Homeಚಳವಳಿರೈತ ಹೋರಾಟ: 4 ರಾಜ್ಯಗಳಿಂದ ವರದಿ ಕೇಳಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ರೈತ ಹೋರಾಟ: 4 ರಾಜ್ಯಗಳಿಂದ ವರದಿ ಕೇಳಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ಕಳೆದ 10 ತಿಂಗಳ ಅವಧಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುತ್ತ ರೈತರು ಕೊನೆಯುಸಿರೆಳೆದಾಗ ಮಾನವ ಹಕ್ಕುಗಳ ಆಯೋಗ ಅದನ್ನೇಕೆ ಪ್ರಶ್ನಿಸಲಿಲ್ಲ..?- ರೈತ ಸಂಘಟನೆಗಳು

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಸಂಬಂಧಿಸಿ ದೆಹಲಿ, ಹರಿಯಾಣ, ಉತ್ತರಪ್ರದೇಶ ಮತ್ತು ರಾಜಸ್ಥಾನ ಸರ್ಕಾರಗಳಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್‌ ಜಾರಿ ಮಾಡಿದೆ.

“ದೆಹಲಿಯ ವಿವಿಧ ಗಡಿಗಳಲ್ಲಿ ಕಳೆದ 9 ತಿಂಗಳುಗಳಿಂದ ರೈತರು ಹೋರಾಟ ನಡೆಸುತ್ತಿರುವುದರಿಂದ ಸುಮಾರು 9,000 ಕೈಗಾರಿಕಾ ಘಟಕಗಳು ಹಾಗೂ ಸಾರಿಗೆ ಸಂಸ್ಥೆಗಳು ಸಮಸ್ಯೆ ಎದುರಿಸುತ್ತಿವೆ. ಈ ಕುರಿತು ನಮಗೆ ಹಲವು ದೂರುಗಳು ಬಂದಿವೆ. ಈ ಹಿನ್ನೆಲೆ ದೆಹಲಿಗೆ ಹೊಂದಿಕೊಂಡಿರುವ ಹರಿಯಾಣ, ಉತ್ತರಪ್ರದೇಶ ಹಾಗೂ ರಾಜಸ್ಥಾನದ ಗಡಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿ ಸ್ಥಳೀಯವಾಗಿ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ನೀಡುವಂತೆ ಆಯಾ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಪೊಲೀಸ್‌ ಇಲಾಖೆಯ ಮುಖ್ಯಸ್ಥರಿಗೆ ನೋಟಿಸ್‌ ನೀಡಿಲಾಗಿದೆ” ಎಂದು ಮಾನವ ಹಕ್ಕುಗಳ ಆಯೋಗ ಖಚಿತ ಪಡಿಸಿದೆ.

“ದೆಹಲಿಯ ಹೆದ್ದಾರಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಸಾರಿಗೆ ಸಂಚಾರದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಪ್ರತಿಭಟನೆಯಿಂದ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದೆ. ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್‌ಗಳನ್ನು ಇರಿಸಿರುವುದರಿಂದ ವಾಹನ ಸವಾರರು ನಿರ್ಧಿಷ್ಟ ಸ್ಥಳಗಳನ್ನು ತಲುಪಲು ಬಹಳ ದೂರ ಪ್ರಯಾಣಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ತನಗೆ ಬಂದಿರುವ ದೂರುಗಳಲ್ಲಿ ಉಲ್ಲೇಖಿಸಲಾಗಿದೆ” ಎಂದು ಆಯೋಗ ಮಾಹಿತಿ ನೀಡಿದೆ.

ಇದನ್ನೂ ಓದಿ: NEP ವಿರೋಧಿಸಿ ಪ್ರತಿಭಟಿಸುತ್ತಿದ್ದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ತೀವ್ರ ಖಂಡನೆ

ರೈತರು ಪ್ರತಿಭಟನಾ ಸ್ಥಳಗಳಲ್ಲಿ ಕೊರೊನಾ ನಿಯಮಗಳನ್ನು ಅನುಸರಿಸುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿವೆ. ಇದರ ಜೊತೆಗೆ ಪ್ರತಿಭಟನಾ ಸ್ಥಳದ ಸಮೀಪದಲ್ಲಿರುವ ನಿವಾಸಿಗಳ ಸಂಚಾರಕ್ಕೆ ಹೋರಾಟ ನಿರತರು ಅಡ್ಡಿ ಪಡಿಸತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಇವೆಲ್ಲವೂ ಮಾನವ ಹಕ್ಕುಗಳ ಉಲ್ಲಂಘನೆಯಂತಾಗುತ್ತದೆ. ಈ ವಿಚಾರಗಳ ಕುರಿತು ಆಯಾ ರಾಜ್ಯ ಸರ್ಕಾರಗಳು ಯಾವೆಲ್ಲ ಕ್ರಮಗಳನ್ನು ಕೈಗೊಂಡಿವೆ ಎಂಬುದರ ಬಗ್ಗೆ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಪೊಲೀಸ್‌ ಇಲಾಖೆಯ ವರಿಷ್ಠರಿಗೆ ಸೂಚನೆ ನೀಡಿರುವುದಾಗಿ ಆಯೋಗ ತಿಳಿಸಿದೆ.

