Homeಮುಖಪುಟಮಲ ಬಾಚುವ ಪದ್ಧತಿ ನಿರ್ಮೂಲನೆಗೆ ವಿಶೇಷ ಕಾಯ್ದೆ ಶಿಫಾರಸ್ಸು ಮಾಡಿದ NHRC: ಜಾರಿ ಸಾಧ್ಯವೇ?

ಮಲ ಬಾಚುವ ಪದ್ಧತಿ ನಿರ್ಮೂಲನೆಗೆ ವಿಶೇಷ ಕಾಯ್ದೆ ಶಿಫಾರಸ್ಸು ಮಾಡಿದ NHRC: ಜಾರಿ ಸಾಧ್ಯವೇ?

ಜಾತಿ ಪದ್ದತಿ ನಾಶವಾಗದೆ ಮಲ ಬಾಚುವ ಪದ್ದತಿ ನಿರ್ಮೂಲನೆಯಾಗುವುದಿಲ್ಲ ಎನ್ನುತ್ತಾರೆ ಹಿರಿಯ ಕಾರ್ಮಿಕ ಹೋರಾಟಗಾರರಾದ ಎಸ್. ಬಾಲನ್...

- Advertisement -
- Advertisement -

ವಿಜ್ಞಾನ, ನಾಗರಿಕತೆ ಎಷ್ಟೆಲ್ಲಾ ಅಭಿವೃದ್ದಿ ಹೊಂದಿದ್ದರೂ ಕೆಲ ಸಾಮಾಜಿಕ ಅನಿಷ್ಟ ಪದ್ಧತಿಗಳು ಇಂದಿಗೂ ಜಾರಿಯಲ್ಲಿರುವುದು ಇಡೀ ಭಾರತೀಯರು ತಲೆತಗ್ಗಿಸಬೇಕಾದ ವಿಚಾರ. ತಳಸಮುದಾಯದ ಜನರ ಮೇಲೆ ಮೇಲ್ಜಾತಿ, ಮೇಲ್ವರ್ಗದ ಜನರು ಹೇರಿದ ಮಲ ಹೊರುವ, ಮಲ ಬಾಚುವ (ಮ್ಯಾನುವಲ್ ಸ್ಕ್ಯಾವೆಜಿಂಗ್) ಕೆಲಸಗಳು 21ನೇ ಶತಮಾನದಲ್ಲಿಯೂ ಮುಂದುವರೆಯುತ್ತಿದ್ದರೂ ಜಡಗಟ್ಟಿದ ಸಮಾಜಕ್ಕೆ ಏನೇನು ಅನ್ನಿಸುತ್ತಿಲ್ಲ. ಈ ಕುರಿತು ಸಾವಿರಾರು ಚರ್ಚೆಗಳು ನಡೆದರೂ ಫಲಿತಾಂಶ ಮಾತ್ರ ತೀರಾ ಕಡಿಮೆ. ಇದಕ್ಕೆ ಕಾರಣ ಈ ಅನಿಷ್ಠ ಕೆಲಸವನ್ನು ಮಾಡುತ್ತಿರುವವರು ತಳಸಮುದಾಯದವರು. ಅವರ ಬಗ್ಗೆ ಯಾವ ಸರ್ಕಾರಗಳಿಗೂ, ಯಾವ ಪಕ್ಷಗಳಿಗೂ ಕಾಳಜಿಯಿಲ್ಲ ಮಾತ್ರವಲ್ಲ ಅವರಿರುವುದೇ ತಮ್ಮ ಸೇವೆ ಮಾಡುವುದಕ್ಕಾಗಿ ಎಂಬ ಫ್ಯೂಡಲ್ ಮನಸ್ಥಿತಿ. ಅಸಮಾನತೆ, ಅನ್ಯಾಯದ ತಳಹದಿಯ ಮೇಲಿರುವ ಈ ಸಮಾಜ ವ್ಯವಸ್ಥೆ ಇಂತಹ ಅನಿಷ್ಠ ಪದ್ಧತಿಗಳನ್ನು ಪೋಷಿಸುತ್ತಾ ಬರುತ್ತಿವೆ ಎನ್ನುವುದು ಚಾರಿತ್ರಿಕ ಸತ್ಯ.

