Homeಚಳವಳಿರೈತ ಹೋರಾಟ: 4 ರಾಜ್ಯಗಳಿಂದ ವರದಿ ಕೇಳಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ರೈತ ಹೋರಾಟ: 4 ರಾಜ್ಯಗಳಿಂದ ವರದಿ ಕೇಳಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ಕಳೆದ 10 ತಿಂಗಳ ಅವಧಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುತ್ತ ರೈತರು ಕೊನೆಯುಸಿರೆಳೆದಾಗ ಮಾನವ ಹಕ್ಕುಗಳ ಆಯೋಗ ಅದನ್ನೇಕೆ ಪ್ರಶ್ನಿಸಲಿಲ್ಲ..?- ರೈತ ಸಂಘಟನೆಗಳು

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಸಂಬಂಧಿಸಿ ದೆಹಲಿ, ಹರಿಯಾಣ, ಉತ್ತರಪ್ರದೇಶ ಮತ್ತು ರಾಜಸ್ಥಾನ ಸರ್ಕಾರಗಳಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್‌ ಜಾರಿ ಮಾಡಿದೆ.

“ದೆಹಲಿಯ ವಿವಿಧ ಗಡಿಗಳಲ್ಲಿ ಕಳೆದ 9 ತಿಂಗಳುಗಳಿಂದ ರೈತರು ಹೋರಾಟ ನಡೆಸುತ್ತಿರುವುದರಿಂದ ಸುಮಾರು 9,000 ಕೈಗಾರಿಕಾ ಘಟಕಗಳು ಹಾಗೂ ಸಾರಿಗೆ ಸಂಸ್ಥೆಗಳು ಸಮಸ್ಯೆ ಎದುರಿಸುತ್ತಿವೆ. ಈ ಕುರಿತು ನಮಗೆ ಹಲವು ದೂರುಗಳು ಬಂದಿವೆ. ಈ ಹಿನ್ನೆಲೆ ದೆಹಲಿಗೆ ಹೊಂದಿಕೊಂಡಿರುವ ಹರಿಯಾಣ, ಉತ್ತರಪ್ರದೇಶ ಹಾಗೂ ರಾಜಸ್ಥಾನದ ಗಡಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿ ಸ್ಥಳೀಯವಾಗಿ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ನೀಡುವಂತೆ ಆಯಾ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಪೊಲೀಸ್‌ ಇಲಾಖೆಯ ಮುಖ್ಯಸ್ಥರಿಗೆ ನೋಟಿಸ್‌ ನೀಡಿಲಾಗಿದೆ” ಎಂದು ಮಾನವ ಹಕ್ಕುಗಳ ಆಯೋಗ ಖಚಿತ ಪಡಿಸಿದೆ.

“ದೆಹಲಿಯ ಹೆದ್ದಾರಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಸಾರಿಗೆ ಸಂಚಾರದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಪ್ರತಿಭಟನೆಯಿಂದ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದೆ. ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್‌ಗಳನ್ನು ಇರಿಸಿರುವುದರಿಂದ ವಾಹನ ಸವಾರರು ನಿರ್ಧಿಷ್ಟ ಸ್ಥಳಗಳನ್ನು ತಲುಪಲು ಬಹಳ ದೂರ ಪ್ರಯಾಣಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ತನಗೆ ಬಂದಿರುವ ದೂರುಗಳಲ್ಲಿ ಉಲ್ಲೇಖಿಸಲಾಗಿದೆ” ಎಂದು ಆಯೋಗ ಮಾಹಿತಿ ನೀಡಿದೆ.

ಇದನ್ನೂ ಓದಿ: NEP ವಿರೋಧಿಸಿ ಪ್ರತಿಭಟಿಸುತ್ತಿದ್ದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ತೀವ್ರ ಖಂಡನೆ

ರೈತರು ಪ್ರತಿಭಟನಾ ಸ್ಥಳಗಳಲ್ಲಿ ಕೊರೊನಾ ನಿಯಮಗಳನ್ನು ಅನುಸರಿಸುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿವೆ. ಇದರ ಜೊತೆಗೆ ಪ್ರತಿಭಟನಾ ಸ್ಥಳದ ಸಮೀಪದಲ್ಲಿರುವ ನಿವಾಸಿಗಳ ಸಂಚಾರಕ್ಕೆ ಹೋರಾಟ ನಿರತರು ಅಡ್ಡಿ ಪಡಿಸತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಇವೆಲ್ಲವೂ ಮಾನವ ಹಕ್ಕುಗಳ ಉಲ್ಲಂಘನೆಯಂತಾಗುತ್ತದೆ. ಈ ವಿಚಾರಗಳ ಕುರಿತು ಆಯಾ ರಾಜ್ಯ ಸರ್ಕಾರಗಳು ಯಾವೆಲ್ಲ ಕ್ರಮಗಳನ್ನು ಕೈಗೊಂಡಿವೆ ಎಂಬುದರ ಬಗ್ಗೆ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಪೊಲೀಸ್‌ ಇಲಾಖೆಯ ವರಿಷ್ಠರಿಗೆ ಸೂಚನೆ ನೀಡಿರುವುದಾಗಿ ಆಯೋಗ ತಿಳಿಸಿದೆ.

