Homeಚಳವಳಿರೈತ ಹೋರಾಟ: 4 ರಾಜ್ಯಗಳಿಂದ ವರದಿ ಕೇಳಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ರೈತ ಹೋರಾಟ: 4 ರಾಜ್ಯಗಳಿಂದ ವರದಿ ಕೇಳಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ಕಳೆದ 10 ತಿಂಗಳ ಅವಧಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುತ್ತ ರೈತರು ಕೊನೆಯುಸಿರೆಳೆದಾಗ ಮಾನವ ಹಕ್ಕುಗಳ ಆಯೋಗ ಅದನ್ನೇಕೆ ಪ್ರಶ್ನಿಸಲಿಲ್ಲ..?- ರೈತ ಸಂಘಟನೆಗಳು

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಸಂಬಂಧಿಸಿ ದೆಹಲಿ, ಹರಿಯಾಣ, ಉತ್ತರಪ್ರದೇಶ ಮತ್ತು ರಾಜಸ್ಥಾನ ಸರ್ಕಾರಗಳಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್‌ ಜಾರಿ ಮಾಡಿದೆ.

“ದೆಹಲಿಯ ವಿವಿಧ ಗಡಿಗಳಲ್ಲಿ ಕಳೆದ 9 ತಿಂಗಳುಗಳಿಂದ ರೈತರು ಹೋರಾಟ ನಡೆಸುತ್ತಿರುವುದರಿಂದ ಸುಮಾರು 9,000 ಕೈಗಾರಿಕಾ ಘಟಕಗಳು ಹಾಗೂ ಸಾರಿಗೆ ಸಂಸ್ಥೆಗಳು ಸಮಸ್ಯೆ ಎದುರಿಸುತ್ತಿವೆ. ಈ ಕುರಿತು ನಮಗೆ ಹಲವು ದೂರುಗಳು ಬಂದಿವೆ. ಈ ಹಿನ್ನೆಲೆ ದೆಹಲಿಗೆ ಹೊಂದಿಕೊಂಡಿರುವ ಹರಿಯಾಣ, ಉತ್ತರಪ್ರದೇಶ ಹಾಗೂ ರಾಜಸ್ಥಾನದ ಗಡಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿ ಸ್ಥಳೀಯವಾಗಿ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ನೀಡುವಂತೆ ಆಯಾ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಪೊಲೀಸ್‌ ಇಲಾಖೆಯ ಮುಖ್ಯಸ್ಥರಿಗೆ ನೋಟಿಸ್‌ ನೀಡಿಲಾಗಿದೆ” ಎಂದು ಮಾನವ ಹಕ್ಕುಗಳ ಆಯೋಗ ಖಚಿತ ಪಡಿಸಿದೆ.

“ದೆಹಲಿಯ ಹೆದ್ದಾರಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಸಾರಿಗೆ ಸಂಚಾರದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಪ್ರತಿಭಟನೆಯಿಂದ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದೆ. ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್‌ಗಳನ್ನು ಇರಿಸಿರುವುದರಿಂದ ವಾಹನ ಸವಾರರು ನಿರ್ಧಿಷ್ಟ ಸ್ಥಳಗಳನ್ನು ತಲುಪಲು ಬಹಳ ದೂರ ಪ್ರಯಾಣಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ತನಗೆ ಬಂದಿರುವ ದೂರುಗಳಲ್ಲಿ ಉಲ್ಲೇಖಿಸಲಾಗಿದೆ” ಎಂದು ಆಯೋಗ ಮಾಹಿತಿ ನೀಡಿದೆ.

ಇದನ್ನೂ ಓದಿ: NEP ವಿರೋಧಿಸಿ ಪ್ರತಿಭಟಿಸುತ್ತಿದ್ದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ತೀವ್ರ ಖಂಡನೆ

ರೈತರು ಪ್ರತಿಭಟನಾ ಸ್ಥಳಗಳಲ್ಲಿ ಕೊರೊನಾ ನಿಯಮಗಳನ್ನು ಅನುಸರಿಸುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿವೆ. ಇದರ ಜೊತೆಗೆ ಪ್ರತಿಭಟನಾ ಸ್ಥಳದ ಸಮೀಪದಲ್ಲಿರುವ ನಿವಾಸಿಗಳ ಸಂಚಾರಕ್ಕೆ ಹೋರಾಟ ನಿರತರು ಅಡ್ಡಿ ಪಡಿಸತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಇವೆಲ್ಲವೂ ಮಾನವ ಹಕ್ಕುಗಳ ಉಲ್ಲಂಘನೆಯಂತಾಗುತ್ತದೆ. ಈ ವಿಚಾರಗಳ ಕುರಿತು ಆಯಾ ರಾಜ್ಯ ಸರ್ಕಾರಗಳು ಯಾವೆಲ್ಲ ಕ್ರಮಗಳನ್ನು ಕೈಗೊಂಡಿವೆ ಎಂಬುದರ ಬಗ್ಗೆ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಪೊಲೀಸ್‌ ಇಲಾಖೆಯ ವರಿಷ್ಠರಿಗೆ ಸೂಚನೆ ನೀಡಿರುವುದಾಗಿ ಆಯೋಗ ತಿಳಿಸಿದೆ.