ಕಳೆದ ಹಲವಾರು ದಶಕಗಳಿಂದ ಮಲಬಾಚುವ ಪದ್ದತಿಯನ್ನು ನಿರ್ಮೂಲನೆ ಮಾಡಬೇಕು, ಸಂಪೂರ್ಣ ಆಧುನಿಕ ಯಾಂತ್ರಿಕೃತ ವ್ಯವಸ್ಥೆ ಜಾರಿಗೊಳಿಸಬೇಕೆಂದು ಸಾವಿರಾರು ಹೋರಾಟಗಳು ನಡೆದಿವೆ. ಆದರೆ ಈ ಪದ್ದತಿ ಮಾತ್ರ ಕೊನೆಗೊಂಡಿಲ್ಲ. ಈಗ ಈ ವಿಚಾರದ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಎಚ್ಚೆತ್ತುಕೊಂಡಂತೆ ಕಂಡುಬಂದಿದ್ದು ಮಲ ಬಾಚುವ ಪದ್ದತಿ ನಿರ್ಮೂಲನೆಗೆ ವಿಶೇಷ ಕಾಯ್ದೆಯನ್ನು ಶಿಫಾರಸ್ಸು ಮಾಡಿದೆ.

ಬರಿಗೈಲಿ ಮಲಬಾಚುವ, ಶೌಚ ಗುಂಡಿ ಸ್ವಚ್ಛಗೊಳಿಸಲು ಆಳಕ್ಕೆ ಇಳಿಯುವ, ಮಲಹೊರುವ ಕೆಲಸಕ್ಕೆ ನೇಮಿಸಿಕೊಳ್ಳುವ ಸ್ಥಳೀಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತಹ ಹೊಸ ಕಾಯ್ದೆಯೊಂದಿಗೆ ಹಲವು ಸರಣಿ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರಕ್ಕೆ NHRC ಮಾಡಿದೆ.

ತಳಮಟ್ಟದಲ್ಲಿ ಬದಲಾವಣೆ ತರುವ ಉದ್ದೇಶದಿಂದ ಮಲಬಾಚುವ ಕೆಲಸದಲ್ಲಿರುವ ಕುಟುಂಬ ಸದಸ್ಯರಿಗೆ ಕೇಂದ್ರ ಸರ್ಕಾರವು 10 ಲಕ್ಷ ರೂಗಳ ಸಾಲ ನೀಡಬೇಕೆಂದು NHRC ಒತ್ತಾಯಿಸಿದೆ. ಇದರಿಂದ ಆ ಕುಟುಂಬಗಳು ತಮ್ಮ ಬಡತನದ ಕಾರಣದಿಂದ ಅನಿವಾರ್ಯವಾಗಿ ಮಾಡಬೇಕಾದ ಈ ಕೆಲಸವನ್ನು ಬಿಟ್ಟು ಯಾವುದಾದರೂ ಸ್ವಂತ ಉದ್ಯಮವನ್ನು ಸ್ಥಾಪಿಸಬಹುದು ಎಂದು ಅದು ಹೇಳಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋವು ಈ ಮ್ಯಾನುವಲ್ ಸ್ಕ್ಯಾವೆಜಿಂಗ್ ನಲ್ಲಿ ಮೃತಪಟ್ಟ ಜನರ ವರದಿಗಳನ್ನು ಮೇಲ್ವಿಚಾರಣೆ ನಡೆಸಬೇಕು. ಕೆಲ ರಾಜ್ಯಗಳು ನಮ್ಮಲ್ಲಿ ಯಾವುದೇ ಮ್ಯಾನುವಲ್ ಸ್ಕ್ಯಾವೆಂಜರ್‌ಗಳನ್ನು ನೇಮಿಸಿಕೊಂಡಿಲ್ಲ, ಮಲಗುಂಡಿಗಳು ಇಲ್ಲ ಎಂದು ವರದಿ ನೀಡುತ್ತಿರುವುದು ಸತ್ಯಕ್ಕೆ ದೂರವಾದುದ್ದು ಎಂದು NHRC ದೂರಿದೆ. ಈ ವಿಚಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಒತ್ತಾಯಿಸಿದೆ.

ಎಲ್ಲಾ ರೀತಿಯ ಸ್ವಚ್ಛಗೊಳಿಸುವಿಕೆಯನ್ನು ಮ್ಯಾನುವಲ್ ಸ್ಕ್ಯಾವೆಜಿಂಗ್ ನಡಿ ತರುವುದಲ್ಲದೆ ಅದರ ವ್ಯಾಖ್ಯಾನವನ್ನು ವಿಸ್ತರಿಸುವಂತೆ ಆಯೋಗವು ತಿಳಿಸಿದೆ. ಮಲ ಬಾಚುವವರು, ಪೌರಕಾರ್ಮಿಕರು ಮತ್ತು ಮಕ್ಕಳು ಕೆಲಸದ ಸ್ಥಳದಲ್ಲಿ ಎದುರಿಸುವ ಕಿರುಕುಳವನ್ನು ತಡೆಗಟ್ಟಲು ದಂಡವಿಭಾಗವನ್ನು ಹೊಸ ಕಾಯ್ದೆಯಲ್ಲಿ ಸೇರಿಸುವಂತೆ ತಿಳಿಸಿದೆ.

