Homeಚಳವಳಿರೈತ ಹೋರಾಟ: 4 ರಾಜ್ಯಗಳಿಂದ ವರದಿ ಕೇಳಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ರೈತ ಹೋರಾಟ: 4 ರಾಜ್ಯಗಳಿಂದ ವರದಿ ಕೇಳಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ಕಳೆದ 10 ತಿಂಗಳ ಅವಧಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುತ್ತ ರೈತರು ಕೊನೆಯುಸಿರೆಳೆದಾಗ ಮಾನವ ಹಕ್ಕುಗಳ ಆಯೋಗ ಅದನ್ನೇಕೆ ಪ್ರಶ್ನಿಸಲಿಲ್ಲ..?- ರೈತ ಸಂಘಟನೆಗಳು

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಸಂಬಂಧಿಸಿ ದೆಹಲಿ, ಹರಿಯಾಣ, ಉತ್ತರಪ್ರದೇಶ ಮತ್ತು ರಾಜಸ್ಥಾನ ಸರ್ಕಾರಗಳಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್‌ ಜಾರಿ ಮಾಡಿದೆ.

“ದೆಹಲಿಯ ವಿವಿಧ ಗಡಿಗಳಲ್ಲಿ ಕಳೆದ 9 ತಿಂಗಳುಗಳಿಂದ ರೈತರು ಹೋರಾಟ ನಡೆಸುತ್ತಿರುವುದರಿಂದ ಸುಮಾರು 9,000 ಕೈಗಾರಿಕಾ ಘಟಕಗಳು ಹಾಗೂ ಸಾರಿಗೆ ಸಂಸ್ಥೆಗಳು ಸಮಸ್ಯೆ ಎದುರಿಸುತ್ತಿವೆ. ಈ ಕುರಿತು ನಮಗೆ ಹಲವು ದೂರುಗಳು ಬಂದಿವೆ. ಈ ಹಿನ್ನೆಲೆ ದೆಹಲಿಗೆ ಹೊಂದಿಕೊಂಡಿರುವ ಹರಿಯಾಣ, ಉತ್ತರಪ್ರದೇಶ ಹಾಗೂ ರಾಜಸ್ಥಾನದ ಗಡಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿ ಸ್ಥಳೀಯವಾಗಿ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ನೀಡುವಂತೆ ಆಯಾ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಪೊಲೀಸ್‌ ಇಲಾಖೆಯ ಮುಖ್ಯಸ್ಥರಿಗೆ ನೋಟಿಸ್‌ ನೀಡಿಲಾಗಿದೆ” ಎಂದು ಮಾನವ ಹಕ್ಕುಗಳ ಆಯೋಗ ಖಚಿತ ಪಡಿಸಿದೆ.

“ದೆಹಲಿಯ ಹೆದ್ದಾರಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಸಾರಿಗೆ ಸಂಚಾರದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಪ್ರತಿಭಟನೆಯಿಂದ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದೆ. ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್‌ಗಳನ್ನು ಇರಿಸಿರುವುದರಿಂದ ವಾಹನ ಸವಾರರು ನಿರ್ಧಿಷ್ಟ ಸ್ಥಳಗಳನ್ನು ತಲುಪಲು ಬಹಳ ದೂರ ಪ್ರಯಾಣಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ತನಗೆ ಬಂದಿರುವ ದೂರುಗಳಲ್ಲಿ ಉಲ್ಲೇಖಿಸಲಾಗಿದೆ” ಎಂದು ಆಯೋಗ ಮಾಹಿತಿ ನೀಡಿದೆ.

ಇದನ್ನೂ ಓದಿ: NEP ವಿರೋಧಿಸಿ ಪ್ರತಿಭಟಿಸುತ್ತಿದ್ದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ತೀವ್ರ ಖಂಡನೆ

ರೈತರು ಪ್ರತಿಭಟನಾ ಸ್ಥಳಗಳಲ್ಲಿ ಕೊರೊನಾ ನಿಯಮಗಳನ್ನು ಅನುಸರಿಸುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿವೆ. ಇದರ ಜೊತೆಗೆ ಪ್ರತಿಭಟನಾ ಸ್ಥಳದ ಸಮೀಪದಲ್ಲಿರುವ ನಿವಾಸಿಗಳ ಸಂಚಾರಕ್ಕೆ ಹೋರಾಟ ನಿರತರು ಅಡ್ಡಿ ಪಡಿಸತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಇವೆಲ್ಲವೂ ಮಾನವ ಹಕ್ಕುಗಳ ಉಲ್ಲಂಘನೆಯಂತಾಗುತ್ತದೆ. ಈ ವಿಚಾರಗಳ ಕುರಿತು ಆಯಾ ರಾಜ್ಯ ಸರ್ಕಾರಗಳು ಯಾವೆಲ್ಲ ಕ್ರಮಗಳನ್ನು ಕೈಗೊಂಡಿವೆ ಎಂಬುದರ ಬಗ್ಗೆ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಪೊಲೀಸ್‌ ಇಲಾಖೆಯ ವರಿಷ್ಠರಿಗೆ ಸೂಚನೆ ನೀಡಿರುವುದಾಗಿ ಆಯೋಗ ತಿಳಿಸಿದೆ.