ರೈತರ ಪ್ರತಿಭಟನೆ ಕೈಗಾರಿಕೆಗಳು, ಆರ್ಥಿಕ ವಹಿವಾಟು, ಸಾರಿಗೆ ವ್ಯವಸ್ಥೆ ಹಾಗೂ ಗ್ರಾಹಕರ ಮೇಲೆ ಯಾವ ರೀತಿ ಪರಿಣಾಮ ಬೀರಿದೆ ಎಂಬ ಬಗ್ಗೆ ಅಧ್ಯಯನ ನಡೆಸಿ ಅಕ್ಟೋಬರ್‌ 10ರ ಒಳಗೆ ವರದಿ ನೀಡುವಂತೆ ಇನ್‌ಸ್ಟಿಟ್ಯೂಟ್‌ ಆಫ್‌ ಎಕನಾಮಿಕ್‌ ಗ್ರೌಥ್‌ಗೆ ಆಯೋಗ ಸೂಚನೆ ನೀಡಿದೆ. ಇದರ ಜೊತೆಗೆ ಪ್ರತಿಭಟನಾ ಸ್ಥಳಗಳಲ್ಲಿ ಕೋವಿಡ್‌ ಮಾರ್ಗಸೂಚಿಯ ಪಾಲನೆ ಮತ್ತು ಉಲ್ಲಂಘನೆಯ ಕುರಿತು ವರದಿ ನೀಡುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಆರೋಗ್ಯ ಸಚಿವಾಲಯಕ್ಕೂ ಸೂಚನೆ ನೀಡಲಾಗಿದೆ.

ವಿವಾದಿತ ಕೃಷಿ ಕಾಯ್ದೆಗಳು ಜಾರಿಯಾಗಿ ಸೆ. 27ಕ್ಕೆ ಒಂದು ವರ್ಷ ಕಳೆಯಲಿದೆ. ಈ ವಿವಾದಿತಕ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ಹೋರಾಟ 10ನೇ ತಿಂಗಳಿಗೆ ಕಾಲಿಟ್ಟಿದೆ. ಕಾಯ್ದೆಗಳನ್ನು ವಿರೋಧಿಸುತ್ತಾ ಈವರೆಗೆ 594 ರೈತರು ಹುತಾತ್ಮರಾಗಿದ್ದಾರೆ.

“ಕಳೆದ 10 ತಿಂಗಳ ಅವಧಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುತ್ತ ರೈತರು ಕೊನೆಯುಸಿರೆಳೆದಾಗ ಮಾನವ ಹಕ್ಕುಗಳ ಆಯೋಗ ಅದನ್ನೇಕೆ ಪ್ರಶ್ನಿಸಲಿಲ್ಲ..? ಕೇಂದ್ರ ಸರ್ಕಾರ ಬಲವಂತವಾಗಿ ರೈತರ ಹಕ್ಕುಗಳನ್ನು ಕಿತ್ತುಕೊಳ್ಳಲು ಯತ್ನಿಸಿದರೂ ಆಯೋಗ ಆ ಕುರಿತು ಏಕೆ ಮಾತನಾಡಲಿಲ್ಲ..? ಇಡೀ ದೇಶದಲ್ಲಿ ಕೊರೊನಾ ಹೆಚ್ಚಾಗಿದ್ದರೂ ಪ್ರತಿಭಟನಾ ಸ್ಥಳಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬಂದಿಲ್ಲ. ಇದೆಲ್ಲವೂ ಇಡೀ ದೇಶಕ್ಕೆ ತಿಳಿದಿರುವ ಸಂಗತಿ. ರೈತರ ಸಾವಿನ ಬಗ್ಗೆ ತಲೆ ಕೆಡಿಸಿಕೊಳ್ಳದ ಇದೇ ಮಾನವ ಹಕ್ಕುಗಳ ಆಯೋಗ ಈಗ ರೈತರ ವಿಚಾರದಲ್ಲಿ ವಿಶೇಷ ಕಾಳಜಿ ತೂರಿಸುತ್ತಿರುವುದೇಕೆ? ಈ ಹಿಂದೆ ಬಿಜೆಪಿ ಸರ್ಕಾರ ನಡೆದುಕೊಂಡಂತೆ ಇದು ಕೂಡ ರೈತ ಹೋರಾಟವನ್ನು ಹತ್ತಿಕ್ಕಲು ನಡೆಸುತ್ತಿರುವ ಪಿತೂರಿಯೇ?” ಎಂದು ಹೋರಾಟ ನಿರತ ರೈತ ಸಂಘಟನೆಗಳು ಅನುಮಾನ ವ್ಯಕ್ತಪಡಿಸಿವೆ.


ಇದನ್ನೂ ಓದಿ: ಕೇಂದ್ರದ ಮೇಲೆ ಒತ್ತಡ ತರಲು ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ: ರೈತರಲ್ಲಿ ಅಮರಿಂದರ್ ಸಿಂಗ್ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...