ರೈತರ ಪ್ರತಿಭಟನೆ ಕೈಗಾರಿಕೆಗಳು, ಆರ್ಥಿಕ ವಹಿವಾಟು, ಸಾರಿಗೆ ವ್ಯವಸ್ಥೆ ಹಾಗೂ ಗ್ರಾಹಕರ ಮೇಲೆ ಯಾವ ರೀತಿ ಪರಿಣಾಮ ಬೀರಿದೆ ಎಂಬ ಬಗ್ಗೆ ಅಧ್ಯಯನ ನಡೆಸಿ ಅಕ್ಟೋಬರ್‌ 10ರ ಒಳಗೆ ವರದಿ ನೀಡುವಂತೆ ಇನ್‌ಸ್ಟಿಟ್ಯೂಟ್‌ ಆಫ್‌ ಎಕನಾಮಿಕ್‌ ಗ್ರೌಥ್‌ಗೆ ಆಯೋಗ ಸೂಚನೆ ನೀಡಿದೆ. ಇದರ ಜೊತೆಗೆ ಪ್ರತಿಭಟನಾ ಸ್ಥಳಗಳಲ್ಲಿ ಕೋವಿಡ್‌ ಮಾರ್ಗಸೂಚಿಯ ಪಾಲನೆ ಮತ್ತು ಉಲ್ಲಂಘನೆಯ ಕುರಿತು ವರದಿ ನೀಡುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಆರೋಗ್ಯ ಸಚಿವಾಲಯಕ್ಕೂ ಸೂಚನೆ ನೀಡಲಾಗಿದೆ.

ವಿವಾದಿತ ಕೃಷಿ ಕಾಯ್ದೆಗಳು ಜಾರಿಯಾಗಿ ಸೆ. 27ಕ್ಕೆ ಒಂದು ವರ್ಷ ಕಳೆಯಲಿದೆ. ಈ ವಿವಾದಿತಕ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ಹೋರಾಟ 10ನೇ ತಿಂಗಳಿಗೆ ಕಾಲಿಟ್ಟಿದೆ. ಕಾಯ್ದೆಗಳನ್ನು ವಿರೋಧಿಸುತ್ತಾ ಈವರೆಗೆ 594 ರೈತರು ಹುತಾತ್ಮರಾಗಿದ್ದಾರೆ.

“ಕಳೆದ 10 ತಿಂಗಳ ಅವಧಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುತ್ತ ರೈತರು ಕೊನೆಯುಸಿರೆಳೆದಾಗ ಮಾನವ ಹಕ್ಕುಗಳ ಆಯೋಗ ಅದನ್ನೇಕೆ ಪ್ರಶ್ನಿಸಲಿಲ್ಲ..? ಕೇಂದ್ರ ಸರ್ಕಾರ ಬಲವಂತವಾಗಿ ರೈತರ ಹಕ್ಕುಗಳನ್ನು ಕಿತ್ತುಕೊಳ್ಳಲು ಯತ್ನಿಸಿದರೂ ಆಯೋಗ ಆ ಕುರಿತು ಏಕೆ ಮಾತನಾಡಲಿಲ್ಲ..? ಇಡೀ ದೇಶದಲ್ಲಿ ಕೊರೊನಾ ಹೆಚ್ಚಾಗಿದ್ದರೂ ಪ್ರತಿಭಟನಾ ಸ್ಥಳಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬಂದಿಲ್ಲ. ಇದೆಲ್ಲವೂ ಇಡೀ ದೇಶಕ್ಕೆ ತಿಳಿದಿರುವ ಸಂಗತಿ. ರೈತರ ಸಾವಿನ ಬಗ್ಗೆ ತಲೆ ಕೆಡಿಸಿಕೊಳ್ಳದ ಇದೇ ಮಾನವ ಹಕ್ಕುಗಳ ಆಯೋಗ ಈಗ ರೈತರ ವಿಚಾರದಲ್ಲಿ ವಿಶೇಷ ಕಾಳಜಿ ತೂರಿಸುತ್ತಿರುವುದೇಕೆ? ಈ ಹಿಂದೆ ಬಿಜೆಪಿ ಸರ್ಕಾರ ನಡೆದುಕೊಂಡಂತೆ ಇದು ಕೂಡ ರೈತ ಹೋರಾಟವನ್ನು ಹತ್ತಿಕ್ಕಲು ನಡೆಸುತ್ತಿರುವ ಪಿತೂರಿಯೇ?” ಎಂದು ಹೋರಾಟ ನಿರತ ರೈತ ಸಂಘಟನೆಗಳು ಅನುಮಾನ ವ್ಯಕ್ತಪಡಿಸಿವೆ.


ಇದನ್ನೂ ಓದಿ: ಕೇಂದ್ರದ ಮೇಲೆ ಒತ್ತಡ ತರಲು ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ: ರೈತರಲ್ಲಿ ಅಮರಿಂದರ್ ಸಿಂಗ್ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...