ರೈತರ ಪ್ರತಿಭಟನೆ ಕೈಗಾರಿಕೆಗಳು, ಆರ್ಥಿಕ ವಹಿವಾಟು, ಸಾರಿಗೆ ವ್ಯವಸ್ಥೆ ಹಾಗೂ ಗ್ರಾಹಕರ ಮೇಲೆ ಯಾವ ರೀತಿ ಪರಿಣಾಮ ಬೀರಿದೆ ಎಂಬ ಬಗ್ಗೆ ಅಧ್ಯಯನ ನಡೆಸಿ ಅಕ್ಟೋಬರ್‌ 10ರ ಒಳಗೆ ವರದಿ ನೀಡುವಂತೆ ಇನ್‌ಸ್ಟಿಟ್ಯೂಟ್‌ ಆಫ್‌ ಎಕನಾಮಿಕ್‌ ಗ್ರೌಥ್‌ಗೆ ಆಯೋಗ ಸೂಚನೆ ನೀಡಿದೆ. ಇದರ ಜೊತೆಗೆ ಪ್ರತಿಭಟನಾ ಸ್ಥಳಗಳಲ್ಲಿ ಕೋವಿಡ್‌ ಮಾರ್ಗಸೂಚಿಯ ಪಾಲನೆ ಮತ್ತು ಉಲ್ಲಂಘನೆಯ ಕುರಿತು ವರದಿ ನೀಡುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಆರೋಗ್ಯ ಸಚಿವಾಲಯಕ್ಕೂ ಸೂಚನೆ ನೀಡಲಾಗಿದೆ.

ವಿವಾದಿತ ಕೃಷಿ ಕಾಯ್ದೆಗಳು ಜಾರಿಯಾಗಿ ಸೆ. 27ಕ್ಕೆ ಒಂದು ವರ್ಷ ಕಳೆಯಲಿದೆ. ಈ ವಿವಾದಿತಕ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ಹೋರಾಟ 10ನೇ ತಿಂಗಳಿಗೆ ಕಾಲಿಟ್ಟಿದೆ. ಕಾಯ್ದೆಗಳನ್ನು ವಿರೋಧಿಸುತ್ತಾ ಈವರೆಗೆ 594 ರೈತರು ಹುತಾತ್ಮರಾಗಿದ್ದಾರೆ.

“ಕಳೆದ 10 ತಿಂಗಳ ಅವಧಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುತ್ತ ರೈತರು ಕೊನೆಯುಸಿರೆಳೆದಾಗ ಮಾನವ ಹಕ್ಕುಗಳ ಆಯೋಗ ಅದನ್ನೇಕೆ ಪ್ರಶ್ನಿಸಲಿಲ್ಲ..? ಕೇಂದ್ರ ಸರ್ಕಾರ ಬಲವಂತವಾಗಿ ರೈತರ ಹಕ್ಕುಗಳನ್ನು ಕಿತ್ತುಕೊಳ್ಳಲು ಯತ್ನಿಸಿದರೂ ಆಯೋಗ ಆ ಕುರಿತು ಏಕೆ ಮಾತನಾಡಲಿಲ್ಲ..? ಇಡೀ ದೇಶದಲ್ಲಿ ಕೊರೊನಾ ಹೆಚ್ಚಾಗಿದ್ದರೂ ಪ್ರತಿಭಟನಾ ಸ್ಥಳಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬಂದಿಲ್ಲ. ಇದೆಲ್ಲವೂ ಇಡೀ ದೇಶಕ್ಕೆ ತಿಳಿದಿರುವ ಸಂಗತಿ. ರೈತರ ಸಾವಿನ ಬಗ್ಗೆ ತಲೆ ಕೆಡಿಸಿಕೊಳ್ಳದ ಇದೇ ಮಾನವ ಹಕ್ಕುಗಳ ಆಯೋಗ ಈಗ ರೈತರ ವಿಚಾರದಲ್ಲಿ ವಿಶೇಷ ಕಾಳಜಿ ತೂರಿಸುತ್ತಿರುವುದೇಕೆ? ಈ ಹಿಂದೆ ಬಿಜೆಪಿ ಸರ್ಕಾರ ನಡೆದುಕೊಂಡಂತೆ ಇದು ಕೂಡ ರೈತ ಹೋರಾಟವನ್ನು ಹತ್ತಿಕ್ಕಲು ನಡೆಸುತ್ತಿರುವ ಪಿತೂರಿಯೇ?” ಎಂದು ಹೋರಾಟ ನಿರತ ರೈತ ಸಂಘಟನೆಗಳು ಅನುಮಾನ ವ್ಯಕ್ತಪಡಿಸಿವೆ.


ಇದನ್ನೂ ಓದಿ: ಕೇಂದ್ರದ ಮೇಲೆ ಒತ್ತಡ ತರಲು ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ: ರೈತರಲ್ಲಿ ಅಮರಿಂದರ್ ಸಿಂಗ್ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...