ರೈತರ ಪ್ರತಿಭಟನೆ ಕೈಗಾರಿಕೆಗಳು, ಆರ್ಥಿಕ ವಹಿವಾಟು, ಸಾರಿಗೆ ವ್ಯವಸ್ಥೆ ಹಾಗೂ ಗ್ರಾಹಕರ ಮೇಲೆ ಯಾವ ರೀತಿ ಪರಿಣಾಮ ಬೀರಿದೆ ಎಂಬ ಬಗ್ಗೆ ಅಧ್ಯಯನ ನಡೆಸಿ ಅಕ್ಟೋಬರ್‌ 10ರ ಒಳಗೆ ವರದಿ ನೀಡುವಂತೆ ಇನ್‌ಸ್ಟಿಟ್ಯೂಟ್‌ ಆಫ್‌ ಎಕನಾಮಿಕ್‌ ಗ್ರೌಥ್‌ಗೆ ಆಯೋಗ ಸೂಚನೆ ನೀಡಿದೆ. ಇದರ ಜೊತೆಗೆ ಪ್ರತಿಭಟನಾ ಸ್ಥಳಗಳಲ್ಲಿ ಕೋವಿಡ್‌ ಮಾರ್ಗಸೂಚಿಯ ಪಾಲನೆ ಮತ್ತು ಉಲ್ಲಂಘನೆಯ ಕುರಿತು ವರದಿ ನೀಡುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಆರೋಗ್ಯ ಸಚಿವಾಲಯಕ್ಕೂ ಸೂಚನೆ ನೀಡಲಾಗಿದೆ.

ವಿವಾದಿತ ಕೃಷಿ ಕಾಯ್ದೆಗಳು ಜಾರಿಯಾಗಿ ಸೆ. 27ಕ್ಕೆ ಒಂದು ವರ್ಷ ಕಳೆಯಲಿದೆ. ಈ ವಿವಾದಿತಕ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ಹೋರಾಟ 10ನೇ ತಿಂಗಳಿಗೆ ಕಾಲಿಟ್ಟಿದೆ. ಕಾಯ್ದೆಗಳನ್ನು ವಿರೋಧಿಸುತ್ತಾ ಈವರೆಗೆ 594 ರೈತರು ಹುತಾತ್ಮರಾಗಿದ್ದಾರೆ.

“ಕಳೆದ 10 ತಿಂಗಳ ಅವಧಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುತ್ತ ರೈತರು ಕೊನೆಯುಸಿರೆಳೆದಾಗ ಮಾನವ ಹಕ್ಕುಗಳ ಆಯೋಗ ಅದನ್ನೇಕೆ ಪ್ರಶ್ನಿಸಲಿಲ್ಲ..? ಕೇಂದ್ರ ಸರ್ಕಾರ ಬಲವಂತವಾಗಿ ರೈತರ ಹಕ್ಕುಗಳನ್ನು ಕಿತ್ತುಕೊಳ್ಳಲು ಯತ್ನಿಸಿದರೂ ಆಯೋಗ ಆ ಕುರಿತು ಏಕೆ ಮಾತನಾಡಲಿಲ್ಲ..? ಇಡೀ ದೇಶದಲ್ಲಿ ಕೊರೊನಾ ಹೆಚ್ಚಾಗಿದ್ದರೂ ಪ್ರತಿಭಟನಾ ಸ್ಥಳಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬಂದಿಲ್ಲ. ಇದೆಲ್ಲವೂ ಇಡೀ ದೇಶಕ್ಕೆ ತಿಳಿದಿರುವ ಸಂಗತಿ. ರೈತರ ಸಾವಿನ ಬಗ್ಗೆ ತಲೆ ಕೆಡಿಸಿಕೊಳ್ಳದ ಇದೇ ಮಾನವ ಹಕ್ಕುಗಳ ಆಯೋಗ ಈಗ ರೈತರ ವಿಚಾರದಲ್ಲಿ ವಿಶೇಷ ಕಾಳಜಿ ತೂರಿಸುತ್ತಿರುವುದೇಕೆ? ಈ ಹಿಂದೆ ಬಿಜೆಪಿ ಸರ್ಕಾರ ನಡೆದುಕೊಂಡಂತೆ ಇದು ಕೂಡ ರೈತ ಹೋರಾಟವನ್ನು ಹತ್ತಿಕ್ಕಲು ನಡೆಸುತ್ತಿರುವ ಪಿತೂರಿಯೇ?” ಎಂದು ಹೋರಾಟ ನಿರತ ರೈತ ಸಂಘಟನೆಗಳು ಅನುಮಾನ ವ್ಯಕ್ತಪಡಿಸಿವೆ.


ಇದನ್ನೂ ಓದಿ: ಕೇಂದ್ರದ ಮೇಲೆ ಒತ್ತಡ ತರಲು ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ: ರೈತರಲ್ಲಿ ಅಮರಿಂದರ್ ಸಿಂಗ್ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...