ಮಲಬಾಚುವ ಕೆಲಸ ತ್ಯಜಿಸುವವರಿಗೆ ಪುನರ್ವಸತಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ಆಯೋಗ ತಿಳಿಸಿದೆ. ಆ ಜನರಿಗೆ ನರೇಗದಂತಹ ತಕ್ಷಣದ ಕೆಲಸಗಳನ್ನು ನೀಡುವುದರ ಜೊತೆಗೆ ಕೆಲಸ ಬಿಡುವ ಸಮಯದಲ್ಲಿ 40,000 ರೂನಿಂದ 1 ಲಕ್ಷ ರೂಗಳವರೆಗೆ ನಗದು ಪರಿಹಾರ ನೀಡಬೇಕೆಂದು ಶಿಫಾರಸ್ಸು ಮಾಡಿದೆ.

ಪೌರಕಾರ್ಮಿಕರು ಮಲಬಾಚುವ ಪದ್ದತಿ ಬಿಟ್ಟು ಕೆಲವು ವ್ಯವಹಾರ ಚಟುವಟಿಕೆಗಳನ್ನು ಪ್ರಾರಂಭಿಸಲು ಅವರಿಗೆ ಮತ್ತು ಅವರ ಅವಲಂಬಿತರಿಗೆ 10 ಲಕ್ಷ ರೂ.ವರೆಗೆ ಸಾಲವನ್ನು ನೀಡುವ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಪ್ರತಿ ರಾಜ್ಯಕ್ಕೆ ನಿರ್ದಿಷ್ಟ ರಾಷ್ಟ್ರೀಕೃತ ಬ್ಯಾಂಕ್ ಅನ್ನು ನೇಮಿಸಲು ಹಣಕಾಸು ಸಚಿವಾಲಯಕ್ಕೆ ಕೋರಲಾಗಿದೆ.

“ಮಲ ಬಾಚುವ ಪದ್ದತಿ ನಿರ್ಮೂಲನೆಗಾಗಿ ತಂತ್ರಜ್ಞಾನದ ಬಳಕೆ, ತಂತ್ರಜ್ಞಾನದ ನಿರ್ವಹಣೆ ಮತ್ತು ತಂತ್ರಜ್ಞಾನವನ್ನು ನಿರ್ವಹಿಸಲು ಕಾರ್ಮಿಕರಿಗೆ ತರಬೇತಿ ನೀಡಲು ಅನುಕೂಲವಾಗುವಂತೆ ಸರ್ಕಾರವು ಸಾಕಷ್ಟು ಹೂಡಿಕೆಯನ್ನು ಯೋಜಿಸುವ ಅಗತ್ಯವಿದೆ” ಎಂದು ಎನ್‌ಎಚ್‌ಆರ್‌ಸಿ ಹೇಳಿದೆ.

“ಮೇಲ್ವಿಚಾರಣಾ ಹಂತದಲ್ಲಿರುವ ಅಧಿಕಾರಿ ಅಥವಾ ಪ್ರದೇಶದ ಉಸ್ತುವಾರಿ ಯಾವುದೇ ವ್ಯಕ್ತಿಗೆ ಒಳಚರಂಡಿ / ಸೆಪ್ಟಿಕ್ ಟ್ಯಾಂಕ್‌ಗೆ ಪ್ರವೇಶಿಸುವ ಮೊದಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಒದಗಿಸಲಾಗುತ್ತಿದೆ ಎಂದು ಆಯಾ ನಾಗರಿಕ ಸಂಸ್ಥೆಗೆ ಘೋಷಣೆ ಸಲ್ಲಿಸಬೇಕು” ಎಂದು ಅದು ಹೇಳಿದೆ.

ಆಯೋಗದ ಈ ಶಿಫಾರಸ್ಸುಗಳನ್ನು ಸ್ವಾಗತಿಸುತ್ತಲೇ ಇವು ನಿಜವಾಗಿಯೂ ಕಾರ್ಯರೂಪಕ್ಕೆ ಬರುವಂತೆ ಒತ್ತಾಯಿಸಬೇಕಾಗಿದೆ. ಕೆಲದಿನಗಳ ಹಿಂದೆ ತಾನೇ ಆಂಧ್ರಪ್ರದೇಶದಲ್ಲಿ ಪೌರಕಾರ್ಮಿಕರು ವಿವಿಧ ಯೋಜನೆಗಳಡಿ ಬ್ಯಾಂಕ್‌ಗಳಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ನೀಡಲಾಗಿರಲಿಲ್ಲ. ಇದರಿಂದ ರೊಚ್ಚಿಗೆದ್ದ ಅವರು ಬ್ಯಾಂಕುಗಳ ಮುಂದೆ ಕಸ ಸುರಿದು ಪ್ರತಿಭಟನೆ ನಡೆಸಿದ್ದರು.

