ನು ಎತ್ತಿ ತೋರಿಸುವ ಹಾದಿಯಲ್ಲಿ ಎನ್.ಎಚ್. 10 ಡಾಕ್ಯುಮೆಂಟರಿಯಾಗಿಲ್ಲ. ಜನಪ್ರಿಯ ಸಿನೆಮಾದ ಪರಿಭಾಷೆಯಲ್ಲಿಯೆ ತಾನು ಹೇಳಬೇಕಾದ ಸಂಗತಿಗಳನ್ನು ನಿರ್ದೇಶಕ ನವದೀಪ್ ಸಿಂಗ್ ಹೇಳಿದ್ದಾರೆ. ಚಿತ್ರಕಥೆಯಲ್ಲಿರುವ ಬಿಗಿ, ಕ್ಯಾಮರಾ ಕೆಲಸ ಜೊತೆಗೆ ಎಲ್ಲ ಕಲಾವಿದರ ಅಭಿನಯ ಸಿನೆಮಾವನ್ನು ಕೊನೆಯವರೆಗೂ ನೋಡಿಸಿಕೊಂಡು ಹೋಗುತ್ತದೆ.

ವಿಶೇಷವಾಗಿ ಅನುಷ್ಕಾ ಶರ್ಮ ಅಭಿನಯ ಗಮನ ಸೆಳೆಯುತ್ತದೆ. ದೊಡ್ಡ ವಹಿವಾಟು ಇರುವ ಕಂಪನಿ ಅಧಿಕಾರಿಯಾಗಿ, ತಡರಾತ್ರಿಯಲ್ಲಿ ದಾಳಿ ಮಾಡುವ ಕಾಮಂಧರಿಂದ ಪಾರಾಗುವ ಹೆಣ್ಣಾಗಿ, ಪತಿಯನ್ನು ರಕ್ಷಿಸಿಕೊಳ್ಳಲು ಯತ್ನಿಸುವ ಪತ್ನಿಯಾಗಿ, ನಗರದತ್ತ ಧಾವಿಸಿ ಹೋಗಲು ಆಸ್ಪದ ದೊರೆತರೂ ಕೊಲೆಗಡುಕರ ದಮನಕ್ಕೆ ಹೊರಡುವ ದುರ್ಗೆಯಾಗಿ ಇವರು ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...