ಈ ಕುರಿತು ಬೆಂಗಳೂರಿನಲ್ಲಿ ಹತ್ತಾರು ವರ್ಷಗಳಿಂದ ಪೌರಕಾರ್ಮಿಕರನ್ನು ಸಂಘಟಿಸಿ ಹೋರಾಟ ನಡೆಸುತ್ತಿರುವ ಹಿರಿಯ ಕಾರ್ಮಿಕ ಮುಖಂಡರಾದ ಎಸ್.ಬಾಲನ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. “ಮಲ ಬಾಚುವ ಪದ್ದತಿಯು ಆದಿ ಆಂಧ್ರ, ಅರುಂಧತಿಯಾರ್, ಚಕ್ಲಿಯರ್, ಮಾದಿಗರು ಜಾತಿಗೆ ಸಂಬಂಧಿಸಿದೆ. ಈ ಜಾತಿಗಳು ಮಾತ್ರ ಈ ಕೆಲಸ ಮಾಡುತ್ತಿವೆ. ಬ್ರಿಟೀಷರು, ಈಗಿನ ಕಾಲದಲ್ಲಿಯೂ ಸಹ ಇವರು ಮೋರಿಗಳು ಎಲ್ಲಿವೆಯೋ ಅಲ್ಲಿಯೇ ಇವರು ವಾಸಿಸುತ್ತಿದ್ದಾರೆ. ಸಂವಿಧಾನದ 17ನೇ ಆರ್ಟಿಕಲ್ ಇದೆ, 1993ರಲ್ಲಿ ಮಲಹೊರುವ ಪದ್ದತಿ ನಿಷೇಧ ಕಾಯ್ದೆ ಬಂತು. ಎಷ್ಟೇ ಕಾನೂನುಗಳು ಬಂದರೂ ಈ ಅನಿಷ್ಠ ಪದ್ದತಿಯನ್ನು ತಡೆಗಟ್ಟಲು ಸಾಧ್ಯವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ನಿಜವಾಗಿಯೂ ಇದು ಪರಿಹಾರವಾಗಬೇಕಾದರೆ ಜಾತಿ ವ್ಯವಸ್ಥೆ ನಾಶವಾಗಬೇಕು. ಆದರೆ ಇಂದು ಜಾತಿಗಳು ಮತ್ತಷ್ಟು ಸಂಘಟಿತವಾಗುತ್ತಿವೆ. ಹಿಂದೂ ಧರ್ಮ ಜಾತಿಪದ್ದತಿಯನ್ನು ಪೋಷಿಸುತ್ತಿದೆ. ಕಾರ್ಪೋರೇಟ್ ಕಂಪನಿಗಳು, ದೊಡ್ಡ ದೊಡ್ಡ ಮಾಲ್‌ಗಳಲ್ಲಿ ಈ ಜನರನ್ನು ಶೌಚಾಲಯಗಳ ಒಳಗಡೆಯೆ ಇವರನ್ನು ಬಂಧಿಸಲಾಗಿದೆ. ಈ ಕಾನೂನುಗಳನ್ನು ನಾನು ನಂಬುವುದಿಲ್ಲ. ಜಾತಿ ನಾಶವಾಗದೆ ಇದು ನಿರ್ಮೂಲನೆಯಾಗುವುದಿಲ್ಲ. ಮೋದಿಯವರು ಪೌರ ಕಾರ್ಮಿಕರ ಕಾಲು ತೊಳೆದು ನಾಟಕ ಮಾಡುತ್ತಾರೆ ಆದರೆ ಪೌರ ಕಾರ್ಮಿಕರ ನೌಕರಿಯನ್ನು ಕಾಯಂ ಮಾಡುವುದಿಲ್ಲ ಏಕೆ ಎಂದು ಬಾಲನ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಸಾಲ ಕೊಡಲು ಹಿಂದೇಟು: ಬ್ಯಾಂಕ್‌ಗಳ ಮುಂದೆ ಕಸ ಸುರಿದ ಪೌರ ಕಾರ್ಮಿಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...